Homeಅಂತರಾಷ್ಟ್ರೀಯಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

ಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

- Advertisement -
- Advertisement -

ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ ನಂತರ ‘ವಿಂಗ್ ಆಫ್ ಝಿಯಾನ್’ ಎಂದು ಕರೆಯಲ್ಪಡುವ ಪ್ರಧಾನಿ ನೆತನ್ಯಾಹು ಅವರ ಸರ್ಕಾರಿ ವಿಮಾನವು ಶುಕ್ರವಾರ ಮಧ್ಯಾಹ್ನ ಅಥೆನ್ಸ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದೆ ಎಂದು ಟಿಆರ್‌ಟಿ ವಲ್ಡ್‌ ವರದಿ ಮಾಡಿದೆ. ಇಸ್ರೇಲ್ ಮೇಲೆ ಇರಾನ್‌ ಪ್ರತಿಕಾರದ ದಾಳಿ ನಡೆಸಲಿದೆ ಎಂಬ ಸುದ್ದಿಗಳ ನಡುವೆ ‘ವಿಂಗ್ ಆಫ್ ಝಿಯಾನ್’ ದೇಶದಿಂದ ಹೊರಗೆ ಹೋಗಿದ್ದು, ಪ್ರಧಾನಿ ಬೆಂಜಮಿನ್ ನೆತನ್ಯಾಹು ದೇಶ ತೊರೆದಿದ್ದಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. ಇರಾನ್‌ನ ದಾಳಿಗೂ ಮೊದಲು

ಅಂತಾರಾಷ್ಟ್ರೀಯ ಭೇಟಿಗಳ ಸಮಯದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಧ್ಯಕ್ಷ ಐಸಾಕ್ ಹೆರ್ಜಾಗ್ ಅವರ ಸರ್ಕಾರಿ ವಿಮಾನವಾಗಿ ಸೇವೆ ಸಲ್ಲಿಸುವ ಈ ವಿಮಾನವು “ಇರಾನಿನ ಪ್ರತೀಕಾರದ ದಾಳಿಯ ಭಯದ ನಡುವೆ” ಶುಕ್ರವಾರ ಬೆಳಿಗ್ಗೆ ಅಥೆನ್ಸ್‌ಗೆ ಹೊರಟಿದೆ ಎಂದು ದಿ ಜೆರುಸಲೆಂ ಪೋಸ್ಟ್ ವರದಿ ಹೇಳಿದೆ. ಏಪ್ರಿಲ್ 2024 ರಲ್ಲಿ ಇಸ್ರೇಲ್ ಮೇಲೆ ಇರಾನ್ ನಡೆಸಿದ ದಾಳಿಯ ಸಮಯದಲ್ಲಿ, ಈ ವಿಮಾನವನ್ನು ಉತ್ತರ ನೆಗೆವ್‌ನಲ್ಲಿರುವ ನೆವಾಟಿಮ್ ವಾಯುನೆಲೆಯಿಂದ ಬೇರೆಡೆಗೆ ಸ್ಥಳಾಂತರಿಸಲಾಗಿತ್ತು.

ವಿಂಗ್ ಆಫ್ ಝಿಯಾನ್ ಗ್ರೀಸ್‌ಗೆ ತೆರಳಿದ ಸ್ವಲ್ಪ ಸಮಯದ ನಂತರ, ಇಸ್ರೇಲ್ ಸೇನಾ ವಕ್ತಾರ ಬ್ರಿಗೇಡಿಯರ್-ಜನರಲ್ ಎಫೀ ಡೆಫ್ರಿನ್ ಶುಕ್ರವಾರ ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇರಾನ್ ಇಸ್ರೇಲ್ ಕಡೆಗೆ 100ಕ್ಕೂ ಹೆಚ್ಚು ಡ್ರೋನ್‌ಗಳನ್ನು ಹಾರಿಸಿದೆ ಎಂದು ಹೇಳಿದ್ದರು.

ಅದಾಗ್ಯೂ, ವಿಂಗ್ ಆಫ್ ಜಿಯಾನ್ ವಿಮಾನದಲ್ಲಿ ಶುಕ್ರವಾರ ಗ್ರೀಸ್‌ನ ಇಸ್ರೇಲಿ ರಾಯಭಾರಿ ನೋಮ್ ಕಾಟ್ಜ್ ಅವರನ್ನು ಕರೆದೊಯ್ಯಲಾಗಿದ್ದು, ನಂತರ ಅಥೆನ್ಸ್‌ನಲ್ಲಿರುವ ವಿಮಾನ ಮಾಹಿತಿ ಪ್ರದೇಶದಲ್ಲಿ (ಎಫ್‌ಐಆರ್) ಇರಿಸಲಾಗಿದೆ ಎಂದು ಸುದ್ದಿ ಏಜನ್ಸಿ ಅನಡೋಲು ಹೇಳಿದೆ. ಈ ರಾಯಭಾರಿ ವಿಮಾನದಲ್ಲಿದ್ದ ಏಕೈಕ ಪ್ರಯಾಣಿಕ ಎಂದು ವರದಿ ಹೇಳಿದೆ.

ಇರಾನ್ ಮೇಲೆ ನಡೆಸಿದ ಬೃಹತ್ ದಾಳಿಯ ನಂತರ ಇಸ್ರೇಲ್ ತನ್ನ ವಿಮಾನ ನಿಲ್ದಾಣಕ್ಕೆ ಮತ್ತು ಅಲ್ಲಿಂದ ವಾಣಿಜ್ಯ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಿತ್ತು. ಇದರ ನಂತರ ಝಿಯಾನ್ ವಿಮಾನವು ನೋಮ್ ಕಾಟ್ಜ್ ಅವರನ್ನು ಅಥೆನ್ಸ್‌ಗೆ ಕರೆತಂದಿತು ಎಂದು ವಿದೇಶಾಂಗ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಸಿಎನ್‌ಎನ್ ಗ್ರೀಸ್ ವರದಿ ಮಾಡಿದೆ.

ಗ್ರೀಸ್-ಇಸ್ರೇಲ್ ಮಿಲಿಟರಿ ಸಹಕಾರ ಒಪ್ಪಂದದ ಪ್ರಕಾರ, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಎರಡೂ ದೇಶಗಳ ವಿಮಾನಗಳನ್ನು ಆಯಾ ಮಿಲಿಟರಿ ವಿಮಾನ ನಿಲ್ದಾಣಗಳಲ್ಲಿ ಅಗತ್ಯವಿರುವಷ್ಟು ಕಾಲ ಸ್ಥಳಾಂತರಿಸಲು ಮತ್ತು ಉಳಿಯಲು ಅನುಮತಿಸುತ್ತದೆ ಎಂದು ವರದಿ ಹೇಳಿದೆ.

ಅದಾಗ್ಯೂ, ಇರಾನಿನ ಪ್ರದೇಶದೊಳಗೆ ಇಸ್ರೇಲ್ ಮಿಲಿಟರಿ ದಾಳಿಗಳನ್ನು ಪ್ರಾರಂಭಿಸಿದ ಕೆಲವೇ ಗಂಟೆಗಳ ನಂತರ ‘ವಿಂಗ್ ಆಫ್ ಝಿಯಾನ್’ ಬಗ್ಗೆ ಊಹಾಪೋಹಗಳು ಹರಡಿದವು. ಎಕ್ಸ್‌ನಲ್ಲಿರುವ ಬಳಕೆದಾರರು ವಿಮಾನಯಾನ ಮೇಲ್ವಿಚಾರಣಾ ಸೇವೆ FlightRadar24 ನಿಂದ ಸಾರ್ವಜನಿಕವಾಗಿ ಲಭ್ಯವಿರುವ ಡೇಟಾವನ್ನು ಬಳಸಿಕೊಂಡು ಗ್ರೀಸ್‌ನಲ್ಲಿ ವಿಮಾನದ ಮಾರ್ಗ, ಸಮಯ ಮತ್ತು ಅಂತಿಮವಾಗಿ ಇಳಿದ ಮಾರ್ಗಗಳನ್ನು ಟ್ರ್ಯಾಕ್ ಮಾಡಿದ್ದಾರೆ.

ಆದಾಗ್ಯೂ, ಈ ವಿಮಾನದಲ್ಲಿ ನೆತನ್ಯಾಹು ಅಥವಾ ಅವರ ಕುಟುಂಬದ ಯಾರಾದರೂ ಇದ್ದರೊ, ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ ಎಂದು ಟಿಆರ್‌ಟಿ ವರದಿ ಹೇಳಿದೆ. ಭದ್ರತಾ ಪ್ರೋಟೋಕಾಲ್‌ಗಳು ಮತ್ತು ಸಂಭಾವ್ಯ ರಾಜತಾಂತ್ರಿಕ ಅಥವಾ ಮಿಲಿಟರಿ ಯೋಜನೆ ಸೇರಿದಂತೆ ಕ್ರಮದ ಹಿಂದಿನ ಹಲವಾರು ಸಂಭಾವ್ಯ ಕಾರ್ಯತಂತ್ರದ ಉದ್ದೇಶಗಳು ಇದರಲ್ಲಿ ಇರಬಹುದು ಎಂದು ಕೂಡಾ ವಿಶ್ಲೇಷಿಸಲಾಗುತ್ತಿದೆ.

ಜೊತೆಗೆ ಪೂರ್ವಭಾವಿ ಸುರಕ್ಷತಾ ಕ್ರಮವಾಗಿ ಹೀಗೆ ಮಾಡಲಾಗಿದೆ ಎಂದೂ ಕೂಡಾ ಹೇಳಲಾಗುತ್ತಿದ್ದು, ಇರಾನಿನ ಪ್ರತೀಕಾರದ ಅಪಾಯ ಹೆಚ್ಚಾದ ಕಾರಣ, ಇಸ್ರೇಲಿ ಅಧಿಕಾರಿಗಳು ಹಿರಿಯ ನಾಯಕತ್ವವನ್ನು ರಕ್ಷಿಸಲು ಈ ಭದ್ರತಾ ಪ್ರೋಟೋಕಾಲ್‌ಗಳನ್ನು ಜಾರಿಗೆ ತರುತ್ತಿರಬಹುದು ಎಂದೂ ಕೂಡಾ ಹೇಳಲಾಗಿದೆ.

ಅಥೆನ್ಸ್‌ನಲ್ಲಿ ನೆತನ್ಯಾಹು ಅವರ ವಿಮಾನವನ್ನು ಇರಿಸುವುದು ಇಸ್ರೇಲ್‌ನ ವಾಯು ಕೇಂದ್ರಗಳನ್ನು ಗುರಿಯಾಗಿಸಿಕೊಂಡು ನಡೆಸಲಾಗುವ ಸಂಭಾವ್ಯ ಕ್ಷಿಪಣಿ ಅಥವಾ ಡ್ರೋನ್ ದಾಳಿ ವಲಯಗಳಿಂದ ಅದನ್ನು ತೆಗೆದುಹಾಕುವ ಲೆಕ್ಕಾಚಾರದ ಭಾಗವಾಗಿ ಇದನ್ನು ಮಾಡಿರಬಹುದು ಎಂದೂ ಕೂಡಾ ಹೇಳಲಾಗುತ್ತಿದೆ.

ಜೊತೆಗೆ, ಮುನ್ನೆಚ್ಚರಿಕೆ ಕ್ರಮವಾಗಿ ನೆತನ್ಯಾಹು ಅವರ ಕುಟುಂಬದ ಸದಸ್ಯರೊಂದಿಗೆ ಅಥೆನ್ಸ್‌ಗೆ ಪ್ರಯಾಣಿಸಿರಬಹುದು ಎಂಬ ಊಹಾಪೋಹವೂ ಇದೆ. ಪ್ರತೀಕಾರದ ಬೆದರಿಕೆ ಇರುವ ಸಂದರ್ಭಗಳಲ್ಲಿ, ರಾಷ್ಟ್ರೀಯ ನಾಯಕರು ಪ್ರಮುಖ ವ್ಯಕ್ತಿಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸುವುದು ಇದು ಮೊದಲೇನಲ್ಲ, ವಿಶೇಷವಾಗಿ ಗುಪ್ತಚರವು ಅಪಾಯವನ್ನು ಗುರುತಿಸಿದ್ದರೆ ಇದನ್ನು ಮಾಡಲಾಗುತ್ತದೆ ಎಂದು ಟಿಅರ್‌ಟಿ ವಲ್ಡ್‌ ಹೇಳಿದೆ.

ಇಸ್ರೇಲಿ ಅಧಿಕಾರಿಗಳು ವಿಮಾನದಲ್ಲಿ ಪ್ರಧಾನಿ ಮತ್ತು ಅವರ ಆಂತರಿಕ ವಲಯದ ಅವರ ಇರುವಿಕೆಯನ್ನು ದೃಢೀಕರಿಸದಿದ್ದರೂ, ಹಾರಾಟದ ಸಮಯ ಮತ್ತು ಈಗ ವಿಮಾನ ಇರುವ ಸ್ಥಳವು ಪ್ರಧಾನ ಮಂತ್ರಿ ಮತ್ತು ಅವರ ಆಂತರಿಕ ವಲಯವನ್ನು ರಕ್ಷಿಸುವ ಭದ್ರತಾ ಕಾರ್ಯತಂತ್ರದ ಭಾಗವಾಗಿ ಇದನ್ನು ಮಾಡಲಾಗಿದೆ ಎಂಬ ಊಹಾಪೋಹಗಳು ಹರಡಿವೆ.

ಇಸ್ರೇಲ್ ಮೇಲೆ ಇರಾನ್‌ನ ಪ್ರತಿದಾಳಿ ನಡೆಯಲಿದೆ ಎಂದು ಖಚಿತವಾದ್ದರಿಂದ ಪ್ರಧಾನಿ ನೆತನ್ಯಾಹು ಮತ್ತು ಅಮೇರಿಕನ್ ಮಿಲಿಟರಿ ಅಥವಾ ಗುಪ್ತಚರ ಅಧಿಕಾರಿಗಳ ನಡುವೆ ಉನ್ನತ ಮಟ್ಟದ, ವೈಯಕ್ತಿಕ ಸಮನ್ವಯಕ್ಕಾಗಿ ಅಥೆನ್ಸ್ ಅನ್ನು ತಟಸ್ಥ ಮತ್ತು ಸುರಕ್ಷಿತ ಸ್ಥಳವಾಗಿ ಆಯ್ಕೆ ಮಾಡಿರಬಹುದು ಎಂಬ ಊಹಾಪೋಹಗಳೂ ಹರಡಿವೆ. ಪ್ರಧಾನಿ ನೆತನ್ಯಾಹು ಅವರ ಸ್ಥಳ ಅಥವಾ ಹಾರಾಟದ ಉದ್ದೇಶವನ್ನು ದೃಢೀಕರಿಸುವ ಯಾವುದೇ ಅಧಿಕೃತ ಹೇಳಿಕೆಯಿಲ್ಲದೆ, ಅಥೆನ್ಸ್‌ನಲ್ಲಿ ಪ್ರಧಾನಿಯ ವಿಮಾನ ನಿಲುಗಡೆಯಾಗಿದ್ದರ ಹಿಂದಿನ ನಿಜವಾದ ಉದ್ದೇಶದ ಬಗ್ಗೆ ಪ್ರಶ್ನೆಗಳು ಮುಂದುವರೆದಿವೆ. ಇರಾನ್‌ನ ದಾಳಿಗೂ ಮೊದಲು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...