Homeಅಂತರಾಷ್ಟ್ರೀಯಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

ಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

- Advertisement -
- Advertisement -

ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ ನಂತರ ‘ವಿಂಗ್ ಆಫ್ ಝಿಯಾನ್’ ಎಂದು ಕರೆಯಲ್ಪಡುವ ಪ್ರಧಾನಿ ನೆತನ್ಯಾಹು ಅವರ ಸರ್ಕಾರಿ ವಿಮಾನವು ಶುಕ್ರವಾರ ಮಧ್ಯಾಹ್ನ ಅಥೆನ್ಸ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದೆ ಎಂದು ಟಿಆರ್‌ಟಿ ವಲ್ಡ್‌ ವರದಿ ಮಾಡಿದೆ. ಇಸ್ರೇಲ್ ಮೇಲೆ ಇರಾನ್‌ ಪ್ರತಿಕಾರದ ದಾಳಿ ನಡೆಸಲಿದೆ ಎಂಬ ಸುದ್ದಿಗಳ ನಡುವೆ ‘ವಿಂಗ್ ಆಫ್ ಝಿಯಾನ್’ ದೇಶದಿಂದ ಹೊರಗೆ ಹೋಗಿದ್ದು, ಪ್ರಧಾನಿ ಬೆಂಜಮಿನ್ ನೆತನ್ಯಾಹು ದೇಶ ತೊರೆದಿದ್ದಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. ಇರಾನ್‌ನ ದಾಳಿಗೂ ಮೊದಲು

ಅಂತಾರಾಷ್ಟ್ರೀಯ ಭೇಟಿಗಳ ಸಮಯದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಧ್ಯಕ್ಷ ಐಸಾಕ್ ಹೆರ್ಜಾಗ್ ಅವರ ಸರ್ಕಾರಿ ವಿಮಾನವಾಗಿ ಸೇವೆ ಸಲ್ಲಿಸುವ ಈ ವಿಮಾನವು “ಇರಾನಿನ ಪ್ರತೀಕಾರದ ದಾಳಿಯ ಭಯದ ನಡುವೆ” ಶುಕ್ರವಾರ ಬೆಳಿಗ್ಗೆ ಅಥೆನ್ಸ್‌ಗೆ ಹೊರಟಿದೆ ಎಂದು ದಿ ಜೆರುಸಲೆಂ ಪೋಸ್ಟ್ ವರದಿ ಹೇಳಿದೆ. ಏಪ್ರಿಲ್ 2024 ರಲ್ಲಿ ಇಸ್ರೇಲ್ ಮೇಲೆ ಇರಾನ್ ನಡೆಸಿದ ದಾಳಿಯ ಸಮಯದಲ್ಲಿ, ಈ ವಿಮಾನವನ್ನು ಉತ್ತರ ನೆಗೆವ್‌ನಲ್ಲಿರುವ ನೆವಾಟಿಮ್ ವಾಯುನೆಲೆಯಿಂದ ಬೇರೆಡೆಗೆ ಸ್ಥಳಾಂತರಿಸಲಾಗಿತ್ತು.

ವಿಂಗ್ ಆಫ್ ಝಿಯಾನ್ ಗ್ರೀಸ್‌ಗೆ ತೆರಳಿದ ಸ್ವಲ್ಪ ಸಮಯದ ನಂತರ, ಇಸ್ರೇಲ್ ಸೇನಾ ವಕ್ತಾರ ಬ್ರಿಗೇಡಿಯರ್-ಜನರಲ್ ಎಫೀ ಡೆಫ್ರಿನ್ ಶುಕ್ರವಾರ ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇರಾನ್ ಇಸ್ರೇಲ್ ಕಡೆಗೆ 100ಕ್ಕೂ ಹೆಚ್ಚು ಡ್ರೋನ್‌ಗಳನ್ನು ಹಾರಿಸಿದೆ ಎಂದು ಹೇಳಿದ್ದರು.

ಅದಾಗ್ಯೂ, ವಿಂಗ್ ಆಫ್ ಜಿಯಾನ್ ವಿಮಾನದಲ್ಲಿ ಶುಕ್ರವಾರ ಗ್ರೀಸ್‌ನ ಇಸ್ರೇಲಿ ರಾಯಭಾರಿ ನೋಮ್ ಕಾಟ್ಜ್ ಅವರನ್ನು ಕರೆದೊಯ್ಯಲಾಗಿದ್ದು, ನಂತರ ಅಥೆನ್ಸ್‌ನಲ್ಲಿರುವ ವಿಮಾನ ಮಾಹಿತಿ ಪ್ರದೇಶದಲ್ಲಿ (ಎಫ್‌ಐಆರ್) ಇರಿಸಲಾಗಿದೆ ಎಂದು ಸುದ್ದಿ ಏಜನ್ಸಿ ಅನಡೋಲು ಹೇಳಿದೆ. ಈ ರಾಯಭಾರಿ ವಿಮಾನದಲ್ಲಿದ್ದ ಏಕೈಕ ಪ್ರಯಾಣಿಕ ಎಂದು ವರದಿ ಹೇಳಿದೆ.

ಇರಾನ್ ಮೇಲೆ ನಡೆಸಿದ ಬೃಹತ್ ದಾಳಿಯ ನಂತರ ಇಸ್ರೇಲ್ ತನ್ನ ವಿಮಾನ ನಿಲ್ದಾಣಕ್ಕೆ ಮತ್ತು ಅಲ್ಲಿಂದ ವಾಣಿಜ್ಯ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಿತ್ತು. ಇದರ ನಂತರ ಝಿಯಾನ್ ವಿಮಾನವು ನೋಮ್ ಕಾಟ್ಜ್ ಅವರನ್ನು ಅಥೆನ್ಸ್‌ಗೆ ಕರೆತಂದಿತು ಎಂದು ವಿದೇಶಾಂಗ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಸಿಎನ್‌ಎನ್ ಗ್ರೀಸ್ ವರದಿ ಮಾಡಿದೆ.

ಗ್ರೀಸ್-ಇಸ್ರೇಲ್ ಮಿಲಿಟರಿ ಸಹಕಾರ ಒಪ್ಪಂದದ ಪ್ರಕಾರ, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಎರಡೂ ದೇಶಗಳ ವಿಮಾನಗಳನ್ನು ಆಯಾ ಮಿಲಿಟರಿ ವಿಮಾನ ನಿಲ್ದಾಣಗಳಲ್ಲಿ ಅಗತ್ಯವಿರುವಷ್ಟು ಕಾಲ ಸ್ಥಳಾಂತರಿಸಲು ಮತ್ತು ಉಳಿಯಲು ಅನುಮತಿಸುತ್ತದೆ ಎಂದು ವರದಿ ಹೇಳಿದೆ.

ಅದಾಗ್ಯೂ, ಇರಾನಿನ ಪ್ರದೇಶದೊಳಗೆ ಇಸ್ರೇಲ್ ಮಿಲಿಟರಿ ದಾಳಿಗಳನ್ನು ಪ್ರಾರಂಭಿಸಿದ ಕೆಲವೇ ಗಂಟೆಗಳ ನಂತರ ‘ವಿಂಗ್ ಆಫ್ ಝಿಯಾನ್’ ಬಗ್ಗೆ ಊಹಾಪೋಹಗಳು ಹರಡಿದವು. ಎಕ್ಸ್‌ನಲ್ಲಿರುವ ಬಳಕೆದಾರರು ವಿಮಾನಯಾನ ಮೇಲ್ವಿಚಾರಣಾ ಸೇವೆ FlightRadar24 ನಿಂದ ಸಾರ್ವಜನಿಕವಾಗಿ ಲಭ್ಯವಿರುವ ಡೇಟಾವನ್ನು ಬಳಸಿಕೊಂಡು ಗ್ರೀಸ್‌ನಲ್ಲಿ ವಿಮಾನದ ಮಾರ್ಗ, ಸಮಯ ಮತ್ತು ಅಂತಿಮವಾಗಿ ಇಳಿದ ಮಾರ್ಗಗಳನ್ನು ಟ್ರ್ಯಾಕ್ ಮಾಡಿದ್ದಾರೆ.

ಆದಾಗ್ಯೂ, ಈ ವಿಮಾನದಲ್ಲಿ ನೆತನ್ಯಾಹು ಅಥವಾ ಅವರ ಕುಟುಂಬದ ಯಾರಾದರೂ ಇದ್ದರೊ, ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ ಎಂದು ಟಿಆರ್‌ಟಿ ವರದಿ ಹೇಳಿದೆ. ಭದ್ರತಾ ಪ್ರೋಟೋಕಾಲ್‌ಗಳು ಮತ್ತು ಸಂಭಾವ್ಯ ರಾಜತಾಂತ್ರಿಕ ಅಥವಾ ಮಿಲಿಟರಿ ಯೋಜನೆ ಸೇರಿದಂತೆ ಕ್ರಮದ ಹಿಂದಿನ ಹಲವಾರು ಸಂಭಾವ್ಯ ಕಾರ್ಯತಂತ್ರದ ಉದ್ದೇಶಗಳು ಇದರಲ್ಲಿ ಇರಬಹುದು ಎಂದು ಕೂಡಾ ವಿಶ್ಲೇಷಿಸಲಾಗುತ್ತಿದೆ.

ಜೊತೆಗೆ ಪೂರ್ವಭಾವಿ ಸುರಕ್ಷತಾ ಕ್ರಮವಾಗಿ ಹೀಗೆ ಮಾಡಲಾಗಿದೆ ಎಂದೂ ಕೂಡಾ ಹೇಳಲಾಗುತ್ತಿದ್ದು, ಇರಾನಿನ ಪ್ರತೀಕಾರದ ಅಪಾಯ ಹೆಚ್ಚಾದ ಕಾರಣ, ಇಸ್ರೇಲಿ ಅಧಿಕಾರಿಗಳು ಹಿರಿಯ ನಾಯಕತ್ವವನ್ನು ರಕ್ಷಿಸಲು ಈ ಭದ್ರತಾ ಪ್ರೋಟೋಕಾಲ್‌ಗಳನ್ನು ಜಾರಿಗೆ ತರುತ್ತಿರಬಹುದು ಎಂದೂ ಕೂಡಾ ಹೇಳಲಾಗಿದೆ.

ಅಥೆನ್ಸ್‌ನಲ್ಲಿ ನೆತನ್ಯಾಹು ಅವರ ವಿಮಾನವನ್ನು ಇರಿಸುವುದು ಇಸ್ರೇಲ್‌ನ ವಾಯು ಕೇಂದ್ರಗಳನ್ನು ಗುರಿಯಾಗಿಸಿಕೊಂಡು ನಡೆಸಲಾಗುವ ಸಂಭಾವ್ಯ ಕ್ಷಿಪಣಿ ಅಥವಾ ಡ್ರೋನ್ ದಾಳಿ ವಲಯಗಳಿಂದ ಅದನ್ನು ತೆಗೆದುಹಾಕುವ ಲೆಕ್ಕಾಚಾರದ ಭಾಗವಾಗಿ ಇದನ್ನು ಮಾಡಿರಬಹುದು ಎಂದೂ ಕೂಡಾ ಹೇಳಲಾಗುತ್ತಿದೆ.

ಜೊತೆಗೆ, ಮುನ್ನೆಚ್ಚರಿಕೆ ಕ್ರಮವಾಗಿ ನೆತನ್ಯಾಹು ಅವರ ಕುಟುಂಬದ ಸದಸ್ಯರೊಂದಿಗೆ ಅಥೆನ್ಸ್‌ಗೆ ಪ್ರಯಾಣಿಸಿರಬಹುದು ಎಂಬ ಊಹಾಪೋಹವೂ ಇದೆ. ಪ್ರತೀಕಾರದ ಬೆದರಿಕೆ ಇರುವ ಸಂದರ್ಭಗಳಲ್ಲಿ, ರಾಷ್ಟ್ರೀಯ ನಾಯಕರು ಪ್ರಮುಖ ವ್ಯಕ್ತಿಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸುವುದು ಇದು ಮೊದಲೇನಲ್ಲ, ವಿಶೇಷವಾಗಿ ಗುಪ್ತಚರವು ಅಪಾಯವನ್ನು ಗುರುತಿಸಿದ್ದರೆ ಇದನ್ನು ಮಾಡಲಾಗುತ್ತದೆ ಎಂದು ಟಿಅರ್‌ಟಿ ವಲ್ಡ್‌ ಹೇಳಿದೆ.

ಇಸ್ರೇಲಿ ಅಧಿಕಾರಿಗಳು ವಿಮಾನದಲ್ಲಿ ಪ್ರಧಾನಿ ಮತ್ತು ಅವರ ಆಂತರಿಕ ವಲಯದ ಅವರ ಇರುವಿಕೆಯನ್ನು ದೃಢೀಕರಿಸದಿದ್ದರೂ, ಹಾರಾಟದ ಸಮಯ ಮತ್ತು ಈಗ ವಿಮಾನ ಇರುವ ಸ್ಥಳವು ಪ್ರಧಾನ ಮಂತ್ರಿ ಮತ್ತು ಅವರ ಆಂತರಿಕ ವಲಯವನ್ನು ರಕ್ಷಿಸುವ ಭದ್ರತಾ ಕಾರ್ಯತಂತ್ರದ ಭಾಗವಾಗಿ ಇದನ್ನು ಮಾಡಲಾಗಿದೆ ಎಂಬ ಊಹಾಪೋಹಗಳು ಹರಡಿವೆ.

ಇಸ್ರೇಲ್ ಮೇಲೆ ಇರಾನ್‌ನ ಪ್ರತಿದಾಳಿ ನಡೆಯಲಿದೆ ಎಂದು ಖಚಿತವಾದ್ದರಿಂದ ಪ್ರಧಾನಿ ನೆತನ್ಯಾಹು ಮತ್ತು ಅಮೇರಿಕನ್ ಮಿಲಿಟರಿ ಅಥವಾ ಗುಪ್ತಚರ ಅಧಿಕಾರಿಗಳ ನಡುವೆ ಉನ್ನತ ಮಟ್ಟದ, ವೈಯಕ್ತಿಕ ಸಮನ್ವಯಕ್ಕಾಗಿ ಅಥೆನ್ಸ್ ಅನ್ನು ತಟಸ್ಥ ಮತ್ತು ಸುರಕ್ಷಿತ ಸ್ಥಳವಾಗಿ ಆಯ್ಕೆ ಮಾಡಿರಬಹುದು ಎಂಬ ಊಹಾಪೋಹಗಳೂ ಹರಡಿವೆ. ಪ್ರಧಾನಿ ನೆತನ್ಯಾಹು ಅವರ ಸ್ಥಳ ಅಥವಾ ಹಾರಾಟದ ಉದ್ದೇಶವನ್ನು ದೃಢೀಕರಿಸುವ ಯಾವುದೇ ಅಧಿಕೃತ ಹೇಳಿಕೆಯಿಲ್ಲದೆ, ಅಥೆನ್ಸ್‌ನಲ್ಲಿ ಪ್ರಧಾನಿಯ ವಿಮಾನ ನಿಲುಗಡೆಯಾಗಿದ್ದರ ಹಿಂದಿನ ನಿಜವಾದ ಉದ್ದೇಶದ ಬಗ್ಗೆ ಪ್ರಶ್ನೆಗಳು ಮುಂದುವರೆದಿವೆ. ಇರಾನ್‌ನ ದಾಳಿಗೂ ಮೊದಲು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...