Homeಅಂತರಾಷ್ಟ್ರೀಯಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

ಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

- Advertisement -
- Advertisement -

ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ ನಂತರ ‘ವಿಂಗ್ ಆಫ್ ಝಿಯಾನ್’ ಎಂದು ಕರೆಯಲ್ಪಡುವ ಪ್ರಧಾನಿ ನೆತನ್ಯಾಹು ಅವರ ಸರ್ಕಾರಿ ವಿಮಾನವು ಶುಕ್ರವಾರ ಮಧ್ಯಾಹ್ನ ಅಥೆನ್ಸ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದೆ ಎಂದು ಟಿಆರ್‌ಟಿ ವಲ್ಡ್‌ ವರದಿ ಮಾಡಿದೆ. ಇಸ್ರೇಲ್ ಮೇಲೆ ಇರಾನ್‌ ಪ್ರತಿಕಾರದ ದಾಳಿ ನಡೆಸಲಿದೆ ಎಂಬ ಸುದ್ದಿಗಳ ನಡುವೆ ‘ವಿಂಗ್ ಆಫ್ ಝಿಯಾನ್’ ದೇಶದಿಂದ ಹೊರಗೆ ಹೋಗಿದ್ದು, ಪ್ರಧಾನಿ ಬೆಂಜಮಿನ್ ನೆತನ್ಯಾಹು ದೇಶ ತೊರೆದಿದ್ದಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. ಇರಾನ್‌ನ ದಾಳಿಗೂ ಮೊದಲು

ಅಂತಾರಾಷ್ಟ್ರೀಯ ಭೇಟಿಗಳ ಸಮಯದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಧ್ಯಕ್ಷ ಐಸಾಕ್ ಹೆರ್ಜಾಗ್ ಅವರ ಸರ್ಕಾರಿ ವಿಮಾನವಾಗಿ ಸೇವೆ ಸಲ್ಲಿಸುವ ಈ ವಿಮಾನವು “ಇರಾನಿನ ಪ್ರತೀಕಾರದ ದಾಳಿಯ ಭಯದ ನಡುವೆ” ಶುಕ್ರವಾರ ಬೆಳಿಗ್ಗೆ ಅಥೆನ್ಸ್‌ಗೆ ಹೊರಟಿದೆ ಎಂದು ದಿ ಜೆರುಸಲೆಂ ಪೋಸ್ಟ್ ವರದಿ ಹೇಳಿದೆ. ಏಪ್ರಿಲ್ 2024 ರಲ್ಲಿ ಇಸ್ರೇಲ್ ಮೇಲೆ ಇರಾನ್ ನಡೆಸಿದ ದಾಳಿಯ ಸಮಯದಲ್ಲಿ, ಈ ವಿಮಾನವನ್ನು ಉತ್ತರ ನೆಗೆವ್‌ನಲ್ಲಿರುವ ನೆವಾಟಿಮ್ ವಾಯುನೆಲೆಯಿಂದ ಬೇರೆಡೆಗೆ ಸ್ಥಳಾಂತರಿಸಲಾಗಿತ್ತು.

ವಿಂಗ್ ಆಫ್ ಝಿಯಾನ್ ಗ್ರೀಸ್‌ಗೆ ತೆರಳಿದ ಸ್ವಲ್ಪ ಸಮಯದ ನಂತರ, ಇಸ್ರೇಲ್ ಸೇನಾ ವಕ್ತಾರ ಬ್ರಿಗೇಡಿಯರ್-ಜನರಲ್ ಎಫೀ ಡೆಫ್ರಿನ್ ಶುಕ್ರವಾರ ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇರಾನ್ ಇಸ್ರೇಲ್ ಕಡೆಗೆ 100ಕ್ಕೂ ಹೆಚ್ಚು ಡ್ರೋನ್‌ಗಳನ್ನು ಹಾರಿಸಿದೆ ಎಂದು ಹೇಳಿದ್ದರು.

ಅದಾಗ್ಯೂ, ವಿಂಗ್ ಆಫ್ ಜಿಯಾನ್ ವಿಮಾನದಲ್ಲಿ ಶುಕ್ರವಾರ ಗ್ರೀಸ್‌ನ ಇಸ್ರೇಲಿ ರಾಯಭಾರಿ ನೋಮ್ ಕಾಟ್ಜ್ ಅವರನ್ನು ಕರೆದೊಯ್ಯಲಾಗಿದ್ದು, ನಂತರ ಅಥೆನ್ಸ್‌ನಲ್ಲಿರುವ ವಿಮಾನ ಮಾಹಿತಿ ಪ್ರದೇಶದಲ್ಲಿ (ಎಫ್‌ಐಆರ್) ಇರಿಸಲಾಗಿದೆ ಎಂದು ಸುದ್ದಿ ಏಜನ್ಸಿ ಅನಡೋಲು ಹೇಳಿದೆ. ಈ ರಾಯಭಾರಿ ವಿಮಾನದಲ್ಲಿದ್ದ ಏಕೈಕ ಪ್ರಯಾಣಿಕ ಎಂದು ವರದಿ ಹೇಳಿದೆ.

ಇರಾನ್ ಮೇಲೆ ನಡೆಸಿದ ಬೃಹತ್ ದಾಳಿಯ ನಂತರ ಇಸ್ರೇಲ್ ತನ್ನ ವಿಮಾನ ನಿಲ್ದಾಣಕ್ಕೆ ಮತ್ತು ಅಲ್ಲಿಂದ ವಾಣಿಜ್ಯ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಿತ್ತು. ಇದರ ನಂತರ ಝಿಯಾನ್ ವಿಮಾನವು ನೋಮ್ ಕಾಟ್ಜ್ ಅವರನ್ನು ಅಥೆನ್ಸ್‌ಗೆ ಕರೆತಂದಿತು ಎಂದು ವಿದೇಶಾಂಗ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಸಿಎನ್‌ಎನ್ ಗ್ರೀಸ್ ವರದಿ ಮಾಡಿದೆ.

ಗ್ರೀಸ್-ಇಸ್ರೇಲ್ ಮಿಲಿಟರಿ ಸಹಕಾರ ಒಪ್ಪಂದದ ಪ್ರಕಾರ, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಎರಡೂ ದೇಶಗಳ ವಿಮಾನಗಳನ್ನು ಆಯಾ ಮಿಲಿಟರಿ ವಿಮಾನ ನಿಲ್ದಾಣಗಳಲ್ಲಿ ಅಗತ್ಯವಿರುವಷ್ಟು ಕಾಲ ಸ್ಥಳಾಂತರಿಸಲು ಮತ್ತು ಉಳಿಯಲು ಅನುಮತಿಸುತ್ತದೆ ಎಂದು ವರದಿ ಹೇಳಿದೆ.

ಅದಾಗ್ಯೂ, ಇರಾನಿನ ಪ್ರದೇಶದೊಳಗೆ ಇಸ್ರೇಲ್ ಮಿಲಿಟರಿ ದಾಳಿಗಳನ್ನು ಪ್ರಾರಂಭಿಸಿದ ಕೆಲವೇ ಗಂಟೆಗಳ ನಂತರ ‘ವಿಂಗ್ ಆಫ್ ಝಿಯಾನ್’ ಬಗ್ಗೆ ಊಹಾಪೋಹಗಳು ಹರಡಿದವು. ಎಕ್ಸ್‌ನಲ್ಲಿರುವ ಬಳಕೆದಾರರು ವಿಮಾನಯಾನ ಮೇಲ್ವಿಚಾರಣಾ ಸೇವೆ FlightRadar24 ನಿಂದ ಸಾರ್ವಜನಿಕವಾಗಿ ಲಭ್ಯವಿರುವ ಡೇಟಾವನ್ನು ಬಳಸಿಕೊಂಡು ಗ್ರೀಸ್‌ನಲ್ಲಿ ವಿಮಾನದ ಮಾರ್ಗ, ಸಮಯ ಮತ್ತು ಅಂತಿಮವಾಗಿ ಇಳಿದ ಮಾರ್ಗಗಳನ್ನು ಟ್ರ್ಯಾಕ್ ಮಾಡಿದ್ದಾರೆ.

ಆದಾಗ್ಯೂ, ಈ ವಿಮಾನದಲ್ಲಿ ನೆತನ್ಯಾಹು ಅಥವಾ ಅವರ ಕುಟುಂಬದ ಯಾರಾದರೂ ಇದ್ದರೊ, ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ ಎಂದು ಟಿಆರ್‌ಟಿ ವರದಿ ಹೇಳಿದೆ. ಭದ್ರತಾ ಪ್ರೋಟೋಕಾಲ್‌ಗಳು ಮತ್ತು ಸಂಭಾವ್ಯ ರಾಜತಾಂತ್ರಿಕ ಅಥವಾ ಮಿಲಿಟರಿ ಯೋಜನೆ ಸೇರಿದಂತೆ ಕ್ರಮದ ಹಿಂದಿನ ಹಲವಾರು ಸಂಭಾವ್ಯ ಕಾರ್ಯತಂತ್ರದ ಉದ್ದೇಶಗಳು ಇದರಲ್ಲಿ ಇರಬಹುದು ಎಂದು ಕೂಡಾ ವಿಶ್ಲೇಷಿಸಲಾಗುತ್ತಿದೆ.

ಜೊತೆಗೆ ಪೂರ್ವಭಾವಿ ಸುರಕ್ಷತಾ ಕ್ರಮವಾಗಿ ಹೀಗೆ ಮಾಡಲಾಗಿದೆ ಎಂದೂ ಕೂಡಾ ಹೇಳಲಾಗುತ್ತಿದ್ದು, ಇರಾನಿನ ಪ್ರತೀಕಾರದ ಅಪಾಯ ಹೆಚ್ಚಾದ ಕಾರಣ, ಇಸ್ರೇಲಿ ಅಧಿಕಾರಿಗಳು ಹಿರಿಯ ನಾಯಕತ್ವವನ್ನು ರಕ್ಷಿಸಲು ಈ ಭದ್ರತಾ ಪ್ರೋಟೋಕಾಲ್‌ಗಳನ್ನು ಜಾರಿಗೆ ತರುತ್ತಿರಬಹುದು ಎಂದೂ ಕೂಡಾ ಹೇಳಲಾಗಿದೆ.

ಅಥೆನ್ಸ್‌ನಲ್ಲಿ ನೆತನ್ಯಾಹು ಅವರ ವಿಮಾನವನ್ನು ಇರಿಸುವುದು ಇಸ್ರೇಲ್‌ನ ವಾಯು ಕೇಂದ್ರಗಳನ್ನು ಗುರಿಯಾಗಿಸಿಕೊಂಡು ನಡೆಸಲಾಗುವ ಸಂಭಾವ್ಯ ಕ್ಷಿಪಣಿ ಅಥವಾ ಡ್ರೋನ್ ದಾಳಿ ವಲಯಗಳಿಂದ ಅದನ್ನು ತೆಗೆದುಹಾಕುವ ಲೆಕ್ಕಾಚಾರದ ಭಾಗವಾಗಿ ಇದನ್ನು ಮಾಡಿರಬಹುದು ಎಂದೂ ಕೂಡಾ ಹೇಳಲಾಗುತ್ತಿದೆ.

ಜೊತೆಗೆ, ಮುನ್ನೆಚ್ಚರಿಕೆ ಕ್ರಮವಾಗಿ ನೆತನ್ಯಾಹು ಅವರ ಕುಟುಂಬದ ಸದಸ್ಯರೊಂದಿಗೆ ಅಥೆನ್ಸ್‌ಗೆ ಪ್ರಯಾಣಿಸಿರಬಹುದು ಎಂಬ ಊಹಾಪೋಹವೂ ಇದೆ. ಪ್ರತೀಕಾರದ ಬೆದರಿಕೆ ಇರುವ ಸಂದರ್ಭಗಳಲ್ಲಿ, ರಾಷ್ಟ್ರೀಯ ನಾಯಕರು ಪ್ರಮುಖ ವ್ಯಕ್ತಿಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸುವುದು ಇದು ಮೊದಲೇನಲ್ಲ, ವಿಶೇಷವಾಗಿ ಗುಪ್ತಚರವು ಅಪಾಯವನ್ನು ಗುರುತಿಸಿದ್ದರೆ ಇದನ್ನು ಮಾಡಲಾಗುತ್ತದೆ ಎಂದು ಟಿಅರ್‌ಟಿ ವಲ್ಡ್‌ ಹೇಳಿದೆ.

ಇಸ್ರೇಲಿ ಅಧಿಕಾರಿಗಳು ವಿಮಾನದಲ್ಲಿ ಪ್ರಧಾನಿ ಮತ್ತು ಅವರ ಆಂತರಿಕ ವಲಯದ ಅವರ ಇರುವಿಕೆಯನ್ನು ದೃಢೀಕರಿಸದಿದ್ದರೂ, ಹಾರಾಟದ ಸಮಯ ಮತ್ತು ಈಗ ವಿಮಾನ ಇರುವ ಸ್ಥಳವು ಪ್ರಧಾನ ಮಂತ್ರಿ ಮತ್ತು ಅವರ ಆಂತರಿಕ ವಲಯವನ್ನು ರಕ್ಷಿಸುವ ಭದ್ರತಾ ಕಾರ್ಯತಂತ್ರದ ಭಾಗವಾಗಿ ಇದನ್ನು ಮಾಡಲಾಗಿದೆ ಎಂಬ ಊಹಾಪೋಹಗಳು ಹರಡಿವೆ.

ಇಸ್ರೇಲ್ ಮೇಲೆ ಇರಾನ್‌ನ ಪ್ರತಿದಾಳಿ ನಡೆಯಲಿದೆ ಎಂದು ಖಚಿತವಾದ್ದರಿಂದ ಪ್ರಧಾನಿ ನೆತನ್ಯಾಹು ಮತ್ತು ಅಮೇರಿಕನ್ ಮಿಲಿಟರಿ ಅಥವಾ ಗುಪ್ತಚರ ಅಧಿಕಾರಿಗಳ ನಡುವೆ ಉನ್ನತ ಮಟ್ಟದ, ವೈಯಕ್ತಿಕ ಸಮನ್ವಯಕ್ಕಾಗಿ ಅಥೆನ್ಸ್ ಅನ್ನು ತಟಸ್ಥ ಮತ್ತು ಸುರಕ್ಷಿತ ಸ್ಥಳವಾಗಿ ಆಯ್ಕೆ ಮಾಡಿರಬಹುದು ಎಂಬ ಊಹಾಪೋಹಗಳೂ ಹರಡಿವೆ. ಪ್ರಧಾನಿ ನೆತನ್ಯಾಹು ಅವರ ಸ್ಥಳ ಅಥವಾ ಹಾರಾಟದ ಉದ್ದೇಶವನ್ನು ದೃಢೀಕರಿಸುವ ಯಾವುದೇ ಅಧಿಕೃತ ಹೇಳಿಕೆಯಿಲ್ಲದೆ, ಅಥೆನ್ಸ್‌ನಲ್ಲಿ ಪ್ರಧಾನಿಯ ವಿಮಾನ ನಿಲುಗಡೆಯಾಗಿದ್ದರ ಹಿಂದಿನ ನಿಜವಾದ ಉದ್ದೇಶದ ಬಗ್ಗೆ ಪ್ರಶ್ನೆಗಳು ಮುಂದುವರೆದಿವೆ. ಇರಾನ್‌ನ ದಾಳಿಗೂ ಮೊದಲು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...