Homeಅಂತರಾಷ್ಟ್ರೀಯಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

ಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

- Advertisement -
- Advertisement -

ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ ನಂತರ ‘ವಿಂಗ್ ಆಫ್ ಝಿಯಾನ್’ ಎಂದು ಕರೆಯಲ್ಪಡುವ ಪ್ರಧಾನಿ ನೆತನ್ಯಾಹು ಅವರ ಸರ್ಕಾರಿ ವಿಮಾನವು ಶುಕ್ರವಾರ ಮಧ್ಯಾಹ್ನ ಅಥೆನ್ಸ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದೆ ಎಂದು ಟಿಆರ್‌ಟಿ ವಲ್ಡ್‌ ವರದಿ ಮಾಡಿದೆ. ಇಸ್ರೇಲ್ ಮೇಲೆ ಇರಾನ್‌ ಪ್ರತಿಕಾರದ ದಾಳಿ ನಡೆಸಲಿದೆ ಎಂಬ ಸುದ್ದಿಗಳ ನಡುವೆ ‘ವಿಂಗ್ ಆಫ್ ಝಿಯಾನ್’ ದೇಶದಿಂದ ಹೊರಗೆ ಹೋಗಿದ್ದು, ಪ್ರಧಾನಿ ಬೆಂಜಮಿನ್ ನೆತನ್ಯಾಹು ದೇಶ ತೊರೆದಿದ್ದಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. ಇರಾನ್‌ನ ದಾಳಿಗೂ ಮೊದಲು

ಅಂತಾರಾಷ್ಟ್ರೀಯ ಭೇಟಿಗಳ ಸಮಯದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಧ್ಯಕ್ಷ ಐಸಾಕ್ ಹೆರ್ಜಾಗ್ ಅವರ ಸರ್ಕಾರಿ ವಿಮಾನವಾಗಿ ಸೇವೆ ಸಲ್ಲಿಸುವ ಈ ವಿಮಾನವು “ಇರಾನಿನ ಪ್ರತೀಕಾರದ ದಾಳಿಯ ಭಯದ ನಡುವೆ” ಶುಕ್ರವಾರ ಬೆಳಿಗ್ಗೆ ಅಥೆನ್ಸ್‌ಗೆ ಹೊರಟಿದೆ ಎಂದು ದಿ ಜೆರುಸಲೆಂ ಪೋಸ್ಟ್ ವರದಿ ಹೇಳಿದೆ. ಏಪ್ರಿಲ್ 2024 ರಲ್ಲಿ ಇಸ್ರೇಲ್ ಮೇಲೆ ಇರಾನ್ ನಡೆಸಿದ ದಾಳಿಯ ಸಮಯದಲ್ಲಿ, ಈ ವಿಮಾನವನ್ನು ಉತ್ತರ ನೆಗೆವ್‌ನಲ್ಲಿರುವ ನೆವಾಟಿಮ್ ವಾಯುನೆಲೆಯಿಂದ ಬೇರೆಡೆಗೆ ಸ್ಥಳಾಂತರಿಸಲಾಗಿತ್ತು.

ವಿಂಗ್ ಆಫ್ ಝಿಯಾನ್ ಗ್ರೀಸ್‌ಗೆ ತೆರಳಿದ ಸ್ವಲ್ಪ ಸಮಯದ ನಂತರ, ಇಸ್ರೇಲ್ ಸೇನಾ ವಕ್ತಾರ ಬ್ರಿಗೇಡಿಯರ್-ಜನರಲ್ ಎಫೀ ಡೆಫ್ರಿನ್ ಶುಕ್ರವಾರ ಬೆಳಿಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇರಾನ್ ಇಸ್ರೇಲ್ ಕಡೆಗೆ 100ಕ್ಕೂ ಹೆಚ್ಚು ಡ್ರೋನ್‌ಗಳನ್ನು ಹಾರಿಸಿದೆ ಎಂದು ಹೇಳಿದ್ದರು.

ಅದಾಗ್ಯೂ, ವಿಂಗ್ ಆಫ್ ಜಿಯಾನ್ ವಿಮಾನದಲ್ಲಿ ಶುಕ್ರವಾರ ಗ್ರೀಸ್‌ನ ಇಸ್ರೇಲಿ ರಾಯಭಾರಿ ನೋಮ್ ಕಾಟ್ಜ್ ಅವರನ್ನು ಕರೆದೊಯ್ಯಲಾಗಿದ್ದು, ನಂತರ ಅಥೆನ್ಸ್‌ನಲ್ಲಿರುವ ವಿಮಾನ ಮಾಹಿತಿ ಪ್ರದೇಶದಲ್ಲಿ (ಎಫ್‌ಐಆರ್) ಇರಿಸಲಾಗಿದೆ ಎಂದು ಸುದ್ದಿ ಏಜನ್ಸಿ ಅನಡೋಲು ಹೇಳಿದೆ. ಈ ರಾಯಭಾರಿ ವಿಮಾನದಲ್ಲಿದ್ದ ಏಕೈಕ ಪ್ರಯಾಣಿಕ ಎಂದು ವರದಿ ಹೇಳಿದೆ.

ಇರಾನ್ ಮೇಲೆ ನಡೆಸಿದ ಬೃಹತ್ ದಾಳಿಯ ನಂತರ ಇಸ್ರೇಲ್ ತನ್ನ ವಿಮಾನ ನಿಲ್ದಾಣಕ್ಕೆ ಮತ್ತು ಅಲ್ಲಿಂದ ವಾಣಿಜ್ಯ ವಿಮಾನ ಸಂಚಾರವನ್ನು ಸ್ಥಗಿತಗೊಳಿಸಿತ್ತು. ಇದರ ನಂತರ ಝಿಯಾನ್ ವಿಮಾನವು ನೋಮ್ ಕಾಟ್ಜ್ ಅವರನ್ನು ಅಥೆನ್ಸ್‌ಗೆ ಕರೆತಂದಿತು ಎಂದು ವಿದೇಶಾಂಗ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ ಸಿಎನ್‌ಎನ್ ಗ್ರೀಸ್ ವರದಿ ಮಾಡಿದೆ.

ಗ್ರೀಸ್-ಇಸ್ರೇಲ್ ಮಿಲಿಟರಿ ಸಹಕಾರ ಒಪ್ಪಂದದ ಪ್ರಕಾರ, ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಎರಡೂ ದೇಶಗಳ ವಿಮಾನಗಳನ್ನು ಆಯಾ ಮಿಲಿಟರಿ ವಿಮಾನ ನಿಲ್ದಾಣಗಳಲ್ಲಿ ಅಗತ್ಯವಿರುವಷ್ಟು ಕಾಲ ಸ್ಥಳಾಂತರಿಸಲು ಮತ್ತು ಉಳಿಯಲು ಅನುಮತಿಸುತ್ತದೆ ಎಂದು ವರದಿ ಹೇಳಿದೆ.

ಅದಾಗ್ಯೂ, ಇರಾನಿನ ಪ್ರದೇಶದೊಳಗೆ ಇಸ್ರೇಲ್ ಮಿಲಿಟರಿ ದಾಳಿಗಳನ್ನು ಪ್ರಾರಂಭಿಸಿದ ಕೆಲವೇ ಗಂಟೆಗಳ ನಂತರ ‘ವಿಂಗ್ ಆಫ್ ಝಿಯಾನ್’ ಬಗ್ಗೆ ಊಹಾಪೋಹಗಳು ಹರಡಿದವು. ಎಕ್ಸ್‌ನಲ್ಲಿರುವ ಬಳಕೆದಾರರು ವಿಮಾನಯಾನ ಮೇಲ್ವಿಚಾರಣಾ ಸೇವೆ FlightRadar24 ನಿಂದ ಸಾರ್ವಜನಿಕವಾಗಿ ಲಭ್ಯವಿರುವ ಡೇಟಾವನ್ನು ಬಳಸಿಕೊಂಡು ಗ್ರೀಸ್‌ನಲ್ಲಿ ವಿಮಾನದ ಮಾರ್ಗ, ಸಮಯ ಮತ್ತು ಅಂತಿಮವಾಗಿ ಇಳಿದ ಮಾರ್ಗಗಳನ್ನು ಟ್ರ್ಯಾಕ್ ಮಾಡಿದ್ದಾರೆ.

ಆದಾಗ್ಯೂ, ಈ ವಿಮಾನದಲ್ಲಿ ನೆತನ್ಯಾಹು ಅಥವಾ ಅವರ ಕುಟುಂಬದ ಯಾರಾದರೂ ಇದ್ದರೊ, ಇಲ್ಲವೋ ಎಂಬುದು ಸ್ಪಷ್ಟವಾಗಿಲ್ಲ ಎಂದು ಟಿಆರ್‌ಟಿ ವರದಿ ಹೇಳಿದೆ. ಭದ್ರತಾ ಪ್ರೋಟೋಕಾಲ್‌ಗಳು ಮತ್ತು ಸಂಭಾವ್ಯ ರಾಜತಾಂತ್ರಿಕ ಅಥವಾ ಮಿಲಿಟರಿ ಯೋಜನೆ ಸೇರಿದಂತೆ ಕ್ರಮದ ಹಿಂದಿನ ಹಲವಾರು ಸಂಭಾವ್ಯ ಕಾರ್ಯತಂತ್ರದ ಉದ್ದೇಶಗಳು ಇದರಲ್ಲಿ ಇರಬಹುದು ಎಂದು ಕೂಡಾ ವಿಶ್ಲೇಷಿಸಲಾಗುತ್ತಿದೆ.

ಜೊತೆಗೆ ಪೂರ್ವಭಾವಿ ಸುರಕ್ಷತಾ ಕ್ರಮವಾಗಿ ಹೀಗೆ ಮಾಡಲಾಗಿದೆ ಎಂದೂ ಕೂಡಾ ಹೇಳಲಾಗುತ್ತಿದ್ದು, ಇರಾನಿನ ಪ್ರತೀಕಾರದ ಅಪಾಯ ಹೆಚ್ಚಾದ ಕಾರಣ, ಇಸ್ರೇಲಿ ಅಧಿಕಾರಿಗಳು ಹಿರಿಯ ನಾಯಕತ್ವವನ್ನು ರಕ್ಷಿಸಲು ಈ ಭದ್ರತಾ ಪ್ರೋಟೋಕಾಲ್‌ಗಳನ್ನು ಜಾರಿಗೆ ತರುತ್ತಿರಬಹುದು ಎಂದೂ ಕೂಡಾ ಹೇಳಲಾಗಿದೆ.

ಅಥೆನ್ಸ್‌ನಲ್ಲಿ ನೆತನ್ಯಾಹು ಅವರ ವಿಮಾನವನ್ನು ಇರಿಸುವುದು ಇಸ್ರೇಲ್‌ನ ವಾಯು ಕೇಂದ್ರಗಳನ್ನು ಗುರಿಯಾಗಿಸಿಕೊಂಡು ನಡೆಸಲಾಗುವ ಸಂಭಾವ್ಯ ಕ್ಷಿಪಣಿ ಅಥವಾ ಡ್ರೋನ್ ದಾಳಿ ವಲಯಗಳಿಂದ ಅದನ್ನು ತೆಗೆದುಹಾಕುವ ಲೆಕ್ಕಾಚಾರದ ಭಾಗವಾಗಿ ಇದನ್ನು ಮಾಡಿರಬಹುದು ಎಂದೂ ಕೂಡಾ ಹೇಳಲಾಗುತ್ತಿದೆ.

ಜೊತೆಗೆ, ಮುನ್ನೆಚ್ಚರಿಕೆ ಕ್ರಮವಾಗಿ ನೆತನ್ಯಾಹು ಅವರ ಕುಟುಂಬದ ಸದಸ್ಯರೊಂದಿಗೆ ಅಥೆನ್ಸ್‌ಗೆ ಪ್ರಯಾಣಿಸಿರಬಹುದು ಎಂಬ ಊಹಾಪೋಹವೂ ಇದೆ. ಪ್ರತೀಕಾರದ ಬೆದರಿಕೆ ಇರುವ ಸಂದರ್ಭಗಳಲ್ಲಿ, ರಾಷ್ಟ್ರೀಯ ನಾಯಕರು ಪ್ರಮುಖ ವ್ಯಕ್ತಿಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸುವುದು ಇದು ಮೊದಲೇನಲ್ಲ, ವಿಶೇಷವಾಗಿ ಗುಪ್ತಚರವು ಅಪಾಯವನ್ನು ಗುರುತಿಸಿದ್ದರೆ ಇದನ್ನು ಮಾಡಲಾಗುತ್ತದೆ ಎಂದು ಟಿಅರ್‌ಟಿ ವಲ್ಡ್‌ ಹೇಳಿದೆ.

ಇಸ್ರೇಲಿ ಅಧಿಕಾರಿಗಳು ವಿಮಾನದಲ್ಲಿ ಪ್ರಧಾನಿ ಮತ್ತು ಅವರ ಆಂತರಿಕ ವಲಯದ ಅವರ ಇರುವಿಕೆಯನ್ನು ದೃಢೀಕರಿಸದಿದ್ದರೂ, ಹಾರಾಟದ ಸಮಯ ಮತ್ತು ಈಗ ವಿಮಾನ ಇರುವ ಸ್ಥಳವು ಪ್ರಧಾನ ಮಂತ್ರಿ ಮತ್ತು ಅವರ ಆಂತರಿಕ ವಲಯವನ್ನು ರಕ್ಷಿಸುವ ಭದ್ರತಾ ಕಾರ್ಯತಂತ್ರದ ಭಾಗವಾಗಿ ಇದನ್ನು ಮಾಡಲಾಗಿದೆ ಎಂಬ ಊಹಾಪೋಹಗಳು ಹರಡಿವೆ.

ಇಸ್ರೇಲ್ ಮೇಲೆ ಇರಾನ್‌ನ ಪ್ರತಿದಾಳಿ ನಡೆಯಲಿದೆ ಎಂದು ಖಚಿತವಾದ್ದರಿಂದ ಪ್ರಧಾನಿ ನೆತನ್ಯಾಹು ಮತ್ತು ಅಮೇರಿಕನ್ ಮಿಲಿಟರಿ ಅಥವಾ ಗುಪ್ತಚರ ಅಧಿಕಾರಿಗಳ ನಡುವೆ ಉನ್ನತ ಮಟ್ಟದ, ವೈಯಕ್ತಿಕ ಸಮನ್ವಯಕ್ಕಾಗಿ ಅಥೆನ್ಸ್ ಅನ್ನು ತಟಸ್ಥ ಮತ್ತು ಸುರಕ್ಷಿತ ಸ್ಥಳವಾಗಿ ಆಯ್ಕೆ ಮಾಡಿರಬಹುದು ಎಂಬ ಊಹಾಪೋಹಗಳೂ ಹರಡಿವೆ. ಪ್ರಧಾನಿ ನೆತನ್ಯಾಹು ಅವರ ಸ್ಥಳ ಅಥವಾ ಹಾರಾಟದ ಉದ್ದೇಶವನ್ನು ದೃಢೀಕರಿಸುವ ಯಾವುದೇ ಅಧಿಕೃತ ಹೇಳಿಕೆಯಿಲ್ಲದೆ, ಅಥೆನ್ಸ್‌ನಲ್ಲಿ ಪ್ರಧಾನಿಯ ವಿಮಾನ ನಿಲುಗಡೆಯಾಗಿದ್ದರ ಹಿಂದಿನ ನಿಜವಾದ ಉದ್ದೇಶದ ಬಗ್ಗೆ ಪ್ರಶ್ನೆಗಳು ಮುಂದುವರೆದಿವೆ. ಇರಾನ್‌ನ ದಾಳಿಗೂ ಮೊದಲು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...