Homeಮುಖಪುಟಉತ್ತರ ಗಾಝಾದ ಕೊನೆಯ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್ : ಕೆಲವರ ಬಂಧನ, ಹಲವರು...

ಉತ್ತರ ಗಾಝಾದ ಕೊನೆಯ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್ : ಕೆಲವರ ಬಂಧನ, ಹಲವರು ಸಜೀವ ದಹನ

- Advertisement -
- Advertisement -

ಉತ್ತರ ಗಾಝಾದ ಕೊನೆಯ ಆಸ್ಪತ್ರೆ ಎನ್ನಲಾದ ‘ಕಮಲ್ ಅದ್ವಾನ್‌’ ಮೇಲೆ ಇಸ್ರೇಲ್ ಸೇನೆ ದಾಳಿ ನಡೆಸಿ ಸುಟ್ಟು ಹಾಕಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕಮಲ್ ಅದ್ವಾನ್ ಆಸ್ಪತ್ರೆಯಲ್ಲಿ ಉಗ್ರರು ತಂಗಿದ್ದಾರೆ ಎಂದು ಆರೋಪಿಸಿದ್ದ ಇಸ್ರೇಲ್ ಸೇನೆ ಕೆಲ ದಿನಗಳ ಹಿಂದೆ ಆಸ್ಪತ್ರೆಯನ್ನು ತೊರೆಯುವಂತೆ ಅದರ ಸಿಬ್ಬಂದಿಗೆ ಸೂಚಿಸಿತ್ತು. ಆದರೆ, ಸಮೀಪದಲ್ಲಿ ಬೇರೆ ಆಸ್ಪತ್ರೆಗಳು ಮತ್ತು ಸಾಕಷ್ಟು ಆಂಬ್ಯುಲೆನ್ಸ್‌ಗಳು ಇಲ್ಲದ ಕಾರಣ ಆಸ್ಪತ್ರೆ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸಿದ್ದರು.

ನೂರಾರು ರೋಗಿಗಳು ಮತ್ತು ಇಸ್ರೇಲ್ ದಾಳಿಯಲ್ಲಿ ಗಾಯಗೊಂಡವರು ಬಾಕಿ ಉಳಿದಿರುವ ಏಕೈಕ ಆಸ್ಪತ್ರೆಯನ್ನು ಆಶ್ರಯಿಸಿದ್ದಾರೆ. ಇಲ್ಲಿ ಸರಿಯಾದ ವೈದ್ಯಕೀಯ ಸಾಮಾಗ್ರಿಗಳು ಲಭ್ಯವಿಲ್ಲ. ಆದರೂ, ವಿಶ್ವಸಂಸ್ಥೆಯ ನೆರವಿನಿಂದ ನಾವು ಜನರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಆಸ್ಪತ್ರೆ ಮುಖ್ಯಸ್ಥರು ತಿಳಿಸಿದ್ದರು.

ಆದರೆ, ಶುಕ್ರವಾರ (ಡಿ.27) ಇಸ್ರೇಲ್ ಸೇನೆ ಆಸ್ಪತ್ರೆಯಲ್ಲಿ ಪರಿಶೀಲನೆ ಆರಂಭಿಸಿತ್ತು. ಆ ಬಳಿಕ ಬೆಂಕಿ ಹಚ್ಚಿದೆ. ಇದರಿಂದ ಕೆಲ ವೈದ್ಯಕೀಯ ಸಿಬ್ಬಂದಿ ಸಜೀವ ದಹನವಾಗಿದ್ದಾರೆ. ಇನ್ನೂ ಕೆಲವರು ಕಿಲೋ ಮೀಟರ್‌ಗಟ್ಟಲೆ ದೂರ ಓಡಿ ಹೋಗಿದ್ದಾರೆ ಎಂದು ಅಲ್‌-ಜಝೀರಾ ಮತ್ತು ದಿ ನ್ಯೂ ಅರಬ್ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಆಸ್ಪತ್ರೆಯ ನಿರ್ದೇಶಕ ಹುಸಾಮ್ ಅಬೂ ಸಫಿಯಾ ಸೇರಿದಂತೆ ಕೆಲ ಸಿಬ್ಬಂದಿಯನ್ನು ಇಸ್ರೇಲ್ ಸೇನೆ ಬಂಧಿಸಿ ಕರೆದುಕೊಂಡು ಹೋಗಿದೆ ಎಂದು ಹಮಾಸ್‌ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದ್ದಾಗಿ ವರದಿಯಾಗಿದೆ.

“ಇಸ್ರೇಲ್ ಸೇನೆ ನಮ್ಮನ್ನು ಬಂಧಿಸಿ ಸುಮಾರು 12 ಗಂಟೆಗಳ ಕಾಲ ಚಳಿಯಲ್ಲಿ ವಿವಸ್ತ್ರರಾಗಿ ನಿಲ್ಲಿಸಿತ್ತು. ಗಾಯಗೊಂಡವರನ್ನು, ಅಸ್ವಸ್ತರಾದವರನ್ನು ಥಳಿಸಿದೆ. ಪರಿಶೀಲನೆ ನಡೆಸಲು ಮಹಿಳೆಯರಿಗೆ ಬಟ್ಟೆ ಕಳಚುವಂತೆ ಒತ್ತಾಯಿಸಿದೆ. ವಿರೋಧಿಸಿದಾಗ ಕಪಾಳಮೋಕ್ಷ ಮಾಡಿದ್ದಾರೆ. ಶೌಚಾಲಯಕ್ಕೆ ಹೋಗಲೂ ನಮಗೆ ಅವಕಾಶ ನೀಡಿರಲಿಲ್ಲ. ನಾವು ಅವಮಾನದಲ್ಲಿ ಬದುಕುತ್ತಿದ್ದೇವೆ, ನಾವು ದಣಿದಿದ್ದೇವೆ. ಸಾಕು, ನಮಗೆ ಈ ಜೀವನ ಸಾಕು” ಎಂದು” ವಿಚಾರಣೆಗೆ ಒಳಪಟ್ಟು ಹೊರಬಂದ ಕಮಲ್ ಅದ್ವಾನ್ ಆಸ್ಪತ್ರೆಯ ನರ್ಸ್‌ ಇಸ್ಮಾಯಿಲ್ ಅಲ್-ಕಹ್ಲೌತ್ ಹೇಳಿದ್ದಾಗಿ ಅಲ್‌-ಜಝೀರಾ ವರದಿ ಮಾಡಿದೆ.

“ನಮ್ಮನ್ನು ವಿಚಾರಣೆಗೆ ಒಳಪಡಿಸುವ ಮೊದಲು ಸುಮಾರು ಎರಡು ಗಂಟೆಗಳ ಕಾಲ ಮೈನಡುಗುವ ಚಳಿಯಲ್ಲಿ ನಡೆಸಿದರು. ಇಸ್ರೇಲ್ ಸೇನಾ ಸಿಬ್ಬಂದಿ ನಮ್ಮ ಮೇಲೆ ಉಗುಳಿ ಅವಮಾನ ಮಾಡಿದ್ದಾರೆ. ನಮ್ಮೆಲ್ಲರ ಫೋಟೋಗಳನ್ನು ತೆಗೆದುಕೊಂಡಿದ್ದಾರೆ. ಬಿಡುಗಡೆ ಮಾಡುವ ಮೊದಲು ನಮ್ಮ ಎದೆ ಮತ್ತು ಬೆನ್ನಿನ ಮೇಲೆ ಸಂಖ್ಯೆಗಳನ್ನು ಬರೆದಿದ್ದಾರೆ” ಎಂದು ಆಸ್ಪತ್ರೆಯಲ್ಲಿ ತಂಗಿದ್ದ ಎಝಾತ್ ರಮದಾನ್ ಎಂಬವರು ಹೇಳಿದ್ದಾಗಿ ಅಲ್‌-ಜಝೀರಾ ವರದಿ ಉಲ್ಲೇಖಿಸಿದೆ.

“ಇಸ್ರೇಲಿ ಸೇನಾ ಸಿಬ್ಬಂದಿ ನಮ್ಮ ಕೈಗಳನ್ನು ಬಿಗಿದು, ಕಣ್ಣಿಗೆ ಬಟ್ಟೆ ಕಟ್ಟಿ ಕರೆದುಕೊಂಡು ಹೋದರು. ನಮ್ಮ ಸುತ್ತಮುತ್ತ ಜನರು ಕಿರುಚಾಡುವುದು ಕೇಳುತ್ತಿತ್ತು. ಆದರೆ, ಎಲ್ಲಿ ಏನಾಗ್ತಿದೆ ಗೊತ್ತಾಗುತ್ತಿರಲಿಲ್ಲ. ನಾನು ನನಗೆ ಯಾವಾಗ ಥಳಿಸುತ್ತಾರೆ ಎಂದು ಕಾಯುತ್ತಿದ್ದೆ” ಎಂದು ಆಸ್ಪತ್ರೆಯ ಸಿಬ್ಬಂದಿ ಶೋರೂಕ್ ಅಲ್-ರಾಂಟಿಸಿ ಹೇಳಿದ್ದಾಗಿ ವರದಿ ವಿವರಿಸಿದೆ.

ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ಸೇನೆ ಗಾಝಾದಲ್ಲಿ 48 ನಾಗರಿಕರನ್ನು ಹತ್ಯೆ ಮಾಡಿದೆ. ಗಾಝಾ ಪಟ್ಟಿಯಾದ್ಯಂತ 52 ಮಂದಿ ಗಾಯಗೊಂಡಿದ್ದಾರೆ.

2023 ಅಕ್ಟೋಬರ್ 7ರಿಂದ ಇದುವರೆಗೆ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ ಸಾವನ್ನಪ್ಪಿದ ಜನರ ಸಂಖ್ಯೆ  45,484ಕ್ಕೆ ತಲುಪಿದೆ. 108,090ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿ : ಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...