Homeಮುಖಪುಟಉತ್ತರ ಗಾಝಾದ ಕೊನೆಯ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್ : ಕೆಲವರ ಬಂಧನ, ಹಲವರು...

ಉತ್ತರ ಗಾಝಾದ ಕೊನೆಯ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್ : ಕೆಲವರ ಬಂಧನ, ಹಲವರು ಸಜೀವ ದಹನ

- Advertisement -
- Advertisement -

ಉತ್ತರ ಗಾಝಾದ ಕೊನೆಯ ಆಸ್ಪತ್ರೆ ಎನ್ನಲಾದ ‘ಕಮಲ್ ಅದ್ವಾನ್‌’ ಮೇಲೆ ಇಸ್ರೇಲ್ ಸೇನೆ ದಾಳಿ ನಡೆಸಿ ಸುಟ್ಟು ಹಾಕಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕಮಲ್ ಅದ್ವಾನ್ ಆಸ್ಪತ್ರೆಯಲ್ಲಿ ಉಗ್ರರು ತಂಗಿದ್ದಾರೆ ಎಂದು ಆರೋಪಿಸಿದ್ದ ಇಸ್ರೇಲ್ ಸೇನೆ ಕೆಲ ದಿನಗಳ ಹಿಂದೆ ಆಸ್ಪತ್ರೆಯನ್ನು ತೊರೆಯುವಂತೆ ಅದರ ಸಿಬ್ಬಂದಿಗೆ ಸೂಚಿಸಿತ್ತು. ಆದರೆ, ಸಮೀಪದಲ್ಲಿ ಬೇರೆ ಆಸ್ಪತ್ರೆಗಳು ಮತ್ತು ಸಾಕಷ್ಟು ಆಂಬ್ಯುಲೆನ್ಸ್‌ಗಳು ಇಲ್ಲದ ಕಾರಣ ಆಸ್ಪತ್ರೆ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸಿದ್ದರು.

ನೂರಾರು ರೋಗಿಗಳು ಮತ್ತು ಇಸ್ರೇಲ್ ದಾಳಿಯಲ್ಲಿ ಗಾಯಗೊಂಡವರು ಬಾಕಿ ಉಳಿದಿರುವ ಏಕೈಕ ಆಸ್ಪತ್ರೆಯನ್ನು ಆಶ್ರಯಿಸಿದ್ದಾರೆ. ಇಲ್ಲಿ ಸರಿಯಾದ ವೈದ್ಯಕೀಯ ಸಾಮಾಗ್ರಿಗಳು ಲಭ್ಯವಿಲ್ಲ. ಆದರೂ, ವಿಶ್ವಸಂಸ್ಥೆಯ ನೆರವಿನಿಂದ ನಾವು ಜನರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಆಸ್ಪತ್ರೆ ಮುಖ್ಯಸ್ಥರು ತಿಳಿಸಿದ್ದರು.

ಆದರೆ, ಶುಕ್ರವಾರ (ಡಿ.27) ಇಸ್ರೇಲ್ ಸೇನೆ ಆಸ್ಪತ್ರೆಯಲ್ಲಿ ಪರಿಶೀಲನೆ ಆರಂಭಿಸಿತ್ತು. ಆ ಬಳಿಕ ಬೆಂಕಿ ಹಚ್ಚಿದೆ. ಇದರಿಂದ ಕೆಲ ವೈದ್ಯಕೀಯ ಸಿಬ್ಬಂದಿ ಸಜೀವ ದಹನವಾಗಿದ್ದಾರೆ. ಇನ್ನೂ ಕೆಲವರು ಕಿಲೋ ಮೀಟರ್‌ಗಟ್ಟಲೆ ದೂರ ಓಡಿ ಹೋಗಿದ್ದಾರೆ ಎಂದು ಅಲ್‌-ಜಝೀರಾ ಮತ್ತು ದಿ ನ್ಯೂ ಅರಬ್ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಆಸ್ಪತ್ರೆಯ ನಿರ್ದೇಶಕ ಹುಸಾಮ್ ಅಬೂ ಸಫಿಯಾ ಸೇರಿದಂತೆ ಕೆಲ ಸಿಬ್ಬಂದಿಯನ್ನು ಇಸ್ರೇಲ್ ಸೇನೆ ಬಂಧಿಸಿ ಕರೆದುಕೊಂಡು ಹೋಗಿದೆ ಎಂದು ಹಮಾಸ್‌ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದ್ದಾಗಿ ವರದಿಯಾಗಿದೆ.

“ಇಸ್ರೇಲ್ ಸೇನೆ ನಮ್ಮನ್ನು ಬಂಧಿಸಿ ಸುಮಾರು 12 ಗಂಟೆಗಳ ಕಾಲ ಚಳಿಯಲ್ಲಿ ವಿವಸ್ತ್ರರಾಗಿ ನಿಲ್ಲಿಸಿತ್ತು. ಗಾಯಗೊಂಡವರನ್ನು, ಅಸ್ವಸ್ತರಾದವರನ್ನು ಥಳಿಸಿದೆ. ಪರಿಶೀಲನೆ ನಡೆಸಲು ಮಹಿಳೆಯರಿಗೆ ಬಟ್ಟೆ ಕಳಚುವಂತೆ ಒತ್ತಾಯಿಸಿದೆ. ವಿರೋಧಿಸಿದಾಗ ಕಪಾಳಮೋಕ್ಷ ಮಾಡಿದ್ದಾರೆ. ಶೌಚಾಲಯಕ್ಕೆ ಹೋಗಲೂ ನಮಗೆ ಅವಕಾಶ ನೀಡಿರಲಿಲ್ಲ. ನಾವು ಅವಮಾನದಲ್ಲಿ ಬದುಕುತ್ತಿದ್ದೇವೆ, ನಾವು ದಣಿದಿದ್ದೇವೆ. ಸಾಕು, ನಮಗೆ ಈ ಜೀವನ ಸಾಕು” ಎಂದು” ವಿಚಾರಣೆಗೆ ಒಳಪಟ್ಟು ಹೊರಬಂದ ಕಮಲ್ ಅದ್ವಾನ್ ಆಸ್ಪತ್ರೆಯ ನರ್ಸ್‌ ಇಸ್ಮಾಯಿಲ್ ಅಲ್-ಕಹ್ಲೌತ್ ಹೇಳಿದ್ದಾಗಿ ಅಲ್‌-ಜಝೀರಾ ವರದಿ ಮಾಡಿದೆ.

“ನಮ್ಮನ್ನು ವಿಚಾರಣೆಗೆ ಒಳಪಡಿಸುವ ಮೊದಲು ಸುಮಾರು ಎರಡು ಗಂಟೆಗಳ ಕಾಲ ಮೈನಡುಗುವ ಚಳಿಯಲ್ಲಿ ನಡೆಸಿದರು. ಇಸ್ರೇಲ್ ಸೇನಾ ಸಿಬ್ಬಂದಿ ನಮ್ಮ ಮೇಲೆ ಉಗುಳಿ ಅವಮಾನ ಮಾಡಿದ್ದಾರೆ. ನಮ್ಮೆಲ್ಲರ ಫೋಟೋಗಳನ್ನು ತೆಗೆದುಕೊಂಡಿದ್ದಾರೆ. ಬಿಡುಗಡೆ ಮಾಡುವ ಮೊದಲು ನಮ್ಮ ಎದೆ ಮತ್ತು ಬೆನ್ನಿನ ಮೇಲೆ ಸಂಖ್ಯೆಗಳನ್ನು ಬರೆದಿದ್ದಾರೆ” ಎಂದು ಆಸ್ಪತ್ರೆಯಲ್ಲಿ ತಂಗಿದ್ದ ಎಝಾತ್ ರಮದಾನ್ ಎಂಬವರು ಹೇಳಿದ್ದಾಗಿ ಅಲ್‌-ಜಝೀರಾ ವರದಿ ಉಲ್ಲೇಖಿಸಿದೆ.

“ಇಸ್ರೇಲಿ ಸೇನಾ ಸಿಬ್ಬಂದಿ ನಮ್ಮ ಕೈಗಳನ್ನು ಬಿಗಿದು, ಕಣ್ಣಿಗೆ ಬಟ್ಟೆ ಕಟ್ಟಿ ಕರೆದುಕೊಂಡು ಹೋದರು. ನಮ್ಮ ಸುತ್ತಮುತ್ತ ಜನರು ಕಿರುಚಾಡುವುದು ಕೇಳುತ್ತಿತ್ತು. ಆದರೆ, ಎಲ್ಲಿ ಏನಾಗ್ತಿದೆ ಗೊತ್ತಾಗುತ್ತಿರಲಿಲ್ಲ. ನಾನು ನನಗೆ ಯಾವಾಗ ಥಳಿಸುತ್ತಾರೆ ಎಂದು ಕಾಯುತ್ತಿದ್ದೆ” ಎಂದು ಆಸ್ಪತ್ರೆಯ ಸಿಬ್ಬಂದಿ ಶೋರೂಕ್ ಅಲ್-ರಾಂಟಿಸಿ ಹೇಳಿದ್ದಾಗಿ ವರದಿ ವಿವರಿಸಿದೆ.

ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ಸೇನೆ ಗಾಝಾದಲ್ಲಿ 48 ನಾಗರಿಕರನ್ನು ಹತ್ಯೆ ಮಾಡಿದೆ. ಗಾಝಾ ಪಟ್ಟಿಯಾದ್ಯಂತ 52 ಮಂದಿ ಗಾಯಗೊಂಡಿದ್ದಾರೆ.

2023 ಅಕ್ಟೋಬರ್ 7ರಿಂದ ಇದುವರೆಗೆ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ ಸಾವನ್ನಪ್ಪಿದ ಜನರ ಸಂಖ್ಯೆ  45,484ಕ್ಕೆ ತಲುಪಿದೆ. 108,090ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿ : ಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...