Homeಮುಖಪುಟಉತ್ತರ ಗಾಝಾದ ಕೊನೆಯ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್ : ಕೆಲವರ ಬಂಧನ, ಹಲವರು...

ಉತ್ತರ ಗಾಝಾದ ಕೊನೆಯ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್ : ಕೆಲವರ ಬಂಧನ, ಹಲವರು ಸಜೀವ ದಹನ

- Advertisement -
- Advertisement -

ಉತ್ತರ ಗಾಝಾದ ಕೊನೆಯ ಆಸ್ಪತ್ರೆ ಎನ್ನಲಾದ ‘ಕಮಲ್ ಅದ್ವಾನ್‌’ ಮೇಲೆ ಇಸ್ರೇಲ್ ಸೇನೆ ದಾಳಿ ನಡೆಸಿ ಸುಟ್ಟು ಹಾಕಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕಮಲ್ ಅದ್ವಾನ್ ಆಸ್ಪತ್ರೆಯಲ್ಲಿ ಉಗ್ರರು ತಂಗಿದ್ದಾರೆ ಎಂದು ಆರೋಪಿಸಿದ್ದ ಇಸ್ರೇಲ್ ಸೇನೆ ಕೆಲ ದಿನಗಳ ಹಿಂದೆ ಆಸ್ಪತ್ರೆಯನ್ನು ತೊರೆಯುವಂತೆ ಅದರ ಸಿಬ್ಬಂದಿಗೆ ಸೂಚಿಸಿತ್ತು. ಆದರೆ, ಸಮೀಪದಲ್ಲಿ ಬೇರೆ ಆಸ್ಪತ್ರೆಗಳು ಮತ್ತು ಸಾಕಷ್ಟು ಆಂಬ್ಯುಲೆನ್ಸ್‌ಗಳು ಇಲ್ಲದ ಕಾರಣ ಆಸ್ಪತ್ರೆ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸಿದ್ದರು.

ನೂರಾರು ರೋಗಿಗಳು ಮತ್ತು ಇಸ್ರೇಲ್ ದಾಳಿಯಲ್ಲಿ ಗಾಯಗೊಂಡವರು ಬಾಕಿ ಉಳಿದಿರುವ ಏಕೈಕ ಆಸ್ಪತ್ರೆಯನ್ನು ಆಶ್ರಯಿಸಿದ್ದಾರೆ. ಇಲ್ಲಿ ಸರಿಯಾದ ವೈದ್ಯಕೀಯ ಸಾಮಾಗ್ರಿಗಳು ಲಭ್ಯವಿಲ್ಲ. ಆದರೂ, ವಿಶ್ವಸಂಸ್ಥೆಯ ನೆರವಿನಿಂದ ನಾವು ಜನರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಆಸ್ಪತ್ರೆ ಮುಖ್ಯಸ್ಥರು ತಿಳಿಸಿದ್ದರು.

ಆದರೆ, ಶುಕ್ರವಾರ (ಡಿ.27) ಇಸ್ರೇಲ್ ಸೇನೆ ಆಸ್ಪತ್ರೆಯಲ್ಲಿ ಪರಿಶೀಲನೆ ಆರಂಭಿಸಿತ್ತು. ಆ ಬಳಿಕ ಬೆಂಕಿ ಹಚ್ಚಿದೆ. ಇದರಿಂದ ಕೆಲ ವೈದ್ಯಕೀಯ ಸಿಬ್ಬಂದಿ ಸಜೀವ ದಹನವಾಗಿದ್ದಾರೆ. ಇನ್ನೂ ಕೆಲವರು ಕಿಲೋ ಮೀಟರ್‌ಗಟ್ಟಲೆ ದೂರ ಓಡಿ ಹೋಗಿದ್ದಾರೆ ಎಂದು ಅಲ್‌-ಜಝೀರಾ ಮತ್ತು ದಿ ನ್ಯೂ ಅರಬ್ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಆಸ್ಪತ್ರೆಯ ನಿರ್ದೇಶಕ ಹುಸಾಮ್ ಅಬೂ ಸಫಿಯಾ ಸೇರಿದಂತೆ ಕೆಲ ಸಿಬ್ಬಂದಿಯನ್ನು ಇಸ್ರೇಲ್ ಸೇನೆ ಬಂಧಿಸಿ ಕರೆದುಕೊಂಡು ಹೋಗಿದೆ ಎಂದು ಹಮಾಸ್‌ ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದ್ದಾಗಿ ವರದಿಯಾಗಿದೆ.

“ಇಸ್ರೇಲ್ ಸೇನೆ ನಮ್ಮನ್ನು ಬಂಧಿಸಿ ಸುಮಾರು 12 ಗಂಟೆಗಳ ಕಾಲ ಚಳಿಯಲ್ಲಿ ವಿವಸ್ತ್ರರಾಗಿ ನಿಲ್ಲಿಸಿತ್ತು. ಗಾಯಗೊಂಡವರನ್ನು, ಅಸ್ವಸ್ತರಾದವರನ್ನು ಥಳಿಸಿದೆ. ಪರಿಶೀಲನೆ ನಡೆಸಲು ಮಹಿಳೆಯರಿಗೆ ಬಟ್ಟೆ ಕಳಚುವಂತೆ ಒತ್ತಾಯಿಸಿದೆ. ವಿರೋಧಿಸಿದಾಗ ಕಪಾಳಮೋಕ್ಷ ಮಾಡಿದ್ದಾರೆ. ಶೌಚಾಲಯಕ್ಕೆ ಹೋಗಲೂ ನಮಗೆ ಅವಕಾಶ ನೀಡಿರಲಿಲ್ಲ. ನಾವು ಅವಮಾನದಲ್ಲಿ ಬದುಕುತ್ತಿದ್ದೇವೆ, ನಾವು ದಣಿದಿದ್ದೇವೆ. ಸಾಕು, ನಮಗೆ ಈ ಜೀವನ ಸಾಕು” ಎಂದು” ವಿಚಾರಣೆಗೆ ಒಳಪಟ್ಟು ಹೊರಬಂದ ಕಮಲ್ ಅದ್ವಾನ್ ಆಸ್ಪತ್ರೆಯ ನರ್ಸ್‌ ಇಸ್ಮಾಯಿಲ್ ಅಲ್-ಕಹ್ಲೌತ್ ಹೇಳಿದ್ದಾಗಿ ಅಲ್‌-ಜಝೀರಾ ವರದಿ ಮಾಡಿದೆ.

“ನಮ್ಮನ್ನು ವಿಚಾರಣೆಗೆ ಒಳಪಡಿಸುವ ಮೊದಲು ಸುಮಾರು ಎರಡು ಗಂಟೆಗಳ ಕಾಲ ಮೈನಡುಗುವ ಚಳಿಯಲ್ಲಿ ನಡೆಸಿದರು. ಇಸ್ರೇಲ್ ಸೇನಾ ಸಿಬ್ಬಂದಿ ನಮ್ಮ ಮೇಲೆ ಉಗುಳಿ ಅವಮಾನ ಮಾಡಿದ್ದಾರೆ. ನಮ್ಮೆಲ್ಲರ ಫೋಟೋಗಳನ್ನು ತೆಗೆದುಕೊಂಡಿದ್ದಾರೆ. ಬಿಡುಗಡೆ ಮಾಡುವ ಮೊದಲು ನಮ್ಮ ಎದೆ ಮತ್ತು ಬೆನ್ನಿನ ಮೇಲೆ ಸಂಖ್ಯೆಗಳನ್ನು ಬರೆದಿದ್ದಾರೆ” ಎಂದು ಆಸ್ಪತ್ರೆಯಲ್ಲಿ ತಂಗಿದ್ದ ಎಝಾತ್ ರಮದಾನ್ ಎಂಬವರು ಹೇಳಿದ್ದಾಗಿ ಅಲ್‌-ಜಝೀರಾ ವರದಿ ಉಲ್ಲೇಖಿಸಿದೆ.

“ಇಸ್ರೇಲಿ ಸೇನಾ ಸಿಬ್ಬಂದಿ ನಮ್ಮ ಕೈಗಳನ್ನು ಬಿಗಿದು, ಕಣ್ಣಿಗೆ ಬಟ್ಟೆ ಕಟ್ಟಿ ಕರೆದುಕೊಂಡು ಹೋದರು. ನಮ್ಮ ಸುತ್ತಮುತ್ತ ಜನರು ಕಿರುಚಾಡುವುದು ಕೇಳುತ್ತಿತ್ತು. ಆದರೆ, ಎಲ್ಲಿ ಏನಾಗ್ತಿದೆ ಗೊತ್ತಾಗುತ್ತಿರಲಿಲ್ಲ. ನಾನು ನನಗೆ ಯಾವಾಗ ಥಳಿಸುತ್ತಾರೆ ಎಂದು ಕಾಯುತ್ತಿದ್ದೆ” ಎಂದು ಆಸ್ಪತ್ರೆಯ ಸಿಬ್ಬಂದಿ ಶೋರೂಕ್ ಅಲ್-ರಾಂಟಿಸಿ ಹೇಳಿದ್ದಾಗಿ ವರದಿ ವಿವರಿಸಿದೆ.

ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ಸೇನೆ ಗಾಝಾದಲ್ಲಿ 48 ನಾಗರಿಕರನ್ನು ಹತ್ಯೆ ಮಾಡಿದೆ. ಗಾಝಾ ಪಟ್ಟಿಯಾದ್ಯಂತ 52 ಮಂದಿ ಗಾಯಗೊಂಡಿದ್ದಾರೆ.

2023 ಅಕ್ಟೋಬರ್ 7ರಿಂದ ಇದುವರೆಗೆ ಇಸ್ರೇಲ್ ನಡೆಸಿದ ಆಕ್ರಮಣದಲ್ಲಿ ಸಾವನ್ನಪ್ಪಿದ ಜನರ ಸಂಖ್ಯೆ  45,484ಕ್ಕೆ ತಲುಪಿದೆ. 108,090ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿ : ಹಿಮಾಚಲ ಪ್ರದೇಶ: ಕಾಶ್ಮೀರಿ ಶಾಲು ಮಾರಾಟಗಾರರಿಗೆ ಹಿಂದುತ್ವ ಗುಂಪುಗಳಿಂದ ಬೆದರಿಕೆ: ಸಿಎಂ ಮಧ್ಯಪ್ರವೇಶಕ್ಕೆ ಮುಫ್ತಿ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...