Homeಅಂತರಾಷ್ಟ್ರೀಯಒಂದೂವರೆ ವರ್ಷದ ಪ್ಯಾಲೆಸ್ತೀನಿಯನ್ ಮಗುವಿಗೆ ಸಿಗರೇಟ್‌ನಿಂದ ಸುಟ್ಟು, ಮೊಳೆ ಚುಚ್ಚಿ ಚಿತ್ರಹಿಂಸೆ ಕೊಟ್ಟ ಇಸ್ರೇಲಿ ಸೈನಿಕರು

ಒಂದೂವರೆ ವರ್ಷದ ಪ್ಯಾಲೆಸ್ತೀನಿಯನ್ ಮಗುವಿಗೆ ಸಿಗರೇಟ್‌ನಿಂದ ಸುಟ್ಟು, ಮೊಳೆ ಚುಚ್ಚಿ ಚಿತ್ರಹಿಂಸೆ ಕೊಟ್ಟ ಇಸ್ರೇಲಿ ಸೈನಿಕರು

- Advertisement -
- Advertisement -

ಗಾಝಾದ ಪ್ಯಾಲೆಸ್ತೀನಿಯನ್ ವ್ಯಕ್ತಿಯೊಬ್ಬರಿಂದ ಬಲವಂತವಾಗಿ ತಪ್ಪೊಪ್ಪಿಗೆ ಪಡೆಯಲು, ಅವರ 18 ತಿಂಗಳ ಮಗುವಿಗೆ ಇಸ್ರೇಲಿ ಸೈನಿಕರು ತೀವ್ರ ಚಿತ್ರಹಿಂಸೆ ಕೊಟ್ಟಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ಸೋಮವಾರ (ಮಾ.23) ವರದಿ ಮಾಡಿವೆ.

ಮಾರ್ಚ್ 21ರಂದು ಮಧ್ಯ ಗಾಝಾದ ಅಲ್-ಮಘಾಝಿ ನಿರಾಶ್ರಿತರ ಶಿಬಿರದ ಬಳಿ ಕರೀಮ್ ಅಬೂ ನಾಸರ್ ಎಂಬ ಮಗು, ತನ್ನ ತಂದೆ ಒಸಾಮಾ ಅಬೂ ನಾಸರ್ ಅವರೊಂದಿಗೆ ಇದ್ದಾಗ, ಇಸ್ರೇಲ್ ರಕ್ಷಣಾ ಪಡೆಗಳ (ಐಡಿಎಫ್‌) ಸಿಬ್ಬಂದಿ ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಅಲ್ ಜಝೀರಾ ವರದಿ ಹೇಳಿದೆ.

ಪ್ರತ್ಯಕ್ಷದರ್ಶಿಗಳ ಹೇಳಿಕೆ ಆಧರಿಸಿ ಪ್ಯಾಲೆಸ್ತೀನ್ ಟಿವಿ ಮಾಡಿರುವ ವರದಿಯ ಪ್ರಕಾರ, ಐಡಿಎಫ್ ಸೈನಿಕರು ನಿರಾಶ್ರಿತರ ಶಿಬಿರದ ಮೇಲೆ ದಾಳಿ ಮಾಡಿದ ಬಳಿಕ, ಒಸಾಮಾ ಅಬೂ ನಾಸರ್ ಅವರಿಗೆ ತನ್ನ ಮಗುವನ್ನು ನೆಲದ ಮೇಲೆ ಬಿಟ್ಟು ಹತ್ತಿರದ ಮಿಲಿಟರಿ ಚೆಕ್‌ಪೋಸ್ಟ್‌ಗೆ ಬರುವಂತೆ ಸೂಚಿಸಿದ್ದಾರೆ. ಅಲ್ಲಿಗೆ ತೆರಳಿದ ಒಸಾಮಾ ಅವರ ಬಟ್ಟೆ ಬಿಚ್ಚಿಸಿ ತಪಾಸಣೆ ನಡೆಸಿದ್ದಾರೆ. ನಂತರ, ತಂದೆಯಿಂದ ಬಲವಂತವಾಗಿ ತಪ್ಪೊಪ್ಪಿಗೆಯನ್ನು ಪಡೆಯಲು ಮಗುವನ್ನು ಕರೆತಂದು, ಒಸಾಮಾ ಅವರ ಮುಂದೆಯೇ ಮಗುವಿಗೆ ಚಿತ್ರಹಿಂಸೆ ನೀಡಿದ್ದಾರೆ.

ಪ್ಯಾಲೆಸ್ತೀನಿಯನ್ ಪತ್ರಕರ್ತ ಒಸಾಮಾ ಅಲ್-ಕಹ್ಲೂತ್ ಅವರು ಮಗುವಿನ ತಾಯಿಯನ್ನು ಸಂದರ್ಶಿಸಿದ್ದು, ಈ ವೇಳೆ ತಾಯಿ ಮಗುವಿನ ಮೇಲಾದ ಗಾಯಗಳನ್ನು ತೋರಿಸಿದ್ದಾರೆ. ಇಸ್ರೇಲಿ ಸೈನಿಕರು ಮಗುವಿಗೆ ಸಿಗರೇಟಿನಿಂದ ಸುಟ್ಟಿದ್ದಾರೆ ಮತ್ತು ಮಗುವಿನ ಕಾಲಿಗೆ ಮೊಳೆಯನ್ನು ಚುಚ್ಚಿದ್ದಾರೆ ಎಂದು ಅವರು ತಿಳಿಸಿದ್ದಾರೆ.

View this post on Instagram

A post shared by PalPulse (@pulseofpal)

ಟಿಆರ್‌ಟಿ ವರ್ಲ್ಡ್ ಉಲ್ಲೇಖಿಸಿದ ವೈದ್ಯಕೀಯ ವರದಿಯ ಪ್ರಕಾರ, ಮಗುವಿನ ಕಾಲಿನ ಮೇಲೆ ಸಿಗರೇಟಿನಿಂದ ಸುಟ್ಟ ಗುರುತುಗಳು ಮತ್ತು ಮೊಳೆಯಿಂದ ಚುಚ್ಚಿದ ಗಾಯಗಳು ಕಂಡು ಬಂದಿವೆ. ಇಸ್ರೇಲಿ ವಶದಲ್ಲಿ ಸುಮಾರು 10 ಗಂಟೆಗಳ ಕಾಲ ಬಂಧನದಲ್ಲಿದ್ದ ಮಗುವನ್ನು ಕೊನೆಗೆ ಇಂಟರ್‌ನ್ಯಾಷನಲ್ ಕಮಿಟಿ ಆಫ್ ರೆಡ್ ಕ್ರಾಸ್ (ಐ ಸಿಆರ್‌ಸಿ) ಮೂಲಕ ಸಂಬಂಧಿಕರಿಗೆ ಒಪ್ಪಿಸಲಾಗಿದೆ.

ಮಗುವಿನ ತಂದೆ ತಂದೆ ಒಸಾಮಾ ಅಬು ನಾಸರ್ ಇನ್ನೂ ಇಸ್ರೇಲಿ ವಶದಲ್ಲಿದ್ದಾರೆ.

ಇಸ್ರೇಲಿ ಸೈನಿಕರ ಈ ಕ್ರೂರ ಕೃತ್ಯ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಮಾನವ ಹಕ್ಕುಗಳ ಗುಂಪುಗಳು, ಹೋರಾಟಗಾರರು ಮತ್ತು ವಿವಿಧ ದೇಶಗಳ ನಾಯಕರು ಇದನ್ನು ಖಂಡಿಸಿದ್ದಾರೆ.

ಗಾಝಾದ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶಗಳ ಕುರಿತಾದ ವಿಶ್ವಸಂಸ್ಥೆಯ ವಿಶೇಷ ವರದಿಗಾರ್ತಿ ಫ್ರಾನ್ಸೆಸ್ಕಾ ಅಲ್ಬನೀಸ್ ಅವರು ಈ ಘಟನೆಯ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಇಸ್ರೇಲ್ ವ್ಯವಸ್ಥಿತವಾಗಿ ಪ್ಯಾಲೆಸ್ತೀನಿಯರ ಮೇಲೆ ದೈಹಿಕ ಮತ್ತು ಮಾನಸಿಕ ಚಿತ್ರಹಿಂಸೆ ನೀಡುತ್ತಿರುವ ಕುರಿತು ಇತ್ತೀಚೆಗಷ್ಟೇ ವರದಿ ಬಿಡುಗಡೆ ಮಾಡಿದ್ದ ಅವರು, ಸಾಮಾಜಿಕ ಜಾಲತಾಣದ ಎಕ್ಸ್‌ನಲ್ಲಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ತಂದೆಯ ಮೇಲೆ ಒತ್ತಡ ಹೇರಲು ಮಗುವಿಗೆ ಚಿತ್ರಹಿಂಸೆ ನೀಡುವ ಇವರು ಎಂತಹ ವಿಕೃತ ಅಪರಾಧಿಗಳು?” ಎಂದು ಅವರು ಬರೆದುಕೊಂಡಿದ್ದಾರೆ.

ಅಮೆರಿಕನ್-ಇಸ್ಲಾಮಿಕ್ ಸಂಬಂಧಗಳ ಮಂಡಳಿಯು (ಸಿಎಐಆರ್‌) ತನ್ನ ಹೇಳಿಕೆಯಲ್ಲಿ, ಇಸ್ರೇಲಿ ಸೈನಿಕರ ಕೃತ್ಯ “ಸಹಿಸಲಾಗದ ಅನೈತಿಕ ಅತಿರೇಕ” ಎಂದು ಕರೆದಿದೆ ಮತ್ತು ಈ ಕುರಿತು ಅಮೆರಿಕ ಕಾಂಗ್ರೆಸ್ ತಕ್ಷಣದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

“ಯಾವುದೇ ಮಗು, ವಿಶ್ವದ ಯಾವುದೇ ಭಾಗದಲ್ಲಿ ಇಂತಹ ಕ್ರೌರ್ಯಕ್ಕೆ ಒಳಗಾಗಬಾರದು, ಅದರಲ್ಲೂ ವಿಶೇಷವಾಗಿ ಅಮೆರಿಕದ ತೆರಿಗೆದಾರರ ಹಣದಿಂದ ಇಂತಹ ಕೃತ್ಯಗಳು ನಡೆಯಬಾರದು. ಈ ಕ್ರಮಗಳು ಅಂತಾರಾಷ್ಟ್ರೀಯ ಕಾನೂನಿನ ಗಂಭೀರ ಉಲ್ಲಂಘನೆ ಮತ್ತು ಮೂಲಭೂತ ಮಾನವೀಯತೆಯ ಮೃಗೀಯ ಹನನವಾಗಿದೆ” ಎಂದು ಮಂಡಳಿ ಹೇಳಿದೆ.

“ನಮ್ಮ ರಾಷ್ಟ್ರವು ಈ ಅಪರಾಧಗಳಲ್ಲಿ ತನ್ನ ಪಾಲುದಾರಿಕೆಯನ್ನು ಕೊನೆಗೊಳಿಸಬೇಕು. ಅಮೆರಿಕದ ತೆರಿಗೆದಾರರ ಹಣವು ಇನ್ನು ಮುಂದೆ ಮಕ್ಕಳ ಮೇಲಿನ ಚಿತ್ರಹಿಂಸೆ ಅಥವಾ ಹತ್ಯಾಕಾಂಡಕ್ಕೆ ಬಳಕೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಕಾಂಗ್ರೆಸ್ ಮೇಲಿದೆ. ಆತ್ಮಸಾಕ್ಷಿಯಿರುವ ಪ್ರತಿಯೊಬ್ಬ ಚುನಾಯಿತ ಪ್ರತಿನಿಧಿಗಳು ನಿಯಂತ್ರಣ ತಪ್ಪಿದ ಇಸ್ರೇಲ್ ಆಡಳಿತಕ್ಕೆ ನೀಡಲಾಗುವ ಮಿಲಿಟರಿ ನೆರವನ್ನು ನಿಲ್ಲಿಸಲು ಮತ ಚಲಾಯಿಸಬೇಕು” ಎಂದು ಮಂಡಳಿಯು ಒತ್ತಾಯಿಸಿದೆ.

ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಾಗೇರ್ ಗಾಲಿಬಾಫ್ ಅವರು ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸುತ್ತಾ, “ಇರಾನ್ ಮಾನವೀಯತೆಗಾಗಿ ಹೋರಾಡುತ್ತಿದೆ. ಇಡೀ ಜಗತ್ತು ಈಗ ಎರಡರಲ್ಲಿ ಒಂದನ್ನು ಆರಿಸಿಕೊಳ್ಳಬೇಕು: ಒಂದೋ ಗಾಝಾದ ಪರವಾಗಿ ನಿಂತು ಈ ಕ್ರೂರ ಆಡಳಿತವನ್ನು ವಿರೋಧಿಸಬೇಕು, ಇಲ್ಲವೇ ಮಕ್ಕಳ ಮೇಲೆ ದೌರ್ಜನ್ಯ ಎಸಗುವವರ ಪರವಾಗಿ ನಿಲ್ಲಬೇಕು. ಇಲ್ಲಿ ತಟಸ್ಥವಾಗಿರಲು ಸಾಧ್ಯವೇ ಇಲ್ಲ” ಎಂದು ಹೇಳಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾದ ‘ಚಿತ್ರಹಿಂಸೆ ಮತ್ತು ಜನಾಂಗೀಹತ್ಯೆ’ ಎಂಬ ವಿಶ್ವಸಂಸ್ಥೆಯ ವರದಿಯ ಪ್ರಕಾರ, ಅಕ್ಟೋಬರ್ 7, 2023ರಿಂದ ಇಸ್ರೇಲಿ ವಶದಲ್ಲಿರುವ ಪ್ಯಾಲೆಸ್ತೀನಿಯರು ‘ಅತ್ಯಂತ ಕ್ರೂರವಾದ ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ’ ಒಳಗಾಗಿದ್ದಾರೆ.

ಫ್ರಾನ್ಸೆಸ್ಕಾ ಅಲ್ಬನೀಸ್ ಅವರು ಸಿದ್ಧಪಡಿಸಿದ ಈ ವರದಿಯು, “ಬಂಧನದಲ್ಲಿರುವವರ ಮೇಲೆ ನೀಡಲಾಗುತ್ತಿರುವ ಚಿತ್ರಹಿಂಸೆಯನ್ನು ಹಿಂದೆಂದೂ ಕಾಣದ ಮಟ್ಟಿಗೆ ಒಂದು ಶಿಕ್ಷೆಯಾಗಿ ಮತ್ತು ಸಾಮೂಹಿಕ ಸೇಡಿನ ರೂಪದಲ್ಲಿ ಬಳಸಲಾಗುತ್ತಿದೆ” ಎಂದು ಪ್ರತಿಪಾದಿಸಿದೆ.

ಘೋರ ಹಲ್ಲೆಗಳು, ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಮಾರಣಾಂತಿಕ ಕಿರುಕುಳ, ಹಸಿವು ಮತ್ತು ಕನಿಷ್ಠ ಮಾನವೀಯ ಸೌಲಭ್ಯಗಳಿಂದ ವ್ಯವಸ್ಥಿತವಾಗಿ ವಂಚಿಸಿರುವುದು ಹತ್ತಾರು ಸಾವಿರ ಪ್ಯಾಲೆಸ್ತೀನಿಯನ್ನರ ಮತ್ತು ಅವರ ಸಂಬಂಧಿಕರ ದೇಹ ಹಾಗೂ ಮನಸ್ಸಿನ ಮೇಲೆ ಆಳವಾದ ಮತ್ತು ಶಾಶ್ವತವಾದ ಗಾಯಗಳನ್ನು ಉಂಟುಮಾಡಿದೆ” ಎಂದು ವರದಿಯು ತಿಳಿಸಿದೆ.

“ಬಂಧನದಲ್ಲಿರುವಾಗ ನೀಡುವ ಚಿತ್ರಹಿಂಸೆ ಮತ್ತು ಅದರ ಜೊತೆಗೆ ನಿರಂತರವಾಗಿ ನಡೆಸುತ್ತಿರುವ ಬಲವಂತದ ಒಕ್ಕಲೆಬ್ಬಿಸುವಿಕೆ, ಸಮೂಹ ಹತ್ಯೆಗಳು, ಮೂಲಭೂತ ಸೌಲಭ್ಯಗಳ ವಂಚನೆ ಹಾಗೂ ಜೀವನೋಪಾಯದ ಮಾರ್ಗಗಳ ನಾಶದ ಮೂಲಕ ಪುರುಷರು, ಮಹಿಳೆಯರು ಮತ್ತು ಮಕ್ಕಳ ಮೇಲೆ ದಬ್ಬಾಳಿಕೆ ನಡೆಸುವುದು ಹಾಗೂ ಶಿಕ್ಷಿಸುವುದು ಈ ಆಡಳಿತದ ಅವಿಭಾಜ್ಯ ಅಂಗವಾಗಿದೆ. ಇವೆಲ್ಲವೂ ದೀರ್ಘಕಾಲದ ಸಾಮೂಹಿಕ ನೋವು ಮತ್ತು ಸಂಕಟವನ್ನು ಉಂಟುಮಾಡುವ ಉದ್ದೇಶವನ್ನು ಹೊಂದಿವೆ” ಎಂದು ವರದಿಯು ಹೇಳಿದೆ.

ಅಲ್ಬನೀಸ್ ಅವರು ಕನಿಷ್ಠ 300 ಸಾಕ್ಷ್ಯಗಳು ಸೇರಿದಂತೆ ಲಿಖಿತ ಸಲ್ಲಿಕೆಗಳನ್ನು ಸಂಗ್ರಹಿಸಿರುವುದಾಗಿ ತಿಳಿಸಿದ್ದಾರೆ. ಅವರ ಪ್ರಕಾರ, ಅಕ್ಟೋಬರ್ 2023ರಿಂದ ಆಕ್ರಮಿತ ಪ್ರದೇಶದಲ್ಲಿ ಪ್ಯಾಲೆಸ್ತೀನಿಯರ ಬಂಧನವು ಭೀಕರವಾಗಿ ಹೆಚ್ಚಾಗಿದೆ. ಈ ಅವಧಿಯಲ್ಲಿ ಕನಿಷ್ಠ 1,500 ಮಕ್ಕಳು ಸೇರಿದಂತೆ ಒಟ್ಟು 18,500ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

ವರದಿಯ ಪ್ರಕಾರ ಸುಮಾರು 9,000 ಪ್ಯಾಲೆಸ್ತೀನಿಯನ್ನರು ಇನ್ನೂ ಬಂಧನದಲ್ಲಿದ್ದಾರೆ ಮತ್ತು 4,000ಕ್ಕೂ ಹೆಚ್ಚು ಜನರನ್ನು ಬಲವಂತವಾಗಿ ನಾಪತ್ತೆ ಮಾಡಲಾಗಿದೆ. ಇಸ್ರೇಲ್‌ನ ಬಂಧನ ವ್ಯವಸ್ಥೆಯು ವ್ಯವಸ್ಥಿತ ಮತ್ತು ವ್ಯಾಪಕವಾದ ಅವಮಾನ, ಬಲವಂತ ಹಾಗೂ ಭಯೋತ್ಪಾದನೆಯ ಆಡಳಿತವಾಗಿ ಅಧಃಪತನಗೊಂಡಿದೆ ಎಂದು ಅಲ್ಬನೀಸ್ ಹೇಳಿದ್ದಾರೆ.










ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...