Homeಮುಖಪುಟಯೆಮನ್‌ನ ವಿಮಾನ ನಿಲ್ದಾಣ, ವಿದ್ಯುತ್ ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ : ಪ್ರಾಣಾಪಾಯದಿಂದ ಪಾರಾದ WHO...

ಯೆಮನ್‌ನ ವಿಮಾನ ನಿಲ್ದಾಣ, ವಿದ್ಯುತ್ ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ : ಪ್ರಾಣಾಪಾಯದಿಂದ ಪಾರಾದ WHO ಮುಖ್ಯಸ್ಥ

- Advertisement -
- Advertisement -

ಯೆಮನ್‌ ರಾಜಧಾನಿ ಸನಾ ಮತ್ತು ಕೆಂಪು ಸಮುದ್ರದ ಬಂದರು ನಗರ ಹೊದೈದಾದಲ್ಲಿನ ಪ್ರಮುಖ ಮೂಲ ಸೌಕರ್ಯ ಮತ್ತು ಹೌತಿ ಬಂಡುಕೋರರ ನೆಲೆಗಳ ಮೇಲೆ ಇಸ್ರೇಲ್ ಗುರುವಾರ (ಡಿ.26) ವೈಮಾನಿಕ ದಾಳಿ ನಡೆಸಿದೆ.

ಹೌತಿ ಗುಂಪಿನ ನಿಯಂತ್ರಣದಲ್ಲಿರುವ ಪ್ರದೇಶಗಳಾದ ಸನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಹೆಝ್ಯಾಝ್, ರಾಸ್ ಕನಾತಿಬ್ ವಿದ್ಯುತ್ ಸ್ಥಾವರಗಳು ಮತ್ತು ಹೊದೈದಾ, ಸಲೀಫ್ ಮತ್ತು ರಾಸ್ ಕನಾತಿಬ್ ಬಂದರುಗಳಲ್ಲಿನ ಮಿಲಿಟರಿ ಮೂಲಸೌಕರ್ಯಗಳ ಮೇಲೆ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಪ್ರಾಣಾಪಾಯದಿಂದ ಪಾರಾದ ವಿಶ್ವ ಆರೋಗ್ಯ ಸಂಸ್ಥೆ ಮಹಾನಿರ್ದೇಶಕ

ವರದಿಗಳ ಪ್ರಕಾರ, ಸನಾ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಹೆಚ್‌ಒ) ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮತ್ತು ಅಧಿಕಾರಿಗಳು ಪ್ರಾಣಾಪಾಯದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ.

ಘೆಬ್ರೆಯೆಸಸ್ ಮತ್ತು ವಿಶ್ವಸಂಸ್ಥೆಯ ಇತರ ಅಧಿಕಾರಿಗಳು ವಿಮಾನ ಹತ್ತಲು ಸಿದ್ದತೆ ನಡೆಸುತ್ತಿದ್ದಾಗ ದಾಳಿ ನಡೆದಿದೆ. ಇದರಲ್ಲಿ ಯುಎನ್ ವಿಮಾನದ ಸಹಾಯಕ ಕ್ಯಾಪ್ಟನ್ ಸೇರಿದಂತೆ ಇಬ್ಬರು ಉದ್ಯೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ ಎಂದು ಹೌತಿ ಸರ್ಕಾರದ ವಿದೇಶಾಂಗ ಸಚಿವ ಜಮಾಲ್ ಅಮೆರ್ ಸಾಮಾಜಿಕ ಮಾಧ್ಯಮ ಪ್ಲಾಟ್ ಫಾರ್ಮ್ ಎಕ್ಸ್​ನಲ್ಲಿ ತಿಳಿಸಿದ್ದಾರೆ. ದಾಳಿ ನಡೆದಾಗ ಡಬ್ಲ್ಯುಎಚ್ಒ ಮುಖ್ಯಸ್ಥರು ವಿಮಾನ ನಿಲ್ದಾಣದ ವಿಐಪಿ ಲಾಂಜ್​​ನಲ್ಲಿದ್ದರು ಎಂದು ಅಮೆರ್ ಹೇಳಿದ್ದಾರೆ.

ವಿಮಾನ ನಿಲ್ದಾಣದ ಮೇಲೆ ದಾಳಿ ನಡೆಸಿದಾಗ, ಅಲ್ಲಿ ಘೆಬ್ರೆಯೆಸಸ್ ಅವರು ಇದ್ದರು ಎಂಬ ವಿಚಾರ ಗೊತ್ತಿತ್ತಾ? ಎಂಬುವುದರ ಬಗ್ಗೆ ಇಸ್ರೇಲ್ ಪ್ರತಿಕ್ರಿಯಿಸಿಲ್ಲ.

ಇರಾನ್ ಬೆಂಬಲಿತ ಹೌತಿ ಬಂಡುಕೋರರು ಇಸ್ರೇಲ್ ಮೇಲೆ ಕ್ಷಿಪಣಿ ಮತ್ತು ಎರಡು ಡ್ರೋನ್‌ಗಳನ್ನು ಹಾರಿಸಿರುವುದಾಗಿ ಹೇಳಿಕೊಂಡ ಒಂದು ದಿನದ ನಂತರ ಇಸ್ರೇಲ್‌ ದಾಳಿ ನಡೆಸಿದೆ.

ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಮತ್ತೊಂದು ಗುಂಪು, ಲೆಬನಾನ್‌ನ ಹಿಜ್ಬುಲ್ಲಾ ನಡುವೆ ಕದನ ವಿರಾಮ ಜಾರಿಗೆ ಬಂದ ನವೆಂಬರ್ ಅಂತ್ಯದಿಂದ ಯೆಮೆನ್‌ನ ಹೌತಿಗಳು ಇಸ್ರೇಲ್ ಮೇಲೆ ತಮ್ಮ ದಾಳಿಯನ್ನು ಹೆಚ್ಚಿಸಿದ್ದಾರೆ.

ರಾಜಧಾನಿ ಸನಾದ ವಿಮಾನ ನಿಲ್ದಾಣದ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಮತ್ತು ರಾಸ್ ಇಸ್ಸಾ ಬಂದರಿನ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಹೌತಿ ಮೂಲಗಳು ಆರಂಭದಲ್ಲಿ ಹೇಳಿತ್ತು. ಆದರೆ, ಇಸ್ರೇಲ್ ದಾಳಿಗಳಲ್ಲಿ ಒಟ್ಟು ಆರು ಜನರು ಸಾವನ್ನಪ್ಪಿದ್ದಾರೆ ಎಂದು ಹೌತಿ ಅಲ್-ಮಸಿರಾ ಟಿವಿ ಹೇಳಿದೆ.

ಡಿಸೆಂಬರ್ 19ರ ಬಳಿಕ ಹೌತಿ ಹಿಡಿತದಲ್ಲಿರುವ ವಿಮಾನ ನಿಲ್ದಾಣ, ಮಿಲಿಟರಿ ಸೌಲಭ್ಯಗಳು ಮತ್ತು ವಿದ್ಯುತ್ ಕೇಂದ್ರಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಹೌತಿ ಕೂಡ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿಗಳನ್ನು ನಡೆಸಿದೆ.

ವಿಶ್ವಸಂಸ್ಥೆ ಕಾರ್ಯದರ್ಶಿ ಕಳವಳ

ಇಸ್ರೇಲ್ ಮತ್ತು ಹೌತಿಗಳ ನಡುವಿನ ಕಾಳಗ “ಹೆಚ್ಚಾಗುತ್ತಿರುವುದಕ್ಕೆ ವಿಶ್ವಸಂಸ್ಥೆಯ ಮಹಾ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಕಳವಳವ್ಯಕ್ತಪಡಿಸಿದ್ದಾರೆ. ಸನಾ ವಿಮಾನ ನಿಲ್ದಾಣದ ಮೇಲಿನ ದಾಳಿಯನ್ನು ‘ಆತಂಕಕಾರಿ’ ಎಂದಿದ್ದಾರೆ.

ಯೆಮನ್‌ನ ಶೇ.80ರಷ್ಟು ಜನಸಂಖ್ಯೆಯು ವಾಯುಮಾರ್ಗವನ್ನು ಅವಲಂಬಿಸಿದೆ. ಹೀಗಿರುವಾಗ ವಿಮಾನ ನಿಲ್ದಾಣದ ಮೇಲೆ ದಾಳಿ ನಡೆದಿರುವುದರಿಂದ ಅಲ್ಲಿನ ಮಾನವೀಯ ಕಾರ್ಯಾಚರಣೆಗೆ ಅಡ್ಡಿಯಾಗಲಿದೆ. ಅಗತ್ಯ ಸಾಮಾಗ್ರಿಗಳ ಸರಬರಾಜಿಗೆ ತಡೆಯಾಗಲಿದೆ ಎಂದು ಗುಟೆರೆಸ್ ಹೇಳಿದ್ದಾರೆ.

ಇದನ್ನೂ ಓದಿ : ಮನಮೋಹನ್ ಸಿಂಗ್‌ ಎಂಬ ಮೌನಿಸಿಂಗ್…  ಇತಿಹಾಸ ಎಂದು ನಿಮ್ಮನ್ನು ಮರೆಯುವುದಿಲ್ಲ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...