Homeಮುಖಪುಟಲೆಬನಾನ್‌ಗೂ ವ್ಯಾಪಿಸಿದ ಇಸ್ರೇಲ್ ಆಕ್ರಮಣ: ವೈಮಾನಿಕ ದಾಳಿಯಲ್ಲಿ ಮೂವರು ಸಾವು

ಲೆಬನಾನ್‌ಗೂ ವ್ಯಾಪಿಸಿದ ಇಸ್ರೇಲ್ ಆಕ್ರಮಣ: ವೈಮಾನಿಕ ದಾಳಿಯಲ್ಲಿ ಮೂವರು ಸಾವು

- Advertisement -
- Advertisement -

ದಕ್ಷಿಣ ಲೆಬನಾನ್ ಗಡಿ ಪಟ್ಟಣದ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ.

ಮಂಗಳವಾರ ತಡರಾತ್ರಿ ಬಿಂತ್ ಜೆಬೈಲ್ ಪಟ್ಟಣದ ಮನೆಯೊಂದನ್ನು ಗುರಿಯಾಗಿಸಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಝ್ಬುಲ್ಲಾ ಕಮಾಂಡರ್‌ ಮತ್ತು ಅವರ ಇಬ್ಬರು ಸಂಬಂಧಿಕರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಗಡಿಗೆ ಸಮೀಪವಿರುವ ಇಸ್ರೇಲ್‌ ಪೋಸ್ಟ್‌ಗಳ ಮೇಲೆ ಹಿಝ್ಬುಲ್ಲಾ ನಡೆಸಿದ ಸರಣಿ ದಾಳಿಯ ನಂತರ ಇಸ್ರೇಲ್ ಪ್ರತಿದಾಳಿ ನಡೆಸಿದೆ ಎಂದು ಹೇಳಲಾಗಿದೆ. ಅಕ್ಟೋಬರ್ 7ರಂದು ಇಸ್ರೇಲ್-ಗಾಜಾ ನಡುವೆ ಯುದ್ಧ ಪ್ರಾರಂಭವಾದಾಗಿನಿಂದ ಲೆಬನಾನ್ ಮತ್ತು ಇಸ್ರೇಲ್ ನಡುವಿನ ಗಡಿ ಪ್ರದೇಶದಲ್ಲಿ ದಾಳಿ -ಪ್ರತಿದಾಳಿಗಳು ನಡೆಯುತ್ತಲೇ ಇವೆ.

ಇಸ್ರೇಲ್ ದಾಳಿಯಿಂದ ಮೃತಪಟ್ಟವರನ್ನು ಅಲಿ ಬಾಝಿ, ಅವರ ಸಹೋದರ ಇಬ್ರಾಹಿಂ ಮತ್ತು ಸೊಸೆ ಶೌರೂಕ್ ಹಮ್ಮೌದ್ ಎಂದು ಗುರುತಿಸಿರುವುದಾಗಿ ಲೆಬನಾನ್‌ನ ರಾಷ್ಟ್ರೀಯ ಸುದ್ದಿ ಸಂಸ್ಥೆ (ಎನ್‌ಎನ್‌ಎ) ಬುಧವಾರ ಹೇಳಿದೆ.

ಮೃತ ಇಬ್ರಾಹಿಂ ಬಾಝಿ ಆಸ್ಟ್ರೇಲಿಯಾದ ಪ್ರಜೆಯಾಗಿದ್ದು, ಅವರು ಒಂದು ವಾರದ ಹಿಂದೆಯಷ್ಟೇ ಸಂಬಂಧಿಕರ ಭೇಟಿಗಾಗಿ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ತಿಳಿಸಿದೆ. ಮೃತಪಟ್ಟ ಮತ್ತೋರ್ವ ವ್ಯಕ್ತಿ ಅಲಿ ಬಾಝಿ ತನ್ನ ಹೋರಾಟಗಾರರಲ್ಲಿ ಒಬ್ಬ ಎಂದು ಹಿಝ್ಬುಲ್ಲಾ ಘೋಷಿದೆ.

2006 ರ ಬಳಿಕ ಇದೇ ಮೊದಲ ಬಾರಿಗೆ ಬಿಂತ್ ಜೆಬೈಲ್ ಪಟ್ಟಣದ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಆದರೆ, ದಕ್ಷಿಣ ಲೆಬನಾನಿನ ಇತರ ಏಳು ಪಟ್ಟಣಗಳ ಮೇಲೆ ಇಸ್ರೇಲ್ ಪದೇ ಪದೇ ದಾಳಿ ನಡೆಸುತ್ತಿರುತ್ತದೆ ಎಂದು ಅಲ್‌ -ಜಝೀರಾ ವರದಿ ಮಾಡಿದೆ.

ಇಸ್ರೇಲ್ ಗಡಿಯಿಂದ ಉತ್ತರಕ್ಕೆ 30 ಕಿ.ಮೀ (20 ಮೈಲುಗಳು) ದೂರದಲ್ಲಿರುವ ಲಿಟಾನಿ ನದಿಯ ಉತ್ತರದಿಂದ ಹಿಝ್ಬುಲ್ಲಾ ಪಡೆಯನ್ನು ಹಿಂಪಡೆಯಲು ಇಸ್ರೇಲ್ ಒತ್ತಾಯಿಸುತ್ತಿದೆ. ಮಂಗಳವಾರ ಹಿಝ್ಬುಲ್ಲಾ ನಡೆಸಿದ ದಾಳಿಯಲ್ಲಿ ಇಸ್ರೇಲ್‌ನ 9 ಸೈನಿಕರು ಗಾಯಗೊಂಡಿದ್ದರು ಎಂದು ಹೇಳಲಾಗಿದೆ.

ಬುಧವಾರ, ಇಸ್ರೇಲ್‌ನ ಸೇನಾ ರೇಡಿಯೋ ಮತ್ತು ಮಾಧ್ಯಮವು 18 ಕ್ಷಿಪಣಿಗಳನ್ನು ಲೆಬನಾನಿನ ಗಡಿಯಿಂದ ಈಶಾನ್ಯ ಇಸ್ರೇಲ್‌ಗೆ ಹಾರಿಸಲಾಗಿದೆ ಎಂದು ವರದಿ ಮಾಡಿದೆ.

ಈ ಪ್ರದೇಶದಲ್ಲಿ ಸೈರನ್‌ಗಳು ಸದ್ದು ಮಾಡುತ್ತಿದ್ದಂತೆ ಇಸ್ರೇಲಿ ಸೇನೆಯು ರೋಶ್ ಹನಿಕ್ರಾ ಕಿಬ್ಬುಟ್ಜ್ ಕಡೆಗೆ ಸಾಗುತ್ತಿದ್ದ ಎಂಟು ಕ್ಷಿಪಣಿಗಳನ್ನು ಹೊಡೆದುರುಳಿಸಿದೆ. ದಾಳಿಯಲ್ಲಿ ಯಾವುದೇ ಗಾಯ ಅಥವಾ ಹಾನಿಯಾಗಿಲ್ಲ ಎಂದು ವರದಿಗಳು ತಿಳಿಸಿವೆ.

ಹಮಾಸ್-ಇಸ್ರೇಲ್ ಸಂಘರ್ಷದ ನಡುವೆ ಹಿಝ್ಬುಲ್ಲಾ-ಇಸ್ರೇಲ್ ನಡುವೆ ಸಮರ ನಡೆಯುತ್ತಿದೆ. ಇಸ್ರೇಲ್ ದಾಳಿಯಿಂದ ಲೆಬನಾನಿನ 150 ಮಂದಿ ಇದುವರೆಗೆ ಮೃತಪಟ್ಟಿದ್ದಾರೆ. ಈ ಪೈಕಿ ಹೆಚ್ಚಿನವರು ಹಿಝ್ಬುಲ್ಲಾ ಗುಂಪಿನವರು ಉಳಿದವರಲ್ಲಿ ಮೂವರು ಪತ್ರಕರ್ತರು ಮತ್ತು ನಾಗರಿಕರು ಒಳಗೊಂಡಿದ್ದಾರೆ.

ಇಸ್ರೇಲ್‌ ಭಾಗದ ಮಿಲಿಟರಿಯ ಅಂಕಿ ಅಂಶಗಳ ಪ್ರಕಾರ, ಅಕ್ಟೋಬರ್ 7 ರಿಂದ ಕನಿಷ್ಠ ನಾಲ್ಕು ನಾಗರಿಕರು ಮತ್ತು ಒಂಬತ್ತು ಸೈನಿಕರು ಕೊಲ್ಲಲ್ಪಟ್ಟಿದ್ದಾರೆ.

ಇದನ್ನೂ ಓದಿ : ಇಸ್ರೇಲ್‌ಗೆ 230 ವಿಮಾನ, 20 ಹಡಗುಗಳಲ್ಲಿ ಯುದ್ಧ ಸಾಮಗ್ರಿ ಒದಗಿಸಿದ ಯುಎಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...