Homeಮುಖಪುಟಲೆಬನಾನ್‌ಗೂ ವ್ಯಾಪಿಸಿದ ಇಸ್ರೇಲ್ ಆಕ್ರಮಣ: ವೈಮಾನಿಕ ದಾಳಿಯಲ್ಲಿ ಮೂವರು ಸಾವು

ಲೆಬನಾನ್‌ಗೂ ವ್ಯಾಪಿಸಿದ ಇಸ್ರೇಲ್ ಆಕ್ರಮಣ: ವೈಮಾನಿಕ ದಾಳಿಯಲ್ಲಿ ಮೂವರು ಸಾವು

- Advertisement -
- Advertisement -

ದಕ್ಷಿಣ ಲೆಬನಾನ್ ಗಡಿ ಪಟ್ಟಣದ ಮೇಲೆ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ.

ಮಂಗಳವಾರ ತಡರಾತ್ರಿ ಬಿಂತ್ ಜೆಬೈಲ್ ಪಟ್ಟಣದ ಮನೆಯೊಂದನ್ನು ಗುರಿಯಾಗಿಸಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಿಝ್ಬುಲ್ಲಾ ಕಮಾಂಡರ್‌ ಮತ್ತು ಅವರ ಇಬ್ಬರು ಸಂಬಂಧಿಕರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಗಡಿಗೆ ಸಮೀಪವಿರುವ ಇಸ್ರೇಲ್‌ ಪೋಸ್ಟ್‌ಗಳ ಮೇಲೆ ಹಿಝ್ಬುಲ್ಲಾ ನಡೆಸಿದ ಸರಣಿ ದಾಳಿಯ ನಂತರ ಇಸ್ರೇಲ್ ಪ್ರತಿದಾಳಿ ನಡೆಸಿದೆ ಎಂದು ಹೇಳಲಾಗಿದೆ. ಅಕ್ಟೋಬರ್ 7ರಂದು ಇಸ್ರೇಲ್-ಗಾಜಾ ನಡುವೆ ಯುದ್ಧ ಪ್ರಾರಂಭವಾದಾಗಿನಿಂದ ಲೆಬನಾನ್ ಮತ್ತು ಇಸ್ರೇಲ್ ನಡುವಿನ ಗಡಿ ಪ್ರದೇಶದಲ್ಲಿ ದಾಳಿ -ಪ್ರತಿದಾಳಿಗಳು ನಡೆಯುತ್ತಲೇ ಇವೆ.

ಇಸ್ರೇಲ್ ದಾಳಿಯಿಂದ ಮೃತಪಟ್ಟವರನ್ನು ಅಲಿ ಬಾಝಿ, ಅವರ ಸಹೋದರ ಇಬ್ರಾಹಿಂ ಮತ್ತು ಸೊಸೆ ಶೌರೂಕ್ ಹಮ್ಮೌದ್ ಎಂದು ಗುರುತಿಸಿರುವುದಾಗಿ ಲೆಬನಾನ್‌ನ ರಾಷ್ಟ್ರೀಯ ಸುದ್ದಿ ಸಂಸ್ಥೆ (ಎನ್‌ಎನ್‌ಎ) ಬುಧವಾರ ಹೇಳಿದೆ.

ಮೃತ ಇಬ್ರಾಹಿಂ ಬಾಝಿ ಆಸ್ಟ್ರೇಲಿಯಾದ ಪ್ರಜೆಯಾಗಿದ್ದು, ಅವರು ಒಂದು ವಾರದ ಹಿಂದೆಯಷ್ಟೇ ಸಂಬಂಧಿಕರ ಭೇಟಿಗಾಗಿ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ತಿಳಿಸಿದೆ. ಮೃತಪಟ್ಟ ಮತ್ತೋರ್ವ ವ್ಯಕ್ತಿ ಅಲಿ ಬಾಝಿ ತನ್ನ ಹೋರಾಟಗಾರರಲ್ಲಿ ಒಬ್ಬ ಎಂದು ಹಿಝ್ಬುಲ್ಲಾ ಘೋಷಿದೆ.

2006 ರ ಬಳಿಕ ಇದೇ ಮೊದಲ ಬಾರಿಗೆ ಬಿಂತ್ ಜೆಬೈಲ್ ಪಟ್ಟಣದ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಆದರೆ, ದಕ್ಷಿಣ ಲೆಬನಾನಿನ ಇತರ ಏಳು ಪಟ್ಟಣಗಳ ಮೇಲೆ ಇಸ್ರೇಲ್ ಪದೇ ಪದೇ ದಾಳಿ ನಡೆಸುತ್ತಿರುತ್ತದೆ ಎಂದು ಅಲ್‌ -ಜಝೀರಾ ವರದಿ ಮಾಡಿದೆ.

ಇಸ್ರೇಲ್ ಗಡಿಯಿಂದ ಉತ್ತರಕ್ಕೆ 30 ಕಿ.ಮೀ (20 ಮೈಲುಗಳು) ದೂರದಲ್ಲಿರುವ ಲಿಟಾನಿ ನದಿಯ ಉತ್ತರದಿಂದ ಹಿಝ್ಬುಲ್ಲಾ ಪಡೆಯನ್ನು ಹಿಂಪಡೆಯಲು ಇಸ್ರೇಲ್ ಒತ್ತಾಯಿಸುತ್ತಿದೆ. ಮಂಗಳವಾರ ಹಿಝ್ಬುಲ್ಲಾ ನಡೆಸಿದ ದಾಳಿಯಲ್ಲಿ ಇಸ್ರೇಲ್‌ನ 9 ಸೈನಿಕರು ಗಾಯಗೊಂಡಿದ್ದರು ಎಂದು ಹೇಳಲಾಗಿದೆ.

ಬುಧವಾರ, ಇಸ್ರೇಲ್‌ನ ಸೇನಾ ರೇಡಿಯೋ ಮತ್ತು ಮಾಧ್ಯಮವು 18 ಕ್ಷಿಪಣಿಗಳನ್ನು ಲೆಬನಾನಿನ ಗಡಿಯಿಂದ ಈಶಾನ್ಯ ಇಸ್ರೇಲ್‌ಗೆ ಹಾರಿಸಲಾಗಿದೆ ಎಂದು ವರದಿ ಮಾಡಿದೆ.

ಈ ಪ್ರದೇಶದಲ್ಲಿ ಸೈರನ್‌ಗಳು ಸದ್ದು ಮಾಡುತ್ತಿದ್ದಂತೆ ಇಸ್ರೇಲಿ ಸೇನೆಯು ರೋಶ್ ಹನಿಕ್ರಾ ಕಿಬ್ಬುಟ್ಜ್ ಕಡೆಗೆ ಸಾಗುತ್ತಿದ್ದ ಎಂಟು ಕ್ಷಿಪಣಿಗಳನ್ನು ಹೊಡೆದುರುಳಿಸಿದೆ. ದಾಳಿಯಲ್ಲಿ ಯಾವುದೇ ಗಾಯ ಅಥವಾ ಹಾನಿಯಾಗಿಲ್ಲ ಎಂದು ವರದಿಗಳು ತಿಳಿಸಿವೆ.

ಹಮಾಸ್-ಇಸ್ರೇಲ್ ಸಂಘರ್ಷದ ನಡುವೆ ಹಿಝ್ಬುಲ್ಲಾ-ಇಸ್ರೇಲ್ ನಡುವೆ ಸಮರ ನಡೆಯುತ್ತಿದೆ. ಇಸ್ರೇಲ್ ದಾಳಿಯಿಂದ ಲೆಬನಾನಿನ 150 ಮಂದಿ ಇದುವರೆಗೆ ಮೃತಪಟ್ಟಿದ್ದಾರೆ. ಈ ಪೈಕಿ ಹೆಚ್ಚಿನವರು ಹಿಝ್ಬುಲ್ಲಾ ಗುಂಪಿನವರು ಉಳಿದವರಲ್ಲಿ ಮೂವರು ಪತ್ರಕರ್ತರು ಮತ್ತು ನಾಗರಿಕರು ಒಳಗೊಂಡಿದ್ದಾರೆ.

ಇಸ್ರೇಲ್‌ ಭಾಗದ ಮಿಲಿಟರಿಯ ಅಂಕಿ ಅಂಶಗಳ ಪ್ರಕಾರ, ಅಕ್ಟೋಬರ್ 7 ರಿಂದ ಕನಿಷ್ಠ ನಾಲ್ಕು ನಾಗರಿಕರು ಮತ್ತು ಒಂಬತ್ತು ಸೈನಿಕರು ಕೊಲ್ಲಲ್ಪಟ್ಟಿದ್ದಾರೆ.

ಇದನ್ನೂ ಓದಿ : ಇಸ್ರೇಲ್‌ಗೆ 230 ವಿಮಾನ, 20 ಹಡಗುಗಳಲ್ಲಿ ಯುದ್ಧ ಸಾಮಗ್ರಿ ಒದಗಿಸಿದ ಯುಎಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...