Homeಮುಖಪುಟಗಾಝಾ ಕದನ ವಿರಾಮಕ್ಕೆ ಆಗ್ರಹ : ಇಸ್ರೇಲ್‌ನಲ್ಲಿ ನೆತನ್ಯಾಹು ಸರ್ಕಾರದ ವಿರುದ್ದ ಬೀದಿಗಿಳಿದ ಜನ

ಗಾಝಾ ಕದನ ವಿರಾಮಕ್ಕೆ ಆಗ್ರಹ : ಇಸ್ರೇಲ್‌ನಲ್ಲಿ ನೆತನ್ಯಾಹು ಸರ್ಕಾರದ ವಿರುದ್ದ ಬೀದಿಗಿಳಿದ ಜನ

- Advertisement -
- Advertisement -

ಕದನ ವಿರಾಮಕ್ಕೆ ಆಗ್ರಹಿಸಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಇಸ್ರೇಲ್‌ನಲ್ಲಿ ಬೃಹತ್ ಜನಾಂದೋಲನ ಶುರುವಾಗಿದೆ.

ಕಳೆದ ಭಾನುವಾರ ರಾಜಧಾನಿ ಟೆಲ್‌ ಅವೀವ್, ಜೆರುಸಲೇಂ ಮತ್ತು ಸಿಸೇರಿಯಾ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಜನರು ಬೀದಿಗಿಳಿದು ಪ್ರತಿಭಟಿಸಿದ್ದಾರೆ. ಸೋಮವಾರವೂ ಪ್ರತಿಭಟನೆ ಮುಂದುವರೆದಿದೆ. ಕೆಲ ಸಂಘಟನೆಗಳು ದೇಶದಾದ್ಯಂತ ಹೋರಾಟಕ್ಕೆ ಕರೆ ಕೊಟ್ಟಿವೆ.

ಗಾಝಾದಲ್ಲಿ ಹಮಾಸ್‌ನಿಂದ ಒತ್ತೆಯಾಳುಗಳಾಗಿದ್ದ ಆರು ಜನರ ಮೃತದೇಹವನ್ನು ಇಸ್ರೇಲ್‌ ಸೇನೆ ಇತ್ತೀಚೆಗೆ ಪತ್ತೆ ಹಚ್ಚಿತ್ತು. ಆ ಬಳಿಕ ನೆತನ್ಯಾಹು ಸರ್ಕಾರದ ವಿರುದ್ದ ಆಕ್ರೋಶ ಭುಗಿಲೆದ್ದಿದೆ. ಗಾಝಾ ಮೇಲೆ ನೆತನ್ಯಾಹು ಸರ್ಕಾರ ಆಕ್ರಮಣ ನಡೆಸುತ್ತಿರುವುದರಿಂದ ಹಮಾಸ್‌ ಒತ್ತೆಯಾಳುಗಳನ್ನು ಕೊಲ್ಲುತ್ತಿದೆ ಎಂಬುವುದು ಜನರ ಆರೋಪವಾಗಿದೆ.

ಭಾನುವಾರ ಸಿಸೇರಿಯಾದಲ್ಲಿರುವ ನೆತನ್ಯಾಹು ಅವರ ಖಾಸಗಿ ನಿವಾಸದ ಬಳಿ ಜಮಾಯಿಸಿದ ಜನರು “ನೀವು ನಾಯಕ, ನೀವೇ ತಪ್ಪಿತಸ್ಥರು” ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಯುಎಸ್ ರಾಯಭಾರ ಕಚೇರಿ ಬಳಿಯೂ ಸೇರಿದ ಜನರು “ಶೇಮ್ ಶೇಮ್” ಎಂಬ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.

‘ಹಿಸ್ಟಾಡ್ರಟ್’ ಎಂಬ ಇಸ್ರೇಲ್‌ನ ಅತೀ ದೊಡ್ಡ ಕಾರ್ಮಿಕ ಸಂಘಟನೆ ಸೋಮವಾರ ದೇಶದಾದ್ಯಂತ ವ್ಯಾಪಾರ-ವಹಿವಾಟು ಸ್ಥಗಿತಕ್ಕೆ ಕರೆ ನೀಡಿತ್ತು. ಇದರ ಪರಿಣಾಮ ಟೆಲ್ ಅವೀವ್‌ನ ಬೆನ್ ಗುರಿಯನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಎರಡು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿತ್ತು.

ಇನ್ನೂ 100ಕ್ಕೂ ಅಧಿಕ ಇಸ್ರೇಲಿಗರನ್ನು ಗಾಝಾದಲ್ಲಿ ಹಮಾಸ್‌ ಒತ್ತೆಯಾಳಾಗಿಟ್ಟುಕೊಂಡಿದೆ. ಈ ಪೈಕಿ 35 ಜನರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ. ಮುಂದಿನ ಅಕ್ಟೋಬರ್‌ 7ಕ್ಕೆ ಇಸ್ರೇಲ್ -ಹಮಾಸ್ ಸಂಘರ್ಷ ಪ್ರಾರಂಭಗೊಂಡು ಒಂದು ವರ್ಷವಾಗಲಿದೆ. ಇಸ್ರೇಲ್‌ ದಾಳಿಯಿಂದ ಗಾಝಾದಲ್ಲಿ ಇದುವರೆಗೆ ಮೃತಪಟ್ಟ ನಾಗರಿಕ ಸಂಖ್ಯೆ 40,000 ದಾಟಿದೆ.

“ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಲು ನಾವು ಸಿದ್ದ” ಎಂದಿರುವ ಹಮಾಸ್, ಕದನ ವಿರಾಮ, ಇಸ್ರೇಲ್‌ ಪಡೆಗಳು ಗಾಝಾ ಬಿಟ್ಟು ತೆರಳುವುದು, ಗಾಝಾದ ಸಶಸ್ತ್ರ ಗುಂಪುಗಳ ಉನ್ನತ ಸದಸ್ಯರನ್ನು ಒಳಗೊಂಡಂತೆ ಬಂಧನದಲ್ಲಿರುವ ಪ್ಯಾಲೇಸ್ತೀನಿಯರ ಬಿಡುಗಡೆ ಇತ್ಯಾದಿ ಷರತ್ತುಗಳನ್ನು ಮುಂದಿಟ್ಟಿದೆ.

ಕದನ ವಿರಾಮಕ್ಕೆ ಒತ್ತಾಯಿಸುವ ಅನೇಕ ನಿರ್ಣಯಗಳನ್ನು ವಿಶ್ವಸಂಸ್ಥೆ ಈಗಾಗಲೇ ಅಂಗೀಕರಿಸಿದೆ. ಅನೇಕ ರಾಷ್ಟ್ರಗಳು ದಾಳಿ ನಿಲ್ಲಿಸುವಂತೆ ಇಸ್ರೇಲ್‌ಗೆ ಒತ್ತಾಯಿಸಿವೆ. ಆದರೆ, ಅವುಗಳನ್ನು ಪರಿಗಣಿಸದ ಇಸ್ರೇಲ್‌, ಗಾಝಾದಲ್ಲಿ ಆಕ್ರಮಣ ಮುಂದುವರೆಸಿದೆ. ಯಾರ ಮಾತೂ ಕೇಳದ ಇಸ್ರೇಲ್‌ ಸರ್ಕಾರದ ವಿರುದ್ದ ಅಲ್ಲಿನ ಜನರೇ ದಂಗೆಯೆದ್ದಿದ್ದಾರೆ.

ಇದನ್ನೂ ಓದಿ : ಶಂಭು ಗಡಿಯಲ್ಲಿ ಪ್ರತಿಭಟಿಸುತ್ತಿರುವ ರೈತರ ಕುಂದುಕೊರತೆ ಇತ್ಯರ್ಥಕ್ಕೆ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...