Homeಮುಖಪುಟಗಾಝಾ ಕದನ ವಿರಾಮಕ್ಕೆ ಆಗ್ರಹ : ಇಸ್ರೇಲ್‌ನಲ್ಲಿ ನೆತನ್ಯಾಹು ಸರ್ಕಾರದ ವಿರುದ್ದ ಬೀದಿಗಿಳಿದ ಜನ

ಗಾಝಾ ಕದನ ವಿರಾಮಕ್ಕೆ ಆಗ್ರಹ : ಇಸ್ರೇಲ್‌ನಲ್ಲಿ ನೆತನ್ಯಾಹು ಸರ್ಕಾರದ ವಿರುದ್ದ ಬೀದಿಗಿಳಿದ ಜನ

- Advertisement -
- Advertisement -

ಕದನ ವಿರಾಮಕ್ಕೆ ಆಗ್ರಹಿಸಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಇಸ್ರೇಲ್‌ನಲ್ಲಿ ಬೃಹತ್ ಜನಾಂದೋಲನ ಶುರುವಾಗಿದೆ.

ಕಳೆದ ಭಾನುವಾರ ರಾಜಧಾನಿ ಟೆಲ್‌ ಅವೀವ್, ಜೆರುಸಲೇಂ ಮತ್ತು ಸಿಸೇರಿಯಾ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಜನರು ಬೀದಿಗಿಳಿದು ಪ್ರತಿಭಟಿಸಿದ್ದಾರೆ. ಸೋಮವಾರವೂ ಪ್ರತಿಭಟನೆ ಮುಂದುವರೆದಿದೆ. ಕೆಲ ಸಂಘಟನೆಗಳು ದೇಶದಾದ್ಯಂತ ಹೋರಾಟಕ್ಕೆ ಕರೆ ಕೊಟ್ಟಿವೆ.

ಗಾಝಾದಲ್ಲಿ ಹಮಾಸ್‌ನಿಂದ ಒತ್ತೆಯಾಳುಗಳಾಗಿದ್ದ ಆರು ಜನರ ಮೃತದೇಹವನ್ನು ಇಸ್ರೇಲ್‌ ಸೇನೆ ಇತ್ತೀಚೆಗೆ ಪತ್ತೆ ಹಚ್ಚಿತ್ತು. ಆ ಬಳಿಕ ನೆತನ್ಯಾಹು ಸರ್ಕಾರದ ವಿರುದ್ದ ಆಕ್ರೋಶ ಭುಗಿಲೆದ್ದಿದೆ. ಗಾಝಾ ಮೇಲೆ ನೆತನ್ಯಾಹು ಸರ್ಕಾರ ಆಕ್ರಮಣ ನಡೆಸುತ್ತಿರುವುದರಿಂದ ಹಮಾಸ್‌ ಒತ್ತೆಯಾಳುಗಳನ್ನು ಕೊಲ್ಲುತ್ತಿದೆ ಎಂಬುವುದು ಜನರ ಆರೋಪವಾಗಿದೆ.

ಭಾನುವಾರ ಸಿಸೇರಿಯಾದಲ್ಲಿರುವ ನೆತನ್ಯಾಹು ಅವರ ಖಾಸಗಿ ನಿವಾಸದ ಬಳಿ ಜಮಾಯಿಸಿದ ಜನರು “ನೀವು ನಾಯಕ, ನೀವೇ ತಪ್ಪಿತಸ್ಥರು” ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಯುಎಸ್ ರಾಯಭಾರ ಕಚೇರಿ ಬಳಿಯೂ ಸೇರಿದ ಜನರು “ಶೇಮ್ ಶೇಮ್” ಎಂಬ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.

‘ಹಿಸ್ಟಾಡ್ರಟ್’ ಎಂಬ ಇಸ್ರೇಲ್‌ನ ಅತೀ ದೊಡ್ಡ ಕಾರ್ಮಿಕ ಸಂಘಟನೆ ಸೋಮವಾರ ದೇಶದಾದ್ಯಂತ ವ್ಯಾಪಾರ-ವಹಿವಾಟು ಸ್ಥಗಿತಕ್ಕೆ ಕರೆ ನೀಡಿತ್ತು. ಇದರ ಪರಿಣಾಮ ಟೆಲ್ ಅವೀವ್‌ನ ಬೆನ್ ಗುರಿಯನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಎರಡು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿತ್ತು.

ಇನ್ನೂ 100ಕ್ಕೂ ಅಧಿಕ ಇಸ್ರೇಲಿಗರನ್ನು ಗಾಝಾದಲ್ಲಿ ಹಮಾಸ್‌ ಒತ್ತೆಯಾಳಾಗಿಟ್ಟುಕೊಂಡಿದೆ. ಈ ಪೈಕಿ 35 ಜನರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ. ಮುಂದಿನ ಅಕ್ಟೋಬರ್‌ 7ಕ್ಕೆ ಇಸ್ರೇಲ್ -ಹಮಾಸ್ ಸಂಘರ್ಷ ಪ್ರಾರಂಭಗೊಂಡು ಒಂದು ವರ್ಷವಾಗಲಿದೆ. ಇಸ್ರೇಲ್‌ ದಾಳಿಯಿಂದ ಗಾಝಾದಲ್ಲಿ ಇದುವರೆಗೆ ಮೃತಪಟ್ಟ ನಾಗರಿಕ ಸಂಖ್ಯೆ 40,000 ದಾಟಿದೆ.

“ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಲು ನಾವು ಸಿದ್ದ” ಎಂದಿರುವ ಹಮಾಸ್, ಕದನ ವಿರಾಮ, ಇಸ್ರೇಲ್‌ ಪಡೆಗಳು ಗಾಝಾ ಬಿಟ್ಟು ತೆರಳುವುದು, ಗಾಝಾದ ಸಶಸ್ತ್ರ ಗುಂಪುಗಳ ಉನ್ನತ ಸದಸ್ಯರನ್ನು ಒಳಗೊಂಡಂತೆ ಬಂಧನದಲ್ಲಿರುವ ಪ್ಯಾಲೇಸ್ತೀನಿಯರ ಬಿಡುಗಡೆ ಇತ್ಯಾದಿ ಷರತ್ತುಗಳನ್ನು ಮುಂದಿಟ್ಟಿದೆ.

ಕದನ ವಿರಾಮಕ್ಕೆ ಒತ್ತಾಯಿಸುವ ಅನೇಕ ನಿರ್ಣಯಗಳನ್ನು ವಿಶ್ವಸಂಸ್ಥೆ ಈಗಾಗಲೇ ಅಂಗೀಕರಿಸಿದೆ. ಅನೇಕ ರಾಷ್ಟ್ರಗಳು ದಾಳಿ ನಿಲ್ಲಿಸುವಂತೆ ಇಸ್ರೇಲ್‌ಗೆ ಒತ್ತಾಯಿಸಿವೆ. ಆದರೆ, ಅವುಗಳನ್ನು ಪರಿಗಣಿಸದ ಇಸ್ರೇಲ್‌, ಗಾಝಾದಲ್ಲಿ ಆಕ್ರಮಣ ಮುಂದುವರೆಸಿದೆ. ಯಾರ ಮಾತೂ ಕೇಳದ ಇಸ್ರೇಲ್‌ ಸರ್ಕಾರದ ವಿರುದ್ದ ಅಲ್ಲಿನ ಜನರೇ ದಂಗೆಯೆದ್ದಿದ್ದಾರೆ.

ಇದನ್ನೂ ಓದಿ : ಶಂಭು ಗಡಿಯಲ್ಲಿ ಪ್ರತಿಭಟಿಸುತ್ತಿರುವ ರೈತರ ಕುಂದುಕೊರತೆ ಇತ್ಯರ್ಥಕ್ಕೆ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2025 ರ ಏಷ್ಯಾ ಪವರ್ ಇಂಡೆಕ್ಸ್‌: ಮೊದಲೆರಡು ಸ್ಥಾನದಲ್ಲಿ ಅಮೆರಿಕ-ಚೀನಾ, ಭಾರತಕ್ಕೆ ಮೂರನೇ ಶ್ರೇಯಾಂಕ

2025 ರ ಏಷ್ಯಾ ಪವರ್ ಇಂಡೆಕ್ಸ್‌ನಲ್ಲಿ ಭಾರತ ಮೂರನೇ ಶ್ರೇಯಾಂಕವನ್ನು ಪಡೆದುಕೊಂಡಿದೆ. ಆದರೆ, ಯುನೈಟೆಡ್ ಸ್ಟೇಟ್ಸ್-ಚೀನಾ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನವನ್ನು ಪಡೆದುಕೊಂಡಿವೆ ಎಂದು ಜಾಗತಿಕವಾಗಿ ಪ್ರಸಿದ್ಧವಾದ ಚಿಂತಕರ ಚಾವಡಿ ತನ್ನ...

ಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾವೋವಾದಿಗಳು ಜನವರಿ 1, 2026 ರಂದು ಸಾಮೂಹಿಕವಾಗಿ ಶರಣಾಗಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ. ಎಂಎಂಸಿ ವಲಯದ ವಕ್ತಾರ ಅನಂತ್ ಹೆಸರಿನಲ್ಲಿ ಹೊರಡಿಸಲಾದ ಪತ್ರದಲ್ಲಿ, ನಮ್ಮ ಗುಂಪು ವೈಯಕ್ತಿಕ ಶರಣಾಗತಿಗಳ ಬದಲಿಗೆ...

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...