Homeಮುಖಪುಟಗಾಝಾ ಕದನ ವಿರಾಮಕ್ಕೆ ಆಗ್ರಹ : ಇಸ್ರೇಲ್‌ನಲ್ಲಿ ನೆತನ್ಯಾಹು ಸರ್ಕಾರದ ವಿರುದ್ದ ಬೀದಿಗಿಳಿದ ಜನ

ಗಾಝಾ ಕದನ ವಿರಾಮಕ್ಕೆ ಆಗ್ರಹ : ಇಸ್ರೇಲ್‌ನಲ್ಲಿ ನೆತನ್ಯಾಹು ಸರ್ಕಾರದ ವಿರುದ್ದ ಬೀದಿಗಿಳಿದ ಜನ

- Advertisement -
- Advertisement -

ಕದನ ವಿರಾಮಕ್ಕೆ ಆಗ್ರಹಿಸಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಇಸ್ರೇಲ್‌ನಲ್ಲಿ ಬೃಹತ್ ಜನಾಂದೋಲನ ಶುರುವಾಗಿದೆ.

ಕಳೆದ ಭಾನುವಾರ ರಾಜಧಾನಿ ಟೆಲ್‌ ಅವೀವ್, ಜೆರುಸಲೇಂ ಮತ್ತು ಸಿಸೇರಿಯಾ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಜನರು ಬೀದಿಗಿಳಿದು ಪ್ರತಿಭಟಿಸಿದ್ದಾರೆ. ಸೋಮವಾರವೂ ಪ್ರತಿಭಟನೆ ಮುಂದುವರೆದಿದೆ. ಕೆಲ ಸಂಘಟನೆಗಳು ದೇಶದಾದ್ಯಂತ ಹೋರಾಟಕ್ಕೆ ಕರೆ ಕೊಟ್ಟಿವೆ.

ಗಾಝಾದಲ್ಲಿ ಹಮಾಸ್‌ನಿಂದ ಒತ್ತೆಯಾಳುಗಳಾಗಿದ್ದ ಆರು ಜನರ ಮೃತದೇಹವನ್ನು ಇಸ್ರೇಲ್‌ ಸೇನೆ ಇತ್ತೀಚೆಗೆ ಪತ್ತೆ ಹಚ್ಚಿತ್ತು. ಆ ಬಳಿಕ ನೆತನ್ಯಾಹು ಸರ್ಕಾರದ ವಿರುದ್ದ ಆಕ್ರೋಶ ಭುಗಿಲೆದ್ದಿದೆ. ಗಾಝಾ ಮೇಲೆ ನೆತನ್ಯಾಹು ಸರ್ಕಾರ ಆಕ್ರಮಣ ನಡೆಸುತ್ತಿರುವುದರಿಂದ ಹಮಾಸ್‌ ಒತ್ತೆಯಾಳುಗಳನ್ನು ಕೊಲ್ಲುತ್ತಿದೆ ಎಂಬುವುದು ಜನರ ಆರೋಪವಾಗಿದೆ.

ಭಾನುವಾರ ಸಿಸೇರಿಯಾದಲ್ಲಿರುವ ನೆತನ್ಯಾಹು ಅವರ ಖಾಸಗಿ ನಿವಾಸದ ಬಳಿ ಜಮಾಯಿಸಿದ ಜನರು “ನೀವು ನಾಯಕ, ನೀವೇ ತಪ್ಪಿತಸ್ಥರು” ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಯುಎಸ್ ರಾಯಭಾರ ಕಚೇರಿ ಬಳಿಯೂ ಸೇರಿದ ಜನರು “ಶೇಮ್ ಶೇಮ್” ಎಂಬ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.

‘ಹಿಸ್ಟಾಡ್ರಟ್’ ಎಂಬ ಇಸ್ರೇಲ್‌ನ ಅತೀ ದೊಡ್ಡ ಕಾರ್ಮಿಕ ಸಂಘಟನೆ ಸೋಮವಾರ ದೇಶದಾದ್ಯಂತ ವ್ಯಾಪಾರ-ವಹಿವಾಟು ಸ್ಥಗಿತಕ್ಕೆ ಕರೆ ನೀಡಿತ್ತು. ಇದರ ಪರಿಣಾಮ ಟೆಲ್ ಅವೀವ್‌ನ ಬೆನ್ ಗುರಿಯನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ಎರಡು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿತ್ತು.

ಇನ್ನೂ 100ಕ್ಕೂ ಅಧಿಕ ಇಸ್ರೇಲಿಗರನ್ನು ಗಾಝಾದಲ್ಲಿ ಹಮಾಸ್‌ ಒತ್ತೆಯಾಳಾಗಿಟ್ಟುಕೊಂಡಿದೆ. ಈ ಪೈಕಿ 35 ಜನರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಹೇಳಲಾಗ್ತಿದೆ. ಮುಂದಿನ ಅಕ್ಟೋಬರ್‌ 7ಕ್ಕೆ ಇಸ್ರೇಲ್ -ಹಮಾಸ್ ಸಂಘರ್ಷ ಪ್ರಾರಂಭಗೊಂಡು ಒಂದು ವರ್ಷವಾಗಲಿದೆ. ಇಸ್ರೇಲ್‌ ದಾಳಿಯಿಂದ ಗಾಝಾದಲ್ಲಿ ಇದುವರೆಗೆ ಮೃತಪಟ್ಟ ನಾಗರಿಕ ಸಂಖ್ಯೆ 40,000 ದಾಟಿದೆ.

“ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಲು ನಾವು ಸಿದ್ದ” ಎಂದಿರುವ ಹಮಾಸ್, ಕದನ ವಿರಾಮ, ಇಸ್ರೇಲ್‌ ಪಡೆಗಳು ಗಾಝಾ ಬಿಟ್ಟು ತೆರಳುವುದು, ಗಾಝಾದ ಸಶಸ್ತ್ರ ಗುಂಪುಗಳ ಉನ್ನತ ಸದಸ್ಯರನ್ನು ಒಳಗೊಂಡಂತೆ ಬಂಧನದಲ್ಲಿರುವ ಪ್ಯಾಲೇಸ್ತೀನಿಯರ ಬಿಡುಗಡೆ ಇತ್ಯಾದಿ ಷರತ್ತುಗಳನ್ನು ಮುಂದಿಟ್ಟಿದೆ.

ಕದನ ವಿರಾಮಕ್ಕೆ ಒತ್ತಾಯಿಸುವ ಅನೇಕ ನಿರ್ಣಯಗಳನ್ನು ವಿಶ್ವಸಂಸ್ಥೆ ಈಗಾಗಲೇ ಅಂಗೀಕರಿಸಿದೆ. ಅನೇಕ ರಾಷ್ಟ್ರಗಳು ದಾಳಿ ನಿಲ್ಲಿಸುವಂತೆ ಇಸ್ರೇಲ್‌ಗೆ ಒತ್ತಾಯಿಸಿವೆ. ಆದರೆ, ಅವುಗಳನ್ನು ಪರಿಗಣಿಸದ ಇಸ್ರೇಲ್‌, ಗಾಝಾದಲ್ಲಿ ಆಕ್ರಮಣ ಮುಂದುವರೆಸಿದೆ. ಯಾರ ಮಾತೂ ಕೇಳದ ಇಸ್ರೇಲ್‌ ಸರ್ಕಾರದ ವಿರುದ್ದ ಅಲ್ಲಿನ ಜನರೇ ದಂಗೆಯೆದ್ದಿದ್ದಾರೆ.

ಇದನ್ನೂ ಓದಿ : ಶಂಭು ಗಡಿಯಲ್ಲಿ ಪ್ರತಿಭಟಿಸುತ್ತಿರುವ ರೈತರ ಕುಂದುಕೊರತೆ ಇತ್ಯರ್ಥಕ್ಕೆ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...