Homeಅಂತರಾಷ್ಟ್ರೀಯಗಾಝಾ ಮೇಲಿನ ಇಸ್ರೇಲ್ ದಾಳಿ ಯುದ್ಧಾಪರಾಧ: ಮಾನವ ಹಕ್ಕುಗಳ ಸಂಸ್ಥೆ ವರದಿ

ಗಾಝಾ ಮೇಲಿನ ಇಸ್ರೇಲ್ ದಾಳಿ ಯುದ್ಧಾಪರಾಧ: ಮಾನವ ಹಕ್ಕುಗಳ ಸಂಸ್ಥೆ ವರದಿ

- Advertisement -
- Advertisement -

ಹಮಾಸ್ ಬಂಡುಕೋರರ ವಿರುದ್ದ ನಡೆಸಿದ್ದೇವೆ ಎಂದು ಹೇಳಿ, ಇಸ್ರೇಲ್ ಸೇನೆ ಮೇ ತಿಂಗಳಲ್ಲಿ ಗಾಝಾ ಮೇಲೆ ನಡೆಸಿದ 11 ದಿನಗಳ ದಾಳಿಯು ಸ್ಪಷ್ಟವಾಗಿ ಯುದ್ದಾಪರಾಧ ಕೃತ್ಯಗಳಿಗೆ ಹೋಲುತ್ತದೆ ಎಂದು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ‘ಹ್ಯೂಮನ್ ರೈಟ್ಸ್ ವಾಚ್’(ಎಚ್‌ಆರ್‌ಡಬ್ಲ್ಯೂ) ಮಂಗಳವಾರ ಆರೋಪಿಸಿದೆ.

ಮೂರು ಇಸ್ರೇಲಿ ವೈಮಾನಿಕ ದಾಳಿಯ ತನಿಖೆ ನಡೆಸಿದ ಎಚ್‌ಆರ್‌ಡಬ್ಲ್ಯೂ ತನ್ನ ತೀರ್ಮಾನಗಳನ್ನು ಹೊರಡಿಸಿದ್ದು, ಈ ದಾಳಿಯಿಂದಾಗಿ 62 ಪ್ಯಾಲೆಸ್ತೀನಿ ನಾಗರಿಕರು ಮೃತಪಟ್ಟಿದ್ದಾರೆ ಎಂದು ಅದು ಹೇಳಿದೆ. ಈ ದಾಳಿಯು ಯಾವುದೇ ಸ್ಪಷ್ಟ ಮಿಲಿಟರಿ ಗುರಿಗಳಿಲ್ಲದೆ ನಡೆಸಲಾಗಿದೆ ಎಂದು ಅದು ಹೇಳಿದೆ.

ಇಸ್ರೇಲಿ ಜನ ವಸತಿ ಕೇಂದ್ರಗಳ ಮೇಲೆ 4,000 ಕ್ಕೂ ಹೆಚ್ಚು ಗೊತ್ತುಗುರಿಯಿಲ್ಲದ ರಾಕೆಟ್‌ಗಳು ಮತ್ತು ಮೋರ್ಟರ್‌‌ಗಳನ್ನು ಉಡಾಯಿಸುವ ಮೂಲಕ ಪ್ಯಾಲೆಸ್ತೀನಿ ಬಂಡುಕೋರರು ಕೂಡಾ ಯುದ್ಧಾಪರಾಧಗಳನ್ನು ಮಾಡಿದ್ದಾರೆ ಎಂದು ವರದಿಯಲ್ಲಿ ಆರೋಪಿಸಲಾಗಿದೆ. ಈ ದಾಳಿಗಳು ನಾಗರಿಕರ ವಿರುದ್ಧ ಉದ್ದೇಶಪೂರ್ವಕ ಅಥವಾ ವಿವೇಚನೆಯಿಲ್ಲದ ದಾಳಿಯ ನಿಷೇಧವನ್ನು ಉಲ್ಲಂಘಿಸಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಪ್ಯಾಲೆಸ್ತೀನಿಗಳನ್ನು ಅಕ್ರಮ ಸ್ಥಳಾಂತರ ಮಾಡುವ ಇಸ್ರೇಲ್‌‌ನ ನಡೆ ಹಿಂಸಾಚಾರ ಹೆಚ್ಚಿಸುತ್ತದೆ: ಯುರೋಪಿಯನ್‌ ಯುನಿಯನ್‌

ಅದಾಗ್ಯೂ ಈ ವರದಿಯು ಇಸ್ರೇಲ್ ಮಾಡಿದ ಕ್ರಮಗಳನ್ನು ಕೇಂದ್ರವಾಗಿಟ್ಟು ಮಾಡಲಾಗಿದ್ದು, ಆಗಸ್ಟ್‌‌ನಲ್ಲಿ ಹಮಾಸ್ ಮತ್ತು ಇತರ ಪ್ಯಾಲೆಸ್ತೀನಿಯನ್‌ ಬಂಡುಕೋರರ ಗುಂಪುಗಳ ಕ್ರಮಗಳ ಬಗ್ಗೆ ಪ್ರತ್ಯೇಕ ವರದಿಯನ್ನು ನೀಡುವುದಾಗಿ ಎಚ್ಆರ್‌‌ಡಬ್ಲ್ಯೂ ಹೇಳಿದೆ.

“ಇಸ್ರೇಲಿ ಪಡೆಗಳು ಮೇ ತಿಂಗಳಲ್ಲಿ ಗಾಝಾದಲ್ಲಿ ದಾಳಿ ನಡೆಸಿದವು, ಅದು ಯಾವುದೇ ಮಿಲಿಟರಿ ಗುರಿಯಿಲ್ಲದೆ ಇಡೀ ಕುಟುಂಬಗಳನ್ನು ಧ್ವಂಸಮಾಡಿತು” ಎಂದು ಎಚ್‌ಆರ್‌ಡಬ್ಲ್ಯೂನ ನಿರ್ದೇಶಕ ಗೆರ್‍ರಿ ಸಿಂಪ್ಸನ್ ಹೇಳಿದ್ದಾರೆ. ಇಸ್ರೇಲ್‌ಗೆ ಆಪಾದಿತ ಯುದ್ಧಾಪರಾಧಗಳನ್ನು ಗಂಭೀರವಾಗಿ ತನಿಖೆ ಮಾಡಲು ಮನಸ್ಸಿಲ್ಲ ಎಂದು ಅವರು ಹೇಳಿದ್ದಾರೆ.

ದಾಳಿಯು ಮಿಲಿಟರಿ ಗುರಿಗಳನ್ನು ಗುರಿಯಾಗಿರಿಸಿಕೊಂಡು ಮಾಡಿದ್ದು, ನಾಗರಿಕರಿಗೆ ಹಾನಿಯಾಗದಂತೆ ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ ಎಂದು ಇಸ್ರೇಲಿ ಸೈನ್ಯವು ಹೇಳಿಕೆಯಲ್ಲಿ ತಿಳಿಸಿತ್ತು. ಆದರೆ ನಾಗರಿಕರ ಸಾವುನೋವುಗಳಿಗೆ ಹಮಾಸ್ ಕಾರಣ ಎಂದು ಅದು ಆರೋಪಿಸಿದೆ.

ಮೇ 10 ರಂದು ಇಸ್ರೇಲ್ ತನ್ನ ಸೈನ್ಯವನ್ನು ಅಲ್-ಅಕ್ಸಾ ಮಸೀದಿ ಕಾಂಪೌಂಡ್ ಒಳಗೆ ಜಮಾಯಿಸಿದ ನಂತರ ಸಂಘರ್ಷವು ಭುಗಿಲೆದ್ದಿತ್ತು. ಜೊತೆಗೆ ಹತ್ತಾರು ಪ್ಯಾಲೆಸ್ತೀನ್‌‌ ಕುಟುಂಬಗಳನ್ನು ಅಕ್ರಮವಾಗಿ ಅವರ ಮನೆಯಿಂದ ಹೊರಹಾಕುವ ಬೆದರಿಕೆ ಹಾಕಲಾಯಿತು. ಇಸ್ರೇಲ್‌ನ ಹೊರಹಾಕುವಿಕೆಯ ವಿರುದ್ಧ ಪ್ಯಾಲೆಸ್ತೀನಿಯನ್‌ ಪ್ರತಿಭಟನೆಗಳ ಬೆಂಬಲವಾಗಿ ಹಮಾಸ್ ಜೆರುಸಲೆಮ್ ಕಡೆಗೆ ರಾಕೆಟ್ ಹಾರಿಸಿತ್ತು.

ಇದನ್ನೂ ಓದಿ: ಇಸ್ರೇಲ್‌ ಪರವಾದ ಭಾರತದ ನಿಲುವು; ಪ್ಯಾಲಿಸ್ತೇನ್‌ ವಿಷಾದದ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...