Homeಅಂತರಾಷ್ಟ್ರೀಯಗಾಝಾ ಮೇಲಿನ ಇಸ್ರೇಲ್ ದಾಳಿ ಯುದ್ಧಾಪರಾಧ: ಮಾನವ ಹಕ್ಕುಗಳ ಸಂಸ್ಥೆ ವರದಿ

ಗಾಝಾ ಮೇಲಿನ ಇಸ್ರೇಲ್ ದಾಳಿ ಯುದ್ಧಾಪರಾಧ: ಮಾನವ ಹಕ್ಕುಗಳ ಸಂಸ್ಥೆ ವರದಿ

- Advertisement -
- Advertisement -

ಹಮಾಸ್ ಬಂಡುಕೋರರ ವಿರುದ್ದ ನಡೆಸಿದ್ದೇವೆ ಎಂದು ಹೇಳಿ, ಇಸ್ರೇಲ್ ಸೇನೆ ಮೇ ತಿಂಗಳಲ್ಲಿ ಗಾಝಾ ಮೇಲೆ ನಡೆಸಿದ 11 ದಿನಗಳ ದಾಳಿಯು ಸ್ಪಷ್ಟವಾಗಿ ಯುದ್ದಾಪರಾಧ ಕೃತ್ಯಗಳಿಗೆ ಹೋಲುತ್ತದೆ ಎಂದು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ‘ಹ್ಯೂಮನ್ ರೈಟ್ಸ್ ವಾಚ್’(ಎಚ್‌ಆರ್‌ಡಬ್ಲ್ಯೂ) ಮಂಗಳವಾರ ಆರೋಪಿಸಿದೆ.

ಮೂರು ಇಸ್ರೇಲಿ ವೈಮಾನಿಕ ದಾಳಿಯ ತನಿಖೆ ನಡೆಸಿದ ಎಚ್‌ಆರ್‌ಡಬ್ಲ್ಯೂ ತನ್ನ ತೀರ್ಮಾನಗಳನ್ನು ಹೊರಡಿಸಿದ್ದು, ಈ ದಾಳಿಯಿಂದಾಗಿ 62 ಪ್ಯಾಲೆಸ್ತೀನಿ ನಾಗರಿಕರು ಮೃತಪಟ್ಟಿದ್ದಾರೆ ಎಂದು ಅದು ಹೇಳಿದೆ. ಈ ದಾಳಿಯು ಯಾವುದೇ ಸ್ಪಷ್ಟ ಮಿಲಿಟರಿ ಗುರಿಗಳಿಲ್ಲದೆ ನಡೆಸಲಾಗಿದೆ ಎಂದು ಅದು ಹೇಳಿದೆ.

ಇಸ್ರೇಲಿ ಜನ ವಸತಿ ಕೇಂದ್ರಗಳ ಮೇಲೆ 4,000 ಕ್ಕೂ ಹೆಚ್ಚು ಗೊತ್ತುಗುರಿಯಿಲ್ಲದ ರಾಕೆಟ್‌ಗಳು ಮತ್ತು ಮೋರ್ಟರ್‌‌ಗಳನ್ನು ಉಡಾಯಿಸುವ ಮೂಲಕ ಪ್ಯಾಲೆಸ್ತೀನಿ ಬಂಡುಕೋರರು ಕೂಡಾ ಯುದ್ಧಾಪರಾಧಗಳನ್ನು ಮಾಡಿದ್ದಾರೆ ಎಂದು ವರದಿಯಲ್ಲಿ ಆರೋಪಿಸಲಾಗಿದೆ. ಈ ದಾಳಿಗಳು ನಾಗರಿಕರ ವಿರುದ್ಧ ಉದ್ದೇಶಪೂರ್ವಕ ಅಥವಾ ವಿವೇಚನೆಯಿಲ್ಲದ ದಾಳಿಯ ನಿಷೇಧವನ್ನು ಉಲ್ಲಂಘಿಸಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಪ್ಯಾಲೆಸ್ತೀನಿಗಳನ್ನು ಅಕ್ರಮ ಸ್ಥಳಾಂತರ ಮಾಡುವ ಇಸ್ರೇಲ್‌‌ನ ನಡೆ ಹಿಂಸಾಚಾರ ಹೆಚ್ಚಿಸುತ್ತದೆ: ಯುರೋಪಿಯನ್‌ ಯುನಿಯನ್‌

ಅದಾಗ್ಯೂ ಈ ವರದಿಯು ಇಸ್ರೇಲ್ ಮಾಡಿದ ಕ್ರಮಗಳನ್ನು ಕೇಂದ್ರವಾಗಿಟ್ಟು ಮಾಡಲಾಗಿದ್ದು, ಆಗಸ್ಟ್‌‌ನಲ್ಲಿ ಹಮಾಸ್ ಮತ್ತು ಇತರ ಪ್ಯಾಲೆಸ್ತೀನಿಯನ್‌ ಬಂಡುಕೋರರ ಗುಂಪುಗಳ ಕ್ರಮಗಳ ಬಗ್ಗೆ ಪ್ರತ್ಯೇಕ ವರದಿಯನ್ನು ನೀಡುವುದಾಗಿ ಎಚ್ಆರ್‌‌ಡಬ್ಲ್ಯೂ ಹೇಳಿದೆ.

“ಇಸ್ರೇಲಿ ಪಡೆಗಳು ಮೇ ತಿಂಗಳಲ್ಲಿ ಗಾಝಾದಲ್ಲಿ ದಾಳಿ ನಡೆಸಿದವು, ಅದು ಯಾವುದೇ ಮಿಲಿಟರಿ ಗುರಿಯಿಲ್ಲದೆ ಇಡೀ ಕುಟುಂಬಗಳನ್ನು ಧ್ವಂಸಮಾಡಿತು” ಎಂದು ಎಚ್‌ಆರ್‌ಡಬ್ಲ್ಯೂನ ನಿರ್ದೇಶಕ ಗೆರ್‍ರಿ ಸಿಂಪ್ಸನ್ ಹೇಳಿದ್ದಾರೆ. ಇಸ್ರೇಲ್‌ಗೆ ಆಪಾದಿತ ಯುದ್ಧಾಪರಾಧಗಳನ್ನು ಗಂಭೀರವಾಗಿ ತನಿಖೆ ಮಾಡಲು ಮನಸ್ಸಿಲ್ಲ ಎಂದು ಅವರು ಹೇಳಿದ್ದಾರೆ.

ದಾಳಿಯು ಮಿಲಿಟರಿ ಗುರಿಗಳನ್ನು ಗುರಿಯಾಗಿರಿಸಿಕೊಂಡು ಮಾಡಿದ್ದು, ನಾಗರಿಕರಿಗೆ ಹಾನಿಯಾಗದಂತೆ ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ ಎಂದು ಇಸ್ರೇಲಿ ಸೈನ್ಯವು ಹೇಳಿಕೆಯಲ್ಲಿ ತಿಳಿಸಿತ್ತು. ಆದರೆ ನಾಗರಿಕರ ಸಾವುನೋವುಗಳಿಗೆ ಹಮಾಸ್ ಕಾರಣ ಎಂದು ಅದು ಆರೋಪಿಸಿದೆ.

ಮೇ 10 ರಂದು ಇಸ್ರೇಲ್ ತನ್ನ ಸೈನ್ಯವನ್ನು ಅಲ್-ಅಕ್ಸಾ ಮಸೀದಿ ಕಾಂಪೌಂಡ್ ಒಳಗೆ ಜಮಾಯಿಸಿದ ನಂತರ ಸಂಘರ್ಷವು ಭುಗಿಲೆದ್ದಿತ್ತು. ಜೊತೆಗೆ ಹತ್ತಾರು ಪ್ಯಾಲೆಸ್ತೀನ್‌‌ ಕುಟುಂಬಗಳನ್ನು ಅಕ್ರಮವಾಗಿ ಅವರ ಮನೆಯಿಂದ ಹೊರಹಾಕುವ ಬೆದರಿಕೆ ಹಾಕಲಾಯಿತು. ಇಸ್ರೇಲ್‌ನ ಹೊರಹಾಕುವಿಕೆಯ ವಿರುದ್ಧ ಪ್ಯಾಲೆಸ್ತೀನಿಯನ್‌ ಪ್ರತಿಭಟನೆಗಳ ಬೆಂಬಲವಾಗಿ ಹಮಾಸ್ ಜೆರುಸಲೆಮ್ ಕಡೆಗೆ ರಾಕೆಟ್ ಹಾರಿಸಿತ್ತು.

ಇದನ್ನೂ ಓದಿ: ಇಸ್ರೇಲ್‌ ಪರವಾದ ಭಾರತದ ನಿಲುವು; ಪ್ಯಾಲಿಸ್ತೇನ್‌ ವಿಷಾದದ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....