Homeಅಂತರಾಷ್ಟ್ರೀಯಗಾಝಾ ಮೇಲಿನ ಇಸ್ರೇಲ್ ದಾಳಿ ಯುದ್ಧಾಪರಾಧ: ಮಾನವ ಹಕ್ಕುಗಳ ಸಂಸ್ಥೆ ವರದಿ

ಗಾಝಾ ಮೇಲಿನ ಇಸ್ರೇಲ್ ದಾಳಿ ಯುದ್ಧಾಪರಾಧ: ಮಾನವ ಹಕ್ಕುಗಳ ಸಂಸ್ಥೆ ವರದಿ

- Advertisement -
- Advertisement -

ಹಮಾಸ್ ಬಂಡುಕೋರರ ವಿರುದ್ದ ನಡೆಸಿದ್ದೇವೆ ಎಂದು ಹೇಳಿ, ಇಸ್ರೇಲ್ ಸೇನೆ ಮೇ ತಿಂಗಳಲ್ಲಿ ಗಾಝಾ ಮೇಲೆ ನಡೆಸಿದ 11 ದಿನಗಳ ದಾಳಿಯು ಸ್ಪಷ್ಟವಾಗಿ ಯುದ್ದಾಪರಾಧ ಕೃತ್ಯಗಳಿಗೆ ಹೋಲುತ್ತದೆ ಎಂದು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಸಂಸ್ಥೆ ‘ಹ್ಯೂಮನ್ ರೈಟ್ಸ್ ವಾಚ್’(ಎಚ್‌ಆರ್‌ಡಬ್ಲ್ಯೂ) ಮಂಗಳವಾರ ಆರೋಪಿಸಿದೆ.

ಮೂರು ಇಸ್ರೇಲಿ ವೈಮಾನಿಕ ದಾಳಿಯ ತನಿಖೆ ನಡೆಸಿದ ಎಚ್‌ಆರ್‌ಡಬ್ಲ್ಯೂ ತನ್ನ ತೀರ್ಮಾನಗಳನ್ನು ಹೊರಡಿಸಿದ್ದು, ಈ ದಾಳಿಯಿಂದಾಗಿ 62 ಪ್ಯಾಲೆಸ್ತೀನಿ ನಾಗರಿಕರು ಮೃತಪಟ್ಟಿದ್ದಾರೆ ಎಂದು ಅದು ಹೇಳಿದೆ. ಈ ದಾಳಿಯು ಯಾವುದೇ ಸ್ಪಷ್ಟ ಮಿಲಿಟರಿ ಗುರಿಗಳಿಲ್ಲದೆ ನಡೆಸಲಾಗಿದೆ ಎಂದು ಅದು ಹೇಳಿದೆ.

ಇಸ್ರೇಲಿ ಜನ ವಸತಿ ಕೇಂದ್ರಗಳ ಮೇಲೆ 4,000 ಕ್ಕೂ ಹೆಚ್ಚು ಗೊತ್ತುಗುರಿಯಿಲ್ಲದ ರಾಕೆಟ್‌ಗಳು ಮತ್ತು ಮೋರ್ಟರ್‌‌ಗಳನ್ನು ಉಡಾಯಿಸುವ ಮೂಲಕ ಪ್ಯಾಲೆಸ್ತೀನಿ ಬಂಡುಕೋರರು ಕೂಡಾ ಯುದ್ಧಾಪರಾಧಗಳನ್ನು ಮಾಡಿದ್ದಾರೆ ಎಂದು ವರದಿಯಲ್ಲಿ ಆರೋಪಿಸಲಾಗಿದೆ. ಈ ದಾಳಿಗಳು ನಾಗರಿಕರ ವಿರುದ್ಧ ಉದ್ದೇಶಪೂರ್ವಕ ಅಥವಾ ವಿವೇಚನೆಯಿಲ್ಲದ ದಾಳಿಯ ನಿಷೇಧವನ್ನು ಉಲ್ಲಂಘಿಸಿದೆ ಎಂದು ಅದು ಹೇಳಿದೆ.

ಇದನ್ನೂ ಓದಿ: ಪ್ಯಾಲೆಸ್ತೀನಿಗಳನ್ನು ಅಕ್ರಮ ಸ್ಥಳಾಂತರ ಮಾಡುವ ಇಸ್ರೇಲ್‌‌ನ ನಡೆ ಹಿಂಸಾಚಾರ ಹೆಚ್ಚಿಸುತ್ತದೆ: ಯುರೋಪಿಯನ್‌ ಯುನಿಯನ್‌

ಅದಾಗ್ಯೂ ಈ ವರದಿಯು ಇಸ್ರೇಲ್ ಮಾಡಿದ ಕ್ರಮಗಳನ್ನು ಕೇಂದ್ರವಾಗಿಟ್ಟು ಮಾಡಲಾಗಿದ್ದು, ಆಗಸ್ಟ್‌‌ನಲ್ಲಿ ಹಮಾಸ್ ಮತ್ತು ಇತರ ಪ್ಯಾಲೆಸ್ತೀನಿಯನ್‌ ಬಂಡುಕೋರರ ಗುಂಪುಗಳ ಕ್ರಮಗಳ ಬಗ್ಗೆ ಪ್ರತ್ಯೇಕ ವರದಿಯನ್ನು ನೀಡುವುದಾಗಿ ಎಚ್ಆರ್‌‌ಡಬ್ಲ್ಯೂ ಹೇಳಿದೆ.

“ಇಸ್ರೇಲಿ ಪಡೆಗಳು ಮೇ ತಿಂಗಳಲ್ಲಿ ಗಾಝಾದಲ್ಲಿ ದಾಳಿ ನಡೆಸಿದವು, ಅದು ಯಾವುದೇ ಮಿಲಿಟರಿ ಗುರಿಯಿಲ್ಲದೆ ಇಡೀ ಕುಟುಂಬಗಳನ್ನು ಧ್ವಂಸಮಾಡಿತು” ಎಂದು ಎಚ್‌ಆರ್‌ಡಬ್ಲ್ಯೂನ ನಿರ್ದೇಶಕ ಗೆರ್‍ರಿ ಸಿಂಪ್ಸನ್ ಹೇಳಿದ್ದಾರೆ. ಇಸ್ರೇಲ್‌ಗೆ ಆಪಾದಿತ ಯುದ್ಧಾಪರಾಧಗಳನ್ನು ಗಂಭೀರವಾಗಿ ತನಿಖೆ ಮಾಡಲು ಮನಸ್ಸಿಲ್ಲ ಎಂದು ಅವರು ಹೇಳಿದ್ದಾರೆ.

ದಾಳಿಯು ಮಿಲಿಟರಿ ಗುರಿಗಳನ್ನು ಗುರಿಯಾಗಿರಿಸಿಕೊಂಡು ಮಾಡಿದ್ದು, ನಾಗರಿಕರಿಗೆ ಹಾನಿಯಾಗದಂತೆ ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದೇವೆ ಎಂದು ಇಸ್ರೇಲಿ ಸೈನ್ಯವು ಹೇಳಿಕೆಯಲ್ಲಿ ತಿಳಿಸಿತ್ತು. ಆದರೆ ನಾಗರಿಕರ ಸಾವುನೋವುಗಳಿಗೆ ಹಮಾಸ್ ಕಾರಣ ಎಂದು ಅದು ಆರೋಪಿಸಿದೆ.

ಮೇ 10 ರಂದು ಇಸ್ರೇಲ್ ತನ್ನ ಸೈನ್ಯವನ್ನು ಅಲ್-ಅಕ್ಸಾ ಮಸೀದಿ ಕಾಂಪೌಂಡ್ ಒಳಗೆ ಜಮಾಯಿಸಿದ ನಂತರ ಸಂಘರ್ಷವು ಭುಗಿಲೆದ್ದಿತ್ತು. ಜೊತೆಗೆ ಹತ್ತಾರು ಪ್ಯಾಲೆಸ್ತೀನ್‌‌ ಕುಟುಂಬಗಳನ್ನು ಅಕ್ರಮವಾಗಿ ಅವರ ಮನೆಯಿಂದ ಹೊರಹಾಕುವ ಬೆದರಿಕೆ ಹಾಕಲಾಯಿತು. ಇಸ್ರೇಲ್‌ನ ಹೊರಹಾಕುವಿಕೆಯ ವಿರುದ್ಧ ಪ್ಯಾಲೆಸ್ತೀನಿಯನ್‌ ಪ್ರತಿಭಟನೆಗಳ ಬೆಂಬಲವಾಗಿ ಹಮಾಸ್ ಜೆರುಸಲೆಮ್ ಕಡೆಗೆ ರಾಕೆಟ್ ಹಾರಿಸಿತ್ತು.

ಇದನ್ನೂ ಓದಿ: ಇಸ್ರೇಲ್‌ ಪರವಾದ ಭಾರತದ ನಿಲುವು; ಪ್ಯಾಲಿಸ್ತೇನ್‌ ವಿಷಾದದ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...