Homeಮುಖಪುಟಗಾಝಾದಲ್ಲಿ ಮುಂದುವರಿದ ಇಸ್ರೇಲ್ ನರಮೇಧ : ಹೊಸ ವರ್ಷದಂದು ಮಕ್ಕಳು ಸೇರಿದಂತೆ 17 ಜನರ ಹತ್ಯೆ

ಗಾಝಾದಲ್ಲಿ ಮುಂದುವರಿದ ಇಸ್ರೇಲ್ ನರಮೇಧ : ಹೊಸ ವರ್ಷದಂದು ಮಕ್ಕಳು ಸೇರಿದಂತೆ 17 ಜನರ ಹತ್ಯೆ

- Advertisement -
- Advertisement -

ಭಾರತ ಸೇರಿದಂತೆ ಜಗತ್ತಿನ ವಿವಿಧ ರಾಷ್ಟ್ರಗಳ ಜನರು ಹೊಸ ವರ್ಷದ ಸಂಭ್ರದಲ್ಲಿದ್ದರೆ, ಗಾಝಾದ ಜನತೆ ಮಾತ್ರ ಅದೇ ನೋವು, ಅದೇ ಹಸಿವಿನ ನರಳಾಟ ಮುಂದುವರೆಸಿದ್ದಾರೆ.

ಉಸಿರಾಡುವ ಹಕ್ಕನ್ನೂ ಕಳೆದುಕೊಂಡಿರುವ ನತದೃಷ್ಟ ಜನರಿಗೆ ಎಲ್ಲಿಯ ಹೊಸವರ್ಷ, ಎಲ್ಲಿಯ ಸಂಭ್ರಮಾಚರಣೆ?

ಮಾನವೀಯತೆಯ ಕನಿಷ್ಠ ಅಂಶವನ್ನೂ ಮಾರಿಬಿಟ್ಟಿರುವ ಸೋ ಕಾಲ್ಡ್ ಪ್ರಬಲ ರಾಷ್ಟ್ರ ಇಸ್ರೇಲ್ ಜನವರಿ 1 ರಂದ ಹೊಸ ವರ್ಷದಂದು ಆಕ್ರಮಿತ ಪಶ್ಚಿಮ ದಂಡೆ, ಉತ್ತರ ಗಾಝಾದ ಜಬಲಿಯಾ ಮತ್ತು ಬುರೇಜ್ ನಿರಾಶ್ರಿತರ ಶಿಬಿರಗಳ ಮೇಲೆ ದಾಳಿ ನಡೆಸಿ ಮಕ್ಕಳು ಸೇರಿದಂತೆ 17 ಜನರನ್ನು ಹತ್ಯೆ ಮಾಡಿದೆ.

ಕಳೆದ ಒಂದು ವಾರದಿಂದ ಭಾರೀ ಮಳೆಯ ಪರಿಣಾಮ ಗಾಝಾದಾದ್ಯಂತ ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿರುವ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರು ತಂಗಿರುವ ತಾತ್ಕಾಲಿಕ ಟೆಂಟ್‌ಗಳಿಗೆ ನೀರು ನುಗ್ಗಿ ಆಹಾರ ವಸ್ತುಗಳು ಹಾಳಾಗಿವೆ. ಮಲಗಲೂ ಆಗದ ಪರಿಸ್ಥಿತಿ ಉಂಟಾಗಿದೆ. ಈ ನಡುವೆ ಇಸ್ರೇಲ್ ಆಕ್ರಮ ಮುಂದುವರೆಸಿರುವುದು ಇನ್ನಷ್ಟು ಸಂಕಷ್ಟಕ್ಕೆ ನೂಕಿದೆ.

ಕಳೆದ ವಾರ ಉತ್ತರ ಗಾಝಾದ ಆಸ್ಪತ್ರೆ ಕಮಲ್ ಅದ್ವಾನ್ ಮೇಲೆ ದಾಳಿ ನಡೆಸಿದ್ದ ಇಸ್ರೇಲ್ ಸೇನೆ, ಕೊನೆಗೆ ಬಾಕಿ ಉಳಿದಿದ್ದ ಏಕೈಕ ವೈದ್ಯಕೀಯ ವ್ಯವಸ್ಥೆಯನ್ನು ನಾಶ ಮಾಡಿದೆ. ಇದರಿಂದ ಹಲವರ ಪ್ರಾಣ ಕಳೆದುಕೊಂಡಿದ್ದಾರೆ. ಆಸ್ಪತ್ರೆಯ ನಿರ್ದೇಶಕ ಡಾ.ಹುಸ್ಸಾಮ್ ಅಬೂ ಸಫಿಯಾ ಸೇರಿದಂತೆ ಕೆಲವರನ್ನು ಇಸ್ರೇಲ್ ಸೇನೆ ಬಂಧಿಸಿಟ್ಟಿದೆ. ಕಮಲ್ ಅದ್ವಾನ್ ಆಸ್ಪತ್ರೆ ಮೇಲಿನ ದಾಳಿ ಗಾಝಾದ ಸಂಪೂರ್ಣ ವೈದ್ಯಕೀಯ ವ್ಯವಸ್ಥೆಯನ್ನು ನಾಶ ಮಾಡಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

‘ಭಾರೀ ಬೆಲೆ ತೆರಬೇಕಾಗುತ್ತದೆ’

ಇಸ್ರೇಲ್ ಗಾಝಾದಲ್ಲಿ ನಿರಂತರ ನರಮೇಧ ನಡೆಸಿ ಸಂಪೂರ್ಣ ದೇಶವನ್ನೇ ನರಕ ಮಾಡಿದರೂ ಒಬ್ಬರೂ ಪ್ರಶ್ನಿಸುವವರು ಇಲ್ಲ. ಇದಕ್ಕೆ ಜಗತ್ತು ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಇಸ್ತಾಂಬುಲ್ ಝೈಮ್ ವಿಶ್ವವಿದ್ಯಾಲಯದ ಇಸ್ಲಾಂ ಮತ್ತು ಜಾಗತಿಕ ವ್ಯವಹಾರಗಳ ಕೇಂದ್ರದ ನಿರ್ದೇಶಕ ಸಮಿ ಅಲ್-ಅರಿಯನ್ ಎಚ್ಚರಿಸಿದ್ದಾರೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್ ಗಾಝಾದಲ್ಲಿ ನಡೆಸಿದ ಆಕ್ರಮಣದಲ್ಲಿ ಸಾವನ್ನಪ್ಪಿದ ಜನರ ಸಂಖ್ಯೆ 45,541 ದಾಟಿದೆ. ಬರೋಬ್ಬರಿ 108,338 ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿ : ನ್ಯಾಯಮೂರ್ತಿಗಳ ಸಂಬಂಧಿಕರಿಗೆ ಹುದ್ದೆ ನೀಡುವ ಕ್ರಮ ಪರಿಶೀಲನೆ : ಕೊಲಿಜಿಯಂ ನಿರ್ಧಾರ ಸ್ವಾಗತಿಸಿದ ಅಭಿಷೇಕ್ ಮನು ಸಿಂಘ್ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...