Homeಮುಖಪುಟಗಾಝಾದಲ್ಲಿ ಮುಂದುವರಿದ ಇಸ್ರೇಲ್ ನರಮೇಧ : ಹೊಸ ವರ್ಷದಂದು ಮಕ್ಕಳು ಸೇರಿದಂತೆ 17 ಜನರ ಹತ್ಯೆ

ಗಾಝಾದಲ್ಲಿ ಮುಂದುವರಿದ ಇಸ್ರೇಲ್ ನರಮೇಧ : ಹೊಸ ವರ್ಷದಂದು ಮಕ್ಕಳು ಸೇರಿದಂತೆ 17 ಜನರ ಹತ್ಯೆ

- Advertisement -
- Advertisement -

ಭಾರತ ಸೇರಿದಂತೆ ಜಗತ್ತಿನ ವಿವಿಧ ರಾಷ್ಟ್ರಗಳ ಜನರು ಹೊಸ ವರ್ಷದ ಸಂಭ್ರದಲ್ಲಿದ್ದರೆ, ಗಾಝಾದ ಜನತೆ ಮಾತ್ರ ಅದೇ ನೋವು, ಅದೇ ಹಸಿವಿನ ನರಳಾಟ ಮುಂದುವರೆಸಿದ್ದಾರೆ.

ಉಸಿರಾಡುವ ಹಕ್ಕನ್ನೂ ಕಳೆದುಕೊಂಡಿರುವ ನತದೃಷ್ಟ ಜನರಿಗೆ ಎಲ್ಲಿಯ ಹೊಸವರ್ಷ, ಎಲ್ಲಿಯ ಸಂಭ್ರಮಾಚರಣೆ?

ಮಾನವೀಯತೆಯ ಕನಿಷ್ಠ ಅಂಶವನ್ನೂ ಮಾರಿಬಿಟ್ಟಿರುವ ಸೋ ಕಾಲ್ಡ್ ಪ್ರಬಲ ರಾಷ್ಟ್ರ ಇಸ್ರೇಲ್ ಜನವರಿ 1 ರಂದ ಹೊಸ ವರ್ಷದಂದು ಆಕ್ರಮಿತ ಪಶ್ಚಿಮ ದಂಡೆ, ಉತ್ತರ ಗಾಝಾದ ಜಬಲಿಯಾ ಮತ್ತು ಬುರೇಜ್ ನಿರಾಶ್ರಿತರ ಶಿಬಿರಗಳ ಮೇಲೆ ದಾಳಿ ನಡೆಸಿ ಮಕ್ಕಳು ಸೇರಿದಂತೆ 17 ಜನರನ್ನು ಹತ್ಯೆ ಮಾಡಿದೆ.

ಕಳೆದ ಒಂದು ವಾರದಿಂದ ಭಾರೀ ಮಳೆಯ ಪರಿಣಾಮ ಗಾಝಾದಾದ್ಯಂತ ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿರುವ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರು ತಂಗಿರುವ ತಾತ್ಕಾಲಿಕ ಟೆಂಟ್‌ಗಳಿಗೆ ನೀರು ನುಗ್ಗಿ ಆಹಾರ ವಸ್ತುಗಳು ಹಾಳಾಗಿವೆ. ಮಲಗಲೂ ಆಗದ ಪರಿಸ್ಥಿತಿ ಉಂಟಾಗಿದೆ. ಈ ನಡುವೆ ಇಸ್ರೇಲ್ ಆಕ್ರಮ ಮುಂದುವರೆಸಿರುವುದು ಇನ್ನಷ್ಟು ಸಂಕಷ್ಟಕ್ಕೆ ನೂಕಿದೆ.

ಕಳೆದ ವಾರ ಉತ್ತರ ಗಾಝಾದ ಆಸ್ಪತ್ರೆ ಕಮಲ್ ಅದ್ವಾನ್ ಮೇಲೆ ದಾಳಿ ನಡೆಸಿದ್ದ ಇಸ್ರೇಲ್ ಸೇನೆ, ಕೊನೆಗೆ ಬಾಕಿ ಉಳಿದಿದ್ದ ಏಕೈಕ ವೈದ್ಯಕೀಯ ವ್ಯವಸ್ಥೆಯನ್ನು ನಾಶ ಮಾಡಿದೆ. ಇದರಿಂದ ಹಲವರ ಪ್ರಾಣ ಕಳೆದುಕೊಂಡಿದ್ದಾರೆ. ಆಸ್ಪತ್ರೆಯ ನಿರ್ದೇಶಕ ಡಾ.ಹುಸ್ಸಾಮ್ ಅಬೂ ಸಫಿಯಾ ಸೇರಿದಂತೆ ಕೆಲವರನ್ನು ಇಸ್ರೇಲ್ ಸೇನೆ ಬಂಧಿಸಿಟ್ಟಿದೆ. ಕಮಲ್ ಅದ್ವಾನ್ ಆಸ್ಪತ್ರೆ ಮೇಲಿನ ದಾಳಿ ಗಾಝಾದ ಸಂಪೂರ್ಣ ವೈದ್ಯಕೀಯ ವ್ಯವಸ್ಥೆಯನ್ನು ನಾಶ ಮಾಡಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

‘ಭಾರೀ ಬೆಲೆ ತೆರಬೇಕಾಗುತ್ತದೆ’

ಇಸ್ರೇಲ್ ಗಾಝಾದಲ್ಲಿ ನಿರಂತರ ನರಮೇಧ ನಡೆಸಿ ಸಂಪೂರ್ಣ ದೇಶವನ್ನೇ ನರಕ ಮಾಡಿದರೂ ಒಬ್ಬರೂ ಪ್ರಶ್ನಿಸುವವರು ಇಲ್ಲ. ಇದಕ್ಕೆ ಜಗತ್ತು ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಇಸ್ತಾಂಬುಲ್ ಝೈಮ್ ವಿಶ್ವವಿದ್ಯಾಲಯದ ಇಸ್ಲಾಂ ಮತ್ತು ಜಾಗತಿಕ ವ್ಯವಹಾರಗಳ ಕೇಂದ್ರದ ನಿರ್ದೇಶಕ ಸಮಿ ಅಲ್-ಅರಿಯನ್ ಎಚ್ಚರಿಸಿದ್ದಾರೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್ ಗಾಝಾದಲ್ಲಿ ನಡೆಸಿದ ಆಕ್ರಮಣದಲ್ಲಿ ಸಾವನ್ನಪ್ಪಿದ ಜನರ ಸಂಖ್ಯೆ 45,541 ದಾಟಿದೆ. ಬರೋಬ್ಬರಿ 108,338 ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿ : ನ್ಯಾಯಮೂರ್ತಿಗಳ ಸಂಬಂಧಿಕರಿಗೆ ಹುದ್ದೆ ನೀಡುವ ಕ್ರಮ ಪರಿಶೀಲನೆ : ಕೊಲಿಜಿಯಂ ನಿರ್ಧಾರ ಸ್ವಾಗತಿಸಿದ ಅಭಿಷೇಕ್ ಮನು ಸಿಂಘ್ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...