Homeಮುಖಪುಟಗಾಝಾದಲ್ಲಿ ಮುಂದುವರಿದ ಇಸ್ರೇಲ್ ನರಮೇಧ : ಹೊಸ ವರ್ಷದಂದು ಮಕ್ಕಳು ಸೇರಿದಂತೆ 17 ಜನರ ಹತ್ಯೆ

ಗಾಝಾದಲ್ಲಿ ಮುಂದುವರಿದ ಇಸ್ರೇಲ್ ನರಮೇಧ : ಹೊಸ ವರ್ಷದಂದು ಮಕ್ಕಳು ಸೇರಿದಂತೆ 17 ಜನರ ಹತ್ಯೆ

- Advertisement -
- Advertisement -

ಭಾರತ ಸೇರಿದಂತೆ ಜಗತ್ತಿನ ವಿವಿಧ ರಾಷ್ಟ್ರಗಳ ಜನರು ಹೊಸ ವರ್ಷದ ಸಂಭ್ರದಲ್ಲಿದ್ದರೆ, ಗಾಝಾದ ಜನತೆ ಮಾತ್ರ ಅದೇ ನೋವು, ಅದೇ ಹಸಿವಿನ ನರಳಾಟ ಮುಂದುವರೆಸಿದ್ದಾರೆ.

ಉಸಿರಾಡುವ ಹಕ್ಕನ್ನೂ ಕಳೆದುಕೊಂಡಿರುವ ನತದೃಷ್ಟ ಜನರಿಗೆ ಎಲ್ಲಿಯ ಹೊಸವರ್ಷ, ಎಲ್ಲಿಯ ಸಂಭ್ರಮಾಚರಣೆ?

ಮಾನವೀಯತೆಯ ಕನಿಷ್ಠ ಅಂಶವನ್ನೂ ಮಾರಿಬಿಟ್ಟಿರುವ ಸೋ ಕಾಲ್ಡ್ ಪ್ರಬಲ ರಾಷ್ಟ್ರ ಇಸ್ರೇಲ್ ಜನವರಿ 1 ರಂದ ಹೊಸ ವರ್ಷದಂದು ಆಕ್ರಮಿತ ಪಶ್ಚಿಮ ದಂಡೆ, ಉತ್ತರ ಗಾಝಾದ ಜಬಲಿಯಾ ಮತ್ತು ಬುರೇಜ್ ನಿರಾಶ್ರಿತರ ಶಿಬಿರಗಳ ಮೇಲೆ ದಾಳಿ ನಡೆಸಿ ಮಕ್ಕಳು ಸೇರಿದಂತೆ 17 ಜನರನ್ನು ಹತ್ಯೆ ಮಾಡಿದೆ.

ಕಳೆದ ಒಂದು ವಾರದಿಂದ ಭಾರೀ ಮಳೆಯ ಪರಿಣಾಮ ಗಾಝಾದಾದ್ಯಂತ ನಿರಾಶ್ರಿತರ ಶಿಬಿರಗಳಲ್ಲಿ ವಾಸಿಸುತ್ತಿರುವ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರು ತಂಗಿರುವ ತಾತ್ಕಾಲಿಕ ಟೆಂಟ್‌ಗಳಿಗೆ ನೀರು ನುಗ್ಗಿ ಆಹಾರ ವಸ್ತುಗಳು ಹಾಳಾಗಿವೆ. ಮಲಗಲೂ ಆಗದ ಪರಿಸ್ಥಿತಿ ಉಂಟಾಗಿದೆ. ಈ ನಡುವೆ ಇಸ್ರೇಲ್ ಆಕ್ರಮ ಮುಂದುವರೆಸಿರುವುದು ಇನ್ನಷ್ಟು ಸಂಕಷ್ಟಕ್ಕೆ ನೂಕಿದೆ.

ಕಳೆದ ವಾರ ಉತ್ತರ ಗಾಝಾದ ಆಸ್ಪತ್ರೆ ಕಮಲ್ ಅದ್ವಾನ್ ಮೇಲೆ ದಾಳಿ ನಡೆಸಿದ್ದ ಇಸ್ರೇಲ್ ಸೇನೆ, ಕೊನೆಗೆ ಬಾಕಿ ಉಳಿದಿದ್ದ ಏಕೈಕ ವೈದ್ಯಕೀಯ ವ್ಯವಸ್ಥೆಯನ್ನು ನಾಶ ಮಾಡಿದೆ. ಇದರಿಂದ ಹಲವರ ಪ್ರಾಣ ಕಳೆದುಕೊಂಡಿದ್ದಾರೆ. ಆಸ್ಪತ್ರೆಯ ನಿರ್ದೇಶಕ ಡಾ.ಹುಸ್ಸಾಮ್ ಅಬೂ ಸಫಿಯಾ ಸೇರಿದಂತೆ ಕೆಲವರನ್ನು ಇಸ್ರೇಲ್ ಸೇನೆ ಬಂಧಿಸಿಟ್ಟಿದೆ. ಕಮಲ್ ಅದ್ವಾನ್ ಆಸ್ಪತ್ರೆ ಮೇಲಿನ ದಾಳಿ ಗಾಝಾದ ಸಂಪೂರ್ಣ ವೈದ್ಯಕೀಯ ವ್ಯವಸ್ಥೆಯನ್ನು ನಾಶ ಮಾಡಿದೆ ಎಂದು ವಿಶ್ವಸಂಸ್ಥೆ ಹೇಳಿದೆ.

‘ಭಾರೀ ಬೆಲೆ ತೆರಬೇಕಾಗುತ್ತದೆ’

ಇಸ್ರೇಲ್ ಗಾಝಾದಲ್ಲಿ ನಿರಂತರ ನರಮೇಧ ನಡೆಸಿ ಸಂಪೂರ್ಣ ದೇಶವನ್ನೇ ನರಕ ಮಾಡಿದರೂ ಒಬ್ಬರೂ ಪ್ರಶ್ನಿಸುವವರು ಇಲ್ಲ. ಇದಕ್ಕೆ ಜಗತ್ತು ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಇಸ್ತಾಂಬುಲ್ ಝೈಮ್ ವಿಶ್ವವಿದ್ಯಾಲಯದ ಇಸ್ಲಾಂ ಮತ್ತು ಜಾಗತಿಕ ವ್ಯವಹಾರಗಳ ಕೇಂದ್ರದ ನಿರ್ದೇಶಕ ಸಮಿ ಅಲ್-ಅರಿಯನ್ ಎಚ್ಚರಿಸಿದ್ದಾರೆ.

ಅಕ್ಟೋಬರ್ 7, 2023ರಿಂದ ಇಸ್ರೇಲ್ ಗಾಝಾದಲ್ಲಿ ನಡೆಸಿದ ಆಕ್ರಮಣದಲ್ಲಿ ಸಾವನ್ನಪ್ಪಿದ ಜನರ ಸಂಖ್ಯೆ 45,541 ದಾಟಿದೆ. ಬರೋಬ್ಬರಿ 108,338 ಜನರು ಗಾಯಗೊಂಡಿದ್ದಾರೆ.

ಇದನ್ನೂ ಓದಿ : ನ್ಯಾಯಮೂರ್ತಿಗಳ ಸಂಬಂಧಿಕರಿಗೆ ಹುದ್ದೆ ನೀಡುವ ಕ್ರಮ ಪರಿಶೀಲನೆ : ಕೊಲಿಜಿಯಂ ನಿರ್ಧಾರ ಸ್ವಾಗತಿಸಿದ ಅಭಿಷೇಕ್ ಮನು ಸಿಂಘ್ವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...