Homeಮುಖಪುಟಯೆಮನ್‌ಗೆ ವಿಸ್ತರಣೆಗೊಂಡ ಇಸ್ರೇಲ್ ಆಕ್ರಮಣ : ಸಿರಿಯಾದತ್ತ ಜನರ ಪಲಾಯನ

ಯೆಮನ್‌ಗೆ ವಿಸ್ತರಣೆಗೊಂಡ ಇಸ್ರೇಲ್ ಆಕ್ರಮಣ : ಸಿರಿಯಾದತ್ತ ಜನರ ಪಲಾಯನ

- Advertisement -
- Advertisement -

ಗಾಝಾ, ಲೆಬನಾನ್ ಬಳಿಕ ಇಸ್ರೇಲ್ ಆಕ್ರಮಣ ಯೆಮನ್‌ಗೆ ವಿಸ್ತರಣೆಗೊಂಡಿದೆ. ಲೆಬನಾನ್‌ನಲ್ಲಿ ನೆಲ ಕಾರ್ಯಾಚರಣೆ (Ground Operation)ಗೆ ಸಜ್ಜಾಗಿರುವ ಇಸ್ರೇಲ್ ಸೇನೆ, ಯೆಮನ್‌ನ ವಿದ್ಯುತ್ ಸ್ಥಾವರ ಮತ್ತು ಬಂದರನ್ನು ಗುರಿಯಾಗಿಸಿ ದಾಳಿ ನಡೆಸಿದೆ.

ಇತ್ತೀಚಿನ ವರದಿಗಳ ಪ್ರಕಾರ, ಇಸ್ರೇಲ್‌ ಸೇನೆ ಲೆಬನಾನ್‌ನ ರಾಜಧಾನಿ ಬೈರುತ್‌ನ ಕೋಲಾ ಪ್ರದೇಶದ ಮೇಲೆ ಬಾಂಬ್ ದಾಳಿ ಮಾಡಿದೆ. ಇದು ಲೆಬನಾನ್‌ನ ರಾಜಧಾನಿ ಮೇಲಿನ ಮೊದಲ ದಾಳಿಯಾಗಿದೆ. ಇದಕ್ಕೂ ಮುನ್ನ ಬೈರುತ್‌ನ ಹೊರವಲಯದ ದಕ್ಷಿಣ ಉಪನಗರಗಳ ಮೇಲೆ ದಾಳಿ ನಡೆಸಿತ್ತು.

ಕಳೆದ 24 ಗಂಟೆಯಲ್ಲಿ ಇಸ್ರೇಲ್‌ ದಾಳಿಗಳಿಂದ 105 ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ಹೇಳಿದೆ. ವರದಿಗಳ ಪ್ರಕಾರ, ಇಸ್ರೇಲ್ ಸೇನೆಯ ಜೆಟ್‌ ವಿಮಾನಗಳು ದೇಶದಾದ್ಯಂತ ವಿವಿದೆಡೆ ತಡೆರಹಿತ ಬಾಂಬ್ ದಾಳಿಯನ್ನು ಮುಂದುವರೆಸಿವೆ.

ಕಳೆದ ಎರಡು ದಿನಗಳಲ್ಲಿ ಹೆಜ್ಬುಲ್ಲಾದ ಪರಮೋನ್ನತ ನಾಯಕ ಹಸ್ಸನ್ ನಸ್ರಲ್ಲಾ, ಹೆಜ್ಬುಲ್ಲಾದ ಸೌತ್ ಫ್ರಂಟ್‌ನ ಕಮಾಂಡರ್ ಅಲಿ ಕರ್ಕಿ, ನಸ್ರಲ್ಲಾ ಅವರ ಭದ್ರತಾ ಘಟಕದ ಮುಖ್ಯಸ್ಥ ಇಬ್ರಾಹಿಂ ಹುಸೇನ್ ಜಾಜಿನಿ, ನಸ್ರಲ್ಲಾ ಅವರ ದೀರ್ಘಾವಧಿಯ ವಿಶ್ವಾಸಾರ್ಹ ಜೊತೆಗಾರ ಮತ್ತು ಹೆಜ್ಬುಲ್ಲಾ ಚಟುವಟಿಕೆಗಳ ಸಲಹೆಗಾರ ಸಮೀರ್ ತೌಫಿಕ್ ದಿಬ್, ಹೆಜ್ಬುಲ್ಲಾದ ಫೋರ್ಸ್-ಬಿಲ್ಡ್ ಅಪ್ ಮುಖ್ಯಸ್ಥ ಅಬೇದ್ ಅಲ್-ಅಮೀರ್ ಮುಹಮ್ಮದ್ ಸಬ್ಲಿನಿ, ಹೆಜ್ಬುಲ್ಲಾದ ಫೈರ್‌ಪವರ್ ಅನ್ನು ಸಂಘಟಿಸುವ ಜವಾಬ್ದಾರಿ ಹೊತ್ತಿದ್ದ ಅಲಿ ನಾಫ್ ಅಯೌಬ್ ಅವರನ್ನು ಇಸ್ರೇಲ್ ಹತ್ಯೆ ಮಾಡಿದೆ.

ಇಸ್ರೇಲಿ ಪಡೆಗಳು ಮಿಲಿಟರಿ ಉಪಕರಣಗಳು ಮತ್ತು ವಾಹನಗಳೊಂದಿಗೆ ಲೆಬನಾನ್‌ನ ಗಡಿಯ ಸಮೀಪದಲ್ಲಿ ಜಮಾಯಿಸಿದೆ. ಇದರಿಂದ ಸಂಭಾವ್ಯ ನೆಲ ಆಕ್ರಮಣದ ಆತಂಕ ಹೆಚ್ಚಾಗಿದೆ.

ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಡೆಸುತ್ತಿದ್ದಂತೆ ಸುಮಾರು 30 ಸಾವಿರ ಜನರು ಸಿರಿಯಾದತ್ತ ಪಲಾಯನ ಮಾಡಿದ್ದಾರೆ ಎಂದು ಸೆಪ್ಟೆಂಬರ್ 27ರಂದು ಅಲ್‌-ಜಝೀರಾ ವರದಿ ಮಾಡಿತ್ತು. ಆ ಸಂಖ್ಯೆ ಈಗ ಹೆಚ್ಚಾಗಿರಬಹುದು.

ಈ ನಡುವೆ ಇಸ್ರೇಲ್ ಗಾಝಾ ಪಟ್ಟಿಯಾದ್ಯಂತ ತನ್ನ ದಾಳಿಯನ್ನು ಮುಂದುವರೆಸಿದೆ, ಇತ್ತೀಚಿನ ಕೊನೆಯ ದಾಳಿಯಲ್ಲಿ ಕನಿಷ್ಠ 28 ಜನರನ್ನು ಹತ್ಯೆ ಮಾಡಿದೆ.

ಇಸ್ರೇಲಿ ವಾಯುಪಡೆಯು ಯೆಮೆನ್‌ನ ಬಂದರು ನಗರಗಳಾದ ಹುದೈದ ಮತ್ತು ರಾಸ್ ಇಸಾದಲ್ಲಿನ ವಿದ್ಯುತ್ ಸ್ಥಾವರ ಮತ್ತು ಬಂದರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ 7ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಿಂದ ಇದುವರೆಗೆ 41,595 ಜನರು ಸಾವನ್ನಪ್ಪಿದ್ದಾರೆ ಮತ್ತು 96,251 ಜನರು ಗಾಯಗೊಂಡಿದ್ದಾರೆ. ಇಸ್ರೇಲ್‌ ರಾಜಧಾನಿ ಟೆಲ್ ಅವೀವ್ ನಗರದ ಮೇಲೆ ಅಕ್ಟೋಬರ್ 7,2023ರಂದು ಹಮಾಸ್ ನಡೆಸಿದ ದಾಳಿಯಲ್ಲಿ 1,139 ಜನರು ಬಲಿಯಾಗಿದ್ದರು. 200ಕ್ಕೂ ಅಧಿಕ ಜನರನ್ನು ಹಮಾಸ್ ಒತ್ತೆಯಾಳಗಿಟ್ಟುಕೊಂಡಿತ್ತು.

ಇದನ್ನೂ ಓದಿ : ಓಶೋ ರಜನೀಶ್ ಆರಾಧನೆಯಲ್ಲಿ ಅನುಭವಿಸಿದ ಲೈಂಗಿಕ ಆಘಾತವನ್ನು ವಿವರಿಸಿದ ಯುಕೆ ಮಹಿಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...