Homeಮುಖಪುಟಯೆಮನ್‌ಗೆ ವಿಸ್ತರಣೆಗೊಂಡ ಇಸ್ರೇಲ್ ಆಕ್ರಮಣ : ಸಿರಿಯಾದತ್ತ ಜನರ ಪಲಾಯನ

ಯೆಮನ್‌ಗೆ ವಿಸ್ತರಣೆಗೊಂಡ ಇಸ್ರೇಲ್ ಆಕ್ರಮಣ : ಸಿರಿಯಾದತ್ತ ಜನರ ಪಲಾಯನ

- Advertisement -
- Advertisement -

ಗಾಝಾ, ಲೆಬನಾನ್ ಬಳಿಕ ಇಸ್ರೇಲ್ ಆಕ್ರಮಣ ಯೆಮನ್‌ಗೆ ವಿಸ್ತರಣೆಗೊಂಡಿದೆ. ಲೆಬನಾನ್‌ನಲ್ಲಿ ನೆಲ ಕಾರ್ಯಾಚರಣೆ (Ground Operation)ಗೆ ಸಜ್ಜಾಗಿರುವ ಇಸ್ರೇಲ್ ಸೇನೆ, ಯೆಮನ್‌ನ ವಿದ್ಯುತ್ ಸ್ಥಾವರ ಮತ್ತು ಬಂದರನ್ನು ಗುರಿಯಾಗಿಸಿ ದಾಳಿ ನಡೆಸಿದೆ.

ಇತ್ತೀಚಿನ ವರದಿಗಳ ಪ್ರಕಾರ, ಇಸ್ರೇಲ್‌ ಸೇನೆ ಲೆಬನಾನ್‌ನ ರಾಜಧಾನಿ ಬೈರುತ್‌ನ ಕೋಲಾ ಪ್ರದೇಶದ ಮೇಲೆ ಬಾಂಬ್ ದಾಳಿ ಮಾಡಿದೆ. ಇದು ಲೆಬನಾನ್‌ನ ರಾಜಧಾನಿ ಮೇಲಿನ ಮೊದಲ ದಾಳಿಯಾಗಿದೆ. ಇದಕ್ಕೂ ಮುನ್ನ ಬೈರುತ್‌ನ ಹೊರವಲಯದ ದಕ್ಷಿಣ ಉಪನಗರಗಳ ಮೇಲೆ ದಾಳಿ ನಡೆಸಿತ್ತು.

ಕಳೆದ 24 ಗಂಟೆಯಲ್ಲಿ ಇಸ್ರೇಲ್‌ ದಾಳಿಗಳಿಂದ 105 ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ಹೇಳಿದೆ. ವರದಿಗಳ ಪ್ರಕಾರ, ಇಸ್ರೇಲ್ ಸೇನೆಯ ಜೆಟ್‌ ವಿಮಾನಗಳು ದೇಶದಾದ್ಯಂತ ವಿವಿದೆಡೆ ತಡೆರಹಿತ ಬಾಂಬ್ ದಾಳಿಯನ್ನು ಮುಂದುವರೆಸಿವೆ.

ಕಳೆದ ಎರಡು ದಿನಗಳಲ್ಲಿ ಹೆಜ್ಬುಲ್ಲಾದ ಪರಮೋನ್ನತ ನಾಯಕ ಹಸ್ಸನ್ ನಸ್ರಲ್ಲಾ, ಹೆಜ್ಬುಲ್ಲಾದ ಸೌತ್ ಫ್ರಂಟ್‌ನ ಕಮಾಂಡರ್ ಅಲಿ ಕರ್ಕಿ, ನಸ್ರಲ್ಲಾ ಅವರ ಭದ್ರತಾ ಘಟಕದ ಮುಖ್ಯಸ್ಥ ಇಬ್ರಾಹಿಂ ಹುಸೇನ್ ಜಾಜಿನಿ, ನಸ್ರಲ್ಲಾ ಅವರ ದೀರ್ಘಾವಧಿಯ ವಿಶ್ವಾಸಾರ್ಹ ಜೊತೆಗಾರ ಮತ್ತು ಹೆಜ್ಬುಲ್ಲಾ ಚಟುವಟಿಕೆಗಳ ಸಲಹೆಗಾರ ಸಮೀರ್ ತೌಫಿಕ್ ದಿಬ್, ಹೆಜ್ಬುಲ್ಲಾದ ಫೋರ್ಸ್-ಬಿಲ್ಡ್ ಅಪ್ ಮುಖ್ಯಸ್ಥ ಅಬೇದ್ ಅಲ್-ಅಮೀರ್ ಮುಹಮ್ಮದ್ ಸಬ್ಲಿನಿ, ಹೆಜ್ಬುಲ್ಲಾದ ಫೈರ್‌ಪವರ್ ಅನ್ನು ಸಂಘಟಿಸುವ ಜವಾಬ್ದಾರಿ ಹೊತ್ತಿದ್ದ ಅಲಿ ನಾಫ್ ಅಯೌಬ್ ಅವರನ್ನು ಇಸ್ರೇಲ್ ಹತ್ಯೆ ಮಾಡಿದೆ.

ಇಸ್ರೇಲಿ ಪಡೆಗಳು ಮಿಲಿಟರಿ ಉಪಕರಣಗಳು ಮತ್ತು ವಾಹನಗಳೊಂದಿಗೆ ಲೆಬನಾನ್‌ನ ಗಡಿಯ ಸಮೀಪದಲ್ಲಿ ಜಮಾಯಿಸಿದೆ. ಇದರಿಂದ ಸಂಭಾವ್ಯ ನೆಲ ಆಕ್ರಮಣದ ಆತಂಕ ಹೆಚ್ಚಾಗಿದೆ.

ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಡೆಸುತ್ತಿದ್ದಂತೆ ಸುಮಾರು 30 ಸಾವಿರ ಜನರು ಸಿರಿಯಾದತ್ತ ಪಲಾಯನ ಮಾಡಿದ್ದಾರೆ ಎಂದು ಸೆಪ್ಟೆಂಬರ್ 27ರಂದು ಅಲ್‌-ಜಝೀರಾ ವರದಿ ಮಾಡಿತ್ತು. ಆ ಸಂಖ್ಯೆ ಈಗ ಹೆಚ್ಚಾಗಿರಬಹುದು.

ಈ ನಡುವೆ ಇಸ್ರೇಲ್ ಗಾಝಾ ಪಟ್ಟಿಯಾದ್ಯಂತ ತನ್ನ ದಾಳಿಯನ್ನು ಮುಂದುವರೆಸಿದೆ, ಇತ್ತೀಚಿನ ಕೊನೆಯ ದಾಳಿಯಲ್ಲಿ ಕನಿಷ್ಠ 28 ಜನರನ್ನು ಹತ್ಯೆ ಮಾಡಿದೆ.

ಇಸ್ರೇಲಿ ವಾಯುಪಡೆಯು ಯೆಮೆನ್‌ನ ಬಂದರು ನಗರಗಳಾದ ಹುದೈದ ಮತ್ತು ರಾಸ್ ಇಸಾದಲ್ಲಿನ ವಿದ್ಯುತ್ ಸ್ಥಾವರ ಮತ್ತು ಬಂದರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ 7ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಿಂದ ಇದುವರೆಗೆ 41,595 ಜನರು ಸಾವನ್ನಪ್ಪಿದ್ದಾರೆ ಮತ್ತು 96,251 ಜನರು ಗಾಯಗೊಂಡಿದ್ದಾರೆ. ಇಸ್ರೇಲ್‌ ರಾಜಧಾನಿ ಟೆಲ್ ಅವೀವ್ ನಗರದ ಮೇಲೆ ಅಕ್ಟೋಬರ್ 7,2023ರಂದು ಹಮಾಸ್ ನಡೆಸಿದ ದಾಳಿಯಲ್ಲಿ 1,139 ಜನರು ಬಲಿಯಾಗಿದ್ದರು. 200ಕ್ಕೂ ಅಧಿಕ ಜನರನ್ನು ಹಮಾಸ್ ಒತ್ತೆಯಾಳಗಿಟ್ಟುಕೊಂಡಿತ್ತು.

ಇದನ್ನೂ ಓದಿ : ಓಶೋ ರಜನೀಶ್ ಆರಾಧನೆಯಲ್ಲಿ ಅನುಭವಿಸಿದ ಲೈಂಗಿಕ ಆಘಾತವನ್ನು ವಿವರಿಸಿದ ಯುಕೆ ಮಹಿಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...