Homeಮುಖಪುಟಯೆಮನ್‌ಗೆ ವಿಸ್ತರಣೆಗೊಂಡ ಇಸ್ರೇಲ್ ಆಕ್ರಮಣ : ಸಿರಿಯಾದತ್ತ ಜನರ ಪಲಾಯನ

ಯೆಮನ್‌ಗೆ ವಿಸ್ತರಣೆಗೊಂಡ ಇಸ್ರೇಲ್ ಆಕ್ರಮಣ : ಸಿರಿಯಾದತ್ತ ಜನರ ಪಲಾಯನ

- Advertisement -
- Advertisement -

ಗಾಝಾ, ಲೆಬನಾನ್ ಬಳಿಕ ಇಸ್ರೇಲ್ ಆಕ್ರಮಣ ಯೆಮನ್‌ಗೆ ವಿಸ್ತರಣೆಗೊಂಡಿದೆ. ಲೆಬನಾನ್‌ನಲ್ಲಿ ನೆಲ ಕಾರ್ಯಾಚರಣೆ (Ground Operation)ಗೆ ಸಜ್ಜಾಗಿರುವ ಇಸ್ರೇಲ್ ಸೇನೆ, ಯೆಮನ್‌ನ ವಿದ್ಯುತ್ ಸ್ಥಾವರ ಮತ್ತು ಬಂದರನ್ನು ಗುರಿಯಾಗಿಸಿ ದಾಳಿ ನಡೆಸಿದೆ.

ಇತ್ತೀಚಿನ ವರದಿಗಳ ಪ್ರಕಾರ, ಇಸ್ರೇಲ್‌ ಸೇನೆ ಲೆಬನಾನ್‌ನ ರಾಜಧಾನಿ ಬೈರುತ್‌ನ ಕೋಲಾ ಪ್ರದೇಶದ ಮೇಲೆ ಬಾಂಬ್ ದಾಳಿ ಮಾಡಿದೆ. ಇದು ಲೆಬನಾನ್‌ನ ರಾಜಧಾನಿ ಮೇಲಿನ ಮೊದಲ ದಾಳಿಯಾಗಿದೆ. ಇದಕ್ಕೂ ಮುನ್ನ ಬೈರುತ್‌ನ ಹೊರವಲಯದ ದಕ್ಷಿಣ ಉಪನಗರಗಳ ಮೇಲೆ ದಾಳಿ ನಡೆಸಿತ್ತು.

ಕಳೆದ 24 ಗಂಟೆಯಲ್ಲಿ ಇಸ್ರೇಲ್‌ ದಾಳಿಗಳಿಂದ 105 ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ಹೇಳಿದೆ. ವರದಿಗಳ ಪ್ರಕಾರ, ಇಸ್ರೇಲ್ ಸೇನೆಯ ಜೆಟ್‌ ವಿಮಾನಗಳು ದೇಶದಾದ್ಯಂತ ವಿವಿದೆಡೆ ತಡೆರಹಿತ ಬಾಂಬ್ ದಾಳಿಯನ್ನು ಮುಂದುವರೆಸಿವೆ.

ಕಳೆದ ಎರಡು ದಿನಗಳಲ್ಲಿ ಹೆಜ್ಬುಲ್ಲಾದ ಪರಮೋನ್ನತ ನಾಯಕ ಹಸ್ಸನ್ ನಸ್ರಲ್ಲಾ, ಹೆಜ್ಬುಲ್ಲಾದ ಸೌತ್ ಫ್ರಂಟ್‌ನ ಕಮಾಂಡರ್ ಅಲಿ ಕರ್ಕಿ, ನಸ್ರಲ್ಲಾ ಅವರ ಭದ್ರತಾ ಘಟಕದ ಮುಖ್ಯಸ್ಥ ಇಬ್ರಾಹಿಂ ಹುಸೇನ್ ಜಾಜಿನಿ, ನಸ್ರಲ್ಲಾ ಅವರ ದೀರ್ಘಾವಧಿಯ ವಿಶ್ವಾಸಾರ್ಹ ಜೊತೆಗಾರ ಮತ್ತು ಹೆಜ್ಬುಲ್ಲಾ ಚಟುವಟಿಕೆಗಳ ಸಲಹೆಗಾರ ಸಮೀರ್ ತೌಫಿಕ್ ದಿಬ್, ಹೆಜ್ಬುಲ್ಲಾದ ಫೋರ್ಸ್-ಬಿಲ್ಡ್ ಅಪ್ ಮುಖ್ಯಸ್ಥ ಅಬೇದ್ ಅಲ್-ಅಮೀರ್ ಮುಹಮ್ಮದ್ ಸಬ್ಲಿನಿ, ಹೆಜ್ಬುಲ್ಲಾದ ಫೈರ್‌ಪವರ್ ಅನ್ನು ಸಂಘಟಿಸುವ ಜವಾಬ್ದಾರಿ ಹೊತ್ತಿದ್ದ ಅಲಿ ನಾಫ್ ಅಯೌಬ್ ಅವರನ್ನು ಇಸ್ರೇಲ್ ಹತ್ಯೆ ಮಾಡಿದೆ.

ಇಸ್ರೇಲಿ ಪಡೆಗಳು ಮಿಲಿಟರಿ ಉಪಕರಣಗಳು ಮತ್ತು ವಾಹನಗಳೊಂದಿಗೆ ಲೆಬನಾನ್‌ನ ಗಡಿಯ ಸಮೀಪದಲ್ಲಿ ಜಮಾಯಿಸಿದೆ. ಇದರಿಂದ ಸಂಭಾವ್ಯ ನೆಲ ಆಕ್ರಮಣದ ಆತಂಕ ಹೆಚ್ಚಾಗಿದೆ.

ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಡೆಸುತ್ತಿದ್ದಂತೆ ಸುಮಾರು 30 ಸಾವಿರ ಜನರು ಸಿರಿಯಾದತ್ತ ಪಲಾಯನ ಮಾಡಿದ್ದಾರೆ ಎಂದು ಸೆಪ್ಟೆಂಬರ್ 27ರಂದು ಅಲ್‌-ಜಝೀರಾ ವರದಿ ಮಾಡಿತ್ತು. ಆ ಸಂಖ್ಯೆ ಈಗ ಹೆಚ್ಚಾಗಿರಬಹುದು.

ಈ ನಡುವೆ ಇಸ್ರೇಲ್ ಗಾಝಾ ಪಟ್ಟಿಯಾದ್ಯಂತ ತನ್ನ ದಾಳಿಯನ್ನು ಮುಂದುವರೆಸಿದೆ, ಇತ್ತೀಚಿನ ಕೊನೆಯ ದಾಳಿಯಲ್ಲಿ ಕನಿಷ್ಠ 28 ಜನರನ್ನು ಹತ್ಯೆ ಮಾಡಿದೆ.

ಇಸ್ರೇಲಿ ವಾಯುಪಡೆಯು ಯೆಮೆನ್‌ನ ಬಂದರು ನಗರಗಳಾದ ಹುದೈದ ಮತ್ತು ರಾಸ್ ಇಸಾದಲ್ಲಿನ ವಿದ್ಯುತ್ ಸ್ಥಾವರ ಮತ್ತು ಬಂದರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ 7ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಿಂದ ಇದುವರೆಗೆ 41,595 ಜನರು ಸಾವನ್ನಪ್ಪಿದ್ದಾರೆ ಮತ್ತು 96,251 ಜನರು ಗಾಯಗೊಂಡಿದ್ದಾರೆ. ಇಸ್ರೇಲ್‌ ರಾಜಧಾನಿ ಟೆಲ್ ಅವೀವ್ ನಗರದ ಮೇಲೆ ಅಕ್ಟೋಬರ್ 7,2023ರಂದು ಹಮಾಸ್ ನಡೆಸಿದ ದಾಳಿಯಲ್ಲಿ 1,139 ಜನರು ಬಲಿಯಾಗಿದ್ದರು. 200ಕ್ಕೂ ಅಧಿಕ ಜನರನ್ನು ಹಮಾಸ್ ಒತ್ತೆಯಾಳಗಿಟ್ಟುಕೊಂಡಿತ್ತು.

ಇದನ್ನೂ ಓದಿ : ಓಶೋ ರಜನೀಶ್ ಆರಾಧನೆಯಲ್ಲಿ ಅನುಭವಿಸಿದ ಲೈಂಗಿಕ ಆಘಾತವನ್ನು ವಿವರಿಸಿದ ಯುಕೆ ಮಹಿಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...