Homeಮುಖಪುಟಯೆಮನ್‌ಗೆ ವಿಸ್ತರಣೆಗೊಂಡ ಇಸ್ರೇಲ್ ಆಕ್ರಮಣ : ಸಿರಿಯಾದತ್ತ ಜನರ ಪಲಾಯನ

ಯೆಮನ್‌ಗೆ ವಿಸ್ತರಣೆಗೊಂಡ ಇಸ್ರೇಲ್ ಆಕ್ರಮಣ : ಸಿರಿಯಾದತ್ತ ಜನರ ಪಲಾಯನ

- Advertisement -
- Advertisement -

ಗಾಝಾ, ಲೆಬನಾನ್ ಬಳಿಕ ಇಸ್ರೇಲ್ ಆಕ್ರಮಣ ಯೆಮನ್‌ಗೆ ವಿಸ್ತರಣೆಗೊಂಡಿದೆ. ಲೆಬನಾನ್‌ನಲ್ಲಿ ನೆಲ ಕಾರ್ಯಾಚರಣೆ (Ground Operation)ಗೆ ಸಜ್ಜಾಗಿರುವ ಇಸ್ರೇಲ್ ಸೇನೆ, ಯೆಮನ್‌ನ ವಿದ್ಯುತ್ ಸ್ಥಾವರ ಮತ್ತು ಬಂದರನ್ನು ಗುರಿಯಾಗಿಸಿ ದಾಳಿ ನಡೆಸಿದೆ.

ಇತ್ತೀಚಿನ ವರದಿಗಳ ಪ್ರಕಾರ, ಇಸ್ರೇಲ್‌ ಸೇನೆ ಲೆಬನಾನ್‌ನ ರಾಜಧಾನಿ ಬೈರುತ್‌ನ ಕೋಲಾ ಪ್ರದೇಶದ ಮೇಲೆ ಬಾಂಬ್ ದಾಳಿ ಮಾಡಿದೆ. ಇದು ಲೆಬನಾನ್‌ನ ರಾಜಧಾನಿ ಮೇಲಿನ ಮೊದಲ ದಾಳಿಯಾಗಿದೆ. ಇದಕ್ಕೂ ಮುನ್ನ ಬೈರುತ್‌ನ ಹೊರವಲಯದ ದಕ್ಷಿಣ ಉಪನಗರಗಳ ಮೇಲೆ ದಾಳಿ ನಡೆಸಿತ್ತು.

ಕಳೆದ 24 ಗಂಟೆಯಲ್ಲಿ ಇಸ್ರೇಲ್‌ ದಾಳಿಗಳಿಂದ 105 ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ಹೇಳಿದೆ. ವರದಿಗಳ ಪ್ರಕಾರ, ಇಸ್ರೇಲ್ ಸೇನೆಯ ಜೆಟ್‌ ವಿಮಾನಗಳು ದೇಶದಾದ್ಯಂತ ವಿವಿದೆಡೆ ತಡೆರಹಿತ ಬಾಂಬ್ ದಾಳಿಯನ್ನು ಮುಂದುವರೆಸಿವೆ.

ಕಳೆದ ಎರಡು ದಿನಗಳಲ್ಲಿ ಹೆಜ್ಬುಲ್ಲಾದ ಪರಮೋನ್ನತ ನಾಯಕ ಹಸ್ಸನ್ ನಸ್ರಲ್ಲಾ, ಹೆಜ್ಬುಲ್ಲಾದ ಸೌತ್ ಫ್ರಂಟ್‌ನ ಕಮಾಂಡರ್ ಅಲಿ ಕರ್ಕಿ, ನಸ್ರಲ್ಲಾ ಅವರ ಭದ್ರತಾ ಘಟಕದ ಮುಖ್ಯಸ್ಥ ಇಬ್ರಾಹಿಂ ಹುಸೇನ್ ಜಾಜಿನಿ, ನಸ್ರಲ್ಲಾ ಅವರ ದೀರ್ಘಾವಧಿಯ ವಿಶ್ವಾಸಾರ್ಹ ಜೊತೆಗಾರ ಮತ್ತು ಹೆಜ್ಬುಲ್ಲಾ ಚಟುವಟಿಕೆಗಳ ಸಲಹೆಗಾರ ಸಮೀರ್ ತೌಫಿಕ್ ದಿಬ್, ಹೆಜ್ಬುಲ್ಲಾದ ಫೋರ್ಸ್-ಬಿಲ್ಡ್ ಅಪ್ ಮುಖ್ಯಸ್ಥ ಅಬೇದ್ ಅಲ್-ಅಮೀರ್ ಮುಹಮ್ಮದ್ ಸಬ್ಲಿನಿ, ಹೆಜ್ಬುಲ್ಲಾದ ಫೈರ್‌ಪವರ್ ಅನ್ನು ಸಂಘಟಿಸುವ ಜವಾಬ್ದಾರಿ ಹೊತ್ತಿದ್ದ ಅಲಿ ನಾಫ್ ಅಯೌಬ್ ಅವರನ್ನು ಇಸ್ರೇಲ್ ಹತ್ಯೆ ಮಾಡಿದೆ.

ಇಸ್ರೇಲಿ ಪಡೆಗಳು ಮಿಲಿಟರಿ ಉಪಕರಣಗಳು ಮತ್ತು ವಾಹನಗಳೊಂದಿಗೆ ಲೆಬನಾನ್‌ನ ಗಡಿಯ ಸಮೀಪದಲ್ಲಿ ಜಮಾಯಿಸಿದೆ. ಇದರಿಂದ ಸಂಭಾವ್ಯ ನೆಲ ಆಕ್ರಮಣದ ಆತಂಕ ಹೆಚ್ಚಾಗಿದೆ.

ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಡೆಸುತ್ತಿದ್ದಂತೆ ಸುಮಾರು 30 ಸಾವಿರ ಜನರು ಸಿರಿಯಾದತ್ತ ಪಲಾಯನ ಮಾಡಿದ್ದಾರೆ ಎಂದು ಸೆಪ್ಟೆಂಬರ್ 27ರಂದು ಅಲ್‌-ಜಝೀರಾ ವರದಿ ಮಾಡಿತ್ತು. ಆ ಸಂಖ್ಯೆ ಈಗ ಹೆಚ್ಚಾಗಿರಬಹುದು.

ಈ ನಡುವೆ ಇಸ್ರೇಲ್ ಗಾಝಾ ಪಟ್ಟಿಯಾದ್ಯಂತ ತನ್ನ ದಾಳಿಯನ್ನು ಮುಂದುವರೆಸಿದೆ, ಇತ್ತೀಚಿನ ಕೊನೆಯ ದಾಳಿಯಲ್ಲಿ ಕನಿಷ್ಠ 28 ಜನರನ್ನು ಹತ್ಯೆ ಮಾಡಿದೆ.

ಇಸ್ರೇಲಿ ವಾಯುಪಡೆಯು ಯೆಮೆನ್‌ನ ಬಂದರು ನಗರಗಳಾದ ಹುದೈದ ಮತ್ತು ರಾಸ್ ಇಸಾದಲ್ಲಿನ ವಿದ್ಯುತ್ ಸ್ಥಾವರ ಮತ್ತು ಬಂದರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ 7ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಿಂದ ಇದುವರೆಗೆ 41,595 ಜನರು ಸಾವನ್ನಪ್ಪಿದ್ದಾರೆ ಮತ್ತು 96,251 ಜನರು ಗಾಯಗೊಂಡಿದ್ದಾರೆ. ಇಸ್ರೇಲ್‌ ರಾಜಧಾನಿ ಟೆಲ್ ಅವೀವ್ ನಗರದ ಮೇಲೆ ಅಕ್ಟೋಬರ್ 7,2023ರಂದು ಹಮಾಸ್ ನಡೆಸಿದ ದಾಳಿಯಲ್ಲಿ 1,139 ಜನರು ಬಲಿಯಾಗಿದ್ದರು. 200ಕ್ಕೂ ಅಧಿಕ ಜನರನ್ನು ಹಮಾಸ್ ಒತ್ತೆಯಾಳಗಿಟ್ಟುಕೊಂಡಿತ್ತು.

ಇದನ್ನೂ ಓದಿ : ಓಶೋ ರಜನೀಶ್ ಆರಾಧನೆಯಲ್ಲಿ ಅನುಭವಿಸಿದ ಲೈಂಗಿಕ ಆಘಾತವನ್ನು ವಿವರಿಸಿದ ಯುಕೆ ಮಹಿಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...