Homeಮುಖಪುಟಯೆಮನ್‌ಗೆ ವಿಸ್ತರಣೆಗೊಂಡ ಇಸ್ರೇಲ್ ಆಕ್ರಮಣ : ಸಿರಿಯಾದತ್ತ ಜನರ ಪಲಾಯನ

ಯೆಮನ್‌ಗೆ ವಿಸ್ತರಣೆಗೊಂಡ ಇಸ್ರೇಲ್ ಆಕ್ರಮಣ : ಸಿರಿಯಾದತ್ತ ಜನರ ಪಲಾಯನ

- Advertisement -
- Advertisement -

ಗಾಝಾ, ಲೆಬನಾನ್ ಬಳಿಕ ಇಸ್ರೇಲ್ ಆಕ್ರಮಣ ಯೆಮನ್‌ಗೆ ವಿಸ್ತರಣೆಗೊಂಡಿದೆ. ಲೆಬನಾನ್‌ನಲ್ಲಿ ನೆಲ ಕಾರ್ಯಾಚರಣೆ (Ground Operation)ಗೆ ಸಜ್ಜಾಗಿರುವ ಇಸ್ರೇಲ್ ಸೇನೆ, ಯೆಮನ್‌ನ ವಿದ್ಯುತ್ ಸ್ಥಾವರ ಮತ್ತು ಬಂದರನ್ನು ಗುರಿಯಾಗಿಸಿ ದಾಳಿ ನಡೆಸಿದೆ.

ಇತ್ತೀಚಿನ ವರದಿಗಳ ಪ್ರಕಾರ, ಇಸ್ರೇಲ್‌ ಸೇನೆ ಲೆಬನಾನ್‌ನ ರಾಜಧಾನಿ ಬೈರುತ್‌ನ ಕೋಲಾ ಪ್ರದೇಶದ ಮೇಲೆ ಬಾಂಬ್ ದಾಳಿ ಮಾಡಿದೆ. ಇದು ಲೆಬನಾನ್‌ನ ರಾಜಧಾನಿ ಮೇಲಿನ ಮೊದಲ ದಾಳಿಯಾಗಿದೆ. ಇದಕ್ಕೂ ಮುನ್ನ ಬೈರುತ್‌ನ ಹೊರವಲಯದ ದಕ್ಷಿಣ ಉಪನಗರಗಳ ಮೇಲೆ ದಾಳಿ ನಡೆಸಿತ್ತು.

ಕಳೆದ 24 ಗಂಟೆಯಲ್ಲಿ ಇಸ್ರೇಲ್‌ ದಾಳಿಗಳಿಂದ 105 ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ಹೇಳಿದೆ. ವರದಿಗಳ ಪ್ರಕಾರ, ಇಸ್ರೇಲ್ ಸೇನೆಯ ಜೆಟ್‌ ವಿಮಾನಗಳು ದೇಶದಾದ್ಯಂತ ವಿವಿದೆಡೆ ತಡೆರಹಿತ ಬಾಂಬ್ ದಾಳಿಯನ್ನು ಮುಂದುವರೆಸಿವೆ.

ಕಳೆದ ಎರಡು ದಿನಗಳಲ್ಲಿ ಹೆಜ್ಬುಲ್ಲಾದ ಪರಮೋನ್ನತ ನಾಯಕ ಹಸ್ಸನ್ ನಸ್ರಲ್ಲಾ, ಹೆಜ್ಬುಲ್ಲಾದ ಸೌತ್ ಫ್ರಂಟ್‌ನ ಕಮಾಂಡರ್ ಅಲಿ ಕರ್ಕಿ, ನಸ್ರಲ್ಲಾ ಅವರ ಭದ್ರತಾ ಘಟಕದ ಮುಖ್ಯಸ್ಥ ಇಬ್ರಾಹಿಂ ಹುಸೇನ್ ಜಾಜಿನಿ, ನಸ್ರಲ್ಲಾ ಅವರ ದೀರ್ಘಾವಧಿಯ ವಿಶ್ವಾಸಾರ್ಹ ಜೊತೆಗಾರ ಮತ್ತು ಹೆಜ್ಬುಲ್ಲಾ ಚಟುವಟಿಕೆಗಳ ಸಲಹೆಗಾರ ಸಮೀರ್ ತೌಫಿಕ್ ದಿಬ್, ಹೆಜ್ಬುಲ್ಲಾದ ಫೋರ್ಸ್-ಬಿಲ್ಡ್ ಅಪ್ ಮುಖ್ಯಸ್ಥ ಅಬೇದ್ ಅಲ್-ಅಮೀರ್ ಮುಹಮ್ಮದ್ ಸಬ್ಲಿನಿ, ಹೆಜ್ಬುಲ್ಲಾದ ಫೈರ್‌ಪವರ್ ಅನ್ನು ಸಂಘಟಿಸುವ ಜವಾಬ್ದಾರಿ ಹೊತ್ತಿದ್ದ ಅಲಿ ನಾಫ್ ಅಯೌಬ್ ಅವರನ್ನು ಇಸ್ರೇಲ್ ಹತ್ಯೆ ಮಾಡಿದೆ.

ಇಸ್ರೇಲಿ ಪಡೆಗಳು ಮಿಲಿಟರಿ ಉಪಕರಣಗಳು ಮತ್ತು ವಾಹನಗಳೊಂದಿಗೆ ಲೆಬನಾನ್‌ನ ಗಡಿಯ ಸಮೀಪದಲ್ಲಿ ಜಮಾಯಿಸಿದೆ. ಇದರಿಂದ ಸಂಭಾವ್ಯ ನೆಲ ಆಕ್ರಮಣದ ಆತಂಕ ಹೆಚ್ಚಾಗಿದೆ.

ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಡೆಸುತ್ತಿದ್ದಂತೆ ಸುಮಾರು 30 ಸಾವಿರ ಜನರು ಸಿರಿಯಾದತ್ತ ಪಲಾಯನ ಮಾಡಿದ್ದಾರೆ ಎಂದು ಸೆಪ್ಟೆಂಬರ್ 27ರಂದು ಅಲ್‌-ಜಝೀರಾ ವರದಿ ಮಾಡಿತ್ತು. ಆ ಸಂಖ್ಯೆ ಈಗ ಹೆಚ್ಚಾಗಿರಬಹುದು.

ಈ ನಡುವೆ ಇಸ್ರೇಲ್ ಗಾಝಾ ಪಟ್ಟಿಯಾದ್ಯಂತ ತನ್ನ ದಾಳಿಯನ್ನು ಮುಂದುವರೆಸಿದೆ, ಇತ್ತೀಚಿನ ಕೊನೆಯ ದಾಳಿಯಲ್ಲಿ ಕನಿಷ್ಠ 28 ಜನರನ್ನು ಹತ್ಯೆ ಮಾಡಿದೆ.

ಇಸ್ರೇಲಿ ವಾಯುಪಡೆಯು ಯೆಮೆನ್‌ನ ಬಂದರು ನಗರಗಳಾದ ಹುದೈದ ಮತ್ತು ರಾಸ್ ಇಸಾದಲ್ಲಿನ ವಿದ್ಯುತ್ ಸ್ಥಾವರ ಮತ್ತು ಬಂದರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ 7ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಿಂದ ಇದುವರೆಗೆ 41,595 ಜನರು ಸಾವನ್ನಪ್ಪಿದ್ದಾರೆ ಮತ್ತು 96,251 ಜನರು ಗಾಯಗೊಂಡಿದ್ದಾರೆ. ಇಸ್ರೇಲ್‌ ರಾಜಧಾನಿ ಟೆಲ್ ಅವೀವ್ ನಗರದ ಮೇಲೆ ಅಕ್ಟೋಬರ್ 7,2023ರಂದು ಹಮಾಸ್ ನಡೆಸಿದ ದಾಳಿಯಲ್ಲಿ 1,139 ಜನರು ಬಲಿಯಾಗಿದ್ದರು. 200ಕ್ಕೂ ಅಧಿಕ ಜನರನ್ನು ಹಮಾಸ್ ಒತ್ತೆಯಾಳಗಿಟ್ಟುಕೊಂಡಿತ್ತು.

ಇದನ್ನೂ ಓದಿ : ಓಶೋ ರಜನೀಶ್ ಆರಾಧನೆಯಲ್ಲಿ ಅನುಭವಿಸಿದ ಲೈಂಗಿಕ ಆಘಾತವನ್ನು ವಿವರಿಸಿದ ಯುಕೆ ಮಹಿಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...