Homeಮುಖಪುಟಯೆಮನ್‌ಗೆ ವಿಸ್ತರಣೆಗೊಂಡ ಇಸ್ರೇಲ್ ಆಕ್ರಮಣ : ಸಿರಿಯಾದತ್ತ ಜನರ ಪಲಾಯನ

ಯೆಮನ್‌ಗೆ ವಿಸ್ತರಣೆಗೊಂಡ ಇಸ್ರೇಲ್ ಆಕ್ರಮಣ : ಸಿರಿಯಾದತ್ತ ಜನರ ಪಲಾಯನ

- Advertisement -
- Advertisement -

ಗಾಝಾ, ಲೆಬನಾನ್ ಬಳಿಕ ಇಸ್ರೇಲ್ ಆಕ್ರಮಣ ಯೆಮನ್‌ಗೆ ವಿಸ್ತರಣೆಗೊಂಡಿದೆ. ಲೆಬನಾನ್‌ನಲ್ಲಿ ನೆಲ ಕಾರ್ಯಾಚರಣೆ (Ground Operation)ಗೆ ಸಜ್ಜಾಗಿರುವ ಇಸ್ರೇಲ್ ಸೇನೆ, ಯೆಮನ್‌ನ ವಿದ್ಯುತ್ ಸ್ಥಾವರ ಮತ್ತು ಬಂದರನ್ನು ಗುರಿಯಾಗಿಸಿ ದಾಳಿ ನಡೆಸಿದೆ.

ಇತ್ತೀಚಿನ ವರದಿಗಳ ಪ್ರಕಾರ, ಇಸ್ರೇಲ್‌ ಸೇನೆ ಲೆಬನಾನ್‌ನ ರಾಜಧಾನಿ ಬೈರುತ್‌ನ ಕೋಲಾ ಪ್ರದೇಶದ ಮೇಲೆ ಬಾಂಬ್ ದಾಳಿ ಮಾಡಿದೆ. ಇದು ಲೆಬನಾನ್‌ನ ರಾಜಧಾನಿ ಮೇಲಿನ ಮೊದಲ ದಾಳಿಯಾಗಿದೆ. ಇದಕ್ಕೂ ಮುನ್ನ ಬೈರುತ್‌ನ ಹೊರವಲಯದ ದಕ್ಷಿಣ ಉಪನಗರಗಳ ಮೇಲೆ ದಾಳಿ ನಡೆಸಿತ್ತು.

ಕಳೆದ 24 ಗಂಟೆಯಲ್ಲಿ ಇಸ್ರೇಲ್‌ ದಾಳಿಗಳಿಂದ 105 ಜನರು ಸಾವನ್ನಪ್ಪಿದ್ದಾರೆ ಎಂದು ಲೆಬನಾನ್‌ನ ಆರೋಗ್ಯ ಸಚಿವಾಲಯ ಹೇಳಿದೆ. ವರದಿಗಳ ಪ್ರಕಾರ, ಇಸ್ರೇಲ್ ಸೇನೆಯ ಜೆಟ್‌ ವಿಮಾನಗಳು ದೇಶದಾದ್ಯಂತ ವಿವಿದೆಡೆ ತಡೆರಹಿತ ಬಾಂಬ್ ದಾಳಿಯನ್ನು ಮುಂದುವರೆಸಿವೆ.

ಕಳೆದ ಎರಡು ದಿನಗಳಲ್ಲಿ ಹೆಜ್ಬುಲ್ಲಾದ ಪರಮೋನ್ನತ ನಾಯಕ ಹಸ್ಸನ್ ನಸ್ರಲ್ಲಾ, ಹೆಜ್ಬುಲ್ಲಾದ ಸೌತ್ ಫ್ರಂಟ್‌ನ ಕಮಾಂಡರ್ ಅಲಿ ಕರ್ಕಿ, ನಸ್ರಲ್ಲಾ ಅವರ ಭದ್ರತಾ ಘಟಕದ ಮುಖ್ಯಸ್ಥ ಇಬ್ರಾಹಿಂ ಹುಸೇನ್ ಜಾಜಿನಿ, ನಸ್ರಲ್ಲಾ ಅವರ ದೀರ್ಘಾವಧಿಯ ವಿಶ್ವಾಸಾರ್ಹ ಜೊತೆಗಾರ ಮತ್ತು ಹೆಜ್ಬುಲ್ಲಾ ಚಟುವಟಿಕೆಗಳ ಸಲಹೆಗಾರ ಸಮೀರ್ ತೌಫಿಕ್ ದಿಬ್, ಹೆಜ್ಬುಲ್ಲಾದ ಫೋರ್ಸ್-ಬಿಲ್ಡ್ ಅಪ್ ಮುಖ್ಯಸ್ಥ ಅಬೇದ್ ಅಲ್-ಅಮೀರ್ ಮುಹಮ್ಮದ್ ಸಬ್ಲಿನಿ, ಹೆಜ್ಬುಲ್ಲಾದ ಫೈರ್‌ಪವರ್ ಅನ್ನು ಸಂಘಟಿಸುವ ಜವಾಬ್ದಾರಿ ಹೊತ್ತಿದ್ದ ಅಲಿ ನಾಫ್ ಅಯೌಬ್ ಅವರನ್ನು ಇಸ್ರೇಲ್ ಹತ್ಯೆ ಮಾಡಿದೆ.

ಇಸ್ರೇಲಿ ಪಡೆಗಳು ಮಿಲಿಟರಿ ಉಪಕರಣಗಳು ಮತ್ತು ವಾಹನಗಳೊಂದಿಗೆ ಲೆಬನಾನ್‌ನ ಗಡಿಯ ಸಮೀಪದಲ್ಲಿ ಜಮಾಯಿಸಿದೆ. ಇದರಿಂದ ಸಂಭಾವ್ಯ ನೆಲ ಆಕ್ರಮಣದ ಆತಂಕ ಹೆಚ್ಚಾಗಿದೆ.

ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಡೆಸುತ್ತಿದ್ದಂತೆ ಸುಮಾರು 30 ಸಾವಿರ ಜನರು ಸಿರಿಯಾದತ್ತ ಪಲಾಯನ ಮಾಡಿದ್ದಾರೆ ಎಂದು ಸೆಪ್ಟೆಂಬರ್ 27ರಂದು ಅಲ್‌-ಜಝೀರಾ ವರದಿ ಮಾಡಿತ್ತು. ಆ ಸಂಖ್ಯೆ ಈಗ ಹೆಚ್ಚಾಗಿರಬಹುದು.

ಈ ನಡುವೆ ಇಸ್ರೇಲ್ ಗಾಝಾ ಪಟ್ಟಿಯಾದ್ಯಂತ ತನ್ನ ದಾಳಿಯನ್ನು ಮುಂದುವರೆಸಿದೆ, ಇತ್ತೀಚಿನ ಕೊನೆಯ ದಾಳಿಯಲ್ಲಿ ಕನಿಷ್ಠ 28 ಜನರನ್ನು ಹತ್ಯೆ ಮಾಡಿದೆ.

ಇಸ್ರೇಲಿ ವಾಯುಪಡೆಯು ಯೆಮೆನ್‌ನ ಬಂದರು ನಗರಗಳಾದ ಹುದೈದ ಮತ್ತು ರಾಸ್ ಇಸಾದಲ್ಲಿನ ವಿದ್ಯುತ್ ಸ್ಥಾವರ ಮತ್ತು ಬಂದರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ.

ಕಳೆದ ವರ್ಷದ ಅಕ್ಟೋಬರ್ 7ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಿಂದ ಇದುವರೆಗೆ 41,595 ಜನರು ಸಾವನ್ನಪ್ಪಿದ್ದಾರೆ ಮತ್ತು 96,251 ಜನರು ಗಾಯಗೊಂಡಿದ್ದಾರೆ. ಇಸ್ರೇಲ್‌ ರಾಜಧಾನಿ ಟೆಲ್ ಅವೀವ್ ನಗರದ ಮೇಲೆ ಅಕ್ಟೋಬರ್ 7,2023ರಂದು ಹಮಾಸ್ ನಡೆಸಿದ ದಾಳಿಯಲ್ಲಿ 1,139 ಜನರು ಬಲಿಯಾಗಿದ್ದರು. 200ಕ್ಕೂ ಅಧಿಕ ಜನರನ್ನು ಹಮಾಸ್ ಒತ್ತೆಯಾಳಗಿಟ್ಟುಕೊಂಡಿತ್ತು.

ಇದನ್ನೂ ಓದಿ : ಓಶೋ ರಜನೀಶ್ ಆರಾಧನೆಯಲ್ಲಿ ಅನುಭವಿಸಿದ ಲೈಂಗಿಕ ಆಘಾತವನ್ನು ವಿವರಿಸಿದ ಯುಕೆ ಮಹಿಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...