Homeಮುಖಪುಟಪ್ಯಾಲೆಸ್ತೀನ್‌ಗೆ ನೆರವಾಗುವ UNRWA ನಿಷೇಧಕ್ಕೆ ಕಾನೂನು ಅಂಗೀಕರಿಸಿದ ಇಸ್ರೇಲ್

ಪ್ಯಾಲೆಸ್ತೀನ್‌ಗೆ ನೆರವಾಗುವ UNRWA ನಿಷೇಧಕ್ಕೆ ಕಾನೂನು ಅಂಗೀಕರಿಸಿದ ಇಸ್ರೇಲ್

UNRWA 'ಭಯೋತ್ಪಾದಕ ಗುಂಪು' ಎಂದು ಘೋಷಿಸಿ ಮಸೂದೆ ಅಂಗೀಕಾರ

- Advertisement -
- Advertisement -

ಪ್ಯಾಲೆಸ್ತೀನ್ ನಿರಾಶ್ರಿತರಿಗಾಗಿ ಕೆಲಸ ಮಾಡುವ ‘ವಿಶ್ವಸಂಸ್ಥೆಯ ಪರಿಹಾರ ಮತ್ತು ಕಾರ್ಯಗಳ ಸಂಸ್ಥೆ’ United Nations Relief and Works Agency for Palestine Refugees (UNRWA)ಯನ್ನು ಇಸ್ರೇಲ್‌ ಭೂಪ್ರದೇಶ ಮತ್ತು ಇಸ್ರೇಲ್ ನಿಯಂತ್ರಣದಲ್ಲಿರುವ ಪ್ರದೇಶಗಳಲ್ಲಿ ನಿಷೇಧಿಸುವ ಎರಡು ವಿವಾದಾತ್ಮಕ ಮಸೂದೆಗಳನ್ನು ಇಸ್ರೇಲ್ ಸಂಸತ್ತು ಸೋಮವಾರ (ಅ.28) ಅಂಗೀಕರಿಸಿದೆ.

ಇದರಿಂದ ಗಾಝಾದಲ್ಲಿ ನಿರಾಶ್ರಿತರಿಗೆ ನೀಡಲಾಗುತ್ತಿರುವ ನೆರವಿನ ಮೇಲೆ ಪರಿಣಾಮ ಬೀರಲಿದೆ. ಗಾಝಾದ ಜನತೆ ಈಗಾಗಲೇ ನರಕ ಅನುಭವಿಸುತ್ತಿದ್ದು, ಮಾನವೀಯ ಬಿಕ್ಕಟ್ಟು ಇನ್ನಷ್ಟು ಉಲ್ಬಣಗೊಳ್ಳಬಹುದು ಎಂದು ಮಾಧ್ಯಮ ವರದಿಗಳು ಅಭಿಪ್ರಾಯಪಟ್ಟಿವೆ.

ನಿಷೇಧವು ಮುಂದಿನ 90 ದಿನಗಳಲ್ಲಿ ಜಾರಿಗೆ ಬರಲಿದೆ. ಇದು ಆಕ್ರಮಿತ ಪೂರ್ವ ಜೆರುಸಲೆಮ್ ಸೇರಿದಂತೆ ವೆಸ್ಟ್ ಬ್ಯಾಂಕ್‌ನ ಆಕ್ರಮಿತ ಪ್ಯಾಲೆಸ್ತೀನ್‌ ಪ್ರದೇಶದಲ್ಲಿ UNRWA ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಿದೆ. ಈ ಮೂಲಕ 1949ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ನಿಗದಿಪಡಿಸಿದ ಗುರಿ ತಲುಪಲು ಅಡಚಣೆಯಾಗಲಿದೆ.

UNRWA ಗಾಝಾದಲ್ಲಿ ತಮ್ಮದೆಲ್ಲವನ್ನೂ ಕಳೆದುಕೊಂಡು ಕೈಚೆಲ್ಲಿ ಕುಳಿತಿರುವ ಜನರಿಗೆ ಮಾನವೀಯ ಸಹಾಯವನ್ನು ಒದಗಿಸುವ ಪ್ರಮುಖ ಸಂಸ್ಥೆಯಾಗಿದೆ. ಕಳೆದು ಒಂದು ವರ್ಷದಿಂದ ಗಾಝಾದಲ್ಲಿ ನಿರಂತರವಾಗಿ ಮಾರಣಹೋಮ ನಡೆಸುತ್ತಿರುವ ಇಸ್ರೇಲ್, ಆರಂಭದಿಂದಲೂ UNRWA ಮೇಲೆ ಕಣ್ಣಿಟ್ಟಿದೆ. ಅದರ ನೂರಾರು ಸ್ವಯಂ ಸೇವಕರನ್ನು ಇದುವರೆಗೆ ಕೊಂದು ಹಾಕಿದೆ.

UNRWAಗೆ ಸಂಬಂಧಿಸಿದಂತೆ ಒಟ್ಟು ಎರಡು ಮಸೂದೆಗಳನ್ನು ಇಸ್ರೇಲ್ ಸಂಸತ್ ಅಂಗೀಕರಿಸಿದೆ. ಈ ಪೈಕಿ ಮೊದಲನೆಯದ್ದು ಇಸ್ರೇಲ್ ಭೂ ಪ್ರದೇಶ ಮತ್ತು ಅದರ ಹಿಡಿತದಲ್ಲಿರುವ ಪ್ರದೇಶಗಳಲ್ಲಿ
UNRWA ಚಟುವಟಿಕೆಗಳನ್ನು ನಿಷೇಧಿಸುವುದು. ಮತ್ತೊಂದು UNRWA ಅನ್ನು ‘ಭಯೋತ್ಪಾದಕ ಗುಂಪು’ ಎಂದು ಘೋಷಿಸಿ, ಅದರೊಂದಿಗೆ ಇಸ್ರೇಲ್ ಏಜೆನ್ಸಿಗಳು ಯಾವುದೇ ಸಂಪರ್ಕ ಇಟ್ಟುಕೊಳ್ಳುವುದನ್ನು ನಿಷೇಧಿಸುವುದು.

ಇದನ್ನೂ ಓದಿ : ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಎಕ್ಸ್ ಖಾತೆ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...