Homeಅಂತರಾಷ್ಟ್ರೀಯಇಸ್ರೇಲ್‌ ಕೊಟ್ಟಿರುವ ಸ್ಥಳಾಂತರ ಆದೇಶ ಅತ್ಯಂತ ಅಪಾಯಕಾರಿ: ಯುಎನ್ ಮುಖ್ಯಸ್ಥ ಗುಟೆರಸ್

ಇಸ್ರೇಲ್‌ ಕೊಟ್ಟಿರುವ ಸ್ಥಳಾಂತರ ಆದೇಶ ಅತ್ಯಂತ ಅಪಾಯಕಾರಿ: ಯುಎನ್ ಮುಖ್ಯಸ್ಥ ಗುಟೆರಸ್

- Advertisement -
- Advertisement -

ಉತ್ತರ ಗಾಝಾದಲ್ಲಿ 1 ಮಿಲಿಯನ್‌ಗಿಂತಲೂ ಹೆಚ್ಚು ಜನರು 24 ಗಂಟೆಗಳ ಒಳಗೆ ಸ್ಥಳಾಂತರಗೊಳ್ಳಬೇಕು ಎಂಬ ಇಸ್ರೇಲ್‌ ಕೊಟ್ಟಿರುವ ಗಡುವು ಅತ್ಯಂತ ಅಪಾಯಕಾರಿ, ಸಾಮಾನ್ಯವಾಗಿ ಇದು ಅಸಾಧ್ಯ ಎಂದು ಯುಎನ್ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ.

ಯುದ್ಧಗಳು ಸಹ ನಿಯಮಗಳನ್ನು ಹೊಂದಿವೆ. ಉತ್ತರ ಗಾಜಾದ ಸುಮಾರು 1.1 ಮಿಲಿಯನ್ ಜನಸಂಖ್ಯೆಯು ಮುಂದಿನ 24 ಗಂಟೆಗಳ ಒಳಗೆ ದಕ್ಷಿಣ ಭಾಗಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಇಸ್ರೇಲಿ ಮಿಲಿಟರಿಯಲ್ಲಿನ ಅಧಿಕಾರಿಗಳು ಹೇಳಿದ್ದಾರೆ.

ಇದು ಶಾಲೆಗಳು, ಆರೋಗ್ಯ ಕೇಂದ್ರಗಳು ಮತ್ತು ಚಿಕಿತ್ಸಾಲಯಗಳು ಸೇರಿದಂತೆ ಅಲ್ಲಿರುವ ಎಲ್ಲಾ UN ಸಿಬ್ಬಂದಿಗೆ ಮತ್ತು UN ಸೌಲಭ್ಯಗಳಡಿ ಆಶ್ರಯ ಪಡೆದವರಿಗೆ  ಅನ್ವಯಿಸಲಿದೆ.

ಇಡೀ ಭೂಪ್ರದೇಶವು ಆಕ್ರಮಣದಲ್ಲಿರುವಾಗ ಆಹಾರ, ನೀರು ಅಥವಾ ವಸತಿ ಇಲ್ಲದ ಸ್ಥಳಕ್ಕೆ ಒಂದು ದಶಲಕ್ಷಕ್ಕೂ ಹೆಚ್ಚು ಜನರನ್ನು ಜನನಿಬಿಡ ಯುದ್ಧ ವಲಯದಲ್ಲಿ ಸ್ಥಳಾಂತರಿಸುವುದು ಅತ್ಯಂತ ಅಪಾಯಕಾರಿ ಮತ್ತು ಇದು ಸಾಧ್ಯವಿಲ್ಲ ಎಂದು ಗುಟೆರಸ್ ಹೇಳಿದ್ದಾರೆ.

ಯುಎನ್ ಸೆಕ್ರೆಟರಿ ಜನರಲ್ ಅವರು ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿಯ ಕುರಿತು ಭದ್ರತಾ ಮಂಡಳಿಯ ಸಭೆಯ ಮೊದಲು ಈ ಹೇಳಿಕೆಯನ್ನು ನೀಡಿದ್ದಾರೆ.

ವೈಮಾನಿಕ ದಾಳಿಯ ನಂತರ, ಇಸ್ರೇಲಿ ರಕ್ಷಣಾ ಪಡೆಗಳು ಗಾಜಾ ಮತ್ತು ಅದರ ಸುತ್ತಮುತ್ತಲಿನ ಪ್ಯಾಲೆಸ್ತೀನಿಯನ್ನರಿಗೆ ದಕ್ಷಿಣ ಪ್ರಾಂತ್ಯಕ್ಕೆ ತೆರವಿಗೆ ಆದೇಶಿಸಿವೆ.

ಈ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದ ಯುಎನ್ ಮುಖ್ಯಸ್ಥರು,  ಗಾಜಾದ ದಕ್ಷಿಣದಲ್ಲಿರುವ ಆಸ್ಪತ್ರೆಗಳು ಈಗಾಗಲೇ ಸಾಮರ್ಥ್ಯ ಮೀರಿದೆ ಮತ್ತು ಉತ್ತರದಿಂದ ಸಾವಿರಾರು ಹೊಸ ರೋಗಿಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ. ಆರೋಗ್ಯ ವ್ಯವಸ್ಥೆಯು ಪತನದ ಅಂಚಿನಲ್ಲಿದೆ ಮತ್ತು ಶವಾಗಾರಗಳು ತುಂಬಿ ತುಳುಕುತ್ತಿವೆ ಎಂದು ಅವರು ಹೇಳಿದ್ದಾರೆ.

ಗಾಜಾದಲ್ಲಿನ ಪರಿಸ್ಥಿತಿಯು ಅಪಾಯಕಾರಿ ಎಂದು ವಿವರಿಸಿದ ಅವರು ಮೂಲಸೌಕರ್ಯಗಳು ಹಾನಿಗೊಳಗಾಗಿರುವುದರಿಂದ ಮತ್ತು ವಿದ್ಯುತ್ ಇಲ್ಲದಿರುವುದರಿಂದ ಇಡೀ ಪ್ರದೇಶವು ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಹೇಳಿದರು.

ಯುದ್ಧಗಳು ಸಹ ನಿಯಮಗಳನ್ನು ಹೊಂದಿವೆ ಎಂದು ಪ್ರತಿಪಾದಿಸಿದ ಗುಟೆರೆಸ್, ಯುಎನ್‌ಗೆ ಅಗತ್ಯವಿರುವ ಪ್ರತಿಯೊಬ್ಬರಿಗೂ ಇಂಧನ, ಆಹಾರ ಮತ್ತು ನೀರು ಪಡೆಯಲು ಗಾಜಾದಾದ್ಯಂತ ಮಾನವೀಯ ಪ್ರವೇಶದ ತಕ್ಷಣದ ಅವಶ್ಯಕತೆಯಿದೆ ಎಂದು ಹೇಳಿದರು.

ನಾಗರಿಕರನ್ನು ರಕ್ಷಿಸಬೇಕು, ಗಾಜಾದಲ್ಲಿರುವ ಎಲ್ಲಾ ಒತ್ತೆಯಾಳುಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ತೆರವು ಕುರಿತ ಅಂತಹ ಯಾವುದೇ ಆದೇಶವನ್ನು ರದ್ದುಗೊಳಿಸಬೇಕೆಂದು ನಾವು ಬಲವಾಗಿ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ನಮ್ಮ ಪ್ರಧಾನ ಕಾರ್ಯದರ್ಶಿ ಮತ್ತು ಅವರ ತಂಡವು ಫೋನ್‌ಗಳಲ್ಲಿ ಕೆಲಸ ಮಾಡುತ್ತಿದೆ ಮತ್ತು ಅವರು ಇಸ್ರೇಲಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಮಾನವೀಯ ದುರಂತವನ್ನು ತಪ್ಪಿಸಲು ಅವರನ್ನು ಒತ್ತಾಯಿಸಲಾಗಿದೆ ಎಂದು ಗುಟೆರೆಸ್ ಅವರ ವಕ್ತಾರ ಡುಜಾರಿಕ್ ಹೇಳಿದ್ದಾರೆ.

ಇದನ್ನು ಓದಿ: ಪಾಸ್‌ಪೋರ್ಟ್ ಹಗರಣ: 50 ಸ್ಥಳಗಳಲ್ಲಿ ಸಿಬಿಐ ಶೋಧ; 24 ಮಂದಿ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...