Homeಅಂತರಾಷ್ಟ್ರೀಯಇಸ್ರೇಲ್‌ ಕೊಟ್ಟಿರುವ ಸ್ಥಳಾಂತರ ಆದೇಶ ಅತ್ಯಂತ ಅಪಾಯಕಾರಿ: ಯುಎನ್ ಮುಖ್ಯಸ್ಥ ಗುಟೆರಸ್

ಇಸ್ರೇಲ್‌ ಕೊಟ್ಟಿರುವ ಸ್ಥಳಾಂತರ ಆದೇಶ ಅತ್ಯಂತ ಅಪಾಯಕಾರಿ: ಯುಎನ್ ಮುಖ್ಯಸ್ಥ ಗುಟೆರಸ್

- Advertisement -
- Advertisement -

ಉತ್ತರ ಗಾಝಾದಲ್ಲಿ 1 ಮಿಲಿಯನ್‌ಗಿಂತಲೂ ಹೆಚ್ಚು ಜನರು 24 ಗಂಟೆಗಳ ಒಳಗೆ ಸ್ಥಳಾಂತರಗೊಳ್ಳಬೇಕು ಎಂಬ ಇಸ್ರೇಲ್‌ ಕೊಟ್ಟಿರುವ ಗಡುವು ಅತ್ಯಂತ ಅಪಾಯಕಾರಿ, ಸಾಮಾನ್ಯವಾಗಿ ಇದು ಅಸಾಧ್ಯ ಎಂದು ಯುಎನ್ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ.

ಯುದ್ಧಗಳು ಸಹ ನಿಯಮಗಳನ್ನು ಹೊಂದಿವೆ. ಉತ್ತರ ಗಾಜಾದ ಸುಮಾರು 1.1 ಮಿಲಿಯನ್ ಜನಸಂಖ್ಯೆಯು ಮುಂದಿನ 24 ಗಂಟೆಗಳ ಒಳಗೆ ದಕ್ಷಿಣ ಭಾಗಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಇಸ್ರೇಲಿ ಮಿಲಿಟರಿಯಲ್ಲಿನ ಅಧಿಕಾರಿಗಳು ಹೇಳಿದ್ದಾರೆ.

ಇದು ಶಾಲೆಗಳು, ಆರೋಗ್ಯ ಕೇಂದ್ರಗಳು ಮತ್ತು ಚಿಕಿತ್ಸಾಲಯಗಳು ಸೇರಿದಂತೆ ಅಲ್ಲಿರುವ ಎಲ್ಲಾ UN ಸಿಬ್ಬಂದಿಗೆ ಮತ್ತು UN ಸೌಲಭ್ಯಗಳಡಿ ಆಶ್ರಯ ಪಡೆದವರಿಗೆ  ಅನ್ವಯಿಸಲಿದೆ.

ಇಡೀ ಭೂಪ್ರದೇಶವು ಆಕ್ರಮಣದಲ್ಲಿರುವಾಗ ಆಹಾರ, ನೀರು ಅಥವಾ ವಸತಿ ಇಲ್ಲದ ಸ್ಥಳಕ್ಕೆ ಒಂದು ದಶಲಕ್ಷಕ್ಕೂ ಹೆಚ್ಚು ಜನರನ್ನು ಜನನಿಬಿಡ ಯುದ್ಧ ವಲಯದಲ್ಲಿ ಸ್ಥಳಾಂತರಿಸುವುದು ಅತ್ಯಂತ ಅಪಾಯಕಾರಿ ಮತ್ತು ಇದು ಸಾಧ್ಯವಿಲ್ಲ ಎಂದು ಗುಟೆರಸ್ ಹೇಳಿದ್ದಾರೆ.

ಯುಎನ್ ಸೆಕ್ರೆಟರಿ ಜನರಲ್ ಅವರು ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿಯ ಕುರಿತು ಭದ್ರತಾ ಮಂಡಳಿಯ ಸಭೆಯ ಮೊದಲು ಈ ಹೇಳಿಕೆಯನ್ನು ನೀಡಿದ್ದಾರೆ.

ವೈಮಾನಿಕ ದಾಳಿಯ ನಂತರ, ಇಸ್ರೇಲಿ ರಕ್ಷಣಾ ಪಡೆಗಳು ಗಾಜಾ ಮತ್ತು ಅದರ ಸುತ್ತಮುತ್ತಲಿನ ಪ್ಯಾಲೆಸ್ತೀನಿಯನ್ನರಿಗೆ ದಕ್ಷಿಣ ಪ್ರಾಂತ್ಯಕ್ಕೆ ತೆರವಿಗೆ ಆದೇಶಿಸಿವೆ.

ಈ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದ ಯುಎನ್ ಮುಖ್ಯಸ್ಥರು,  ಗಾಜಾದ ದಕ್ಷಿಣದಲ್ಲಿರುವ ಆಸ್ಪತ್ರೆಗಳು ಈಗಾಗಲೇ ಸಾಮರ್ಥ್ಯ ಮೀರಿದೆ ಮತ್ತು ಉತ್ತರದಿಂದ ಸಾವಿರಾರು ಹೊಸ ರೋಗಿಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ. ಆರೋಗ್ಯ ವ್ಯವಸ್ಥೆಯು ಪತನದ ಅಂಚಿನಲ್ಲಿದೆ ಮತ್ತು ಶವಾಗಾರಗಳು ತುಂಬಿ ತುಳುಕುತ್ತಿವೆ ಎಂದು ಅವರು ಹೇಳಿದ್ದಾರೆ.

ಗಾಜಾದಲ್ಲಿನ ಪರಿಸ್ಥಿತಿಯು ಅಪಾಯಕಾರಿ ಎಂದು ವಿವರಿಸಿದ ಅವರು ಮೂಲಸೌಕರ್ಯಗಳು ಹಾನಿಗೊಳಗಾಗಿರುವುದರಿಂದ ಮತ್ತು ವಿದ್ಯುತ್ ಇಲ್ಲದಿರುವುದರಿಂದ ಇಡೀ ಪ್ರದೇಶವು ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಹೇಳಿದರು.

ಯುದ್ಧಗಳು ಸಹ ನಿಯಮಗಳನ್ನು ಹೊಂದಿವೆ ಎಂದು ಪ್ರತಿಪಾದಿಸಿದ ಗುಟೆರೆಸ್, ಯುಎನ್‌ಗೆ ಅಗತ್ಯವಿರುವ ಪ್ರತಿಯೊಬ್ಬರಿಗೂ ಇಂಧನ, ಆಹಾರ ಮತ್ತು ನೀರು ಪಡೆಯಲು ಗಾಜಾದಾದ್ಯಂತ ಮಾನವೀಯ ಪ್ರವೇಶದ ತಕ್ಷಣದ ಅವಶ್ಯಕತೆಯಿದೆ ಎಂದು ಹೇಳಿದರು.

ನಾಗರಿಕರನ್ನು ರಕ್ಷಿಸಬೇಕು, ಗಾಜಾದಲ್ಲಿರುವ ಎಲ್ಲಾ ಒತ್ತೆಯಾಳುಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ತೆರವು ಕುರಿತ ಅಂತಹ ಯಾವುದೇ ಆದೇಶವನ್ನು ರದ್ದುಗೊಳಿಸಬೇಕೆಂದು ನಾವು ಬಲವಾಗಿ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ನಮ್ಮ ಪ್ರಧಾನ ಕಾರ್ಯದರ್ಶಿ ಮತ್ತು ಅವರ ತಂಡವು ಫೋನ್‌ಗಳಲ್ಲಿ ಕೆಲಸ ಮಾಡುತ್ತಿದೆ ಮತ್ತು ಅವರು ಇಸ್ರೇಲಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಮಾನವೀಯ ದುರಂತವನ್ನು ತಪ್ಪಿಸಲು ಅವರನ್ನು ಒತ್ತಾಯಿಸಲಾಗಿದೆ ಎಂದು ಗುಟೆರೆಸ್ ಅವರ ವಕ್ತಾರ ಡುಜಾರಿಕ್ ಹೇಳಿದ್ದಾರೆ.

ಇದನ್ನು ಓದಿ: ಪಾಸ್‌ಪೋರ್ಟ್ ಹಗರಣ: 50 ಸ್ಥಳಗಳಲ್ಲಿ ಸಿಬಿಐ ಶೋಧ; 24 ಮಂದಿ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...