Homeಅಂತರಾಷ್ಟ್ರೀಯಇಸ್ರೇಲ್‌ ಕೊಟ್ಟಿರುವ ಸ್ಥಳಾಂತರ ಆದೇಶ ಅತ್ಯಂತ ಅಪಾಯಕಾರಿ: ಯುಎನ್ ಮುಖ್ಯಸ್ಥ ಗುಟೆರಸ್

ಇಸ್ರೇಲ್‌ ಕೊಟ್ಟಿರುವ ಸ್ಥಳಾಂತರ ಆದೇಶ ಅತ್ಯಂತ ಅಪಾಯಕಾರಿ: ಯುಎನ್ ಮುಖ್ಯಸ್ಥ ಗುಟೆರಸ್

- Advertisement -
- Advertisement -

ಉತ್ತರ ಗಾಝಾದಲ್ಲಿ 1 ಮಿಲಿಯನ್‌ಗಿಂತಲೂ ಹೆಚ್ಚು ಜನರು 24 ಗಂಟೆಗಳ ಒಳಗೆ ಸ್ಥಳಾಂತರಗೊಳ್ಳಬೇಕು ಎಂಬ ಇಸ್ರೇಲ್‌ ಕೊಟ್ಟಿರುವ ಗಡುವು ಅತ್ಯಂತ ಅಪಾಯಕಾರಿ, ಸಾಮಾನ್ಯವಾಗಿ ಇದು ಅಸಾಧ್ಯ ಎಂದು ಯುಎನ್ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಹೇಳಿದ್ದಾರೆ.

ಯುದ್ಧಗಳು ಸಹ ನಿಯಮಗಳನ್ನು ಹೊಂದಿವೆ. ಉತ್ತರ ಗಾಜಾದ ಸುಮಾರು 1.1 ಮಿಲಿಯನ್ ಜನಸಂಖ್ಯೆಯು ಮುಂದಿನ 24 ಗಂಟೆಗಳ ಒಳಗೆ ದಕ್ಷಿಣ ಭಾಗಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಇಸ್ರೇಲಿ ಮಿಲಿಟರಿಯಲ್ಲಿನ ಅಧಿಕಾರಿಗಳು ಹೇಳಿದ್ದಾರೆ.

ಇದು ಶಾಲೆಗಳು, ಆರೋಗ್ಯ ಕೇಂದ್ರಗಳು ಮತ್ತು ಚಿಕಿತ್ಸಾಲಯಗಳು ಸೇರಿದಂತೆ ಅಲ್ಲಿರುವ ಎಲ್ಲಾ UN ಸಿಬ್ಬಂದಿಗೆ ಮತ್ತು UN ಸೌಲಭ್ಯಗಳಡಿ ಆಶ್ರಯ ಪಡೆದವರಿಗೆ  ಅನ್ವಯಿಸಲಿದೆ.

ಇಡೀ ಭೂಪ್ರದೇಶವು ಆಕ್ರಮಣದಲ್ಲಿರುವಾಗ ಆಹಾರ, ನೀರು ಅಥವಾ ವಸತಿ ಇಲ್ಲದ ಸ್ಥಳಕ್ಕೆ ಒಂದು ದಶಲಕ್ಷಕ್ಕೂ ಹೆಚ್ಚು ಜನರನ್ನು ಜನನಿಬಿಡ ಯುದ್ಧ ವಲಯದಲ್ಲಿ ಸ್ಥಳಾಂತರಿಸುವುದು ಅತ್ಯಂತ ಅಪಾಯಕಾರಿ ಮತ್ತು ಇದು ಸಾಧ್ಯವಿಲ್ಲ ಎಂದು ಗುಟೆರಸ್ ಹೇಳಿದ್ದಾರೆ.

ಯುಎನ್ ಸೆಕ್ರೆಟರಿ ಜನರಲ್ ಅವರು ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿಯ ಕುರಿತು ಭದ್ರತಾ ಮಂಡಳಿಯ ಸಭೆಯ ಮೊದಲು ಈ ಹೇಳಿಕೆಯನ್ನು ನೀಡಿದ್ದಾರೆ.

ವೈಮಾನಿಕ ದಾಳಿಯ ನಂತರ, ಇಸ್ರೇಲಿ ರಕ್ಷಣಾ ಪಡೆಗಳು ಗಾಜಾ ಮತ್ತು ಅದರ ಸುತ್ತಮುತ್ತಲಿನ ಪ್ಯಾಲೆಸ್ತೀನಿಯನ್ನರಿಗೆ ದಕ್ಷಿಣ ಪ್ರಾಂತ್ಯಕ್ಕೆ ತೆರವಿಗೆ ಆದೇಶಿಸಿವೆ.

ಈ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿದ ಯುಎನ್ ಮುಖ್ಯಸ್ಥರು,  ಗಾಜಾದ ದಕ್ಷಿಣದಲ್ಲಿರುವ ಆಸ್ಪತ್ರೆಗಳು ಈಗಾಗಲೇ ಸಾಮರ್ಥ್ಯ ಮೀರಿದೆ ಮತ್ತು ಉತ್ತರದಿಂದ ಸಾವಿರಾರು ಹೊಸ ರೋಗಿಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ. ಆರೋಗ್ಯ ವ್ಯವಸ್ಥೆಯು ಪತನದ ಅಂಚಿನಲ್ಲಿದೆ ಮತ್ತು ಶವಾಗಾರಗಳು ತುಂಬಿ ತುಳುಕುತ್ತಿವೆ ಎಂದು ಅವರು ಹೇಳಿದ್ದಾರೆ.

ಗಾಜಾದಲ್ಲಿನ ಪರಿಸ್ಥಿತಿಯು ಅಪಾಯಕಾರಿ ಎಂದು ವಿವರಿಸಿದ ಅವರು ಮೂಲಸೌಕರ್ಯಗಳು ಹಾನಿಗೊಳಗಾಗಿರುವುದರಿಂದ ಮತ್ತು ವಿದ್ಯುತ್ ಇಲ್ಲದಿರುವುದರಿಂದ ಇಡೀ ಪ್ರದೇಶವು ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಹೇಳಿದರು.

ಯುದ್ಧಗಳು ಸಹ ನಿಯಮಗಳನ್ನು ಹೊಂದಿವೆ ಎಂದು ಪ್ರತಿಪಾದಿಸಿದ ಗುಟೆರೆಸ್, ಯುಎನ್‌ಗೆ ಅಗತ್ಯವಿರುವ ಪ್ರತಿಯೊಬ್ಬರಿಗೂ ಇಂಧನ, ಆಹಾರ ಮತ್ತು ನೀರು ಪಡೆಯಲು ಗಾಜಾದಾದ್ಯಂತ ಮಾನವೀಯ ಪ್ರವೇಶದ ತಕ್ಷಣದ ಅವಶ್ಯಕತೆಯಿದೆ ಎಂದು ಹೇಳಿದರು.

ನಾಗರಿಕರನ್ನು ರಕ್ಷಿಸಬೇಕು, ಗಾಜಾದಲ್ಲಿರುವ ಎಲ್ಲಾ ಒತ್ತೆಯಾಳುಗಳನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ತೆರವು ಕುರಿತ ಅಂತಹ ಯಾವುದೇ ಆದೇಶವನ್ನು ರದ್ದುಗೊಳಿಸಬೇಕೆಂದು ನಾವು ಬಲವಾಗಿ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ನಮ್ಮ ಪ್ರಧಾನ ಕಾರ್ಯದರ್ಶಿ ಮತ್ತು ಅವರ ತಂಡವು ಫೋನ್‌ಗಳಲ್ಲಿ ಕೆಲಸ ಮಾಡುತ್ತಿದೆ ಮತ್ತು ಅವರು ಇಸ್ರೇಲಿ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಮಾನವೀಯ ದುರಂತವನ್ನು ತಪ್ಪಿಸಲು ಅವರನ್ನು ಒತ್ತಾಯಿಸಲಾಗಿದೆ ಎಂದು ಗುಟೆರೆಸ್ ಅವರ ವಕ್ತಾರ ಡುಜಾರಿಕ್ ಹೇಳಿದ್ದಾರೆ.

ಇದನ್ನು ಓದಿ: ಪಾಸ್‌ಪೋರ್ಟ್ ಹಗರಣ: 50 ಸ್ಥಳಗಳಲ್ಲಿ ಸಿಬಿಐ ಶೋಧ; 24 ಮಂದಿ ವಿರುದ್ಧ ಎಫ್‌ಐಆರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...