Homeಕರ್ನಾಟಕಮೌಢ್ಯದ ವಕ್ತಾರರಾದ ವಿಜ್ಞಾನಿ, ಕೋಮುವಾದ ಅಪ್ಪಿಕೊಂಡ ಸಾಹಿತಿ, ವಿದ್ಯಾರ್ಥಿಸ್ನೇಹಿಯಾದ ರಾಜಕಾರಣಿ... ಯಾರು ಗೊತ್ತೆ?

ಮೌಢ್ಯದ ವಕ್ತಾರರಾದ ವಿಜ್ಞಾನಿ, ಕೋಮುವಾದ ಅಪ್ಪಿಕೊಂಡ ಸಾಹಿತಿ, ವಿದ್ಯಾರ್ಥಿಸ್ನೇಹಿಯಾದ ರಾಜಕಾರಣಿ… ಯಾರು ಗೊತ್ತೆ?

- Advertisement -
- Advertisement -

ಈ ವಾರ ಸಂಭವಿಸಿದ ಮೂವರು ಗಣ್ಯರ ವಿಶೇಷ ನಡೆಗಳನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ. ಇಲ್ಲಿ ಒಂದು ವೈರುಧ್ಯವಿದೆ. ಸಾಮಾನ್ಯವಾಗಿ, ಅದರಲ್ಲು ಬಿರುಸಿನ ರಾಜಕೀಯ ಚಟುವಟಿಕೆ ನಡೆದಿರುವ ಹೊತ್ತಿನಲ್ಲಿ ರಾಜಕಾರಣ ಬದಿಗಿಟ್ಟು ವಿದ್ಯಾರ್ಥಿಗಳ ಜೊತೆ ರಾಜಕಾರಣಿ ನಿಂತರೆ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸಲು ಯತ್ನಿಸಬೇಕಾದ ವಿಜ್ಞಾನಿ ಮೂಢನಂಬಿಕೆಯನ್ನು ವೈಭವಿಕರಿಸಿದರು. ಇತ್ತೀಚಿಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಹೆಸರು ಉಲ್ಲೇಖಿಸಲ್ಪಟ್ಟಿರುವ ವಿದ್ಯಾರ್ಥಿ ಸಂಘಟನೆಯನ್ನು ಪ್ರಮೋಟ್ ಮಾಡಲು ‘ಪ್ರಗತಿಪರ’ ಸಾಹಿತಿ ಹೊರಟರು… ಇದನ್ನು ವಿವರಿಸುವ ಮೂರು ತುಣುಕುಗಳಲ್ಲಿ ಇವೆ:.

1. ದೇವಸ್ಥಾನದೊಳ್ ಚಂದ್ರಯಾನ್: ಇಸ್ರೋ ಮುಖ್ಯಸ್ಥರ ಟೆಂಪಲ್‍ರನ್!
ಅಯ್ಯ ತನ್ನ ತಾನರಿಯಬೇಕಲ್ಲದೇ,
ತನ್ನಲ್ಲಿ ಅರಿವು ಸ್ವಯವಾಗಿರಲು ಅನ್ಯರಲ್ಲಿ
ಕೇಳಲುಂಟೇ ಚೆನ್ನಮಲ್ಲಿಕಾರ್ಜುನಾ,
ನೀನರಿವಾಗಿ ಎನಗೆ ಮುಂದುದೋರಿದ ಕಾರಣ
ನಿಮ್ಮಿಂದ ನಿಮ್ಮನರಿವೆನು
-ಅಕ್ಕಮಹಾದೇವಿ

ಇಸ್ರೋ ಮುಖ್ಯಸ್ಥರು ವಿದ್ಯಾದೀಶತೀರ್ಥ ಸ್ವಾಮಿಯವರ ಮುಂದೆ ಕುಳಿತ ಚಿತ್ರ ನೋಡಿದಾಗ ಅಕ್ಕನ ಈ ವಚನ ನೆನಪಾಗಿತು.. ‘ಅನ್ಯರ’ ಮುಂದೆ ತಲೆಬಾಗಿ ಅವರು ತಮ್ಮ ಅರಿವಿಗಷ್ಟೇ ಅಲ್ಲ, ಇಸ್ರೋದ ‘ಅರಿವು’, ಅದರ ಸಾಧನೆ-ಶ್ರೇಯಸ್ಸುಗಳಿಗೇ ಕಳಂಕ ತಂದಿದ್ದಾರೆ.
ಜುಲೈ 15ರಂದು ಇಸ್ರೋದ ಬಹು ಮಹತ್ತರ ‘ಚಂದ್ರಯಾನ-2’ ಆರಂಭಗೊಳ್ಳಲಿದ್ದು, ಅದರ ಯಶಸ್ಸಿಗಾಗಿ ಇಸ್ರೊ ಮುಖ್ಯಸ್ಥ ಶಿವನ್ ಅವರು ಜುಲೈ 7ರಂದು ದೇವಸ್ಥಾನಗಳನ್ನು ಸುತ್ತಿ ದೇವರ, ಸ್ವಾಮೀಜಿಗಳ ಆಶೀರ್ವಾದ ಪಡೆದರು. ಇಂಥದ್ದನ್ನು ನಮ್ಮ ರಾಜಕಾರಣಿಗಳು ಮಾಡಿದಾಗ ಟೆಂಪಲ್ ರನ್ ಎನ್ನುವ ಮಾಧ್ಯಮಗಳು ಇದಕ್ಕೆ ಮಾತ್ರ ಚಕಾರ ಎತ್ತಿಲ್ಲ.

ಉಡುಪಿ ಶ್ರೀಕೃಷ್ಣ ಮಠದಲ್ಲಿ ಅವರು ವಿದ್ಯಾದೀಶತೀರ್ಥ ಸ್ವಾಮಿಯವರ ಮುಂದೆ ನಮ್ರತೆಯಿಂದ ತಲೆಬಾಗಿ ಚಂದ್ರಯಾನ ಯಶಸ್ವಿಗೆ ಆಶೀರ್ವಾದ ಪಡೆಯುವ ಮೂಲಕ ತಮ್ಮ ಘನ ಹುದ್ದೆಗೆ ಅವಮಾನ ಮಾಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ಮಠಕ್ಕೂ ಭೇಟಿ ನೀಡಿ ಚಂದ್ರಯಾನ ಯಶಸ್ಸಿಗೆ ಪೂಜೆ ಸಲ್ಲಿಸಿದ್ದಾರೆ.

ಸಾವಿರಾರು ವಿಜ್ಞಾನಿಗಳು ಮತ್ತು ಇಂಜಿನಿಯರ್‍ ಗಳ ಅವಿರತ ಶ್ರವನ್ನು ಶಿವನ್ ಅವಮಾನಿಸಿದ್ದಾರೆ. ಈ ಹಿಂದೆಯೂ ಹಲವು ಇಸ್ರೋ ಅಧ್ಯಕ್ಷರು ಉಪಗ್ರಹಗಳ ಪ್ರತಿಕೃತಿಗಳನ್ನು ತಿರುಪತಿ ತಿಮ್ಮಪ್ಪನ ಮುಂದೆ ಇಟ್ಟು ಪೂಜೆ ಮಾಡಿಸಿ ಇಂತಹ ಮೂರ್ಖತನ ಮೆರದಿದ್ದರು. ಜನರಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಇಂತಹ ನಡೆ ತಪ್ಪು ಸಂದೇಶಗಳನ್ನು ರವಾನೆ ಮಡುತ್ತದೆ ಎಂಬ ಕನಿಷ್ಠ ಜ್ಞಾನವೂ ಇಲ್ಲದ ಇಂಹ ವಿಜ್ಞಾನಿಗಳು ಮೂಢನಂಬಿಕೆಗಳ ವಕ್ತಾರರಂತೆ ವರ್ತಿಸುವುದು ಅಕ್ಷಮ್ಯ.

ರಾಜಸ್ಥಾನದಲ್ಲಿ ವೈದ್ಯ ಸಂಘದ ಕಾರ್ಯಕ್ರಮದಲ್ಲಿ ಮುಂದಿನ ಸಾಲಿನಲ್ಲಿ ಮಹಿಳೆಯರು ಕುಳಿತಿದ್ದಕ್ಕೆ ಕೋಪಗೊಂಡ ಸ್ವಾಮೀಜಿಯೊಬ್ಬ ಕಾರ್ಯಕ್ರಮ ಬಹಿಷ್ಕರಿಸಿ ನಡೆದಿದ್ದಾನೆ. ಆತನ ಸ್ತ್ರೀದ್ವೇಷಿ ಗುಣ ಗೊತ್ತಿದ್ದರೂ ಆತನ್ನು ಕಾರ್ಯಕ್ರಮಕ್ಕೆ ವೈದ್ಯರು ಕರೆಯುತ್ತಾರೆಂದರೆ?

2. ‘ಕಾಡುಕುದುರೆ’ಗಳ ಸಂಗದಲ್ಲಿ ಕಂಬಾರರು!
ಸೃಜನಶೀಲ ಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ವಿಶಿಷ್ಠ ಸ್ಥಾನ ಗಳಿಸಿರುವ ಜ್ಞಾನಪೀಠ ಪುರಸ್ಕೃತ ಚಂದ್ರಶೇಖರ ಕಂಬಾರರು ಎಬಿವಿಪಿಯ ಸದಸ್ಯತ್ವ ಪಡೆದು, ಆ ಸಂಘಟನೆಯ ಸದಸ್ಯತ್ವ ಅಭಿಯಾನದ ಬ್ರ್ಯಾಂಡ್ ಅಂಬಾಸೆಡರ್ ಆಗಿದ್ದಾರೆ. ಕಂಬಾರ ಬ್ರಾಹ್ಮಣಶಾಹಿಯ ಆರಾಧಕರಲ್ಲ ನಿಜ. ಆದರೆ ಅಧಿಕಾರ, ಸ್ಥಾನಮಾನಕ್ಕಾಗಿ ಏನನ್ನು ಮಾಡಬಲ್ಲರು ಎಂಬುದು ಪದೇಪದೇ ಸಾಬೀತಾಗಿದೆ. ಅವರು ಮೊದಲ ಸಲ ಕನ್ನಡ ವಿವಿಯ ಕುಲಪತಿಯಾಗುವಾಗ ಅಂದಿನ ಮುಖ್ಯಮಂತ್ರಿ ಬಂಗಾರಪ್ಪರ ಎದುರು ತಳ ಸಮುದಾಯದ ಸಾಹಿತಿಯಾಗಿ (ಕನ್ನಡ ವಿವಿಯ ಕುಲಪತಿಯಾಗುವ ಎಲ್ಲ ಅರ್ಹತೆಗಳು ಅವರಿದ್ದರೂ), ಅಲ್ಲಿ ಎರಡನೇ ಅವಧಿಗೆ ವಿಸ್ತರಣೇ ಮಾಡಿಕೊಳ್ಳುವಾಗ ಅಂದಿನ ಮುಖ್ಯಮಂತ್ರಿ ಜೆ.ಎಚ್ ಪಟೇಲರ ಎದುರು ಸಮಾಜವಾದಿ ಸಾಹಿತಿಯಾಗಿ ತಮ್ಮನ್ನು ಪ್ರಸ್ತುತಪಡಿಸಿಕೊಂಡಿದ್ದರು.

 

ಈಗ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಮತ್ತು ಇಲ್ಲೂ ಅದೇ ಸರ್ಕಾರ ಬರಬಹುದಾದ್ದರಿಂದ ಆ ಪಕ್ಷದ ವಿದ್ಯಾರ್ಥಿ ಸಂಘಟನೆ ವಕ್ತಾರರಾಗುವ ಮೂಲಕ ಸಾಹಿತ್ಯಾಸಕ್ತರಲ್ಲಿ ಅಸಹ್ಯ ಮೂಡಿಸಿದ್ದಾರೆ. ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಹೆಸರು ತಗಲು ಹಾಕಿಸಿಕೊಂಡಿರುವ, ಕೋಮುವಾದಿ ಸಿದ್ದಾಂತಗಳ ವಿದ್ಯಾರ್ಥಿ ಸಂಘಟನೆಯ ಸದಸ್ಯರಾಗುವ ಮೂಲಕ ಅವರು ಯಾವ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೋ?

3. ವಿದ್ಯಾರ್ಥಿಗಳೊಂದಿಗೆ ವಿದ್ಯಾರ್ಥಿಯಾದ ರಾಜಕಾರಣಿ
ಸಮಾಜಕ್ಕೆ ಆದರ್ಶವಾಗಬೇಕಿದ್ದ ವಿಜ್ಞಾನಿ ಮತ್ತು ಸಾಹಿತಿ ತಪ್ಪು ನಡೆಗಳನ್ನು ಇಟ್ಟ ಈ ಸಂದರ್ಭದಲ್ಲಿ ರಾಜಧಾನಿಯ ಮಹತ್ವದ ರಾಜಕೀಯ ಚಟುವಟಿಕೆಗಳನ್ನು ಬದಿಗೆ ಸರಿಸಿ, ವಿದ್ಯಾರ್ಥಿಗಳೊಂದಿಗೆ ಒಂದು ದಿನವನ್ನು ಕಳೆಯುವ ಮೂಲಕ ಎಚ್.ಕೆ. ಪಾಟೀಲರು ಆದರ್ಶದ ನಡೆ ಇಟ್ಟಿದ್ದಾರೆ. ಗ್ರಾಮೀಣಾಭಿವೃದ್ಧಿ ವಿ.ವಿಯ ಸ್ನಾತಕೋತ್ತರ ವಿದ್ಯಾರ್ಥಿಗಳ ಮೊದಲ ಬ್ಯಾಚಿನ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಲೆಂದೇ ಬೆಂಗಳೂರಿನಿಂದ ಗದಗಿಗೆ ಬಂದು ವಿದ್ಯಾರ್ಥಿಗಳೊಂದಿಗೆ ವಿದ್ಯಾರ್ಥಿಯಾಗಿ, ಗ್ರಾಮೀಣ ಭಾರತದ ಅಭಿವೃದ್ಧಿ ಅಗತ್ಯತೆಯ ಕುರಿತು ಮಾತಾಡಿದ್ದಾರೆ, ಸಂವಾದ ನಡೆಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರೆಲ್ಲೂ ರಾಜಕಾರಣದ ವಿಷಯ ಪ್ರಸ್ತಾಪಿಸದೇ ಘನತೆ ಮೆರೆದಿದ್ದಾರೆ.

ಇವತ್ತು ರಾಜಕಾರಣಿಗಳೆಲ್ಲ ಪಕ್ಷ ರಾಜಕಾರಣದಲ್ಲಿ ಮುಳುಗಿರುವ ‘ಅಧಿಕಾರದ ಅಮಲಿನ’ ಸಂದರ್ಭದಲ್ಲಿ ಎಚ್. ಕೆ. ಪಾಟೀಲ ವಿದ್ಯಾರ್ಥಿಗಳ ಜೊತೆ ಇದ್ದುದು ಆದರ್ಶಪ್ರಾಯವಾದರೆ, ಶಿವನ್ ಮತ್ತು ಕಂಬಾರ ಮಾತ್ರ ವಿದ್ಯಾರ್ಥಿಗಳಿಗೆ ತಪ್ಪು ಸಂದೇಶ ರವಾನಿಸುವ ಮೂಲಕ ಸಣ್ಣವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...