Homeಕರ್ನಾಟಕಮೌಢ್ಯದ ವಕ್ತಾರರಾದ ವಿಜ್ಞಾನಿ, ಕೋಮುವಾದ ಅಪ್ಪಿಕೊಂಡ ಸಾಹಿತಿ, ವಿದ್ಯಾರ್ಥಿಸ್ನೇಹಿಯಾದ ರಾಜಕಾರಣಿ... ಯಾರು ಗೊತ್ತೆ?

ಮೌಢ್ಯದ ವಕ್ತಾರರಾದ ವಿಜ್ಞಾನಿ, ಕೋಮುವಾದ ಅಪ್ಪಿಕೊಂಡ ಸಾಹಿತಿ, ವಿದ್ಯಾರ್ಥಿಸ್ನೇಹಿಯಾದ ರಾಜಕಾರಣಿ… ಯಾರು ಗೊತ್ತೆ?

- Advertisement -
- Advertisement -

ಈ ವಾರ ಸಂಭವಿಸಿದ ಮೂವರು ಗಣ್ಯರ ವಿಶೇಷ ನಡೆಗಳನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ. ಇಲ್ಲಿ ಒಂದು ವೈರುಧ್ಯವಿದೆ. ಸಾಮಾನ್ಯವಾಗಿ, ಅದರಲ್ಲು ಬಿರುಸಿನ ರಾಜಕೀಯ ಚಟುವಟಿಕೆ ನಡೆದಿರುವ ಹೊತ್ತಿನಲ್ಲಿ ರಾಜಕಾರಣ ಬದಿಗಿಟ್ಟು ವಿದ್ಯಾರ್ಥಿಗಳ ಜೊತೆ ರಾಜಕಾರಣಿ ನಿಂತರೆ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸಲು ಯತ್ನಿಸಬೇಕಾದ ವಿಜ್ಞಾನಿ ಮೂಢನಂಬಿಕೆಯನ್ನು ವೈಭವಿಕರಿಸಿದರು. ಇತ್ತೀಚಿಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಹೆಸರು ಉಲ್ಲೇಖಿಸಲ್ಪಟ್ಟಿರುವ ವಿದ್ಯಾರ್ಥಿ ಸಂಘಟನೆಯನ್ನು ಪ್ರಮೋಟ್ ಮಾಡಲು ‘ಪ್ರಗತಿಪರ’ ಸಾಹಿತಿ ಹೊರಟರು… ಇದನ್ನು ವಿವರಿಸುವ ಮೂರು ತುಣುಕುಗಳಲ್ಲಿ ಇವೆ:.

1. ದೇವಸ್ಥಾನದೊಳ್ ಚಂದ್ರಯಾನ್: ಇಸ್ರೋ ಮುಖ್ಯಸ್ಥರ ಟೆಂಪಲ್‍ರನ್!
ಅಯ್ಯ ತನ್ನ ತಾನರಿಯಬೇಕಲ್ಲದೇ,
ತನ್ನಲ್ಲಿ ಅರಿವು ಸ್ವಯವಾಗಿರಲು ಅನ್ಯರಲ್ಲಿ
ಕೇಳಲುಂಟೇ ಚೆನ್ನಮಲ್ಲಿಕಾರ್ಜುನಾ,
ನೀನರಿವಾಗಿ ಎನಗೆ ಮುಂದುದೋರಿದ ಕಾರಣ
ನಿಮ್ಮಿಂದ ನಿಮ್ಮನರಿವೆನು
-ಅಕ್ಕಮಹಾದೇವಿ

ಇಸ್ರೋ ಮುಖ್ಯಸ್ಥರು ವಿದ್ಯಾದೀಶತೀರ್ಥ ಸ್ವಾಮಿಯವರ ಮುಂದೆ ಕುಳಿತ ಚಿತ್ರ ನೋಡಿದಾಗ ಅಕ್ಕನ ಈ ವಚನ ನೆನಪಾಗಿತು.. ‘ಅನ್ಯರ’ ಮುಂದೆ ತಲೆಬಾಗಿ ಅವರು ತಮ್ಮ ಅರಿವಿಗಷ್ಟೇ ಅಲ್ಲ, ಇಸ್ರೋದ ‘ಅರಿವು’, ಅದರ ಸಾಧನೆ-ಶ್ರೇಯಸ್ಸುಗಳಿಗೇ ಕಳಂಕ ತಂದಿದ್ದಾರೆ.
ಜುಲೈ 15ರಂದು ಇಸ್ರೋದ ಬಹು ಮಹತ್ತರ ‘ಚಂದ್ರಯಾನ-2’ ಆರಂಭಗೊಳ್ಳಲಿದ್ದು, ಅದರ ಯಶಸ್ಸಿಗಾಗಿ ಇಸ್ರೊ ಮುಖ್ಯಸ್ಥ ಶಿವನ್ ಅವರು ಜುಲೈ 7ರಂದು ದೇವಸ್ಥಾನಗಳನ್ನು ಸುತ್ತಿ ದೇವರ, ಸ್ವಾಮೀಜಿಗಳ ಆಶೀರ್ವಾದ ಪಡೆದರು. ಇಂಥದ್ದನ್ನು ನಮ್ಮ ರಾಜಕಾರಣಿಗಳು ಮಾಡಿದಾಗ ಟೆಂಪಲ್ ರನ್ ಎನ್ನುವ ಮಾಧ್ಯಮಗಳು ಇದಕ್ಕೆ ಮಾತ್ರ ಚಕಾರ ಎತ್ತಿಲ್ಲ.

ಉಡುಪಿ ಶ್ರೀಕೃಷ್ಣ ಮಠದಲ್ಲಿ ಅವರು ವಿದ್ಯಾದೀಶತೀರ್ಥ ಸ್ವಾಮಿಯವರ ಮುಂದೆ ನಮ್ರತೆಯಿಂದ ತಲೆಬಾಗಿ ಚಂದ್ರಯಾನ ಯಶಸ್ವಿಗೆ ಆಶೀರ್ವಾದ ಪಡೆಯುವ ಮೂಲಕ ತಮ್ಮ ಘನ ಹುದ್ದೆಗೆ ಅವಮಾನ ಮಾಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ಮಠಕ್ಕೂ ಭೇಟಿ ನೀಡಿ ಚಂದ್ರಯಾನ ಯಶಸ್ಸಿಗೆ ಪೂಜೆ ಸಲ್ಲಿಸಿದ್ದಾರೆ.

ಸಾವಿರಾರು ವಿಜ್ಞಾನಿಗಳು ಮತ್ತು ಇಂಜಿನಿಯರ್‍ ಗಳ ಅವಿರತ ಶ್ರವನ್ನು ಶಿವನ್ ಅವಮಾನಿಸಿದ್ದಾರೆ. ಈ ಹಿಂದೆಯೂ ಹಲವು ಇಸ್ರೋ ಅಧ್ಯಕ್ಷರು ಉಪಗ್ರಹಗಳ ಪ್ರತಿಕೃತಿಗಳನ್ನು ತಿರುಪತಿ ತಿಮ್ಮಪ್ಪನ ಮುಂದೆ ಇಟ್ಟು ಪೂಜೆ ಮಾಡಿಸಿ ಇಂತಹ ಮೂರ್ಖತನ ಮೆರದಿದ್ದರು. ಜನರಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಇಂತಹ ನಡೆ ತಪ್ಪು ಸಂದೇಶಗಳನ್ನು ರವಾನೆ ಮಡುತ್ತದೆ ಎಂಬ ಕನಿಷ್ಠ ಜ್ಞಾನವೂ ಇಲ್ಲದ ಇಂಹ ವಿಜ್ಞಾನಿಗಳು ಮೂಢನಂಬಿಕೆಗಳ ವಕ್ತಾರರಂತೆ ವರ್ತಿಸುವುದು ಅಕ್ಷಮ್ಯ.

ರಾಜಸ್ಥಾನದಲ್ಲಿ ವೈದ್ಯ ಸಂಘದ ಕಾರ್ಯಕ್ರಮದಲ್ಲಿ ಮುಂದಿನ ಸಾಲಿನಲ್ಲಿ ಮಹಿಳೆಯರು ಕುಳಿತಿದ್ದಕ್ಕೆ ಕೋಪಗೊಂಡ ಸ್ವಾಮೀಜಿಯೊಬ್ಬ ಕಾರ್ಯಕ್ರಮ ಬಹಿಷ್ಕರಿಸಿ ನಡೆದಿದ್ದಾನೆ. ಆತನ ಸ್ತ್ರೀದ್ವೇಷಿ ಗುಣ ಗೊತ್ತಿದ್ದರೂ ಆತನ್ನು ಕಾರ್ಯಕ್ರಮಕ್ಕೆ ವೈದ್ಯರು ಕರೆಯುತ್ತಾರೆಂದರೆ?

2. ‘ಕಾಡುಕುದುರೆ’ಗಳ ಸಂಗದಲ್ಲಿ ಕಂಬಾರರು!
ಸೃಜನಶೀಲ ಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ವಿಶಿಷ್ಠ ಸ್ಥಾನ ಗಳಿಸಿರುವ ಜ್ಞಾನಪೀಠ ಪುರಸ್ಕೃತ ಚಂದ್ರಶೇಖರ ಕಂಬಾರರು ಎಬಿವಿಪಿಯ ಸದಸ್ಯತ್ವ ಪಡೆದು, ಆ ಸಂಘಟನೆಯ ಸದಸ್ಯತ್ವ ಅಭಿಯಾನದ ಬ್ರ್ಯಾಂಡ್ ಅಂಬಾಸೆಡರ್ ಆಗಿದ್ದಾರೆ. ಕಂಬಾರ ಬ್ರಾಹ್ಮಣಶಾಹಿಯ ಆರಾಧಕರಲ್ಲ ನಿಜ. ಆದರೆ ಅಧಿಕಾರ, ಸ್ಥಾನಮಾನಕ್ಕಾಗಿ ಏನನ್ನು ಮಾಡಬಲ್ಲರು ಎಂಬುದು ಪದೇಪದೇ ಸಾಬೀತಾಗಿದೆ. ಅವರು ಮೊದಲ ಸಲ ಕನ್ನಡ ವಿವಿಯ ಕುಲಪತಿಯಾಗುವಾಗ ಅಂದಿನ ಮುಖ್ಯಮಂತ್ರಿ ಬಂಗಾರಪ್ಪರ ಎದುರು ತಳ ಸಮುದಾಯದ ಸಾಹಿತಿಯಾಗಿ (ಕನ್ನಡ ವಿವಿಯ ಕುಲಪತಿಯಾಗುವ ಎಲ್ಲ ಅರ್ಹತೆಗಳು ಅವರಿದ್ದರೂ), ಅಲ್ಲಿ ಎರಡನೇ ಅವಧಿಗೆ ವಿಸ್ತರಣೇ ಮಾಡಿಕೊಳ್ಳುವಾಗ ಅಂದಿನ ಮುಖ್ಯಮಂತ್ರಿ ಜೆ.ಎಚ್ ಪಟೇಲರ ಎದುರು ಸಮಾಜವಾದಿ ಸಾಹಿತಿಯಾಗಿ ತಮ್ಮನ್ನು ಪ್ರಸ್ತುತಪಡಿಸಿಕೊಂಡಿದ್ದರು.

 

ಈಗ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಮತ್ತು ಇಲ್ಲೂ ಅದೇ ಸರ್ಕಾರ ಬರಬಹುದಾದ್ದರಿಂದ ಆ ಪಕ್ಷದ ವಿದ್ಯಾರ್ಥಿ ಸಂಘಟನೆ ವಕ್ತಾರರಾಗುವ ಮೂಲಕ ಸಾಹಿತ್ಯಾಸಕ್ತರಲ್ಲಿ ಅಸಹ್ಯ ಮೂಡಿಸಿದ್ದಾರೆ. ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಹೆಸರು ತಗಲು ಹಾಕಿಸಿಕೊಂಡಿರುವ, ಕೋಮುವಾದಿ ಸಿದ್ದಾಂತಗಳ ವಿದ್ಯಾರ್ಥಿ ಸಂಘಟನೆಯ ಸದಸ್ಯರಾಗುವ ಮೂಲಕ ಅವರು ಯಾವ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೋ?

3. ವಿದ್ಯಾರ್ಥಿಗಳೊಂದಿಗೆ ವಿದ್ಯಾರ್ಥಿಯಾದ ರಾಜಕಾರಣಿ
ಸಮಾಜಕ್ಕೆ ಆದರ್ಶವಾಗಬೇಕಿದ್ದ ವಿಜ್ಞಾನಿ ಮತ್ತು ಸಾಹಿತಿ ತಪ್ಪು ನಡೆಗಳನ್ನು ಇಟ್ಟ ಈ ಸಂದರ್ಭದಲ್ಲಿ ರಾಜಧಾನಿಯ ಮಹತ್ವದ ರಾಜಕೀಯ ಚಟುವಟಿಕೆಗಳನ್ನು ಬದಿಗೆ ಸರಿಸಿ, ವಿದ್ಯಾರ್ಥಿಗಳೊಂದಿಗೆ ಒಂದು ದಿನವನ್ನು ಕಳೆಯುವ ಮೂಲಕ ಎಚ್.ಕೆ. ಪಾಟೀಲರು ಆದರ್ಶದ ನಡೆ ಇಟ್ಟಿದ್ದಾರೆ. ಗ್ರಾಮೀಣಾಭಿವೃದ್ಧಿ ವಿ.ವಿಯ ಸ್ನಾತಕೋತ್ತರ ವಿದ್ಯಾರ್ಥಿಗಳ ಮೊದಲ ಬ್ಯಾಚಿನ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಲೆಂದೇ ಬೆಂಗಳೂರಿನಿಂದ ಗದಗಿಗೆ ಬಂದು ವಿದ್ಯಾರ್ಥಿಗಳೊಂದಿಗೆ ವಿದ್ಯಾರ್ಥಿಯಾಗಿ, ಗ್ರಾಮೀಣ ಭಾರತದ ಅಭಿವೃದ್ಧಿ ಅಗತ್ಯತೆಯ ಕುರಿತು ಮಾತಾಡಿದ್ದಾರೆ, ಸಂವಾದ ನಡೆಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರೆಲ್ಲೂ ರಾಜಕಾರಣದ ವಿಷಯ ಪ್ರಸ್ತಾಪಿಸದೇ ಘನತೆ ಮೆರೆದಿದ್ದಾರೆ.

ಇವತ್ತು ರಾಜಕಾರಣಿಗಳೆಲ್ಲ ಪಕ್ಷ ರಾಜಕಾರಣದಲ್ಲಿ ಮುಳುಗಿರುವ ‘ಅಧಿಕಾರದ ಅಮಲಿನ’ ಸಂದರ್ಭದಲ್ಲಿ ಎಚ್. ಕೆ. ಪಾಟೀಲ ವಿದ್ಯಾರ್ಥಿಗಳ ಜೊತೆ ಇದ್ದುದು ಆದರ್ಶಪ್ರಾಯವಾದರೆ, ಶಿವನ್ ಮತ್ತು ಕಂಬಾರ ಮಾತ್ರ ವಿದ್ಯಾರ್ಥಿಗಳಿಗೆ ತಪ್ಪು ಸಂದೇಶ ರವಾನಿಸುವ ಮೂಲಕ ಸಣ್ಣವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...