Homeಕರ್ನಾಟಕಮೌಢ್ಯದ ವಕ್ತಾರರಾದ ವಿಜ್ಞಾನಿ, ಕೋಮುವಾದ ಅಪ್ಪಿಕೊಂಡ ಸಾಹಿತಿ, ವಿದ್ಯಾರ್ಥಿಸ್ನೇಹಿಯಾದ ರಾಜಕಾರಣಿ... ಯಾರು ಗೊತ್ತೆ?

ಮೌಢ್ಯದ ವಕ್ತಾರರಾದ ವಿಜ್ಞಾನಿ, ಕೋಮುವಾದ ಅಪ್ಪಿಕೊಂಡ ಸಾಹಿತಿ, ವಿದ್ಯಾರ್ಥಿಸ್ನೇಹಿಯಾದ ರಾಜಕಾರಣಿ… ಯಾರು ಗೊತ್ತೆ?

- Advertisement -
- Advertisement -

ಈ ವಾರ ಸಂಭವಿಸಿದ ಮೂವರು ಗಣ್ಯರ ವಿಶೇಷ ನಡೆಗಳನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ. ಇಲ್ಲಿ ಒಂದು ವೈರುಧ್ಯವಿದೆ. ಸಾಮಾನ್ಯವಾಗಿ, ಅದರಲ್ಲು ಬಿರುಸಿನ ರಾಜಕೀಯ ಚಟುವಟಿಕೆ ನಡೆದಿರುವ ಹೊತ್ತಿನಲ್ಲಿ ರಾಜಕಾರಣ ಬದಿಗಿಟ್ಟು ವಿದ್ಯಾರ್ಥಿಗಳ ಜೊತೆ ರಾಜಕಾರಣಿ ನಿಂತರೆ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸಲು ಯತ್ನಿಸಬೇಕಾದ ವಿಜ್ಞಾನಿ ಮೂಢನಂಬಿಕೆಯನ್ನು ವೈಭವಿಕರಿಸಿದರು. ಇತ್ತೀಚಿಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಹೆಸರು ಉಲ್ಲೇಖಿಸಲ್ಪಟ್ಟಿರುವ ವಿದ್ಯಾರ್ಥಿ ಸಂಘಟನೆಯನ್ನು ಪ್ರಮೋಟ್ ಮಾಡಲು ‘ಪ್ರಗತಿಪರ’ ಸಾಹಿತಿ ಹೊರಟರು… ಇದನ್ನು ವಿವರಿಸುವ ಮೂರು ತುಣುಕುಗಳಲ್ಲಿ ಇವೆ:.

1. ದೇವಸ್ಥಾನದೊಳ್ ಚಂದ್ರಯಾನ್: ಇಸ್ರೋ ಮುಖ್ಯಸ್ಥರ ಟೆಂಪಲ್‍ರನ್!
ಅಯ್ಯ ತನ್ನ ತಾನರಿಯಬೇಕಲ್ಲದೇ,
ತನ್ನಲ್ಲಿ ಅರಿವು ಸ್ವಯವಾಗಿರಲು ಅನ್ಯರಲ್ಲಿ
ಕೇಳಲುಂಟೇ ಚೆನ್ನಮಲ್ಲಿಕಾರ್ಜುನಾ,
ನೀನರಿವಾಗಿ ಎನಗೆ ಮುಂದುದೋರಿದ ಕಾರಣ
ನಿಮ್ಮಿಂದ ನಿಮ್ಮನರಿವೆನು
-ಅಕ್ಕಮಹಾದೇವಿ

ಇಸ್ರೋ ಮುಖ್ಯಸ್ಥರು ವಿದ್ಯಾದೀಶತೀರ್ಥ ಸ್ವಾಮಿಯವರ ಮುಂದೆ ಕುಳಿತ ಚಿತ್ರ ನೋಡಿದಾಗ ಅಕ್ಕನ ಈ ವಚನ ನೆನಪಾಗಿತು.. ‘ಅನ್ಯರ’ ಮುಂದೆ ತಲೆಬಾಗಿ ಅವರು ತಮ್ಮ ಅರಿವಿಗಷ್ಟೇ ಅಲ್ಲ, ಇಸ್ರೋದ ‘ಅರಿವು’, ಅದರ ಸಾಧನೆ-ಶ್ರೇಯಸ್ಸುಗಳಿಗೇ ಕಳಂಕ ತಂದಿದ್ದಾರೆ.
ಜುಲೈ 15ರಂದು ಇಸ್ರೋದ ಬಹು ಮಹತ್ತರ ‘ಚಂದ್ರಯಾನ-2’ ಆರಂಭಗೊಳ್ಳಲಿದ್ದು, ಅದರ ಯಶಸ್ಸಿಗಾಗಿ ಇಸ್ರೊ ಮುಖ್ಯಸ್ಥ ಶಿವನ್ ಅವರು ಜುಲೈ 7ರಂದು ದೇವಸ್ಥಾನಗಳನ್ನು ಸುತ್ತಿ ದೇವರ, ಸ್ವಾಮೀಜಿಗಳ ಆಶೀರ್ವಾದ ಪಡೆದರು. ಇಂಥದ್ದನ್ನು ನಮ್ಮ ರಾಜಕಾರಣಿಗಳು ಮಾಡಿದಾಗ ಟೆಂಪಲ್ ರನ್ ಎನ್ನುವ ಮಾಧ್ಯಮಗಳು ಇದಕ್ಕೆ ಮಾತ್ರ ಚಕಾರ ಎತ್ತಿಲ್ಲ.

ಉಡುಪಿ ಶ್ರೀಕೃಷ್ಣ ಮಠದಲ್ಲಿ ಅವರು ವಿದ್ಯಾದೀಶತೀರ್ಥ ಸ್ವಾಮಿಯವರ ಮುಂದೆ ನಮ್ರತೆಯಿಂದ ತಲೆಬಾಗಿ ಚಂದ್ರಯಾನ ಯಶಸ್ವಿಗೆ ಆಶೀರ್ವಾದ ಪಡೆಯುವ ಮೂಲಕ ತಮ್ಮ ಘನ ಹುದ್ದೆಗೆ ಅವಮಾನ ಮಾಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ಮಠಕ್ಕೂ ಭೇಟಿ ನೀಡಿ ಚಂದ್ರಯಾನ ಯಶಸ್ಸಿಗೆ ಪೂಜೆ ಸಲ್ಲಿಸಿದ್ದಾರೆ.

ಸಾವಿರಾರು ವಿಜ್ಞಾನಿಗಳು ಮತ್ತು ಇಂಜಿನಿಯರ್‍ ಗಳ ಅವಿರತ ಶ್ರವನ್ನು ಶಿವನ್ ಅವಮಾನಿಸಿದ್ದಾರೆ. ಈ ಹಿಂದೆಯೂ ಹಲವು ಇಸ್ರೋ ಅಧ್ಯಕ್ಷರು ಉಪಗ್ರಹಗಳ ಪ್ರತಿಕೃತಿಗಳನ್ನು ತಿರುಪತಿ ತಿಮ್ಮಪ್ಪನ ಮುಂದೆ ಇಟ್ಟು ಪೂಜೆ ಮಾಡಿಸಿ ಇಂತಹ ಮೂರ್ಖತನ ಮೆರದಿದ್ದರು. ಜನರಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಇಂತಹ ನಡೆ ತಪ್ಪು ಸಂದೇಶಗಳನ್ನು ರವಾನೆ ಮಡುತ್ತದೆ ಎಂಬ ಕನಿಷ್ಠ ಜ್ಞಾನವೂ ಇಲ್ಲದ ಇಂಹ ವಿಜ್ಞಾನಿಗಳು ಮೂಢನಂಬಿಕೆಗಳ ವಕ್ತಾರರಂತೆ ವರ್ತಿಸುವುದು ಅಕ್ಷಮ್ಯ.

ರಾಜಸ್ಥಾನದಲ್ಲಿ ವೈದ್ಯ ಸಂಘದ ಕಾರ್ಯಕ್ರಮದಲ್ಲಿ ಮುಂದಿನ ಸಾಲಿನಲ್ಲಿ ಮಹಿಳೆಯರು ಕುಳಿತಿದ್ದಕ್ಕೆ ಕೋಪಗೊಂಡ ಸ್ವಾಮೀಜಿಯೊಬ್ಬ ಕಾರ್ಯಕ್ರಮ ಬಹಿಷ್ಕರಿಸಿ ನಡೆದಿದ್ದಾನೆ. ಆತನ ಸ್ತ್ರೀದ್ವೇಷಿ ಗುಣ ಗೊತ್ತಿದ್ದರೂ ಆತನ್ನು ಕಾರ್ಯಕ್ರಮಕ್ಕೆ ವೈದ್ಯರು ಕರೆಯುತ್ತಾರೆಂದರೆ?

2. ‘ಕಾಡುಕುದುರೆ’ಗಳ ಸಂಗದಲ್ಲಿ ಕಂಬಾರರು!
ಸೃಜನಶೀಲ ಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ವಿಶಿಷ್ಠ ಸ್ಥಾನ ಗಳಿಸಿರುವ ಜ್ಞಾನಪೀಠ ಪುರಸ್ಕೃತ ಚಂದ್ರಶೇಖರ ಕಂಬಾರರು ಎಬಿವಿಪಿಯ ಸದಸ್ಯತ್ವ ಪಡೆದು, ಆ ಸಂಘಟನೆಯ ಸದಸ್ಯತ್ವ ಅಭಿಯಾನದ ಬ್ರ್ಯಾಂಡ್ ಅಂಬಾಸೆಡರ್ ಆಗಿದ್ದಾರೆ. ಕಂಬಾರ ಬ್ರಾಹ್ಮಣಶಾಹಿಯ ಆರಾಧಕರಲ್ಲ ನಿಜ. ಆದರೆ ಅಧಿಕಾರ, ಸ್ಥಾನಮಾನಕ್ಕಾಗಿ ಏನನ್ನು ಮಾಡಬಲ್ಲರು ಎಂಬುದು ಪದೇಪದೇ ಸಾಬೀತಾಗಿದೆ. ಅವರು ಮೊದಲ ಸಲ ಕನ್ನಡ ವಿವಿಯ ಕುಲಪತಿಯಾಗುವಾಗ ಅಂದಿನ ಮುಖ್ಯಮಂತ್ರಿ ಬಂಗಾರಪ್ಪರ ಎದುರು ತಳ ಸಮುದಾಯದ ಸಾಹಿತಿಯಾಗಿ (ಕನ್ನಡ ವಿವಿಯ ಕುಲಪತಿಯಾಗುವ ಎಲ್ಲ ಅರ್ಹತೆಗಳು ಅವರಿದ್ದರೂ), ಅಲ್ಲಿ ಎರಡನೇ ಅವಧಿಗೆ ವಿಸ್ತರಣೇ ಮಾಡಿಕೊಳ್ಳುವಾಗ ಅಂದಿನ ಮುಖ್ಯಮಂತ್ರಿ ಜೆ.ಎಚ್ ಪಟೇಲರ ಎದುರು ಸಮಾಜವಾದಿ ಸಾಹಿತಿಯಾಗಿ ತಮ್ಮನ್ನು ಪ್ರಸ್ತುತಪಡಿಸಿಕೊಂಡಿದ್ದರು.

 

ಈಗ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಮತ್ತು ಇಲ್ಲೂ ಅದೇ ಸರ್ಕಾರ ಬರಬಹುದಾದ್ದರಿಂದ ಆ ಪಕ್ಷದ ವಿದ್ಯಾರ್ಥಿ ಸಂಘಟನೆ ವಕ್ತಾರರಾಗುವ ಮೂಲಕ ಸಾಹಿತ್ಯಾಸಕ್ತರಲ್ಲಿ ಅಸಹ್ಯ ಮೂಡಿಸಿದ್ದಾರೆ. ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಹೆಸರು ತಗಲು ಹಾಕಿಸಿಕೊಂಡಿರುವ, ಕೋಮುವಾದಿ ಸಿದ್ದಾಂತಗಳ ವಿದ್ಯಾರ್ಥಿ ಸಂಘಟನೆಯ ಸದಸ್ಯರಾಗುವ ಮೂಲಕ ಅವರು ಯಾವ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೋ?

3. ವಿದ್ಯಾರ್ಥಿಗಳೊಂದಿಗೆ ವಿದ್ಯಾರ್ಥಿಯಾದ ರಾಜಕಾರಣಿ
ಸಮಾಜಕ್ಕೆ ಆದರ್ಶವಾಗಬೇಕಿದ್ದ ವಿಜ್ಞಾನಿ ಮತ್ತು ಸಾಹಿತಿ ತಪ್ಪು ನಡೆಗಳನ್ನು ಇಟ್ಟ ಈ ಸಂದರ್ಭದಲ್ಲಿ ರಾಜಧಾನಿಯ ಮಹತ್ವದ ರಾಜಕೀಯ ಚಟುವಟಿಕೆಗಳನ್ನು ಬದಿಗೆ ಸರಿಸಿ, ವಿದ್ಯಾರ್ಥಿಗಳೊಂದಿಗೆ ಒಂದು ದಿನವನ್ನು ಕಳೆಯುವ ಮೂಲಕ ಎಚ್.ಕೆ. ಪಾಟೀಲರು ಆದರ್ಶದ ನಡೆ ಇಟ್ಟಿದ್ದಾರೆ. ಗ್ರಾಮೀಣಾಭಿವೃದ್ಧಿ ವಿ.ವಿಯ ಸ್ನಾತಕೋತ್ತರ ವಿದ್ಯಾರ್ಥಿಗಳ ಮೊದಲ ಬ್ಯಾಚಿನ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಲೆಂದೇ ಬೆಂಗಳೂರಿನಿಂದ ಗದಗಿಗೆ ಬಂದು ವಿದ್ಯಾರ್ಥಿಗಳೊಂದಿಗೆ ವಿದ್ಯಾರ್ಥಿಯಾಗಿ, ಗ್ರಾಮೀಣ ಭಾರತದ ಅಭಿವೃದ್ಧಿ ಅಗತ್ಯತೆಯ ಕುರಿತು ಮಾತಾಡಿದ್ದಾರೆ, ಸಂವಾದ ನಡೆಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರೆಲ್ಲೂ ರಾಜಕಾರಣದ ವಿಷಯ ಪ್ರಸ್ತಾಪಿಸದೇ ಘನತೆ ಮೆರೆದಿದ್ದಾರೆ.

ಇವತ್ತು ರಾಜಕಾರಣಿಗಳೆಲ್ಲ ಪಕ್ಷ ರಾಜಕಾರಣದಲ್ಲಿ ಮುಳುಗಿರುವ ‘ಅಧಿಕಾರದ ಅಮಲಿನ’ ಸಂದರ್ಭದಲ್ಲಿ ಎಚ್. ಕೆ. ಪಾಟೀಲ ವಿದ್ಯಾರ್ಥಿಗಳ ಜೊತೆ ಇದ್ದುದು ಆದರ್ಶಪ್ರಾಯವಾದರೆ, ಶಿವನ್ ಮತ್ತು ಕಂಬಾರ ಮಾತ್ರ ವಿದ್ಯಾರ್ಥಿಗಳಿಗೆ ತಪ್ಪು ಸಂದೇಶ ರವಾನಿಸುವ ಮೂಲಕ ಸಣ್ಣವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...