Homeಕರ್ನಾಟಕಮೌಢ್ಯದ ವಕ್ತಾರರಾದ ವಿಜ್ಞಾನಿ, ಕೋಮುವಾದ ಅಪ್ಪಿಕೊಂಡ ಸಾಹಿತಿ, ವಿದ್ಯಾರ್ಥಿಸ್ನೇಹಿಯಾದ ರಾಜಕಾರಣಿ... ಯಾರು ಗೊತ್ತೆ?

ಮೌಢ್ಯದ ವಕ್ತಾರರಾದ ವಿಜ್ಞಾನಿ, ಕೋಮುವಾದ ಅಪ್ಪಿಕೊಂಡ ಸಾಹಿತಿ, ವಿದ್ಯಾರ್ಥಿಸ್ನೇಹಿಯಾದ ರಾಜಕಾರಣಿ… ಯಾರು ಗೊತ್ತೆ?

- Advertisement -
- Advertisement -

ಈ ವಾರ ಸಂಭವಿಸಿದ ಮೂವರು ಗಣ್ಯರ ವಿಶೇಷ ನಡೆಗಳನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ. ಇಲ್ಲಿ ಒಂದು ವೈರುಧ್ಯವಿದೆ. ಸಾಮಾನ್ಯವಾಗಿ, ಅದರಲ್ಲು ಬಿರುಸಿನ ರಾಜಕೀಯ ಚಟುವಟಿಕೆ ನಡೆದಿರುವ ಹೊತ್ತಿನಲ್ಲಿ ರಾಜಕಾರಣ ಬದಿಗಿಟ್ಟು ವಿದ್ಯಾರ್ಥಿಗಳ ಜೊತೆ ರಾಜಕಾರಣಿ ನಿಂತರೆ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸಲು ಯತ್ನಿಸಬೇಕಾದ ವಿಜ್ಞಾನಿ ಮೂಢನಂಬಿಕೆಯನ್ನು ವೈಭವಿಕರಿಸಿದರು. ಇತ್ತೀಚಿಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಹೆಸರು ಉಲ್ಲೇಖಿಸಲ್ಪಟ್ಟಿರುವ ವಿದ್ಯಾರ್ಥಿ ಸಂಘಟನೆಯನ್ನು ಪ್ರಮೋಟ್ ಮಾಡಲು ‘ಪ್ರಗತಿಪರ’ ಸಾಹಿತಿ ಹೊರಟರು… ಇದನ್ನು ವಿವರಿಸುವ ಮೂರು ತುಣುಕುಗಳಲ್ಲಿ ಇವೆ:.

1. ದೇವಸ್ಥಾನದೊಳ್ ಚಂದ್ರಯಾನ್: ಇಸ್ರೋ ಮುಖ್ಯಸ್ಥರ ಟೆಂಪಲ್‍ರನ್!
ಅಯ್ಯ ತನ್ನ ತಾನರಿಯಬೇಕಲ್ಲದೇ,
ತನ್ನಲ್ಲಿ ಅರಿವು ಸ್ವಯವಾಗಿರಲು ಅನ್ಯರಲ್ಲಿ
ಕೇಳಲುಂಟೇ ಚೆನ್ನಮಲ್ಲಿಕಾರ್ಜುನಾ,
ನೀನರಿವಾಗಿ ಎನಗೆ ಮುಂದುದೋರಿದ ಕಾರಣ
ನಿಮ್ಮಿಂದ ನಿಮ್ಮನರಿವೆನು
-ಅಕ್ಕಮಹಾದೇವಿ

ಇಸ್ರೋ ಮುಖ್ಯಸ್ಥರು ವಿದ್ಯಾದೀಶತೀರ್ಥ ಸ್ವಾಮಿಯವರ ಮುಂದೆ ಕುಳಿತ ಚಿತ್ರ ನೋಡಿದಾಗ ಅಕ್ಕನ ಈ ವಚನ ನೆನಪಾಗಿತು.. ‘ಅನ್ಯರ’ ಮುಂದೆ ತಲೆಬಾಗಿ ಅವರು ತಮ್ಮ ಅರಿವಿಗಷ್ಟೇ ಅಲ್ಲ, ಇಸ್ರೋದ ‘ಅರಿವು’, ಅದರ ಸಾಧನೆ-ಶ್ರೇಯಸ್ಸುಗಳಿಗೇ ಕಳಂಕ ತಂದಿದ್ದಾರೆ.
ಜುಲೈ 15ರಂದು ಇಸ್ರೋದ ಬಹು ಮಹತ್ತರ ‘ಚಂದ್ರಯಾನ-2’ ಆರಂಭಗೊಳ್ಳಲಿದ್ದು, ಅದರ ಯಶಸ್ಸಿಗಾಗಿ ಇಸ್ರೊ ಮುಖ್ಯಸ್ಥ ಶಿವನ್ ಅವರು ಜುಲೈ 7ರಂದು ದೇವಸ್ಥಾನಗಳನ್ನು ಸುತ್ತಿ ದೇವರ, ಸ್ವಾಮೀಜಿಗಳ ಆಶೀರ್ವಾದ ಪಡೆದರು. ಇಂಥದ್ದನ್ನು ನಮ್ಮ ರಾಜಕಾರಣಿಗಳು ಮಾಡಿದಾಗ ಟೆಂಪಲ್ ರನ್ ಎನ್ನುವ ಮಾಧ್ಯಮಗಳು ಇದಕ್ಕೆ ಮಾತ್ರ ಚಕಾರ ಎತ್ತಿಲ್ಲ.

ಉಡುಪಿ ಶ್ರೀಕೃಷ್ಣ ಮಠದಲ್ಲಿ ಅವರು ವಿದ್ಯಾದೀಶತೀರ್ಥ ಸ್ವಾಮಿಯವರ ಮುಂದೆ ನಮ್ರತೆಯಿಂದ ತಲೆಬಾಗಿ ಚಂದ್ರಯಾನ ಯಶಸ್ವಿಗೆ ಆಶೀರ್ವಾದ ಪಡೆಯುವ ಮೂಲಕ ತಮ್ಮ ಘನ ಹುದ್ದೆಗೆ ಅವಮಾನ ಮಾಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ಮಠಕ್ಕೂ ಭೇಟಿ ನೀಡಿ ಚಂದ್ರಯಾನ ಯಶಸ್ಸಿಗೆ ಪೂಜೆ ಸಲ್ಲಿಸಿದ್ದಾರೆ.

ಸಾವಿರಾರು ವಿಜ್ಞಾನಿಗಳು ಮತ್ತು ಇಂಜಿನಿಯರ್‍ ಗಳ ಅವಿರತ ಶ್ರವನ್ನು ಶಿವನ್ ಅವಮಾನಿಸಿದ್ದಾರೆ. ಈ ಹಿಂದೆಯೂ ಹಲವು ಇಸ್ರೋ ಅಧ್ಯಕ್ಷರು ಉಪಗ್ರಹಗಳ ಪ್ರತಿಕೃತಿಗಳನ್ನು ತಿರುಪತಿ ತಿಮ್ಮಪ್ಪನ ಮುಂದೆ ಇಟ್ಟು ಪೂಜೆ ಮಾಡಿಸಿ ಇಂತಹ ಮೂರ್ಖತನ ಮೆರದಿದ್ದರು. ಜನರಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಇಂತಹ ನಡೆ ತಪ್ಪು ಸಂದೇಶಗಳನ್ನು ರವಾನೆ ಮಡುತ್ತದೆ ಎಂಬ ಕನಿಷ್ಠ ಜ್ಞಾನವೂ ಇಲ್ಲದ ಇಂಹ ವಿಜ್ಞಾನಿಗಳು ಮೂಢನಂಬಿಕೆಗಳ ವಕ್ತಾರರಂತೆ ವರ್ತಿಸುವುದು ಅಕ್ಷಮ್ಯ.

ರಾಜಸ್ಥಾನದಲ್ಲಿ ವೈದ್ಯ ಸಂಘದ ಕಾರ್ಯಕ್ರಮದಲ್ಲಿ ಮುಂದಿನ ಸಾಲಿನಲ್ಲಿ ಮಹಿಳೆಯರು ಕುಳಿತಿದ್ದಕ್ಕೆ ಕೋಪಗೊಂಡ ಸ್ವಾಮೀಜಿಯೊಬ್ಬ ಕಾರ್ಯಕ್ರಮ ಬಹಿಷ್ಕರಿಸಿ ನಡೆದಿದ್ದಾನೆ. ಆತನ ಸ್ತ್ರೀದ್ವೇಷಿ ಗುಣ ಗೊತ್ತಿದ್ದರೂ ಆತನ್ನು ಕಾರ್ಯಕ್ರಮಕ್ಕೆ ವೈದ್ಯರು ಕರೆಯುತ್ತಾರೆಂದರೆ?

2. ‘ಕಾಡುಕುದುರೆ’ಗಳ ಸಂಗದಲ್ಲಿ ಕಂಬಾರರು!
ಸೃಜನಶೀಲ ಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ವಿಶಿಷ್ಠ ಸ್ಥಾನ ಗಳಿಸಿರುವ ಜ್ಞಾನಪೀಠ ಪುರಸ್ಕೃತ ಚಂದ್ರಶೇಖರ ಕಂಬಾರರು ಎಬಿವಿಪಿಯ ಸದಸ್ಯತ್ವ ಪಡೆದು, ಆ ಸಂಘಟನೆಯ ಸದಸ್ಯತ್ವ ಅಭಿಯಾನದ ಬ್ರ್ಯಾಂಡ್ ಅಂಬಾಸೆಡರ್ ಆಗಿದ್ದಾರೆ. ಕಂಬಾರ ಬ್ರಾಹ್ಮಣಶಾಹಿಯ ಆರಾಧಕರಲ್ಲ ನಿಜ. ಆದರೆ ಅಧಿಕಾರ, ಸ್ಥಾನಮಾನಕ್ಕಾಗಿ ಏನನ್ನು ಮಾಡಬಲ್ಲರು ಎಂಬುದು ಪದೇಪದೇ ಸಾಬೀತಾಗಿದೆ. ಅವರು ಮೊದಲ ಸಲ ಕನ್ನಡ ವಿವಿಯ ಕುಲಪತಿಯಾಗುವಾಗ ಅಂದಿನ ಮುಖ್ಯಮಂತ್ರಿ ಬಂಗಾರಪ್ಪರ ಎದುರು ತಳ ಸಮುದಾಯದ ಸಾಹಿತಿಯಾಗಿ (ಕನ್ನಡ ವಿವಿಯ ಕುಲಪತಿಯಾಗುವ ಎಲ್ಲ ಅರ್ಹತೆಗಳು ಅವರಿದ್ದರೂ), ಅಲ್ಲಿ ಎರಡನೇ ಅವಧಿಗೆ ವಿಸ್ತರಣೇ ಮಾಡಿಕೊಳ್ಳುವಾಗ ಅಂದಿನ ಮುಖ್ಯಮಂತ್ರಿ ಜೆ.ಎಚ್ ಪಟೇಲರ ಎದುರು ಸಮಾಜವಾದಿ ಸಾಹಿತಿಯಾಗಿ ತಮ್ಮನ್ನು ಪ್ರಸ್ತುತಪಡಿಸಿಕೊಂಡಿದ್ದರು.

 

ಈಗ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಮತ್ತು ಇಲ್ಲೂ ಅದೇ ಸರ್ಕಾರ ಬರಬಹುದಾದ್ದರಿಂದ ಆ ಪಕ್ಷದ ವಿದ್ಯಾರ್ಥಿ ಸಂಘಟನೆ ವಕ್ತಾರರಾಗುವ ಮೂಲಕ ಸಾಹಿತ್ಯಾಸಕ್ತರಲ್ಲಿ ಅಸಹ್ಯ ಮೂಡಿಸಿದ್ದಾರೆ. ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಹೆಸರು ತಗಲು ಹಾಕಿಸಿಕೊಂಡಿರುವ, ಕೋಮುವಾದಿ ಸಿದ್ದಾಂತಗಳ ವಿದ್ಯಾರ್ಥಿ ಸಂಘಟನೆಯ ಸದಸ್ಯರಾಗುವ ಮೂಲಕ ಅವರು ಯಾವ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೋ?

3. ವಿದ್ಯಾರ್ಥಿಗಳೊಂದಿಗೆ ವಿದ್ಯಾರ್ಥಿಯಾದ ರಾಜಕಾರಣಿ
ಸಮಾಜಕ್ಕೆ ಆದರ್ಶವಾಗಬೇಕಿದ್ದ ವಿಜ್ಞಾನಿ ಮತ್ತು ಸಾಹಿತಿ ತಪ್ಪು ನಡೆಗಳನ್ನು ಇಟ್ಟ ಈ ಸಂದರ್ಭದಲ್ಲಿ ರಾಜಧಾನಿಯ ಮಹತ್ವದ ರಾಜಕೀಯ ಚಟುವಟಿಕೆಗಳನ್ನು ಬದಿಗೆ ಸರಿಸಿ, ವಿದ್ಯಾರ್ಥಿಗಳೊಂದಿಗೆ ಒಂದು ದಿನವನ್ನು ಕಳೆಯುವ ಮೂಲಕ ಎಚ್.ಕೆ. ಪಾಟೀಲರು ಆದರ್ಶದ ನಡೆ ಇಟ್ಟಿದ್ದಾರೆ. ಗ್ರಾಮೀಣಾಭಿವೃದ್ಧಿ ವಿ.ವಿಯ ಸ್ನಾತಕೋತ್ತರ ವಿದ್ಯಾರ್ಥಿಗಳ ಮೊದಲ ಬ್ಯಾಚಿನ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಲೆಂದೇ ಬೆಂಗಳೂರಿನಿಂದ ಗದಗಿಗೆ ಬಂದು ವಿದ್ಯಾರ್ಥಿಗಳೊಂದಿಗೆ ವಿದ್ಯಾರ್ಥಿಯಾಗಿ, ಗ್ರಾಮೀಣ ಭಾರತದ ಅಭಿವೃದ್ಧಿ ಅಗತ್ಯತೆಯ ಕುರಿತು ಮಾತಾಡಿದ್ದಾರೆ, ಸಂವಾದ ನಡೆಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರೆಲ್ಲೂ ರಾಜಕಾರಣದ ವಿಷಯ ಪ್ರಸ್ತಾಪಿಸದೇ ಘನತೆ ಮೆರೆದಿದ್ದಾರೆ.

ಇವತ್ತು ರಾಜಕಾರಣಿಗಳೆಲ್ಲ ಪಕ್ಷ ರಾಜಕಾರಣದಲ್ಲಿ ಮುಳುಗಿರುವ ‘ಅಧಿಕಾರದ ಅಮಲಿನ’ ಸಂದರ್ಭದಲ್ಲಿ ಎಚ್. ಕೆ. ಪಾಟೀಲ ವಿದ್ಯಾರ್ಥಿಗಳ ಜೊತೆ ಇದ್ದುದು ಆದರ್ಶಪ್ರಾಯವಾದರೆ, ಶಿವನ್ ಮತ್ತು ಕಂಬಾರ ಮಾತ್ರ ವಿದ್ಯಾರ್ಥಿಗಳಿಗೆ ತಪ್ಪು ಸಂದೇಶ ರವಾನಿಸುವ ಮೂಲಕ ಸಣ್ಣವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...