Homeಕರ್ನಾಟಕಮೌಢ್ಯದ ವಕ್ತಾರರಾದ ವಿಜ್ಞಾನಿ, ಕೋಮುವಾದ ಅಪ್ಪಿಕೊಂಡ ಸಾಹಿತಿ, ವಿದ್ಯಾರ್ಥಿಸ್ನೇಹಿಯಾದ ರಾಜಕಾರಣಿ... ಯಾರು ಗೊತ್ತೆ?

ಮೌಢ್ಯದ ವಕ್ತಾರರಾದ ವಿಜ್ಞಾನಿ, ಕೋಮುವಾದ ಅಪ್ಪಿಕೊಂಡ ಸಾಹಿತಿ, ವಿದ್ಯಾರ್ಥಿಸ್ನೇಹಿಯಾದ ರಾಜಕಾರಣಿ… ಯಾರು ಗೊತ್ತೆ?

- Advertisement -
- Advertisement -

ಈ ವಾರ ಸಂಭವಿಸಿದ ಮೂವರು ಗಣ್ಯರ ವಿಶೇಷ ನಡೆಗಳನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ. ಇಲ್ಲಿ ಒಂದು ವೈರುಧ್ಯವಿದೆ. ಸಾಮಾನ್ಯವಾಗಿ, ಅದರಲ್ಲು ಬಿರುಸಿನ ರಾಜಕೀಯ ಚಟುವಟಿಕೆ ನಡೆದಿರುವ ಹೊತ್ತಿನಲ್ಲಿ ರಾಜಕಾರಣ ಬದಿಗಿಟ್ಟು ವಿದ್ಯಾರ್ಥಿಗಳ ಜೊತೆ ರಾಜಕಾರಣಿ ನಿಂತರೆ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸಲು ಯತ್ನಿಸಬೇಕಾದ ವಿಜ್ಞಾನಿ ಮೂಢನಂಬಿಕೆಯನ್ನು ವೈಭವಿಕರಿಸಿದರು. ಇತ್ತೀಚಿಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಹೆಸರು ಉಲ್ಲೇಖಿಸಲ್ಪಟ್ಟಿರುವ ವಿದ್ಯಾರ್ಥಿ ಸಂಘಟನೆಯನ್ನು ಪ್ರಮೋಟ್ ಮಾಡಲು ‘ಪ್ರಗತಿಪರ’ ಸಾಹಿತಿ ಹೊರಟರು… ಇದನ್ನು ವಿವರಿಸುವ ಮೂರು ತುಣುಕುಗಳಲ್ಲಿ ಇವೆ:.

1. ದೇವಸ್ಥಾನದೊಳ್ ಚಂದ್ರಯಾನ್: ಇಸ್ರೋ ಮುಖ್ಯಸ್ಥರ ಟೆಂಪಲ್‍ರನ್!
ಅಯ್ಯ ತನ್ನ ತಾನರಿಯಬೇಕಲ್ಲದೇ,
ತನ್ನಲ್ಲಿ ಅರಿವು ಸ್ವಯವಾಗಿರಲು ಅನ್ಯರಲ್ಲಿ
ಕೇಳಲುಂಟೇ ಚೆನ್ನಮಲ್ಲಿಕಾರ್ಜುನಾ,
ನೀನರಿವಾಗಿ ಎನಗೆ ಮುಂದುದೋರಿದ ಕಾರಣ
ನಿಮ್ಮಿಂದ ನಿಮ್ಮನರಿವೆನು
-ಅಕ್ಕಮಹಾದೇವಿ

ಇಸ್ರೋ ಮುಖ್ಯಸ್ಥರು ವಿದ್ಯಾದೀಶತೀರ್ಥ ಸ್ವಾಮಿಯವರ ಮುಂದೆ ಕುಳಿತ ಚಿತ್ರ ನೋಡಿದಾಗ ಅಕ್ಕನ ಈ ವಚನ ನೆನಪಾಗಿತು.. ‘ಅನ್ಯರ’ ಮುಂದೆ ತಲೆಬಾಗಿ ಅವರು ತಮ್ಮ ಅರಿವಿಗಷ್ಟೇ ಅಲ್ಲ, ಇಸ್ರೋದ ‘ಅರಿವು’, ಅದರ ಸಾಧನೆ-ಶ್ರೇಯಸ್ಸುಗಳಿಗೇ ಕಳಂಕ ತಂದಿದ್ದಾರೆ.
ಜುಲೈ 15ರಂದು ಇಸ್ರೋದ ಬಹು ಮಹತ್ತರ ‘ಚಂದ್ರಯಾನ-2’ ಆರಂಭಗೊಳ್ಳಲಿದ್ದು, ಅದರ ಯಶಸ್ಸಿಗಾಗಿ ಇಸ್ರೊ ಮುಖ್ಯಸ್ಥ ಶಿವನ್ ಅವರು ಜುಲೈ 7ರಂದು ದೇವಸ್ಥಾನಗಳನ್ನು ಸುತ್ತಿ ದೇವರ, ಸ್ವಾಮೀಜಿಗಳ ಆಶೀರ್ವಾದ ಪಡೆದರು. ಇಂಥದ್ದನ್ನು ನಮ್ಮ ರಾಜಕಾರಣಿಗಳು ಮಾಡಿದಾಗ ಟೆಂಪಲ್ ರನ್ ಎನ್ನುವ ಮಾಧ್ಯಮಗಳು ಇದಕ್ಕೆ ಮಾತ್ರ ಚಕಾರ ಎತ್ತಿಲ್ಲ.

ಉಡುಪಿ ಶ್ರೀಕೃಷ್ಣ ಮಠದಲ್ಲಿ ಅವರು ವಿದ್ಯಾದೀಶತೀರ್ಥ ಸ್ವಾಮಿಯವರ ಮುಂದೆ ನಮ್ರತೆಯಿಂದ ತಲೆಬಾಗಿ ಚಂದ್ರಯಾನ ಯಶಸ್ವಿಗೆ ಆಶೀರ್ವಾದ ಪಡೆಯುವ ಮೂಲಕ ತಮ್ಮ ಘನ ಹುದ್ದೆಗೆ ಅವಮಾನ ಮಾಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ಮಠಕ್ಕೂ ಭೇಟಿ ನೀಡಿ ಚಂದ್ರಯಾನ ಯಶಸ್ಸಿಗೆ ಪೂಜೆ ಸಲ್ಲಿಸಿದ್ದಾರೆ.

ಸಾವಿರಾರು ವಿಜ್ಞಾನಿಗಳು ಮತ್ತು ಇಂಜಿನಿಯರ್‍ ಗಳ ಅವಿರತ ಶ್ರವನ್ನು ಶಿವನ್ ಅವಮಾನಿಸಿದ್ದಾರೆ. ಈ ಹಿಂದೆಯೂ ಹಲವು ಇಸ್ರೋ ಅಧ್ಯಕ್ಷರು ಉಪಗ್ರಹಗಳ ಪ್ರತಿಕೃತಿಗಳನ್ನು ತಿರುಪತಿ ತಿಮ್ಮಪ್ಪನ ಮುಂದೆ ಇಟ್ಟು ಪೂಜೆ ಮಾಡಿಸಿ ಇಂತಹ ಮೂರ್ಖತನ ಮೆರದಿದ್ದರು. ಜನರಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಇಂತಹ ನಡೆ ತಪ್ಪು ಸಂದೇಶಗಳನ್ನು ರವಾನೆ ಮಡುತ್ತದೆ ಎಂಬ ಕನಿಷ್ಠ ಜ್ಞಾನವೂ ಇಲ್ಲದ ಇಂಹ ವಿಜ್ಞಾನಿಗಳು ಮೂಢನಂಬಿಕೆಗಳ ವಕ್ತಾರರಂತೆ ವರ್ತಿಸುವುದು ಅಕ್ಷಮ್ಯ.

ರಾಜಸ್ಥಾನದಲ್ಲಿ ವೈದ್ಯ ಸಂಘದ ಕಾರ್ಯಕ್ರಮದಲ್ಲಿ ಮುಂದಿನ ಸಾಲಿನಲ್ಲಿ ಮಹಿಳೆಯರು ಕುಳಿತಿದ್ದಕ್ಕೆ ಕೋಪಗೊಂಡ ಸ್ವಾಮೀಜಿಯೊಬ್ಬ ಕಾರ್ಯಕ್ರಮ ಬಹಿಷ್ಕರಿಸಿ ನಡೆದಿದ್ದಾನೆ. ಆತನ ಸ್ತ್ರೀದ್ವೇಷಿ ಗುಣ ಗೊತ್ತಿದ್ದರೂ ಆತನ್ನು ಕಾರ್ಯಕ್ರಮಕ್ಕೆ ವೈದ್ಯರು ಕರೆಯುತ್ತಾರೆಂದರೆ?

2. ‘ಕಾಡುಕುದುರೆ’ಗಳ ಸಂಗದಲ್ಲಿ ಕಂಬಾರರು!
ಸೃಜನಶೀಲ ಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ವಿಶಿಷ್ಠ ಸ್ಥಾನ ಗಳಿಸಿರುವ ಜ್ಞಾನಪೀಠ ಪುರಸ್ಕೃತ ಚಂದ್ರಶೇಖರ ಕಂಬಾರರು ಎಬಿವಿಪಿಯ ಸದಸ್ಯತ್ವ ಪಡೆದು, ಆ ಸಂಘಟನೆಯ ಸದಸ್ಯತ್ವ ಅಭಿಯಾನದ ಬ್ರ್ಯಾಂಡ್ ಅಂಬಾಸೆಡರ್ ಆಗಿದ್ದಾರೆ. ಕಂಬಾರ ಬ್ರಾಹ್ಮಣಶಾಹಿಯ ಆರಾಧಕರಲ್ಲ ನಿಜ. ಆದರೆ ಅಧಿಕಾರ, ಸ್ಥಾನಮಾನಕ್ಕಾಗಿ ಏನನ್ನು ಮಾಡಬಲ್ಲರು ಎಂಬುದು ಪದೇಪದೇ ಸಾಬೀತಾಗಿದೆ. ಅವರು ಮೊದಲ ಸಲ ಕನ್ನಡ ವಿವಿಯ ಕುಲಪತಿಯಾಗುವಾಗ ಅಂದಿನ ಮುಖ್ಯಮಂತ್ರಿ ಬಂಗಾರಪ್ಪರ ಎದುರು ತಳ ಸಮುದಾಯದ ಸಾಹಿತಿಯಾಗಿ (ಕನ್ನಡ ವಿವಿಯ ಕುಲಪತಿಯಾಗುವ ಎಲ್ಲ ಅರ್ಹತೆಗಳು ಅವರಿದ್ದರೂ), ಅಲ್ಲಿ ಎರಡನೇ ಅವಧಿಗೆ ವಿಸ್ತರಣೇ ಮಾಡಿಕೊಳ್ಳುವಾಗ ಅಂದಿನ ಮುಖ್ಯಮಂತ್ರಿ ಜೆ.ಎಚ್ ಪಟೇಲರ ಎದುರು ಸಮಾಜವಾದಿ ಸಾಹಿತಿಯಾಗಿ ತಮ್ಮನ್ನು ಪ್ರಸ್ತುತಪಡಿಸಿಕೊಂಡಿದ್ದರು.

 

ಈಗ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಮತ್ತು ಇಲ್ಲೂ ಅದೇ ಸರ್ಕಾರ ಬರಬಹುದಾದ್ದರಿಂದ ಆ ಪಕ್ಷದ ವಿದ್ಯಾರ್ಥಿ ಸಂಘಟನೆ ವಕ್ತಾರರಾಗುವ ಮೂಲಕ ಸಾಹಿತ್ಯಾಸಕ್ತರಲ್ಲಿ ಅಸಹ್ಯ ಮೂಡಿಸಿದ್ದಾರೆ. ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಹೆಸರು ತಗಲು ಹಾಕಿಸಿಕೊಂಡಿರುವ, ಕೋಮುವಾದಿ ಸಿದ್ದಾಂತಗಳ ವಿದ್ಯಾರ್ಥಿ ಸಂಘಟನೆಯ ಸದಸ್ಯರಾಗುವ ಮೂಲಕ ಅವರು ಯಾವ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೋ?

3. ವಿದ್ಯಾರ್ಥಿಗಳೊಂದಿಗೆ ವಿದ್ಯಾರ್ಥಿಯಾದ ರಾಜಕಾರಣಿ
ಸಮಾಜಕ್ಕೆ ಆದರ್ಶವಾಗಬೇಕಿದ್ದ ವಿಜ್ಞಾನಿ ಮತ್ತು ಸಾಹಿತಿ ತಪ್ಪು ನಡೆಗಳನ್ನು ಇಟ್ಟ ಈ ಸಂದರ್ಭದಲ್ಲಿ ರಾಜಧಾನಿಯ ಮಹತ್ವದ ರಾಜಕೀಯ ಚಟುವಟಿಕೆಗಳನ್ನು ಬದಿಗೆ ಸರಿಸಿ, ವಿದ್ಯಾರ್ಥಿಗಳೊಂದಿಗೆ ಒಂದು ದಿನವನ್ನು ಕಳೆಯುವ ಮೂಲಕ ಎಚ್.ಕೆ. ಪಾಟೀಲರು ಆದರ್ಶದ ನಡೆ ಇಟ್ಟಿದ್ದಾರೆ. ಗ್ರಾಮೀಣಾಭಿವೃದ್ಧಿ ವಿ.ವಿಯ ಸ್ನಾತಕೋತ್ತರ ವಿದ್ಯಾರ್ಥಿಗಳ ಮೊದಲ ಬ್ಯಾಚಿನ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಲೆಂದೇ ಬೆಂಗಳೂರಿನಿಂದ ಗದಗಿಗೆ ಬಂದು ವಿದ್ಯಾರ್ಥಿಗಳೊಂದಿಗೆ ವಿದ್ಯಾರ್ಥಿಯಾಗಿ, ಗ್ರಾಮೀಣ ಭಾರತದ ಅಭಿವೃದ್ಧಿ ಅಗತ್ಯತೆಯ ಕುರಿತು ಮಾತಾಡಿದ್ದಾರೆ, ಸಂವಾದ ನಡೆಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರೆಲ್ಲೂ ರಾಜಕಾರಣದ ವಿಷಯ ಪ್ರಸ್ತಾಪಿಸದೇ ಘನತೆ ಮೆರೆದಿದ್ದಾರೆ.

ಇವತ್ತು ರಾಜಕಾರಣಿಗಳೆಲ್ಲ ಪಕ್ಷ ರಾಜಕಾರಣದಲ್ಲಿ ಮುಳುಗಿರುವ ‘ಅಧಿಕಾರದ ಅಮಲಿನ’ ಸಂದರ್ಭದಲ್ಲಿ ಎಚ್. ಕೆ. ಪಾಟೀಲ ವಿದ್ಯಾರ್ಥಿಗಳ ಜೊತೆ ಇದ್ದುದು ಆದರ್ಶಪ್ರಾಯವಾದರೆ, ಶಿವನ್ ಮತ್ತು ಕಂಬಾರ ಮಾತ್ರ ವಿದ್ಯಾರ್ಥಿಗಳಿಗೆ ತಪ್ಪು ಸಂದೇಶ ರವಾನಿಸುವ ಮೂಲಕ ಸಣ್ಣವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...