Homeಕರ್ನಾಟಕಮೌಢ್ಯದ ವಕ್ತಾರರಾದ ವಿಜ್ಞಾನಿ, ಕೋಮುವಾದ ಅಪ್ಪಿಕೊಂಡ ಸಾಹಿತಿ, ವಿದ್ಯಾರ್ಥಿಸ್ನೇಹಿಯಾದ ರಾಜಕಾರಣಿ... ಯಾರು ಗೊತ್ತೆ?

ಮೌಢ್ಯದ ವಕ್ತಾರರಾದ ವಿಜ್ಞಾನಿ, ಕೋಮುವಾದ ಅಪ್ಪಿಕೊಂಡ ಸಾಹಿತಿ, ವಿದ್ಯಾರ್ಥಿಸ್ನೇಹಿಯಾದ ರಾಜಕಾರಣಿ… ಯಾರು ಗೊತ್ತೆ?

- Advertisement -
- Advertisement -

ಈ ವಾರ ಸಂಭವಿಸಿದ ಮೂವರು ಗಣ್ಯರ ವಿಶೇಷ ನಡೆಗಳನ್ನು ನಿಮ್ಮ ಮುಂದೆ ಇಡುತ್ತಿದ್ದೇವೆ. ಇಲ್ಲಿ ಒಂದು ವೈರುಧ್ಯವಿದೆ. ಸಾಮಾನ್ಯವಾಗಿ, ಅದರಲ್ಲು ಬಿರುಸಿನ ರಾಜಕೀಯ ಚಟುವಟಿಕೆ ನಡೆದಿರುವ ಹೊತ್ತಿನಲ್ಲಿ ರಾಜಕಾರಣ ಬದಿಗಿಟ್ಟು ವಿದ್ಯಾರ್ಥಿಗಳ ಜೊತೆ ರಾಜಕಾರಣಿ ನಿಂತರೆ, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆ ಮೂಡಿಸಲು ಯತ್ನಿಸಬೇಕಾದ ವಿಜ್ಞಾನಿ ಮೂಢನಂಬಿಕೆಯನ್ನು ವೈಭವಿಕರಿಸಿದರು. ಇತ್ತೀಚಿಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಹೆಸರು ಉಲ್ಲೇಖಿಸಲ್ಪಟ್ಟಿರುವ ವಿದ್ಯಾರ್ಥಿ ಸಂಘಟನೆಯನ್ನು ಪ್ರಮೋಟ್ ಮಾಡಲು ‘ಪ್ರಗತಿಪರ’ ಸಾಹಿತಿ ಹೊರಟರು… ಇದನ್ನು ವಿವರಿಸುವ ಮೂರು ತುಣುಕುಗಳಲ್ಲಿ ಇವೆ:.

1. ದೇವಸ್ಥಾನದೊಳ್ ಚಂದ್ರಯಾನ್: ಇಸ್ರೋ ಮುಖ್ಯಸ್ಥರ ಟೆಂಪಲ್‍ರನ್!
ಅಯ್ಯ ತನ್ನ ತಾನರಿಯಬೇಕಲ್ಲದೇ,
ತನ್ನಲ್ಲಿ ಅರಿವು ಸ್ವಯವಾಗಿರಲು ಅನ್ಯರಲ್ಲಿ
ಕೇಳಲುಂಟೇ ಚೆನ್ನಮಲ್ಲಿಕಾರ್ಜುನಾ,
ನೀನರಿವಾಗಿ ಎನಗೆ ಮುಂದುದೋರಿದ ಕಾರಣ
ನಿಮ್ಮಿಂದ ನಿಮ್ಮನರಿವೆನು
-ಅಕ್ಕಮಹಾದೇವಿ

ಇಸ್ರೋ ಮುಖ್ಯಸ್ಥರು ವಿದ್ಯಾದೀಶತೀರ್ಥ ಸ್ವಾಮಿಯವರ ಮುಂದೆ ಕುಳಿತ ಚಿತ್ರ ನೋಡಿದಾಗ ಅಕ್ಕನ ಈ ವಚನ ನೆನಪಾಗಿತು.. ‘ಅನ್ಯರ’ ಮುಂದೆ ತಲೆಬಾಗಿ ಅವರು ತಮ್ಮ ಅರಿವಿಗಷ್ಟೇ ಅಲ್ಲ, ಇಸ್ರೋದ ‘ಅರಿವು’, ಅದರ ಸಾಧನೆ-ಶ್ರೇಯಸ್ಸುಗಳಿಗೇ ಕಳಂಕ ತಂದಿದ್ದಾರೆ.
ಜುಲೈ 15ರಂದು ಇಸ್ರೋದ ಬಹು ಮಹತ್ತರ ‘ಚಂದ್ರಯಾನ-2’ ಆರಂಭಗೊಳ್ಳಲಿದ್ದು, ಅದರ ಯಶಸ್ಸಿಗಾಗಿ ಇಸ್ರೊ ಮುಖ್ಯಸ್ಥ ಶಿವನ್ ಅವರು ಜುಲೈ 7ರಂದು ದೇವಸ್ಥಾನಗಳನ್ನು ಸುತ್ತಿ ದೇವರ, ಸ್ವಾಮೀಜಿಗಳ ಆಶೀರ್ವಾದ ಪಡೆದರು. ಇಂಥದ್ದನ್ನು ನಮ್ಮ ರಾಜಕಾರಣಿಗಳು ಮಾಡಿದಾಗ ಟೆಂಪಲ್ ರನ್ ಎನ್ನುವ ಮಾಧ್ಯಮಗಳು ಇದಕ್ಕೆ ಮಾತ್ರ ಚಕಾರ ಎತ್ತಿಲ್ಲ.

ಉಡುಪಿ ಶ್ರೀಕೃಷ್ಣ ಮಠದಲ್ಲಿ ಅವರು ವಿದ್ಯಾದೀಶತೀರ್ಥ ಸ್ವಾಮಿಯವರ ಮುಂದೆ ನಮ್ರತೆಯಿಂದ ತಲೆಬಾಗಿ ಚಂದ್ರಯಾನ ಯಶಸ್ವಿಗೆ ಆಶೀರ್ವಾದ ಪಡೆಯುವ ಮೂಲಕ ತಮ್ಮ ಘನ ಹುದ್ದೆಗೆ ಅವಮಾನ ಮಾಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ಮಠಕ್ಕೂ ಭೇಟಿ ನೀಡಿ ಚಂದ್ರಯಾನ ಯಶಸ್ಸಿಗೆ ಪೂಜೆ ಸಲ್ಲಿಸಿದ್ದಾರೆ.

ಸಾವಿರಾರು ವಿಜ್ಞಾನಿಗಳು ಮತ್ತು ಇಂಜಿನಿಯರ್‍ ಗಳ ಅವಿರತ ಶ್ರವನ್ನು ಶಿವನ್ ಅವಮಾನಿಸಿದ್ದಾರೆ. ಈ ಹಿಂದೆಯೂ ಹಲವು ಇಸ್ರೋ ಅಧ್ಯಕ್ಷರು ಉಪಗ್ರಹಗಳ ಪ್ರತಿಕೃತಿಗಳನ್ನು ತಿರುಪತಿ ತಿಮ್ಮಪ್ಪನ ಮುಂದೆ ಇಟ್ಟು ಪೂಜೆ ಮಾಡಿಸಿ ಇಂತಹ ಮೂರ್ಖತನ ಮೆರದಿದ್ದರು. ಜನರಲ್ಲಿ ಮುಖ್ಯವಾಗಿ ವಿದ್ಯಾರ್ಥಿಗಳಲ್ಲಿ ಇಂತಹ ನಡೆ ತಪ್ಪು ಸಂದೇಶಗಳನ್ನು ರವಾನೆ ಮಡುತ್ತದೆ ಎಂಬ ಕನಿಷ್ಠ ಜ್ಞಾನವೂ ಇಲ್ಲದ ಇಂಹ ವಿಜ್ಞಾನಿಗಳು ಮೂಢನಂಬಿಕೆಗಳ ವಕ್ತಾರರಂತೆ ವರ್ತಿಸುವುದು ಅಕ್ಷಮ್ಯ.

ರಾಜಸ್ಥಾನದಲ್ಲಿ ವೈದ್ಯ ಸಂಘದ ಕಾರ್ಯಕ್ರಮದಲ್ಲಿ ಮುಂದಿನ ಸಾಲಿನಲ್ಲಿ ಮಹಿಳೆಯರು ಕುಳಿತಿದ್ದಕ್ಕೆ ಕೋಪಗೊಂಡ ಸ್ವಾಮೀಜಿಯೊಬ್ಬ ಕಾರ್ಯಕ್ರಮ ಬಹಿಷ್ಕರಿಸಿ ನಡೆದಿದ್ದಾನೆ. ಆತನ ಸ್ತ್ರೀದ್ವೇಷಿ ಗುಣ ಗೊತ್ತಿದ್ದರೂ ಆತನ್ನು ಕಾರ್ಯಕ್ರಮಕ್ಕೆ ವೈದ್ಯರು ಕರೆಯುತ್ತಾರೆಂದರೆ?

2. ‘ಕಾಡುಕುದುರೆ’ಗಳ ಸಂಗದಲ್ಲಿ ಕಂಬಾರರು!
ಸೃಜನಶೀಲ ಸಾಹಿತ್ಯದ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ವಿಶಿಷ್ಠ ಸ್ಥಾನ ಗಳಿಸಿರುವ ಜ್ಞಾನಪೀಠ ಪುರಸ್ಕೃತ ಚಂದ್ರಶೇಖರ ಕಂಬಾರರು ಎಬಿವಿಪಿಯ ಸದಸ್ಯತ್ವ ಪಡೆದು, ಆ ಸಂಘಟನೆಯ ಸದಸ್ಯತ್ವ ಅಭಿಯಾನದ ಬ್ರ್ಯಾಂಡ್ ಅಂಬಾಸೆಡರ್ ಆಗಿದ್ದಾರೆ. ಕಂಬಾರ ಬ್ರಾಹ್ಮಣಶಾಹಿಯ ಆರಾಧಕರಲ್ಲ ನಿಜ. ಆದರೆ ಅಧಿಕಾರ, ಸ್ಥಾನಮಾನಕ್ಕಾಗಿ ಏನನ್ನು ಮಾಡಬಲ್ಲರು ಎಂಬುದು ಪದೇಪದೇ ಸಾಬೀತಾಗಿದೆ. ಅವರು ಮೊದಲ ಸಲ ಕನ್ನಡ ವಿವಿಯ ಕುಲಪತಿಯಾಗುವಾಗ ಅಂದಿನ ಮುಖ್ಯಮಂತ್ರಿ ಬಂಗಾರಪ್ಪರ ಎದುರು ತಳ ಸಮುದಾಯದ ಸಾಹಿತಿಯಾಗಿ (ಕನ್ನಡ ವಿವಿಯ ಕುಲಪತಿಯಾಗುವ ಎಲ್ಲ ಅರ್ಹತೆಗಳು ಅವರಿದ್ದರೂ), ಅಲ್ಲಿ ಎರಡನೇ ಅವಧಿಗೆ ವಿಸ್ತರಣೇ ಮಾಡಿಕೊಳ್ಳುವಾಗ ಅಂದಿನ ಮುಖ್ಯಮಂತ್ರಿ ಜೆ.ಎಚ್ ಪಟೇಲರ ಎದುರು ಸಮಾಜವಾದಿ ಸಾಹಿತಿಯಾಗಿ ತಮ್ಮನ್ನು ಪ್ರಸ್ತುತಪಡಿಸಿಕೊಂಡಿದ್ದರು.

 

ಈಗ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ಮತ್ತು ಇಲ್ಲೂ ಅದೇ ಸರ್ಕಾರ ಬರಬಹುದಾದ್ದರಿಂದ ಆ ಪಕ್ಷದ ವಿದ್ಯಾರ್ಥಿ ಸಂಘಟನೆ ವಕ್ತಾರರಾಗುವ ಮೂಲಕ ಸಾಹಿತ್ಯಾಸಕ್ತರಲ್ಲಿ ಅಸಹ್ಯ ಮೂಡಿಸಿದ್ದಾರೆ. ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಹೆಸರು ತಗಲು ಹಾಕಿಸಿಕೊಂಡಿರುವ, ಕೋಮುವಾದಿ ಸಿದ್ದಾಂತಗಳ ವಿದ್ಯಾರ್ಥಿ ಸಂಘಟನೆಯ ಸದಸ್ಯರಾಗುವ ಮೂಲಕ ಅವರು ಯಾವ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೋ?

3. ವಿದ್ಯಾರ್ಥಿಗಳೊಂದಿಗೆ ವಿದ್ಯಾರ್ಥಿಯಾದ ರಾಜಕಾರಣಿ
ಸಮಾಜಕ್ಕೆ ಆದರ್ಶವಾಗಬೇಕಿದ್ದ ವಿಜ್ಞಾನಿ ಮತ್ತು ಸಾಹಿತಿ ತಪ್ಪು ನಡೆಗಳನ್ನು ಇಟ್ಟ ಈ ಸಂದರ್ಭದಲ್ಲಿ ರಾಜಧಾನಿಯ ಮಹತ್ವದ ರಾಜಕೀಯ ಚಟುವಟಿಕೆಗಳನ್ನು ಬದಿಗೆ ಸರಿಸಿ, ವಿದ್ಯಾರ್ಥಿಗಳೊಂದಿಗೆ ಒಂದು ದಿನವನ್ನು ಕಳೆಯುವ ಮೂಲಕ ಎಚ್.ಕೆ. ಪಾಟೀಲರು ಆದರ್ಶದ ನಡೆ ಇಟ್ಟಿದ್ದಾರೆ. ಗ್ರಾಮೀಣಾಭಿವೃದ್ಧಿ ವಿ.ವಿಯ ಸ್ನಾತಕೋತ್ತರ ವಿದ್ಯಾರ್ಥಿಗಳ ಮೊದಲ ಬ್ಯಾಚಿನ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಲೆಂದೇ ಬೆಂಗಳೂರಿನಿಂದ ಗದಗಿಗೆ ಬಂದು ವಿದ್ಯಾರ್ಥಿಗಳೊಂದಿಗೆ ವಿದ್ಯಾರ್ಥಿಯಾಗಿ, ಗ್ರಾಮೀಣ ಭಾರತದ ಅಭಿವೃದ್ಧಿ ಅಗತ್ಯತೆಯ ಕುರಿತು ಮಾತಾಡಿದ್ದಾರೆ, ಸಂವಾದ ನಡೆಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರೆಲ್ಲೂ ರಾಜಕಾರಣದ ವಿಷಯ ಪ್ರಸ್ತಾಪಿಸದೇ ಘನತೆ ಮೆರೆದಿದ್ದಾರೆ.

ಇವತ್ತು ರಾಜಕಾರಣಿಗಳೆಲ್ಲ ಪಕ್ಷ ರಾಜಕಾರಣದಲ್ಲಿ ಮುಳುಗಿರುವ ‘ಅಧಿಕಾರದ ಅಮಲಿನ’ ಸಂದರ್ಭದಲ್ಲಿ ಎಚ್. ಕೆ. ಪಾಟೀಲ ವಿದ್ಯಾರ್ಥಿಗಳ ಜೊತೆ ಇದ್ದುದು ಆದರ್ಶಪ್ರಾಯವಾದರೆ, ಶಿವನ್ ಮತ್ತು ಕಂಬಾರ ಮಾತ್ರ ವಿದ್ಯಾರ್ಥಿಗಳಿಗೆ ತಪ್ಪು ಸಂದೇಶ ರವಾನಿಸುವ ಮೂಲಕ ಸಣ್ಣವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...