Homeಮುಖಪುಟ‘ಇಸ್ರೋ ಗಗನ್‌ಯಾನ್‌’ - ವಿಕಾಸ್‌ ಎಂಜಿನ್‌ನ ದೀರ್ಘಾವಧಿ ಬಿಸಿ ಪರೀಕ್ಷೆ ಯಶಸ್ವಿ!

‘ಇಸ್ರೋ ಗಗನ್‌ಯಾನ್‌’ – ವಿಕಾಸ್‌ ಎಂಜಿನ್‌ನ ದೀರ್ಘಾವಧಿ ಬಿಸಿ ಪರೀಕ್ಷೆ ಯಶಸ್ವಿ!

- Advertisement -
- Advertisement -

ದೇಶದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ, ‘ಗಗನ್‌ಯಾನ್‌’ ಕಾರ್ಯಕ್ರಮಕ್ಕಾಗಿ, ‘ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ’ (ಇಸ್ರೋ)ಯು ಬುಧವಾರ ಉಡಾವಣಾ ವಾಹನ ‘ಜಿಎಸ್‌ಎಲ್‌ವಿ ಎಂಕೆಐಐ’ನ ದ್ರವ ಪ್ರೊಪೆಲ್ಲಂಟ್ ವಿಕಾಸ್ ಎಂಜಿನ್‌ನ ಮೂರನೇ ದೀರ್ಘಾವಧಿಯ ಬಿಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿತು.

ತಮಿಳುನಾಡಿನ ಮಹೇಂದ್ರಗಿರಿಯ, ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್ (ಐಪಿಆರ್‌ಸಿ) ನ ಪರೀಕ್ಷಾ ಸೌಲಭ್ಯದಲ್ಲಿ ಎಂಜಿನ್ ಅನ್ನು 240 ಸೆಕೆಂಡುಗಳ ಕಾಲ ಹಾರಿಸಲಾಯಿತು. ಎಂಜಿನ್‌ನ ಕಾರ್ಯಕ್ಷಮತೆಯು ಪರೀಕ್ಷಾ ಉದ್ದೇಶಗಳನ್ನು ಪೂರೈಸಿದೆ ಎಂದು ಇಸ್ರೋ ಹೇಳಿದೆ.

ಇದನ್ನೂ ಓದಿ: ಕೊನೆ ಕ್ಷಣದಲ್ಲಿ ಸಂಪರ್ಕ ಕಡಿದುಕೊಂಡ ಲ್ಯಾಂಡರ್ ವಿಕ್ರಮ್ : ಇಸ್ರೋದೊಂದಿಗೆ ನಾವಿದ್ದೇವೆ ಎಂದು ಧೈರ್ಯ ತುಂಬಿದ ಭಾರತ

ಭಾರತೀಯ ಉಡಾವಣಾ ವಾಹನದಲ್ಲಿ ಮನುಷ್ಯರನ್ನು “ಲೋ ಆರ್ಬಿಟ್ ಅರ್ಥ್‌” ಕಕ್ಷೆಗೆ ಕಳುಹಿಸುವ ಸಾಮರ್ಥ್ಯವನ್ನು ಪ್ರದರ್ಶಿಸುವುದು ಮತ್ತು ಅವುಗಳನ್ನು ಮತ್ತೆ ಭೂಮಿಗೆ ತರುವುದು ಗಗನ್‌ಯಾನ್‌ ಕಾರ್ಯಕ್ರಮದ ಉದ್ದೇಶವಾಗಿದೆ.

ಕೇಂದ್ರ ಬಾಹ್ಯಾಕಾಶ ಸಚಿವ (ಸ್ವತಂತ್ರ ಉಸ್ತುವಾರಿ) ಜಿತೇಂದ್ರ ಸಿಂಗ್ ಈ ವರ್ಷದ ಫೆಬ್ರವರಿಯಲ್ಲಿ ಮೊದಲ ಮಾನವರಹಿತ ಕಾರ್ಯಾಚರಣೆಯನ್ನು 2021 ರ ಡಿಸೆಂಬರ್‌ನಲ್ಲಿ ಮತ್ತು ಎರಡನೇ ಮಾನವರಹಿತ ಕಾರ್ಯಾಚರಣೆ 2022-23ರಲ್ಲಿ ಯೋಜಿಸಲಾಗಿದೆ, ನಂತರ ಮಾನವ ಸಹಿತ ಬಾಹ್ಯಾಕಾಶ ಹಾರಾಟ ಪ್ರದರ್ಶನ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಖಾಸಗಿ ವಲಯಕ್ಕೆ ಬಾಹ್ಯಾಕಾಶ ಚಟುವಟಿಕೆಯಲ್ಲಿ ಅವಕಾಶ: ಇಸ್ರೋ ಮುಖ್ಯಸ್ಥ ಕೆ.ಶಿವನ್

‘ಗಗನ್‌ಯಾನ್‌’ ಕಾರ್ಯಕ್ರಮದ ಅಂಗವಾಗಿ ನಾಲ್ಕು ಭಾರತೀಯ ಗಗನಯಾತ್ರಿ ಅಭ್ಯರ್ಥಿಗಳು ಈಗಾಗಲೇ ರಷ್ಯಾದಲ್ಲಿ ಜೆನೆರಿಕ್ ಬಾಹ್ಯಾಕಾಶ ಹಾರಾಟ ತರಬೇತಿ ಪಡೆದಿದ್ದಾರೆ. ಇಸ್ರೋದ ಹೆವಿ-ಲಿಫ್ಟ್ ಲಾಂಚರ್ ‘ಜಿಎಸ್ಎಲ್‌ವಿ ಎಂಕೆ III’ ಅನ್ನು ಈ ಮಿಷನ್‌ಗಾಗಿ ಗುರುತಿಸಲಾಗಿದೆ.

ಗಗನ್‌ಯಾನ್‌ ಕಾರ್ಯಕ್ರಮದ ಔಪಚಾರಿಕ ಘೋಷಣೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 15, 2018 ರಂದು ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಮಾಡಿದ್ದರು. ಆಗಸ್ಟ್ 15, 2022 ರಂದು ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ಮೊದಲು ಮಾನವ ಬಾಹ್ಯಾಕಾಶ ಹಾರಾಟವನ್ನು ಪ್ರಾರಂಭಿಸುವುದು ಆರಂಭಿಕ ಗುರಿಯಾಗಿತ್ತು.

ಕೆಲವು ನಿರ್ಣಾಯಕ ಚಟುವಟಿಕೆಗಳು ಮತ್ತು ಘಟಕಗಳ ಪೂರೈಕೆಯಲ್ಲಿ ಫ್ರೆಂಚ್, ರಷ್ಯನ್ ಮತ್ತು ಅಮೆರಿಕಾ ಬಾಹ್ಯಾಕಾಶ ಸಂಸ್ಥೆಗಳ ಸಹಾಯವನ್ನೂ ಇಸ್ರೋ ತೆಗೆದುಕೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ನನ್ನನ್ನು ವಿಷವುಣಿಸಿ ಕೊಲ್ಲಲು ಪ್ರಯತ್ನಿಸಲಾಗಿತ್ತು: ಇಸ್ರೋ ಹಿರಿಯ ವಿಜ್ಞಾನಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...