Homeಮುಖಪುಟಕಪ್ಪು ಕುಳಿಗಳ ಅಧ್ಯಯನಕ್ಕೆ ಇಸ್ರೋದಿಂದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ

ಕಪ್ಪು ಕುಳಿಗಳ ಅಧ್ಯಯನಕ್ಕೆ ಇಸ್ರೋದಿಂದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ

- Advertisement -
- Advertisement -

ಹೊಸ ವರ್ಷದ ಮೊದಲ ದಿನದಂದು ಬಾಹ್ಯಾಕಾಶದ ಅತ್ಯಂತ ನಿಗೂಢ ರಹಸ್ಯಗಳಲ್ಲಿ ಒಂದಾದ ಕಪ್ಪು ಕುಳಿಗಳ ಕುತೂಹಲವನ್ನು ಬಯಲಿಗೆಳೆಯಲು ಭಾರತ ಮುಂದಾಗಿದೆ.

ಇಂದು (ಜ.1) ಬೆಳಿಗ್ಗೆ 9.10 ಗಂಟೆಗೆ ಸರಿಯಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಎಕ್ಸ್‌ಪೋಸ್ಯಾಟ್ ಅಥವಾ ಎಕ್ಸ್-ರೇ ಪೋಲರಿ ಮೀಟರ್ ಉಪಗ್ರಹವನ್ನು ಉಡಾವಣೆ ಮಾಡಿದೆ.

ಇಸ್ರೋದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಎಕ್ಸ್‌ಪೋಸ್ಯಾಟ್ ಸೇರಿದಂತೆ ವಿದ್ಯಾ ಸಂಸ್ಥೆಗಳು ಮತ್ತು ಸ್ಟಾರ್ಟ್‌ ಅಪ್‌ಗಳಿಗೆ ಸಂಬಂಧಿಸಿದ ಇನ್ನೂ 10 ಉಪಗ್ರಹಗಳನ್ನು ಹೊತ್ತು ನಭಕ್ಕೆ ಚಿಮ್ಮಿದೆ.

ಎಕ್ಸ್‌ಪೋಸ್ಯಾಟ್ ಮೂಲಕ ಇಸ್ರೋದ ಪಿಎಸ್‌ಎಲ್‌ವಿ 60ನೇ ಉಪಗ್ರಹವನ್ನು ಹೊತ್ತು ಆಕಾಶಕ್ಕೆ ಹಾರಿದೆ. ಒಟ್ಟು 260 ಟನ್ ಭಾರದ ರಾಕೆಟ್ ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳನ್ನು ಅಧ್ಯಯನ ಮಾಡಲು ಸುಧಾರಿತ ಖಗೋಳ ವೀಕ್ಷಣಾಲಯವನ್ನು ಹೊಂದಿದೆ. ಇದರೊಂದಿಗೆ, ಯುಎಸ್‌ ಬಳಿಕ ಭಾರತ ಕಪ್ಪು ಕುಳಿಗಳನ್ನು ಅಧ್ಯಯನ ಮಾಡಲು ‘ವೀಕ್ಷಣಾಲಯ’ ಹೊಂದಿರುವ ರಾಕೆಟ್‌ ಉಡಾವಣೆ ಮಾಡಿದ ಎರಡನೇ ರಾಷ್ಟ್ರವೆನಿಸಿಕೊಂಡಿದೆ.

ಎಕ್ಸ್-ರೇ ಫೋಟಾನ್‌ಗಳು ಮತ್ತು ಅವುಗಳ ಧ್ರುವೀಕರಣವನ್ನು ಬಳಸಿಕೊಂಡು ಎಕ್ಸ್‌ಪೋಸ್ಯಾಟ್ ಕಪ್ಪು ರಂಧ್ರಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳ ವಿಕಿರಣವನ್ನು ಅಧ್ಯಯನ ಮಾಡಲು ಸಹಾಯ ಮಾಡಲಿದೆ. ಇದು ಪಾಲಿಕ್ಸ್‌ (ಎಕ್ಸ್-ರೇಗಳಲ್ಲಿ ಪೋಲರಿ ಮೀಟರ್ ಉಪಕರಣ) ಮತ್ತು ಎಕ್ಸ್‌ಸೆಪ್ಟ್ (ಎಕ್ಸ್-ರೇ ಸ್ಪೆಕ್ಟ್ರೋಸ್ಕೋಪಿ ಮತ್ತು ಟೈಮಿಂಗ್) ಎಂಬ ಎರಡು ಪೆಲೋಡ್‌ಗಳನ್ನು ಹೊತ್ತೊಯ್ದಿದೆ.

ಚಂದ್ರಯಾನ-3 ಮತ್ತು ಆದಿತ್ಯ ಎಲ್‌1 ಮಿಷನ್ ನಂತರ, ಎಕ್ಸ್‌ಪೋಸ್ಯಾಟ್ ಇಸ್ರೋ ಉಡಾಯಿಸಿದ ಅತ್ಯಂತ ಮಹತ್ವದ ಉಪಗ್ರಹವಾಗಿದೆ.

ಜುಲೈ 14, 2023ರಂದು ಮಹತ್ವದ ಚಂದ್ರಯಾನ 3 ಉಪಗ್ರಹವನ್ನು ಇಸ್ರೋ ಉಡಾವಣೆ ಮಾಡಿತ್ತು. ಇದು ಆಗಸ್ಟ್ 23ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಗರಿಮೆ ಮೂಡಿಸಿತ್ತು. ಬಳಿಕ ಸೂರ್ಯನ ಅಧ್ಯಯನ ದೃಷ್ಠಿಯಿಂದ 2 ಸೆಪ್ಟೆಂಬರ್ 2023ರಂದು ಇಸ್ರೋ ಆದಿತ್ಯ ಎಲ್‌-1 ಮಿಷನ್ ಉಪಗ್ರಹ ಉಡಾವಣೆ ಮಾಡಿತ್ತು.

10 ಉಪಗ್ರಹಗಳ ಯಶಸ್ವಿ ಉಡಾವಣೆ :

ಸ್ಟಾರ್ಟ್‌ಅಪ್ಸ್, ಶೈಕ್ಷಣಿಕ ಸಂಸ್ಥೆಗಳು ಮತ್ತು ಇಸ್ರೋ ಕೇಂದ್ರಗಳು ಅಭಿವೃದ್ಧಿಪಡಿಸಿರುವ ಇತರ 10 ಉಪಗ್ರಹಗಳನ್ನೂ ಪಿಎಸ್‌ಎಲ್‌ವಿ ಹೊತ್ತೊಯ್ದಿದೆ. ಟೇಕ್‌ಮೀ2ಸ್ಪೇಸ್‌ನ ರೇಡಿಯೇಶನ್ ಶೀಲ್ಡಿಂಗ್ ಎಕ್ಸ್‌ಪೆರಿಮೆಂಟಲ್ ಮಾಡ್ಯೂಲ್ (RSEM),ಮಹಿಳೆಯರಿಗಾಗಿ ಎಲ್‌ಬಿಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ತಯಾರಿಸಲಾಗಿರುವ ವುಮೆನ್ ಇಂಜಿನಿಯರ್ಡ್ ಸ್ಯಾಟಲೈಟ್ (ವೆಸ್ಯಾಟ್), ಕೆ.ಜೆ.ಸೋಮಯ್ಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅವರ ಬಿಲೀಫ್‌ಸಾ-ಟಿ0 ಹವ್ಯಾಸಿ ರೇಡಿಯೋ ಉಪಗ್ರಹ, ಇನ್ಸ್‌ಪೆಕ್ಟಿಟಿ ಸ್ಪೇಸ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್‌ನ ಗ್ರೀನ್ ಇಂಪಲ್ಸ್ ಟ್ರಾನ್ಸ್ಮಿಟರ್ (GITA),ಧ್ರುವಾ ಸ್ಪೇಸ್ ಪ್ರೈವೇಟ್ ಲಿಮಿಟೆಡ್‌ನಿಂದ ಲಾಂಚಿಂಗ್ ಎಸ್ಪಿಎಡಿಷನ್ಸ್ ಫಾರ್ ಅಸ್ಪಿರಿನ್ಗ್ ಟೆಕ್ನಾಲಜೀಸ್ -ಟೆಕ್ನಾಲಜಿ ಡೆಮೋನ್ಸ್ಟ್ರಾಟೋರ್ (LEAP-TD),ಬೆಲಟ್ರಿಕ್ಸ್‌ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್‌ನಿಂದ ರುದ್ರ 0.3 ಮತ್ತು ಅರ್ಕಾ-200, ಪಿಆರ್‌ಎಲ್‍‌ನಿಂದ ಡಸ್ಟ್ ಎಕ್ಸ್‌ಪರಿಮೆಂಟ್ (DEX),ವಿಎಸ್‌ಎಸ್‌ಸಿ ಮ್ತತು ಇಸ್ರೋದಿಂದ ಇಸ್ರೋ ಫುಯೆಲ್ ಸೆಲ್ ಪವರ್ ಸಿಸ್ಟಮ್ (ಎಫ್‌ಸಿಪಿಎಸ್) ಹಾಗೂ ಹೈ ಎನರ್ಜಿ ಸೆಬ್ ಉಪಗ್ರಹಗಳನ್ನು ಪಿಎಸ್‌ಎಲ್‌ವಿ ಹೊತ್ತೊಯ್ದಿದೆ.

ಏನಿದು ಎಕ್ಸ್‌ಪೋಸ್ಯಾಟ್ :

ಎಕ್ಸ್‌ಪೋಸ್ಯಾಟ್ ಮಿಷನ್ ಅನ್ನು ತೀವ್ರವಾದ ಎಕ್ಸ್-ರೇ ಮೂಲಗಳ ಧ್ರುವೀಕರಣವನ್ನು ತನಿಖೆ ಮಾಡಲು ವಿನ್ಯಾಸಗೊಳಿಸಲಾಗಿದ್ದು, 2021ರಲ್ಲಿ ಬಿಡುಗಡೆಯಾದ ನಾಸಾದ ಇಮೇಜಿಂಗ್ ಎಕ್ಸ್-ರೇ ಪೊಲರಿಮೆಟ್ರಿ ಎಕ್ಸ್‌ಪ್ಲೋರರ್ (IXPE) ನಂತರ ಈ ಮಿಷನ್ ಭಾರತದ ಮೊದಲ ಮೀಸಲಾದ ಪೋಲರಿಮೀಟರ್ ಮಿಷನ್ ಮಾತ್ರವಲ್ಲದೆ ವಿಶ್ವದ ಎರಡನೆಯ ಉಪಗ್ರಹವಾಗಿದೆ.

ಇದನ್ನೂ ಓದಿ : ‘ಸಬ್‌ಮರ್ಸಿಬಲ್ ವಾಹನ ಯೋಜನೆ’ ಗುಜರಾತಿಗೆ ಸ್ಥಳಾಂತರ; ಉದ್ಧವ್ ಬಣದ ಆರೋಪ ತಳ್ಳಿಹಾಕಿದ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...