Homeಮುಖಪುಟಕಪ್ಪು ಕುಳಿಗಳ ಅಧ್ಯಯನಕ್ಕೆ ಇಸ್ರೋದಿಂದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ

ಕಪ್ಪು ಕುಳಿಗಳ ಅಧ್ಯಯನಕ್ಕೆ ಇಸ್ರೋದಿಂದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ

- Advertisement -
- Advertisement -

ಹೊಸ ವರ್ಷದ ಮೊದಲ ದಿನದಂದು ಬಾಹ್ಯಾಕಾಶದ ಅತ್ಯಂತ ನಿಗೂಢ ರಹಸ್ಯಗಳಲ್ಲಿ ಒಂದಾದ ಕಪ್ಪು ಕುಳಿಗಳ ಕುತೂಹಲವನ್ನು ಬಯಲಿಗೆಳೆಯಲು ಭಾರತ ಮುಂದಾಗಿದೆ.

ಇಂದು (ಜ.1) ಬೆಳಿಗ್ಗೆ 9.10 ಗಂಟೆಗೆ ಸರಿಯಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಎಕ್ಸ್‌ಪೋಸ್ಯಾಟ್ ಅಥವಾ ಎಕ್ಸ್-ರೇ ಪೋಲರಿ ಮೀಟರ್ ಉಪಗ್ರಹವನ್ನು ಉಡಾವಣೆ ಮಾಡಿದೆ.

ಇಸ್ರೋದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಎಕ್ಸ್‌ಪೋಸ್ಯಾಟ್ ಸೇರಿದಂತೆ ವಿದ್ಯಾ ಸಂಸ್ಥೆಗಳು ಮತ್ತು ಸ್ಟಾರ್ಟ್‌ ಅಪ್‌ಗಳಿಗೆ ಸಂಬಂಧಿಸಿದ ಇನ್ನೂ 10 ಉಪಗ್ರಹಗಳನ್ನು ಹೊತ್ತು ನಭಕ್ಕೆ ಚಿಮ್ಮಿದೆ.

ಎಕ್ಸ್‌ಪೋಸ್ಯಾಟ್ ಮೂಲಕ ಇಸ್ರೋದ ಪಿಎಸ್‌ಎಲ್‌ವಿ 60ನೇ ಉಪಗ್ರಹವನ್ನು ಹೊತ್ತು ಆಕಾಶಕ್ಕೆ ಹಾರಿದೆ. ಒಟ್ಟು 260 ಟನ್ ಭಾರದ ರಾಕೆಟ್ ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳನ್ನು ಅಧ್ಯಯನ ಮಾಡಲು ಸುಧಾರಿತ ಖಗೋಳ ವೀಕ್ಷಣಾಲಯವನ್ನು ಹೊಂದಿದೆ. ಇದರೊಂದಿಗೆ, ಯುಎಸ್‌ ಬಳಿಕ ಭಾರತ ಕಪ್ಪು ಕುಳಿಗಳನ್ನು ಅಧ್ಯಯನ ಮಾಡಲು ‘ವೀಕ್ಷಣಾಲಯ’ ಹೊಂದಿರುವ ರಾಕೆಟ್‌ ಉಡಾವಣೆ ಮಾಡಿದ ಎರಡನೇ ರಾಷ್ಟ್ರವೆನಿಸಿಕೊಂಡಿದೆ.

ಎಕ್ಸ್-ರೇ ಫೋಟಾನ್‌ಗಳು ಮತ್ತು ಅವುಗಳ ಧ್ರುವೀಕರಣವನ್ನು ಬಳಸಿಕೊಂಡು ಎಕ್ಸ್‌ಪೋಸ್ಯಾಟ್ ಕಪ್ಪು ರಂಧ್ರಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳ ವಿಕಿರಣವನ್ನು ಅಧ್ಯಯನ ಮಾಡಲು ಸಹಾಯ ಮಾಡಲಿದೆ. ಇದು ಪಾಲಿಕ್ಸ್‌ (ಎಕ್ಸ್-ರೇಗಳಲ್ಲಿ ಪೋಲರಿ ಮೀಟರ್ ಉಪಕರಣ) ಮತ್ತು ಎಕ್ಸ್‌ಸೆಪ್ಟ್ (ಎಕ್ಸ್-ರೇ ಸ್ಪೆಕ್ಟ್ರೋಸ್ಕೋಪಿ ಮತ್ತು ಟೈಮಿಂಗ್) ಎಂಬ ಎರಡು ಪೆಲೋಡ್‌ಗಳನ್ನು ಹೊತ್ತೊಯ್ದಿದೆ.

ಚಂದ್ರಯಾನ-3 ಮತ್ತು ಆದಿತ್ಯ ಎಲ್‌1 ಮಿಷನ್ ನಂತರ, ಎಕ್ಸ್‌ಪೋಸ್ಯಾಟ್ ಇಸ್ರೋ ಉಡಾಯಿಸಿದ ಅತ್ಯಂತ ಮಹತ್ವದ ಉಪಗ್ರಹವಾಗಿದೆ.

ಜುಲೈ 14, 2023ರಂದು ಮಹತ್ವದ ಚಂದ್ರಯಾನ 3 ಉಪಗ್ರಹವನ್ನು ಇಸ್ರೋ ಉಡಾವಣೆ ಮಾಡಿತ್ತು. ಇದು ಆಗಸ್ಟ್ 23ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಗರಿಮೆ ಮೂಡಿಸಿತ್ತು. ಬಳಿಕ ಸೂರ್ಯನ ಅಧ್ಯಯನ ದೃಷ್ಠಿಯಿಂದ 2 ಸೆಪ್ಟೆಂಬರ್ 2023ರಂದು ಇಸ್ರೋ ಆದಿತ್ಯ ಎಲ್‌-1 ಮಿಷನ್ ಉಪಗ್ರಹ ಉಡಾವಣೆ ಮಾಡಿತ್ತು.

10 ಉಪಗ್ರಹಗಳ ಯಶಸ್ವಿ ಉಡಾವಣೆ :

ಸ್ಟಾರ್ಟ್‌ಅಪ್ಸ್, ಶೈಕ್ಷಣಿಕ ಸಂಸ್ಥೆಗಳು ಮತ್ತು ಇಸ್ರೋ ಕೇಂದ್ರಗಳು ಅಭಿವೃದ್ಧಿಪಡಿಸಿರುವ ಇತರ 10 ಉಪಗ್ರಹಗಳನ್ನೂ ಪಿಎಸ್‌ಎಲ್‌ವಿ ಹೊತ್ತೊಯ್ದಿದೆ. ಟೇಕ್‌ಮೀ2ಸ್ಪೇಸ್‌ನ ರೇಡಿಯೇಶನ್ ಶೀಲ್ಡಿಂಗ್ ಎಕ್ಸ್‌ಪೆರಿಮೆಂಟಲ್ ಮಾಡ್ಯೂಲ್ (RSEM),ಮಹಿಳೆಯರಿಗಾಗಿ ಎಲ್‌ಬಿಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ತಯಾರಿಸಲಾಗಿರುವ ವುಮೆನ್ ಇಂಜಿನಿಯರ್ಡ್ ಸ್ಯಾಟಲೈಟ್ (ವೆಸ್ಯಾಟ್), ಕೆ.ಜೆ.ಸೋಮಯ್ಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅವರ ಬಿಲೀಫ್‌ಸಾ-ಟಿ0 ಹವ್ಯಾಸಿ ರೇಡಿಯೋ ಉಪಗ್ರಹ, ಇನ್ಸ್‌ಪೆಕ್ಟಿಟಿ ಸ್ಪೇಸ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್‌ನ ಗ್ರೀನ್ ಇಂಪಲ್ಸ್ ಟ್ರಾನ್ಸ್ಮಿಟರ್ (GITA),ಧ್ರುವಾ ಸ್ಪೇಸ್ ಪ್ರೈವೇಟ್ ಲಿಮಿಟೆಡ್‌ನಿಂದ ಲಾಂಚಿಂಗ್ ಎಸ್ಪಿಎಡಿಷನ್ಸ್ ಫಾರ್ ಅಸ್ಪಿರಿನ್ಗ್ ಟೆಕ್ನಾಲಜೀಸ್ -ಟೆಕ್ನಾಲಜಿ ಡೆಮೋನ್ಸ್ಟ್ರಾಟೋರ್ (LEAP-TD),ಬೆಲಟ್ರಿಕ್ಸ್‌ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್‌ನಿಂದ ರುದ್ರ 0.3 ಮತ್ತು ಅರ್ಕಾ-200, ಪಿಆರ್‌ಎಲ್‍‌ನಿಂದ ಡಸ್ಟ್ ಎಕ್ಸ್‌ಪರಿಮೆಂಟ್ (DEX),ವಿಎಸ್‌ಎಸ್‌ಸಿ ಮ್ತತು ಇಸ್ರೋದಿಂದ ಇಸ್ರೋ ಫುಯೆಲ್ ಸೆಲ್ ಪವರ್ ಸಿಸ್ಟಮ್ (ಎಫ್‌ಸಿಪಿಎಸ್) ಹಾಗೂ ಹೈ ಎನರ್ಜಿ ಸೆಬ್ ಉಪಗ್ರಹಗಳನ್ನು ಪಿಎಸ್‌ಎಲ್‌ವಿ ಹೊತ್ತೊಯ್ದಿದೆ.

ಏನಿದು ಎಕ್ಸ್‌ಪೋಸ್ಯಾಟ್ :

ಎಕ್ಸ್‌ಪೋಸ್ಯಾಟ್ ಮಿಷನ್ ಅನ್ನು ತೀವ್ರವಾದ ಎಕ್ಸ್-ರೇ ಮೂಲಗಳ ಧ್ರುವೀಕರಣವನ್ನು ತನಿಖೆ ಮಾಡಲು ವಿನ್ಯಾಸಗೊಳಿಸಲಾಗಿದ್ದು, 2021ರಲ್ಲಿ ಬಿಡುಗಡೆಯಾದ ನಾಸಾದ ಇಮೇಜಿಂಗ್ ಎಕ್ಸ್-ರೇ ಪೊಲರಿಮೆಟ್ರಿ ಎಕ್ಸ್‌ಪ್ಲೋರರ್ (IXPE) ನಂತರ ಈ ಮಿಷನ್ ಭಾರತದ ಮೊದಲ ಮೀಸಲಾದ ಪೋಲರಿಮೀಟರ್ ಮಿಷನ್ ಮಾತ್ರವಲ್ಲದೆ ವಿಶ್ವದ ಎರಡನೆಯ ಉಪಗ್ರಹವಾಗಿದೆ.

ಇದನ್ನೂ ಓದಿ : ‘ಸಬ್‌ಮರ್ಸಿಬಲ್ ವಾಹನ ಯೋಜನೆ’ ಗುಜರಾತಿಗೆ ಸ್ಥಳಾಂತರ; ಉದ್ಧವ್ ಬಣದ ಆರೋಪ ತಳ್ಳಿಹಾಕಿದ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...