Homeಮುಖಪುಟಕಪ್ಪು ಕುಳಿಗಳ ಅಧ್ಯಯನಕ್ಕೆ ಇಸ್ರೋದಿಂದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ

ಕಪ್ಪು ಕುಳಿಗಳ ಅಧ್ಯಯನಕ್ಕೆ ಇಸ್ರೋದಿಂದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ

- Advertisement -
- Advertisement -

ಹೊಸ ವರ್ಷದ ಮೊದಲ ದಿನದಂದು ಬಾಹ್ಯಾಕಾಶದ ಅತ್ಯಂತ ನಿಗೂಢ ರಹಸ್ಯಗಳಲ್ಲಿ ಒಂದಾದ ಕಪ್ಪು ಕುಳಿಗಳ ಕುತೂಹಲವನ್ನು ಬಯಲಿಗೆಳೆಯಲು ಭಾರತ ಮುಂದಾಗಿದೆ.

ಇಂದು (ಜ.1) ಬೆಳಿಗ್ಗೆ 9.10 ಗಂಟೆಗೆ ಸರಿಯಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಎಕ್ಸ್‌ಪೋಸ್ಯಾಟ್ ಅಥವಾ ಎಕ್ಸ್-ರೇ ಪೋಲರಿ ಮೀಟರ್ ಉಪಗ್ರಹವನ್ನು ಉಡಾವಣೆ ಮಾಡಿದೆ.

ಇಸ್ರೋದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಎಕ್ಸ್‌ಪೋಸ್ಯಾಟ್ ಸೇರಿದಂತೆ ವಿದ್ಯಾ ಸಂಸ್ಥೆಗಳು ಮತ್ತು ಸ್ಟಾರ್ಟ್‌ ಅಪ್‌ಗಳಿಗೆ ಸಂಬಂಧಿಸಿದ ಇನ್ನೂ 10 ಉಪಗ್ರಹಗಳನ್ನು ಹೊತ್ತು ನಭಕ್ಕೆ ಚಿಮ್ಮಿದೆ.

ಎಕ್ಸ್‌ಪೋಸ್ಯಾಟ್ ಮೂಲಕ ಇಸ್ರೋದ ಪಿಎಸ್‌ಎಲ್‌ವಿ 60ನೇ ಉಪಗ್ರಹವನ್ನು ಹೊತ್ತು ಆಕಾಶಕ್ಕೆ ಹಾರಿದೆ. ಒಟ್ಟು 260 ಟನ್ ಭಾರದ ರಾಕೆಟ್ ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳನ್ನು ಅಧ್ಯಯನ ಮಾಡಲು ಸುಧಾರಿತ ಖಗೋಳ ವೀಕ್ಷಣಾಲಯವನ್ನು ಹೊಂದಿದೆ. ಇದರೊಂದಿಗೆ, ಯುಎಸ್‌ ಬಳಿಕ ಭಾರತ ಕಪ್ಪು ಕುಳಿಗಳನ್ನು ಅಧ್ಯಯನ ಮಾಡಲು ‘ವೀಕ್ಷಣಾಲಯ’ ಹೊಂದಿರುವ ರಾಕೆಟ್‌ ಉಡಾವಣೆ ಮಾಡಿದ ಎರಡನೇ ರಾಷ್ಟ್ರವೆನಿಸಿಕೊಂಡಿದೆ.

ಎಕ್ಸ್-ರೇ ಫೋಟಾನ್‌ಗಳು ಮತ್ತು ಅವುಗಳ ಧ್ರುವೀಕರಣವನ್ನು ಬಳಸಿಕೊಂಡು ಎಕ್ಸ್‌ಪೋಸ್ಯಾಟ್ ಕಪ್ಪು ರಂಧ್ರಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳ ವಿಕಿರಣವನ್ನು ಅಧ್ಯಯನ ಮಾಡಲು ಸಹಾಯ ಮಾಡಲಿದೆ. ಇದು ಪಾಲಿಕ್ಸ್‌ (ಎಕ್ಸ್-ರೇಗಳಲ್ಲಿ ಪೋಲರಿ ಮೀಟರ್ ಉಪಕರಣ) ಮತ್ತು ಎಕ್ಸ್‌ಸೆಪ್ಟ್ (ಎಕ್ಸ್-ರೇ ಸ್ಪೆಕ್ಟ್ರೋಸ್ಕೋಪಿ ಮತ್ತು ಟೈಮಿಂಗ್) ಎಂಬ ಎರಡು ಪೆಲೋಡ್‌ಗಳನ್ನು ಹೊತ್ತೊಯ್ದಿದೆ.

ಚಂದ್ರಯಾನ-3 ಮತ್ತು ಆದಿತ್ಯ ಎಲ್‌1 ಮಿಷನ್ ನಂತರ, ಎಕ್ಸ್‌ಪೋಸ್ಯಾಟ್ ಇಸ್ರೋ ಉಡಾಯಿಸಿದ ಅತ್ಯಂತ ಮಹತ್ವದ ಉಪಗ್ರಹವಾಗಿದೆ.

ಜುಲೈ 14, 2023ರಂದು ಮಹತ್ವದ ಚಂದ್ರಯಾನ 3 ಉಪಗ್ರಹವನ್ನು ಇಸ್ರೋ ಉಡಾವಣೆ ಮಾಡಿತ್ತು. ಇದು ಆಗಸ್ಟ್ 23ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಗರಿಮೆ ಮೂಡಿಸಿತ್ತು. ಬಳಿಕ ಸೂರ್ಯನ ಅಧ್ಯಯನ ದೃಷ್ಠಿಯಿಂದ 2 ಸೆಪ್ಟೆಂಬರ್ 2023ರಂದು ಇಸ್ರೋ ಆದಿತ್ಯ ಎಲ್‌-1 ಮಿಷನ್ ಉಪಗ್ರಹ ಉಡಾವಣೆ ಮಾಡಿತ್ತು.

10 ಉಪಗ್ರಹಗಳ ಯಶಸ್ವಿ ಉಡಾವಣೆ :

ಸ್ಟಾರ್ಟ್‌ಅಪ್ಸ್, ಶೈಕ್ಷಣಿಕ ಸಂಸ್ಥೆಗಳು ಮತ್ತು ಇಸ್ರೋ ಕೇಂದ್ರಗಳು ಅಭಿವೃದ್ಧಿಪಡಿಸಿರುವ ಇತರ 10 ಉಪಗ್ರಹಗಳನ್ನೂ ಪಿಎಸ್‌ಎಲ್‌ವಿ ಹೊತ್ತೊಯ್ದಿದೆ. ಟೇಕ್‌ಮೀ2ಸ್ಪೇಸ್‌ನ ರೇಡಿಯೇಶನ್ ಶೀಲ್ಡಿಂಗ್ ಎಕ್ಸ್‌ಪೆರಿಮೆಂಟಲ್ ಮಾಡ್ಯೂಲ್ (RSEM),ಮಹಿಳೆಯರಿಗಾಗಿ ಎಲ್‌ಬಿಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ತಯಾರಿಸಲಾಗಿರುವ ವುಮೆನ್ ಇಂಜಿನಿಯರ್ಡ್ ಸ್ಯಾಟಲೈಟ್ (ವೆಸ್ಯಾಟ್), ಕೆ.ಜೆ.ಸೋಮಯ್ಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅವರ ಬಿಲೀಫ್‌ಸಾ-ಟಿ0 ಹವ್ಯಾಸಿ ರೇಡಿಯೋ ಉಪಗ್ರಹ, ಇನ್ಸ್‌ಪೆಕ್ಟಿಟಿ ಸ್ಪೇಸ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್‌ನ ಗ್ರೀನ್ ಇಂಪಲ್ಸ್ ಟ್ರಾನ್ಸ್ಮಿಟರ್ (GITA),ಧ್ರುವಾ ಸ್ಪೇಸ್ ಪ್ರೈವೇಟ್ ಲಿಮಿಟೆಡ್‌ನಿಂದ ಲಾಂಚಿಂಗ್ ಎಸ್ಪಿಎಡಿಷನ್ಸ್ ಫಾರ್ ಅಸ್ಪಿರಿನ್ಗ್ ಟೆಕ್ನಾಲಜೀಸ್ -ಟೆಕ್ನಾಲಜಿ ಡೆಮೋನ್ಸ್ಟ್ರಾಟೋರ್ (LEAP-TD),ಬೆಲಟ್ರಿಕ್ಸ್‌ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್‌ನಿಂದ ರುದ್ರ 0.3 ಮತ್ತು ಅರ್ಕಾ-200, ಪಿಆರ್‌ಎಲ್‍‌ನಿಂದ ಡಸ್ಟ್ ಎಕ್ಸ್‌ಪರಿಮೆಂಟ್ (DEX),ವಿಎಸ್‌ಎಸ್‌ಸಿ ಮ್ತತು ಇಸ್ರೋದಿಂದ ಇಸ್ರೋ ಫುಯೆಲ್ ಸೆಲ್ ಪವರ್ ಸಿಸ್ಟಮ್ (ಎಫ್‌ಸಿಪಿಎಸ್) ಹಾಗೂ ಹೈ ಎನರ್ಜಿ ಸೆಬ್ ಉಪಗ್ರಹಗಳನ್ನು ಪಿಎಸ್‌ಎಲ್‌ವಿ ಹೊತ್ತೊಯ್ದಿದೆ.

ಏನಿದು ಎಕ್ಸ್‌ಪೋಸ್ಯಾಟ್ :

ಎಕ್ಸ್‌ಪೋಸ್ಯಾಟ್ ಮಿಷನ್ ಅನ್ನು ತೀವ್ರವಾದ ಎಕ್ಸ್-ರೇ ಮೂಲಗಳ ಧ್ರುವೀಕರಣವನ್ನು ತನಿಖೆ ಮಾಡಲು ವಿನ್ಯಾಸಗೊಳಿಸಲಾಗಿದ್ದು, 2021ರಲ್ಲಿ ಬಿಡುಗಡೆಯಾದ ನಾಸಾದ ಇಮೇಜಿಂಗ್ ಎಕ್ಸ್-ರೇ ಪೊಲರಿಮೆಟ್ರಿ ಎಕ್ಸ್‌ಪ್ಲೋರರ್ (IXPE) ನಂತರ ಈ ಮಿಷನ್ ಭಾರತದ ಮೊದಲ ಮೀಸಲಾದ ಪೋಲರಿಮೀಟರ್ ಮಿಷನ್ ಮಾತ್ರವಲ್ಲದೆ ವಿಶ್ವದ ಎರಡನೆಯ ಉಪಗ್ರಹವಾಗಿದೆ.

ಇದನ್ನೂ ಓದಿ : ‘ಸಬ್‌ಮರ್ಸಿಬಲ್ ವಾಹನ ಯೋಜನೆ’ ಗುಜರಾತಿಗೆ ಸ್ಥಳಾಂತರ; ಉದ್ಧವ್ ಬಣದ ಆರೋಪ ತಳ್ಳಿಹಾಕಿದ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...