Homeಮುಖಪುಟಕಪ್ಪು ಕುಳಿಗಳ ಅಧ್ಯಯನಕ್ಕೆ ಇಸ್ರೋದಿಂದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ

ಕಪ್ಪು ಕುಳಿಗಳ ಅಧ್ಯಯನಕ್ಕೆ ಇಸ್ರೋದಿಂದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ

- Advertisement -
- Advertisement -

ಹೊಸ ವರ್ಷದ ಮೊದಲ ದಿನದಂದು ಬಾಹ್ಯಾಕಾಶದ ಅತ್ಯಂತ ನಿಗೂಢ ರಹಸ್ಯಗಳಲ್ಲಿ ಒಂದಾದ ಕಪ್ಪು ಕುಳಿಗಳ ಕುತೂಹಲವನ್ನು ಬಯಲಿಗೆಳೆಯಲು ಭಾರತ ಮುಂದಾಗಿದೆ.

ಇಂದು (ಜ.1) ಬೆಳಿಗ್ಗೆ 9.10 ಗಂಟೆಗೆ ಸರಿಯಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಎಕ್ಸ್‌ಪೋಸ್ಯಾಟ್ ಅಥವಾ ಎಕ್ಸ್-ರೇ ಪೋಲರಿ ಮೀಟರ್ ಉಪಗ್ರಹವನ್ನು ಉಡಾವಣೆ ಮಾಡಿದೆ.

ಇಸ್ರೋದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಎಕ್ಸ್‌ಪೋಸ್ಯಾಟ್ ಸೇರಿದಂತೆ ವಿದ್ಯಾ ಸಂಸ್ಥೆಗಳು ಮತ್ತು ಸ್ಟಾರ್ಟ್‌ ಅಪ್‌ಗಳಿಗೆ ಸಂಬಂಧಿಸಿದ ಇನ್ನೂ 10 ಉಪಗ್ರಹಗಳನ್ನು ಹೊತ್ತು ನಭಕ್ಕೆ ಚಿಮ್ಮಿದೆ.

ಎಕ್ಸ್‌ಪೋಸ್ಯಾಟ್ ಮೂಲಕ ಇಸ್ರೋದ ಪಿಎಸ್‌ಎಲ್‌ವಿ 60ನೇ ಉಪಗ್ರಹವನ್ನು ಹೊತ್ತು ಆಕಾಶಕ್ಕೆ ಹಾರಿದೆ. ಒಟ್ಟು 260 ಟನ್ ಭಾರದ ರಾಕೆಟ್ ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳನ್ನು ಅಧ್ಯಯನ ಮಾಡಲು ಸುಧಾರಿತ ಖಗೋಳ ವೀಕ್ಷಣಾಲಯವನ್ನು ಹೊಂದಿದೆ. ಇದರೊಂದಿಗೆ, ಯುಎಸ್‌ ಬಳಿಕ ಭಾರತ ಕಪ್ಪು ಕುಳಿಗಳನ್ನು ಅಧ್ಯಯನ ಮಾಡಲು ‘ವೀಕ್ಷಣಾಲಯ’ ಹೊಂದಿರುವ ರಾಕೆಟ್‌ ಉಡಾವಣೆ ಮಾಡಿದ ಎರಡನೇ ರಾಷ್ಟ್ರವೆನಿಸಿಕೊಂಡಿದೆ.

ಎಕ್ಸ್-ರೇ ಫೋಟಾನ್‌ಗಳು ಮತ್ತು ಅವುಗಳ ಧ್ರುವೀಕರಣವನ್ನು ಬಳಸಿಕೊಂಡು ಎಕ್ಸ್‌ಪೋಸ್ಯಾಟ್ ಕಪ್ಪು ರಂಧ್ರಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳ ವಿಕಿರಣವನ್ನು ಅಧ್ಯಯನ ಮಾಡಲು ಸಹಾಯ ಮಾಡಲಿದೆ. ಇದು ಪಾಲಿಕ್ಸ್‌ (ಎಕ್ಸ್-ರೇಗಳಲ್ಲಿ ಪೋಲರಿ ಮೀಟರ್ ಉಪಕರಣ) ಮತ್ತು ಎಕ್ಸ್‌ಸೆಪ್ಟ್ (ಎಕ್ಸ್-ರೇ ಸ್ಪೆಕ್ಟ್ರೋಸ್ಕೋಪಿ ಮತ್ತು ಟೈಮಿಂಗ್) ಎಂಬ ಎರಡು ಪೆಲೋಡ್‌ಗಳನ್ನು ಹೊತ್ತೊಯ್ದಿದೆ.

ಚಂದ್ರಯಾನ-3 ಮತ್ತು ಆದಿತ್ಯ ಎಲ್‌1 ಮಿಷನ್ ನಂತರ, ಎಕ್ಸ್‌ಪೋಸ್ಯಾಟ್ ಇಸ್ರೋ ಉಡಾಯಿಸಿದ ಅತ್ಯಂತ ಮಹತ್ವದ ಉಪಗ್ರಹವಾಗಿದೆ.

ಜುಲೈ 14, 2023ರಂದು ಮಹತ್ವದ ಚಂದ್ರಯಾನ 3 ಉಪಗ್ರಹವನ್ನು ಇಸ್ರೋ ಉಡಾವಣೆ ಮಾಡಿತ್ತು. ಇದು ಆಗಸ್ಟ್ 23ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಗರಿಮೆ ಮೂಡಿಸಿತ್ತು. ಬಳಿಕ ಸೂರ್ಯನ ಅಧ್ಯಯನ ದೃಷ್ಠಿಯಿಂದ 2 ಸೆಪ್ಟೆಂಬರ್ 2023ರಂದು ಇಸ್ರೋ ಆದಿತ್ಯ ಎಲ್‌-1 ಮಿಷನ್ ಉಪಗ್ರಹ ಉಡಾವಣೆ ಮಾಡಿತ್ತು.

10 ಉಪಗ್ರಹಗಳ ಯಶಸ್ವಿ ಉಡಾವಣೆ :

ಸ್ಟಾರ್ಟ್‌ಅಪ್ಸ್, ಶೈಕ್ಷಣಿಕ ಸಂಸ್ಥೆಗಳು ಮತ್ತು ಇಸ್ರೋ ಕೇಂದ್ರಗಳು ಅಭಿವೃದ್ಧಿಪಡಿಸಿರುವ ಇತರ 10 ಉಪಗ್ರಹಗಳನ್ನೂ ಪಿಎಸ್‌ಎಲ್‌ವಿ ಹೊತ್ತೊಯ್ದಿದೆ. ಟೇಕ್‌ಮೀ2ಸ್ಪೇಸ್‌ನ ರೇಡಿಯೇಶನ್ ಶೀಲ್ಡಿಂಗ್ ಎಕ್ಸ್‌ಪೆರಿಮೆಂಟಲ್ ಮಾಡ್ಯೂಲ್ (RSEM),ಮಹಿಳೆಯರಿಗಾಗಿ ಎಲ್‌ಬಿಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ತಯಾರಿಸಲಾಗಿರುವ ವುಮೆನ್ ಇಂಜಿನಿಯರ್ಡ್ ಸ್ಯಾಟಲೈಟ್ (ವೆಸ್ಯಾಟ್), ಕೆ.ಜೆ.ಸೋಮಯ್ಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅವರ ಬಿಲೀಫ್‌ಸಾ-ಟಿ0 ಹವ್ಯಾಸಿ ರೇಡಿಯೋ ಉಪಗ್ರಹ, ಇನ್ಸ್‌ಪೆಕ್ಟಿಟಿ ಸ್ಪೇಸ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್‌ನ ಗ್ರೀನ್ ಇಂಪಲ್ಸ್ ಟ್ರಾನ್ಸ್ಮಿಟರ್ (GITA),ಧ್ರುವಾ ಸ್ಪೇಸ್ ಪ್ರೈವೇಟ್ ಲಿಮಿಟೆಡ್‌ನಿಂದ ಲಾಂಚಿಂಗ್ ಎಸ್ಪಿಎಡಿಷನ್ಸ್ ಫಾರ್ ಅಸ್ಪಿರಿನ್ಗ್ ಟೆಕ್ನಾಲಜೀಸ್ -ಟೆಕ್ನಾಲಜಿ ಡೆಮೋನ್ಸ್ಟ್ರಾಟೋರ್ (LEAP-TD),ಬೆಲಟ್ರಿಕ್ಸ್‌ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್‌ನಿಂದ ರುದ್ರ 0.3 ಮತ್ತು ಅರ್ಕಾ-200, ಪಿಆರ್‌ಎಲ್‍‌ನಿಂದ ಡಸ್ಟ್ ಎಕ್ಸ್‌ಪರಿಮೆಂಟ್ (DEX),ವಿಎಸ್‌ಎಸ್‌ಸಿ ಮ್ತತು ಇಸ್ರೋದಿಂದ ಇಸ್ರೋ ಫುಯೆಲ್ ಸೆಲ್ ಪವರ್ ಸಿಸ್ಟಮ್ (ಎಫ್‌ಸಿಪಿಎಸ್) ಹಾಗೂ ಹೈ ಎನರ್ಜಿ ಸೆಬ್ ಉಪಗ್ರಹಗಳನ್ನು ಪಿಎಸ್‌ಎಲ್‌ವಿ ಹೊತ್ತೊಯ್ದಿದೆ.

ಏನಿದು ಎಕ್ಸ್‌ಪೋಸ್ಯಾಟ್ :

ಎಕ್ಸ್‌ಪೋಸ್ಯಾಟ್ ಮಿಷನ್ ಅನ್ನು ತೀವ್ರವಾದ ಎಕ್ಸ್-ರೇ ಮೂಲಗಳ ಧ್ರುವೀಕರಣವನ್ನು ತನಿಖೆ ಮಾಡಲು ವಿನ್ಯಾಸಗೊಳಿಸಲಾಗಿದ್ದು, 2021ರಲ್ಲಿ ಬಿಡುಗಡೆಯಾದ ನಾಸಾದ ಇಮೇಜಿಂಗ್ ಎಕ್ಸ್-ರೇ ಪೊಲರಿಮೆಟ್ರಿ ಎಕ್ಸ್‌ಪ್ಲೋರರ್ (IXPE) ನಂತರ ಈ ಮಿಷನ್ ಭಾರತದ ಮೊದಲ ಮೀಸಲಾದ ಪೋಲರಿಮೀಟರ್ ಮಿಷನ್ ಮಾತ್ರವಲ್ಲದೆ ವಿಶ್ವದ ಎರಡನೆಯ ಉಪಗ್ರಹವಾಗಿದೆ.

ಇದನ್ನೂ ಓದಿ : ‘ಸಬ್‌ಮರ್ಸಿಬಲ್ ವಾಹನ ಯೋಜನೆ’ ಗುಜರಾತಿಗೆ ಸ್ಥಳಾಂತರ; ಉದ್ಧವ್ ಬಣದ ಆರೋಪ ತಳ್ಳಿಹಾಕಿದ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...