Homeಮುಖಪುಟಕಪ್ಪು ಕುಳಿಗಳ ಅಧ್ಯಯನಕ್ಕೆ ಇಸ್ರೋದಿಂದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ

ಕಪ್ಪು ಕುಳಿಗಳ ಅಧ್ಯಯನಕ್ಕೆ ಇಸ್ರೋದಿಂದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ

- Advertisement -
- Advertisement -

ಹೊಸ ವರ್ಷದ ಮೊದಲ ದಿನದಂದು ಬಾಹ್ಯಾಕಾಶದ ಅತ್ಯಂತ ನಿಗೂಢ ರಹಸ್ಯಗಳಲ್ಲಿ ಒಂದಾದ ಕಪ್ಪು ಕುಳಿಗಳ ಕುತೂಹಲವನ್ನು ಬಯಲಿಗೆಳೆಯಲು ಭಾರತ ಮುಂದಾಗಿದೆ.

ಇಂದು (ಜ.1) ಬೆಳಿಗ್ಗೆ 9.10 ಗಂಟೆಗೆ ಸರಿಯಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಎಕ್ಸ್‌ಪೋಸ್ಯಾಟ್ ಅಥವಾ ಎಕ್ಸ್-ರೇ ಪೋಲರಿ ಮೀಟರ್ ಉಪಗ್ರಹವನ್ನು ಉಡಾವಣೆ ಮಾಡಿದೆ.

ಇಸ್ರೋದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಎಕ್ಸ್‌ಪೋಸ್ಯಾಟ್ ಸೇರಿದಂತೆ ವಿದ್ಯಾ ಸಂಸ್ಥೆಗಳು ಮತ್ತು ಸ್ಟಾರ್ಟ್‌ ಅಪ್‌ಗಳಿಗೆ ಸಂಬಂಧಿಸಿದ ಇನ್ನೂ 10 ಉಪಗ್ರಹಗಳನ್ನು ಹೊತ್ತು ನಭಕ್ಕೆ ಚಿಮ್ಮಿದೆ.

ಎಕ್ಸ್‌ಪೋಸ್ಯಾಟ್ ಮೂಲಕ ಇಸ್ರೋದ ಪಿಎಸ್‌ಎಲ್‌ವಿ 60ನೇ ಉಪಗ್ರಹವನ್ನು ಹೊತ್ತು ಆಕಾಶಕ್ಕೆ ಹಾರಿದೆ. ಒಟ್ಟು 260 ಟನ್ ಭಾರದ ರಾಕೆಟ್ ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳನ್ನು ಅಧ್ಯಯನ ಮಾಡಲು ಸುಧಾರಿತ ಖಗೋಳ ವೀಕ್ಷಣಾಲಯವನ್ನು ಹೊಂದಿದೆ. ಇದರೊಂದಿಗೆ, ಯುಎಸ್‌ ಬಳಿಕ ಭಾರತ ಕಪ್ಪು ಕುಳಿಗಳನ್ನು ಅಧ್ಯಯನ ಮಾಡಲು ‘ವೀಕ್ಷಣಾಲಯ’ ಹೊಂದಿರುವ ರಾಕೆಟ್‌ ಉಡಾವಣೆ ಮಾಡಿದ ಎರಡನೇ ರಾಷ್ಟ್ರವೆನಿಸಿಕೊಂಡಿದೆ.

ಎಕ್ಸ್-ರೇ ಫೋಟಾನ್‌ಗಳು ಮತ್ತು ಅವುಗಳ ಧ್ರುವೀಕರಣವನ್ನು ಬಳಸಿಕೊಂಡು ಎಕ್ಸ್‌ಪೋಸ್ಯಾಟ್ ಕಪ್ಪು ರಂಧ್ರಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳ ವಿಕಿರಣವನ್ನು ಅಧ್ಯಯನ ಮಾಡಲು ಸಹಾಯ ಮಾಡಲಿದೆ. ಇದು ಪಾಲಿಕ್ಸ್‌ (ಎಕ್ಸ್-ರೇಗಳಲ್ಲಿ ಪೋಲರಿ ಮೀಟರ್ ಉಪಕರಣ) ಮತ್ತು ಎಕ್ಸ್‌ಸೆಪ್ಟ್ (ಎಕ್ಸ್-ರೇ ಸ್ಪೆಕ್ಟ್ರೋಸ್ಕೋಪಿ ಮತ್ತು ಟೈಮಿಂಗ್) ಎಂಬ ಎರಡು ಪೆಲೋಡ್‌ಗಳನ್ನು ಹೊತ್ತೊಯ್ದಿದೆ.

ಚಂದ್ರಯಾನ-3 ಮತ್ತು ಆದಿತ್ಯ ಎಲ್‌1 ಮಿಷನ್ ನಂತರ, ಎಕ್ಸ್‌ಪೋಸ್ಯಾಟ್ ಇಸ್ರೋ ಉಡಾಯಿಸಿದ ಅತ್ಯಂತ ಮಹತ್ವದ ಉಪಗ್ರಹವಾಗಿದೆ.

ಜುಲೈ 14, 2023ರಂದು ಮಹತ್ವದ ಚಂದ್ರಯಾನ 3 ಉಪಗ್ರಹವನ್ನು ಇಸ್ರೋ ಉಡಾವಣೆ ಮಾಡಿತ್ತು. ಇದು ಆಗಸ್ಟ್ 23ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಗರಿಮೆ ಮೂಡಿಸಿತ್ತು. ಬಳಿಕ ಸೂರ್ಯನ ಅಧ್ಯಯನ ದೃಷ್ಠಿಯಿಂದ 2 ಸೆಪ್ಟೆಂಬರ್ 2023ರಂದು ಇಸ್ರೋ ಆದಿತ್ಯ ಎಲ್‌-1 ಮಿಷನ್ ಉಪಗ್ರಹ ಉಡಾವಣೆ ಮಾಡಿತ್ತು.

10 ಉಪಗ್ರಹಗಳ ಯಶಸ್ವಿ ಉಡಾವಣೆ :

ಸ್ಟಾರ್ಟ್‌ಅಪ್ಸ್, ಶೈಕ್ಷಣಿಕ ಸಂಸ್ಥೆಗಳು ಮತ್ತು ಇಸ್ರೋ ಕೇಂದ್ರಗಳು ಅಭಿವೃದ್ಧಿಪಡಿಸಿರುವ ಇತರ 10 ಉಪಗ್ರಹಗಳನ್ನೂ ಪಿಎಸ್‌ಎಲ್‌ವಿ ಹೊತ್ತೊಯ್ದಿದೆ. ಟೇಕ್‌ಮೀ2ಸ್ಪೇಸ್‌ನ ರೇಡಿಯೇಶನ್ ಶೀಲ್ಡಿಂಗ್ ಎಕ್ಸ್‌ಪೆರಿಮೆಂಟಲ್ ಮಾಡ್ಯೂಲ್ (RSEM),ಮಹಿಳೆಯರಿಗಾಗಿ ಎಲ್‌ಬಿಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ತಯಾರಿಸಲಾಗಿರುವ ವುಮೆನ್ ಇಂಜಿನಿಯರ್ಡ್ ಸ್ಯಾಟಲೈಟ್ (ವೆಸ್ಯಾಟ್), ಕೆ.ಜೆ.ಸೋಮಯ್ಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅವರ ಬಿಲೀಫ್‌ಸಾ-ಟಿ0 ಹವ್ಯಾಸಿ ರೇಡಿಯೋ ಉಪಗ್ರಹ, ಇನ್ಸ್‌ಪೆಕ್ಟಿಟಿ ಸ್ಪೇಸ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್‌ನ ಗ್ರೀನ್ ಇಂಪಲ್ಸ್ ಟ್ರಾನ್ಸ್ಮಿಟರ್ (GITA),ಧ್ರುವಾ ಸ್ಪೇಸ್ ಪ್ರೈವೇಟ್ ಲಿಮಿಟೆಡ್‌ನಿಂದ ಲಾಂಚಿಂಗ್ ಎಸ್ಪಿಎಡಿಷನ್ಸ್ ಫಾರ್ ಅಸ್ಪಿರಿನ್ಗ್ ಟೆಕ್ನಾಲಜೀಸ್ -ಟೆಕ್ನಾಲಜಿ ಡೆಮೋನ್ಸ್ಟ್ರಾಟೋರ್ (LEAP-TD),ಬೆಲಟ್ರಿಕ್ಸ್‌ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್‌ನಿಂದ ರುದ್ರ 0.3 ಮತ್ತು ಅರ್ಕಾ-200, ಪಿಆರ್‌ಎಲ್‍‌ನಿಂದ ಡಸ್ಟ್ ಎಕ್ಸ್‌ಪರಿಮೆಂಟ್ (DEX),ವಿಎಸ್‌ಎಸ್‌ಸಿ ಮ್ತತು ಇಸ್ರೋದಿಂದ ಇಸ್ರೋ ಫುಯೆಲ್ ಸೆಲ್ ಪವರ್ ಸಿಸ್ಟಮ್ (ಎಫ್‌ಸಿಪಿಎಸ್) ಹಾಗೂ ಹೈ ಎನರ್ಜಿ ಸೆಬ್ ಉಪಗ್ರಹಗಳನ್ನು ಪಿಎಸ್‌ಎಲ್‌ವಿ ಹೊತ್ತೊಯ್ದಿದೆ.

ಏನಿದು ಎಕ್ಸ್‌ಪೋಸ್ಯಾಟ್ :

ಎಕ್ಸ್‌ಪೋಸ್ಯಾಟ್ ಮಿಷನ್ ಅನ್ನು ತೀವ್ರವಾದ ಎಕ್ಸ್-ರೇ ಮೂಲಗಳ ಧ್ರುವೀಕರಣವನ್ನು ತನಿಖೆ ಮಾಡಲು ವಿನ್ಯಾಸಗೊಳಿಸಲಾಗಿದ್ದು, 2021ರಲ್ಲಿ ಬಿಡುಗಡೆಯಾದ ನಾಸಾದ ಇಮೇಜಿಂಗ್ ಎಕ್ಸ್-ರೇ ಪೊಲರಿಮೆಟ್ರಿ ಎಕ್ಸ್‌ಪ್ಲೋರರ್ (IXPE) ನಂತರ ಈ ಮಿಷನ್ ಭಾರತದ ಮೊದಲ ಮೀಸಲಾದ ಪೋಲರಿಮೀಟರ್ ಮಿಷನ್ ಮಾತ್ರವಲ್ಲದೆ ವಿಶ್ವದ ಎರಡನೆಯ ಉಪಗ್ರಹವಾಗಿದೆ.

ಇದನ್ನೂ ಓದಿ : ‘ಸಬ್‌ಮರ್ಸಿಬಲ್ ವಾಹನ ಯೋಜನೆ’ ಗುಜರಾತಿಗೆ ಸ್ಥಳಾಂತರ; ಉದ್ಧವ್ ಬಣದ ಆರೋಪ ತಳ್ಳಿಹಾಕಿದ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...