Homeಮುಖಪುಟಕಪ್ಪು ಕುಳಿಗಳ ಅಧ್ಯಯನಕ್ಕೆ ಇಸ್ರೋದಿಂದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ

ಕಪ್ಪು ಕುಳಿಗಳ ಅಧ್ಯಯನಕ್ಕೆ ಇಸ್ರೋದಿಂದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ

- Advertisement -
- Advertisement -

ಹೊಸ ವರ್ಷದ ಮೊದಲ ದಿನದಂದು ಬಾಹ್ಯಾಕಾಶದ ಅತ್ಯಂತ ನಿಗೂಢ ರಹಸ್ಯಗಳಲ್ಲಿ ಒಂದಾದ ಕಪ್ಪು ಕುಳಿಗಳ ಕುತೂಹಲವನ್ನು ಬಯಲಿಗೆಳೆಯಲು ಭಾರತ ಮುಂದಾಗಿದೆ.

ಇಂದು (ಜ.1) ಬೆಳಿಗ್ಗೆ 9.10 ಗಂಟೆಗೆ ಸರಿಯಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಎಕ್ಸ್‌ಪೋಸ್ಯಾಟ್ ಅಥವಾ ಎಕ್ಸ್-ರೇ ಪೋಲರಿ ಮೀಟರ್ ಉಪಗ್ರಹವನ್ನು ಉಡಾವಣೆ ಮಾಡಿದೆ.

ಇಸ್ರೋದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಎಕ್ಸ್‌ಪೋಸ್ಯಾಟ್ ಸೇರಿದಂತೆ ವಿದ್ಯಾ ಸಂಸ್ಥೆಗಳು ಮತ್ತು ಸ್ಟಾರ್ಟ್‌ ಅಪ್‌ಗಳಿಗೆ ಸಂಬಂಧಿಸಿದ ಇನ್ನೂ 10 ಉಪಗ್ರಹಗಳನ್ನು ಹೊತ್ತು ನಭಕ್ಕೆ ಚಿಮ್ಮಿದೆ.

ಎಕ್ಸ್‌ಪೋಸ್ಯಾಟ್ ಮೂಲಕ ಇಸ್ರೋದ ಪಿಎಸ್‌ಎಲ್‌ವಿ 60ನೇ ಉಪಗ್ರಹವನ್ನು ಹೊತ್ತು ಆಕಾಶಕ್ಕೆ ಹಾರಿದೆ. ಒಟ್ಟು 260 ಟನ್ ಭಾರದ ರಾಕೆಟ್ ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳನ್ನು ಅಧ್ಯಯನ ಮಾಡಲು ಸುಧಾರಿತ ಖಗೋಳ ವೀಕ್ಷಣಾಲಯವನ್ನು ಹೊಂದಿದೆ. ಇದರೊಂದಿಗೆ, ಯುಎಸ್‌ ಬಳಿಕ ಭಾರತ ಕಪ್ಪು ಕುಳಿಗಳನ್ನು ಅಧ್ಯಯನ ಮಾಡಲು ‘ವೀಕ್ಷಣಾಲಯ’ ಹೊಂದಿರುವ ರಾಕೆಟ್‌ ಉಡಾವಣೆ ಮಾಡಿದ ಎರಡನೇ ರಾಷ್ಟ್ರವೆನಿಸಿಕೊಂಡಿದೆ.

ಎಕ್ಸ್-ರೇ ಫೋಟಾನ್‌ಗಳು ಮತ್ತು ಅವುಗಳ ಧ್ರುವೀಕರಣವನ್ನು ಬಳಸಿಕೊಂಡು ಎಕ್ಸ್‌ಪೋಸ್ಯಾಟ್ ಕಪ್ಪು ರಂಧ್ರಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳ ವಿಕಿರಣವನ್ನು ಅಧ್ಯಯನ ಮಾಡಲು ಸಹಾಯ ಮಾಡಲಿದೆ. ಇದು ಪಾಲಿಕ್ಸ್‌ (ಎಕ್ಸ್-ರೇಗಳಲ್ಲಿ ಪೋಲರಿ ಮೀಟರ್ ಉಪಕರಣ) ಮತ್ತು ಎಕ್ಸ್‌ಸೆಪ್ಟ್ (ಎಕ್ಸ್-ರೇ ಸ್ಪೆಕ್ಟ್ರೋಸ್ಕೋಪಿ ಮತ್ತು ಟೈಮಿಂಗ್) ಎಂಬ ಎರಡು ಪೆಲೋಡ್‌ಗಳನ್ನು ಹೊತ್ತೊಯ್ದಿದೆ.

ಚಂದ್ರಯಾನ-3 ಮತ್ತು ಆದಿತ್ಯ ಎಲ್‌1 ಮಿಷನ್ ನಂತರ, ಎಕ್ಸ್‌ಪೋಸ್ಯಾಟ್ ಇಸ್ರೋ ಉಡಾಯಿಸಿದ ಅತ್ಯಂತ ಮಹತ್ವದ ಉಪಗ್ರಹವಾಗಿದೆ.

ಜುಲೈ 14, 2023ರಂದು ಮಹತ್ವದ ಚಂದ್ರಯಾನ 3 ಉಪಗ್ರಹವನ್ನು ಇಸ್ರೋ ಉಡಾವಣೆ ಮಾಡಿತ್ತು. ಇದು ಆಗಸ್ಟ್ 23ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಗರಿಮೆ ಮೂಡಿಸಿತ್ತು. ಬಳಿಕ ಸೂರ್ಯನ ಅಧ್ಯಯನ ದೃಷ್ಠಿಯಿಂದ 2 ಸೆಪ್ಟೆಂಬರ್ 2023ರಂದು ಇಸ್ರೋ ಆದಿತ್ಯ ಎಲ್‌-1 ಮಿಷನ್ ಉಪಗ್ರಹ ಉಡಾವಣೆ ಮಾಡಿತ್ತು.

10 ಉಪಗ್ರಹಗಳ ಯಶಸ್ವಿ ಉಡಾವಣೆ :

ಸ್ಟಾರ್ಟ್‌ಅಪ್ಸ್, ಶೈಕ್ಷಣಿಕ ಸಂಸ್ಥೆಗಳು ಮತ್ತು ಇಸ್ರೋ ಕೇಂದ್ರಗಳು ಅಭಿವೃದ್ಧಿಪಡಿಸಿರುವ ಇತರ 10 ಉಪಗ್ರಹಗಳನ್ನೂ ಪಿಎಸ್‌ಎಲ್‌ವಿ ಹೊತ್ತೊಯ್ದಿದೆ. ಟೇಕ್‌ಮೀ2ಸ್ಪೇಸ್‌ನ ರೇಡಿಯೇಶನ್ ಶೀಲ್ಡಿಂಗ್ ಎಕ್ಸ್‌ಪೆರಿಮೆಂಟಲ್ ಮಾಡ್ಯೂಲ್ (RSEM),ಮಹಿಳೆಯರಿಗಾಗಿ ಎಲ್‌ಬಿಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ತಯಾರಿಸಲಾಗಿರುವ ವುಮೆನ್ ಇಂಜಿನಿಯರ್ಡ್ ಸ್ಯಾಟಲೈಟ್ (ವೆಸ್ಯಾಟ್), ಕೆ.ಜೆ.ಸೋಮಯ್ಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅವರ ಬಿಲೀಫ್‌ಸಾ-ಟಿ0 ಹವ್ಯಾಸಿ ರೇಡಿಯೋ ಉಪಗ್ರಹ, ಇನ್ಸ್‌ಪೆಕ್ಟಿಟಿ ಸ್ಪೇಸ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್‌ನ ಗ್ರೀನ್ ಇಂಪಲ್ಸ್ ಟ್ರಾನ್ಸ್ಮಿಟರ್ (GITA),ಧ್ರುವಾ ಸ್ಪೇಸ್ ಪ್ರೈವೇಟ್ ಲಿಮಿಟೆಡ್‌ನಿಂದ ಲಾಂಚಿಂಗ್ ಎಸ್ಪಿಎಡಿಷನ್ಸ್ ಫಾರ್ ಅಸ್ಪಿರಿನ್ಗ್ ಟೆಕ್ನಾಲಜೀಸ್ -ಟೆಕ್ನಾಲಜಿ ಡೆಮೋನ್ಸ್ಟ್ರಾಟೋರ್ (LEAP-TD),ಬೆಲಟ್ರಿಕ್ಸ್‌ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್‌ನಿಂದ ರುದ್ರ 0.3 ಮತ್ತು ಅರ್ಕಾ-200, ಪಿಆರ್‌ಎಲ್‍‌ನಿಂದ ಡಸ್ಟ್ ಎಕ್ಸ್‌ಪರಿಮೆಂಟ್ (DEX),ವಿಎಸ್‌ಎಸ್‌ಸಿ ಮ್ತತು ಇಸ್ರೋದಿಂದ ಇಸ್ರೋ ಫುಯೆಲ್ ಸೆಲ್ ಪವರ್ ಸಿಸ್ಟಮ್ (ಎಫ್‌ಸಿಪಿಎಸ್) ಹಾಗೂ ಹೈ ಎನರ್ಜಿ ಸೆಬ್ ಉಪಗ್ರಹಗಳನ್ನು ಪಿಎಸ್‌ಎಲ್‌ವಿ ಹೊತ್ತೊಯ್ದಿದೆ.

ಏನಿದು ಎಕ್ಸ್‌ಪೋಸ್ಯಾಟ್ :

ಎಕ್ಸ್‌ಪೋಸ್ಯಾಟ್ ಮಿಷನ್ ಅನ್ನು ತೀವ್ರವಾದ ಎಕ್ಸ್-ರೇ ಮೂಲಗಳ ಧ್ರುವೀಕರಣವನ್ನು ತನಿಖೆ ಮಾಡಲು ವಿನ್ಯಾಸಗೊಳಿಸಲಾಗಿದ್ದು, 2021ರಲ್ಲಿ ಬಿಡುಗಡೆಯಾದ ನಾಸಾದ ಇಮೇಜಿಂಗ್ ಎಕ್ಸ್-ರೇ ಪೊಲರಿಮೆಟ್ರಿ ಎಕ್ಸ್‌ಪ್ಲೋರರ್ (IXPE) ನಂತರ ಈ ಮಿಷನ್ ಭಾರತದ ಮೊದಲ ಮೀಸಲಾದ ಪೋಲರಿಮೀಟರ್ ಮಿಷನ್ ಮಾತ್ರವಲ್ಲದೆ ವಿಶ್ವದ ಎರಡನೆಯ ಉಪಗ್ರಹವಾಗಿದೆ.

ಇದನ್ನೂ ಓದಿ : ‘ಸಬ್‌ಮರ್ಸಿಬಲ್ ವಾಹನ ಯೋಜನೆ’ ಗುಜರಾತಿಗೆ ಸ್ಥಳಾಂತರ; ಉದ್ಧವ್ ಬಣದ ಆರೋಪ ತಳ್ಳಿಹಾಕಿದ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...