Homeಮುಖಪುಟಕಪ್ಪು ಕುಳಿಗಳ ಅಧ್ಯಯನಕ್ಕೆ ಇಸ್ರೋದಿಂದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ

ಕಪ್ಪು ಕುಳಿಗಳ ಅಧ್ಯಯನಕ್ಕೆ ಇಸ್ರೋದಿಂದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ

- Advertisement -
- Advertisement -

ಹೊಸ ವರ್ಷದ ಮೊದಲ ದಿನದಂದು ಬಾಹ್ಯಾಕಾಶದ ಅತ್ಯಂತ ನಿಗೂಢ ರಹಸ್ಯಗಳಲ್ಲಿ ಒಂದಾದ ಕಪ್ಪು ಕುಳಿಗಳ ಕುತೂಹಲವನ್ನು ಬಯಲಿಗೆಳೆಯಲು ಭಾರತ ಮುಂದಾಗಿದೆ.

ಇಂದು (ಜ.1) ಬೆಳಿಗ್ಗೆ 9.10 ಗಂಟೆಗೆ ಸರಿಯಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಎಕ್ಸ್‌ಪೋಸ್ಯಾಟ್ ಅಥವಾ ಎಕ್ಸ್-ರೇ ಪೋಲರಿ ಮೀಟರ್ ಉಪಗ್ರಹವನ್ನು ಉಡಾವಣೆ ಮಾಡಿದೆ.

ಇಸ್ರೋದ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) ಎಕ್ಸ್‌ಪೋಸ್ಯಾಟ್ ಸೇರಿದಂತೆ ವಿದ್ಯಾ ಸಂಸ್ಥೆಗಳು ಮತ್ತು ಸ್ಟಾರ್ಟ್‌ ಅಪ್‌ಗಳಿಗೆ ಸಂಬಂಧಿಸಿದ ಇನ್ನೂ 10 ಉಪಗ್ರಹಗಳನ್ನು ಹೊತ್ತು ನಭಕ್ಕೆ ಚಿಮ್ಮಿದೆ.

ಎಕ್ಸ್‌ಪೋಸ್ಯಾಟ್ ಮೂಲಕ ಇಸ್ರೋದ ಪಿಎಸ್‌ಎಲ್‌ವಿ 60ನೇ ಉಪಗ್ರಹವನ್ನು ಹೊತ್ತು ಆಕಾಶಕ್ಕೆ ಹಾರಿದೆ. ಒಟ್ಟು 260 ಟನ್ ಭಾರದ ರಾಕೆಟ್ ಕಪ್ಪು ಕುಳಿಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳನ್ನು ಅಧ್ಯಯನ ಮಾಡಲು ಸುಧಾರಿತ ಖಗೋಳ ವೀಕ್ಷಣಾಲಯವನ್ನು ಹೊಂದಿದೆ. ಇದರೊಂದಿಗೆ, ಯುಎಸ್‌ ಬಳಿಕ ಭಾರತ ಕಪ್ಪು ಕುಳಿಗಳನ್ನು ಅಧ್ಯಯನ ಮಾಡಲು ‘ವೀಕ್ಷಣಾಲಯ’ ಹೊಂದಿರುವ ರಾಕೆಟ್‌ ಉಡಾವಣೆ ಮಾಡಿದ ಎರಡನೇ ರಾಷ್ಟ್ರವೆನಿಸಿಕೊಂಡಿದೆ.

ಎಕ್ಸ್-ರೇ ಫೋಟಾನ್‌ಗಳು ಮತ್ತು ಅವುಗಳ ಧ್ರುವೀಕರಣವನ್ನು ಬಳಸಿಕೊಂಡು ಎಕ್ಸ್‌ಪೋಸ್ಯಾಟ್ ಕಪ್ಪು ರಂಧ್ರಗಳು ಮತ್ತು ನ್ಯೂಟ್ರಾನ್ ನಕ್ಷತ್ರಗಳ ವಿಕಿರಣವನ್ನು ಅಧ್ಯಯನ ಮಾಡಲು ಸಹಾಯ ಮಾಡಲಿದೆ. ಇದು ಪಾಲಿಕ್ಸ್‌ (ಎಕ್ಸ್-ರೇಗಳಲ್ಲಿ ಪೋಲರಿ ಮೀಟರ್ ಉಪಕರಣ) ಮತ್ತು ಎಕ್ಸ್‌ಸೆಪ್ಟ್ (ಎಕ್ಸ್-ರೇ ಸ್ಪೆಕ್ಟ್ರೋಸ್ಕೋಪಿ ಮತ್ತು ಟೈಮಿಂಗ್) ಎಂಬ ಎರಡು ಪೆಲೋಡ್‌ಗಳನ್ನು ಹೊತ್ತೊಯ್ದಿದೆ.

ಚಂದ್ರಯಾನ-3 ಮತ್ತು ಆದಿತ್ಯ ಎಲ್‌1 ಮಿಷನ್ ನಂತರ, ಎಕ್ಸ್‌ಪೋಸ್ಯಾಟ್ ಇಸ್ರೋ ಉಡಾಯಿಸಿದ ಅತ್ಯಂತ ಮಹತ್ವದ ಉಪಗ್ರಹವಾಗಿದೆ.

ಜುಲೈ 14, 2023ರಂದು ಮಹತ್ವದ ಚಂದ್ರಯಾನ 3 ಉಪಗ್ರಹವನ್ನು ಇಸ್ರೋ ಉಡಾವಣೆ ಮಾಡಿತ್ತು. ಇದು ಆಗಸ್ಟ್ 23ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತಕ್ಕೆ ಜಾಗತಿಕ ಮಟ್ಟದಲ್ಲಿ ಗರಿಮೆ ಮೂಡಿಸಿತ್ತು. ಬಳಿಕ ಸೂರ್ಯನ ಅಧ್ಯಯನ ದೃಷ್ಠಿಯಿಂದ 2 ಸೆಪ್ಟೆಂಬರ್ 2023ರಂದು ಇಸ್ರೋ ಆದಿತ್ಯ ಎಲ್‌-1 ಮಿಷನ್ ಉಪಗ್ರಹ ಉಡಾವಣೆ ಮಾಡಿತ್ತು.

10 ಉಪಗ್ರಹಗಳ ಯಶಸ್ವಿ ಉಡಾವಣೆ :

ಸ್ಟಾರ್ಟ್‌ಅಪ್ಸ್, ಶೈಕ್ಷಣಿಕ ಸಂಸ್ಥೆಗಳು ಮತ್ತು ಇಸ್ರೋ ಕೇಂದ್ರಗಳು ಅಭಿವೃದ್ಧಿಪಡಿಸಿರುವ ಇತರ 10 ಉಪಗ್ರಹಗಳನ್ನೂ ಪಿಎಸ್‌ಎಲ್‌ವಿ ಹೊತ್ತೊಯ್ದಿದೆ. ಟೇಕ್‌ಮೀ2ಸ್ಪೇಸ್‌ನ ರೇಡಿಯೇಶನ್ ಶೀಲ್ಡಿಂಗ್ ಎಕ್ಸ್‌ಪೆರಿಮೆಂಟಲ್ ಮಾಡ್ಯೂಲ್ (RSEM),ಮಹಿಳೆಯರಿಗಾಗಿ ಎಲ್‌ಬಿಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ತಯಾರಿಸಲಾಗಿರುವ ವುಮೆನ್ ಇಂಜಿನಿಯರ್ಡ್ ಸ್ಯಾಟಲೈಟ್ (ವೆಸ್ಯಾಟ್), ಕೆ.ಜೆ.ಸೋಮಯ್ಯಾ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅವರ ಬಿಲೀಫ್‌ಸಾ-ಟಿ0 ಹವ್ಯಾಸಿ ರೇಡಿಯೋ ಉಪಗ್ರಹ, ಇನ್ಸ್‌ಪೆಕ್ಟಿಟಿ ಸ್ಪೇಸ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್‌ನ ಗ್ರೀನ್ ಇಂಪಲ್ಸ್ ಟ್ರಾನ್ಸ್ಮಿಟರ್ (GITA),ಧ್ರುವಾ ಸ್ಪೇಸ್ ಪ್ರೈವೇಟ್ ಲಿಮಿಟೆಡ್‌ನಿಂದ ಲಾಂಚಿಂಗ್ ಎಸ್ಪಿಎಡಿಷನ್ಸ್ ಫಾರ್ ಅಸ್ಪಿರಿನ್ಗ್ ಟೆಕ್ನಾಲಜೀಸ್ -ಟೆಕ್ನಾಲಜಿ ಡೆಮೋನ್ಸ್ಟ್ರಾಟೋರ್ (LEAP-TD),ಬೆಲಟ್ರಿಕ್ಸ್‌ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್‌ನಿಂದ ರುದ್ರ 0.3 ಮತ್ತು ಅರ್ಕಾ-200, ಪಿಆರ್‌ಎಲ್‍‌ನಿಂದ ಡಸ್ಟ್ ಎಕ್ಸ್‌ಪರಿಮೆಂಟ್ (DEX),ವಿಎಸ್‌ಎಸ್‌ಸಿ ಮ್ತತು ಇಸ್ರೋದಿಂದ ಇಸ್ರೋ ಫುಯೆಲ್ ಸೆಲ್ ಪವರ್ ಸಿಸ್ಟಮ್ (ಎಫ್‌ಸಿಪಿಎಸ್) ಹಾಗೂ ಹೈ ಎನರ್ಜಿ ಸೆಬ್ ಉಪಗ್ರಹಗಳನ್ನು ಪಿಎಸ್‌ಎಲ್‌ವಿ ಹೊತ್ತೊಯ್ದಿದೆ.

ಏನಿದು ಎಕ್ಸ್‌ಪೋಸ್ಯಾಟ್ :

ಎಕ್ಸ್‌ಪೋಸ್ಯಾಟ್ ಮಿಷನ್ ಅನ್ನು ತೀವ್ರವಾದ ಎಕ್ಸ್-ರೇ ಮೂಲಗಳ ಧ್ರುವೀಕರಣವನ್ನು ತನಿಖೆ ಮಾಡಲು ವಿನ್ಯಾಸಗೊಳಿಸಲಾಗಿದ್ದು, 2021ರಲ್ಲಿ ಬಿಡುಗಡೆಯಾದ ನಾಸಾದ ಇಮೇಜಿಂಗ್ ಎಕ್ಸ್-ರೇ ಪೊಲರಿಮೆಟ್ರಿ ಎಕ್ಸ್‌ಪ್ಲೋರರ್ (IXPE) ನಂತರ ಈ ಮಿಷನ್ ಭಾರತದ ಮೊದಲ ಮೀಸಲಾದ ಪೋಲರಿಮೀಟರ್ ಮಿಷನ್ ಮಾತ್ರವಲ್ಲದೆ ವಿಶ್ವದ ಎರಡನೆಯ ಉಪಗ್ರಹವಾಗಿದೆ.

ಇದನ್ನೂ ಓದಿ : ‘ಸಬ್‌ಮರ್ಸಿಬಲ್ ವಾಹನ ಯೋಜನೆ’ ಗುಜರಾತಿಗೆ ಸ್ಥಳಾಂತರ; ಉದ್ಧವ್ ಬಣದ ಆರೋಪ ತಳ್ಳಿಹಾಕಿದ ಶಿಂಧೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...