Homeಕರ್ನಾಟಕಚಂದ್ರಯಾನ -3 ಕ್ಕೆ ಇಸ್ರೋ ಸಿದ್ಧತೆ: 2020ರ ನವೆಂಬರ್‌ಗೆ ಉಡ್ಡಯನ...

ಚಂದ್ರಯಾನ -3 ಕ್ಕೆ ಇಸ್ರೋ ಸಿದ್ಧತೆ: 2020ರ ನವೆಂಬರ್‌ಗೆ ಉಡ್ಡಯನ…

- Advertisement -
- Advertisement -

ಭಾರತದ ಚಂದ್ರಯಾನ-2, ಚಂದ್ರನ ದಕ್ಷಿಣ ಮೇಲ್ಮೈ ಮೇಲೆ ಸುರಕ್ಷಿತ ಲ್ಯಾಂಡಿಂಗ್‌ ಮಾಡುವಲ್ಲಿ ವಿಫಲವಾಯಿತು. ಆದರೂ ಭಾರತೀಯ ವಿಜ್ಞಾನಿಗಳು ಕೈ ಚೆಲ್ಲಿ ಕುಳಿತಿಲ್ಲ. ಈಗ ಚಂದ್ರಯಾನ-3ರ ಉಡಾವಣೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಿದ್ಧತೆ ನಡೆಸಿದೆ. ಮುಂದಿನ ವರ್ಷ ಅಂದರೆ 2020ರ ನವೆಂಬರ್‌ ವೇಳೆಗೆ ಚಂದ್ರಯಾನ-3 ಉಡ್ಡಯನಕ್ಕೆ ಎಲ್ಲ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಇಸ್ರೋ ತಿಳಿಸಿದೆ.

ಚಂದ್ರಯಾನ-3 ಯೋಜನೆ ಆರಂಭಿಸಲು ಮತ್ತು ಉತ್ತಮವಾಗಿ ಕಾರ್ಯ ನಿರ್ವಹಿಸಲು ಉನ್ನತ ಮಟ್ಟದ ಸಮಿತಿಯನ್ನು ತಿರುವನಂತಪುರ ಕೇಂದ್ರದ ನಿರ್ದೇಶಕ ಎಸ್‌.ಎ‌ಸ್‌.ಸೋಮನಾಥ್‌ ಅವರ ಉಪಸ್ಥಿತಿಯಲ್ಲಿ ರಚಿಸಲಾಗಿದೆ. ತಿರುವನಂಪುರದ ವಿಕ್ರಂ ಸಾರಾಭಾಯ್‌ ಬಾಹ್ಯಾಕಾಶ ಕೇಂದ್ರದಲ್ಲೇ ಚಂದ್ರಯಾನ-3ರ ಎಲ್ಲ ಕಾರ್ಯ ಚಟುವಟಿಕೆಗಳು ನಡೆಯಲಿವೆ.

ಚಂದ್ರಯಾನ-3 ಉಡ್ಡಯನ ಯೋಜನೆಯ ಎಲ್ಲಾ ಜವಾಬ್ದಾರಿಯ ಹೊಣೆ ವಿಕ್ರಂ ಸಾರಾಭಾಯ್‌ ಬಾಹ್ಯಾಕಾಶ ಕೇಂದ್ರ ಹೊರಲಿದೆ. ಉಡ್ಡಯನಕ್ಕೆ ಬೇಕಾದ ರಾಕೆಟ್‌ ಹಾಗೂ ಎಲ್ಲಾ ವಾಹನಗಳನ್ನು ವಿಕ್ರಂ ಬಾಹ್ಯಾಕಾಶ ಕೇಂದ್ರದಲ್ಲೇ ಸಿದ್ಧಗೊಳಿಸಲಾಗುವುದು ಎಂದು ಇಸ್ರೋ ಮಾಹಿತಿ ನೀಡಿದೆ.

ಇದನ್ನೂ ಓದಿ: ಆಲ್ಪೈನ್‌ ಶಾಲೆಗೊಂದು ಶಾಲಾಗೀತೆ: ಮಕ್ಕಳ ದಿನಕ್ಕೆ ಮಕ್ಕಳಿಂದಲೇ ಹಾಡಿಸಿದ ಸಂಗೀತ ಶಿಕ್ಷಕ – ವಿಡಿಯೋ ನೋಡಿ

ಮುಂದಿನ ವರ್ಷಾಂತ್ಯದೊಳಗೆ ಯೋಜನೆಯನ್ನು ಪೂರ್ಣಗೊಳಿಸಲು ಬೇಕಾದ ಎಲ್ಲಾ ಮಾಹಿತಿ, ಸಲಹೆ ಮತ್ತು ಸಹಕಾರವನ್ನು ನೀಡಲಾಗುವುದು ಎಂದು ಸಮಿತಿ ಹೇಳಿದೆ. ಚಂದ್ರಯಾನ- 2 ಯೋಜನೆಯಲ್ಲಿ ರೋವರ್‌, ಲ್ಯಾಂಡರ್‌ ಮತ್ತು ಲ್ಯಾಂಡಿಂಗ್ನಲ್ಲಿದ್ದ ನ್ಯೂನ್ಯತೆಯ ಸವಾಲುಗಳನ್ನು ಸರಿಪಡಿಸಿಕೊಂಡು, ಯಾವುದೇ ಪ್ರಮಾದವಾಗದಂತೆ, ಯಶಸ್ವಿ ಚಂದ್ರಯಾನ- 3 ಉಡ್ಡಯನ ಮಿಷನ್‌ನ್ನು ರೂಪಿಸಲಾಗುವುದು ಎಂದು ಹೇಳಿದರು.

ಇನ್ನು ಚಂದ್ರಯಾನ-2 ಸಾಫ್ಟ್‌ ಲ್ಯಾಂಡಿಂಗ್‌ ವೇಳೆ ವಿಕ್ರಂ ತನ್ನ ದಿಕ್ಕು ಬದಲಾಯಿಸಿ, ಜೋರಾಗಿ ಅಪ್ಪಳಿಸಿತ್ತು. ಹೀಗಾಗಿ ಚಂದ್ರನ ಮೇಲ್ಮೈ ಮೇಲೆ ಸಾಫ್ಟ್‌ ಲ್ಯಾಂಡಿಂಗ್ ಸಾಧ್ಯವಾಗಿರಲಿಲ್ಲ.

ಬಾಹ್ಯಾಕಾಶ ಏಜೆನ್ಸಿ ನಿರ್ದೇಶಕ ವಿ. ನಾರಾಯಣನ್, ನೇತೃತ್ವದಲ್ಲಿ ತಜ್ಞರ ತಂಡವನ್ನು ರಚಿಸಲಾಗಿದ್ದು, ವಿಕ್ರಂ ಸಾಫ್ಟ್‌ ಲ್ಯಾಂಡಿಂಗ್‌ ಆಗದಿರುವುದು ಯಾಕೆ..? ಕೊನೆಯ ಕ್ಷಣದಲ್ಲಾದ ಬದಲಾವಣೆಗಳೇನು..?, ಅಲ್ಲಿಯ ವಾತಾವರಣ ಹೇಗಿದೆ ಎಂಬ ಬಗ್ಗೆಯೂ ಅಧ್ಯಯನ ನಡೆಸಿ, ವರದಿ ನೀಡಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...