Homeಕರ್ನಾಟಕಚಂದ್ರಯಾನ -3 ಕ್ಕೆ ಇಸ್ರೋ ಸಿದ್ಧತೆ: 2020ರ ನವೆಂಬರ್‌ಗೆ ಉಡ್ಡಯನ...

ಚಂದ್ರಯಾನ -3 ಕ್ಕೆ ಇಸ್ರೋ ಸಿದ್ಧತೆ: 2020ರ ನವೆಂಬರ್‌ಗೆ ಉಡ್ಡಯನ…

- Advertisement -
- Advertisement -

ಭಾರತದ ಚಂದ್ರಯಾನ-2, ಚಂದ್ರನ ದಕ್ಷಿಣ ಮೇಲ್ಮೈ ಮೇಲೆ ಸುರಕ್ಷಿತ ಲ್ಯಾಂಡಿಂಗ್‌ ಮಾಡುವಲ್ಲಿ ವಿಫಲವಾಯಿತು. ಆದರೂ ಭಾರತೀಯ ವಿಜ್ಞಾನಿಗಳು ಕೈ ಚೆಲ್ಲಿ ಕುಳಿತಿಲ್ಲ. ಈಗ ಚಂದ್ರಯಾನ-3ರ ಉಡಾವಣೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಿದ್ಧತೆ ನಡೆಸಿದೆ. ಮುಂದಿನ ವರ್ಷ ಅಂದರೆ 2020ರ ನವೆಂಬರ್‌ ವೇಳೆಗೆ ಚಂದ್ರಯಾನ-3 ಉಡ್ಡಯನಕ್ಕೆ ಎಲ್ಲ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಇಸ್ರೋ ತಿಳಿಸಿದೆ.

ಚಂದ್ರಯಾನ-3 ಯೋಜನೆ ಆರಂಭಿಸಲು ಮತ್ತು ಉತ್ತಮವಾಗಿ ಕಾರ್ಯ ನಿರ್ವಹಿಸಲು ಉನ್ನತ ಮಟ್ಟದ ಸಮಿತಿಯನ್ನು ತಿರುವನಂತಪುರ ಕೇಂದ್ರದ ನಿರ್ದೇಶಕ ಎಸ್‌.ಎ‌ಸ್‌.ಸೋಮನಾಥ್‌ ಅವರ ಉಪಸ್ಥಿತಿಯಲ್ಲಿ ರಚಿಸಲಾಗಿದೆ. ತಿರುವನಂಪುರದ ವಿಕ್ರಂ ಸಾರಾಭಾಯ್‌ ಬಾಹ್ಯಾಕಾಶ ಕೇಂದ್ರದಲ್ಲೇ ಚಂದ್ರಯಾನ-3ರ ಎಲ್ಲ ಕಾರ್ಯ ಚಟುವಟಿಕೆಗಳು ನಡೆಯಲಿವೆ.

ಚಂದ್ರಯಾನ-3 ಉಡ್ಡಯನ ಯೋಜನೆಯ ಎಲ್ಲಾ ಜವಾಬ್ದಾರಿಯ ಹೊಣೆ ವಿಕ್ರಂ ಸಾರಾಭಾಯ್‌ ಬಾಹ್ಯಾಕಾಶ ಕೇಂದ್ರ ಹೊರಲಿದೆ. ಉಡ್ಡಯನಕ್ಕೆ ಬೇಕಾದ ರಾಕೆಟ್‌ ಹಾಗೂ ಎಲ್ಲಾ ವಾಹನಗಳನ್ನು ವಿಕ್ರಂ ಬಾಹ್ಯಾಕಾಶ ಕೇಂದ್ರದಲ್ಲೇ ಸಿದ್ಧಗೊಳಿಸಲಾಗುವುದು ಎಂದು ಇಸ್ರೋ ಮಾಹಿತಿ ನೀಡಿದೆ.

ಇದನ್ನೂ ಓದಿ: ಆಲ್ಪೈನ್‌ ಶಾಲೆಗೊಂದು ಶಾಲಾಗೀತೆ: ಮಕ್ಕಳ ದಿನಕ್ಕೆ ಮಕ್ಕಳಿಂದಲೇ ಹಾಡಿಸಿದ ಸಂಗೀತ ಶಿಕ್ಷಕ – ವಿಡಿಯೋ ನೋಡಿ

ಮುಂದಿನ ವರ್ಷಾಂತ್ಯದೊಳಗೆ ಯೋಜನೆಯನ್ನು ಪೂರ್ಣಗೊಳಿಸಲು ಬೇಕಾದ ಎಲ್ಲಾ ಮಾಹಿತಿ, ಸಲಹೆ ಮತ್ತು ಸಹಕಾರವನ್ನು ನೀಡಲಾಗುವುದು ಎಂದು ಸಮಿತಿ ಹೇಳಿದೆ. ಚಂದ್ರಯಾನ- 2 ಯೋಜನೆಯಲ್ಲಿ ರೋವರ್‌, ಲ್ಯಾಂಡರ್‌ ಮತ್ತು ಲ್ಯಾಂಡಿಂಗ್ನಲ್ಲಿದ್ದ ನ್ಯೂನ್ಯತೆಯ ಸವಾಲುಗಳನ್ನು ಸರಿಪಡಿಸಿಕೊಂಡು, ಯಾವುದೇ ಪ್ರಮಾದವಾಗದಂತೆ, ಯಶಸ್ವಿ ಚಂದ್ರಯಾನ- 3 ಉಡ್ಡಯನ ಮಿಷನ್‌ನ್ನು ರೂಪಿಸಲಾಗುವುದು ಎಂದು ಹೇಳಿದರು.

ಇನ್ನು ಚಂದ್ರಯಾನ-2 ಸಾಫ್ಟ್‌ ಲ್ಯಾಂಡಿಂಗ್‌ ವೇಳೆ ವಿಕ್ರಂ ತನ್ನ ದಿಕ್ಕು ಬದಲಾಯಿಸಿ, ಜೋರಾಗಿ ಅಪ್ಪಳಿಸಿತ್ತು. ಹೀಗಾಗಿ ಚಂದ್ರನ ಮೇಲ್ಮೈ ಮೇಲೆ ಸಾಫ್ಟ್‌ ಲ್ಯಾಂಡಿಂಗ್ ಸಾಧ್ಯವಾಗಿರಲಿಲ್ಲ.

ಬಾಹ್ಯಾಕಾಶ ಏಜೆನ್ಸಿ ನಿರ್ದೇಶಕ ವಿ. ನಾರಾಯಣನ್, ನೇತೃತ್ವದಲ್ಲಿ ತಜ್ಞರ ತಂಡವನ್ನು ರಚಿಸಲಾಗಿದ್ದು, ವಿಕ್ರಂ ಸಾಫ್ಟ್‌ ಲ್ಯಾಂಡಿಂಗ್‌ ಆಗದಿರುವುದು ಯಾಕೆ..? ಕೊನೆಯ ಕ್ಷಣದಲ್ಲಾದ ಬದಲಾವಣೆಗಳೇನು..?, ಅಲ್ಲಿಯ ವಾತಾವರಣ ಹೇಗಿದೆ ಎಂಬ ಬಗ್ಗೆಯೂ ಅಧ್ಯಯನ ನಡೆಸಿ, ವರದಿ ನೀಡಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...