Homeಕರ್ನಾಟಕಚಂದ್ರಯಾನ -3 ಕ್ಕೆ ಇಸ್ರೋ ಸಿದ್ಧತೆ: 2020ರ ನವೆಂಬರ್‌ಗೆ ಉಡ್ಡಯನ...

ಚಂದ್ರಯಾನ -3 ಕ್ಕೆ ಇಸ್ರೋ ಸಿದ್ಧತೆ: 2020ರ ನವೆಂಬರ್‌ಗೆ ಉಡ್ಡಯನ…

- Advertisement -
- Advertisement -

ಭಾರತದ ಚಂದ್ರಯಾನ-2, ಚಂದ್ರನ ದಕ್ಷಿಣ ಮೇಲ್ಮೈ ಮೇಲೆ ಸುರಕ್ಷಿತ ಲ್ಯಾಂಡಿಂಗ್‌ ಮಾಡುವಲ್ಲಿ ವಿಫಲವಾಯಿತು. ಆದರೂ ಭಾರತೀಯ ವಿಜ್ಞಾನಿಗಳು ಕೈ ಚೆಲ್ಲಿ ಕುಳಿತಿಲ್ಲ. ಈಗ ಚಂದ್ರಯಾನ-3ರ ಉಡಾವಣೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಿದ್ಧತೆ ನಡೆಸಿದೆ. ಮುಂದಿನ ವರ್ಷ ಅಂದರೆ 2020ರ ನವೆಂಬರ್‌ ವೇಳೆಗೆ ಚಂದ್ರಯಾನ-3 ಉಡ್ಡಯನಕ್ಕೆ ಎಲ್ಲ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಇಸ್ರೋ ತಿಳಿಸಿದೆ.

ಚಂದ್ರಯಾನ-3 ಯೋಜನೆ ಆರಂಭಿಸಲು ಮತ್ತು ಉತ್ತಮವಾಗಿ ಕಾರ್ಯ ನಿರ್ವಹಿಸಲು ಉನ್ನತ ಮಟ್ಟದ ಸಮಿತಿಯನ್ನು ತಿರುವನಂತಪುರ ಕೇಂದ್ರದ ನಿರ್ದೇಶಕ ಎಸ್‌.ಎ‌ಸ್‌.ಸೋಮನಾಥ್‌ ಅವರ ಉಪಸ್ಥಿತಿಯಲ್ಲಿ ರಚಿಸಲಾಗಿದೆ. ತಿರುವನಂಪುರದ ವಿಕ್ರಂ ಸಾರಾಭಾಯ್‌ ಬಾಹ್ಯಾಕಾಶ ಕೇಂದ್ರದಲ್ಲೇ ಚಂದ್ರಯಾನ-3ರ ಎಲ್ಲ ಕಾರ್ಯ ಚಟುವಟಿಕೆಗಳು ನಡೆಯಲಿವೆ.

ಚಂದ್ರಯಾನ-3 ಉಡ್ಡಯನ ಯೋಜನೆಯ ಎಲ್ಲಾ ಜವಾಬ್ದಾರಿಯ ಹೊಣೆ ವಿಕ್ರಂ ಸಾರಾಭಾಯ್‌ ಬಾಹ್ಯಾಕಾಶ ಕೇಂದ್ರ ಹೊರಲಿದೆ. ಉಡ್ಡಯನಕ್ಕೆ ಬೇಕಾದ ರಾಕೆಟ್‌ ಹಾಗೂ ಎಲ್ಲಾ ವಾಹನಗಳನ್ನು ವಿಕ್ರಂ ಬಾಹ್ಯಾಕಾಶ ಕೇಂದ್ರದಲ್ಲೇ ಸಿದ್ಧಗೊಳಿಸಲಾಗುವುದು ಎಂದು ಇಸ್ರೋ ಮಾಹಿತಿ ನೀಡಿದೆ.

ಇದನ್ನೂ ಓದಿ: ಆಲ್ಪೈನ್‌ ಶಾಲೆಗೊಂದು ಶಾಲಾಗೀತೆ: ಮಕ್ಕಳ ದಿನಕ್ಕೆ ಮಕ್ಕಳಿಂದಲೇ ಹಾಡಿಸಿದ ಸಂಗೀತ ಶಿಕ್ಷಕ – ವಿಡಿಯೋ ನೋಡಿ

ಮುಂದಿನ ವರ್ಷಾಂತ್ಯದೊಳಗೆ ಯೋಜನೆಯನ್ನು ಪೂರ್ಣಗೊಳಿಸಲು ಬೇಕಾದ ಎಲ್ಲಾ ಮಾಹಿತಿ, ಸಲಹೆ ಮತ್ತು ಸಹಕಾರವನ್ನು ನೀಡಲಾಗುವುದು ಎಂದು ಸಮಿತಿ ಹೇಳಿದೆ. ಚಂದ್ರಯಾನ- 2 ಯೋಜನೆಯಲ್ಲಿ ರೋವರ್‌, ಲ್ಯಾಂಡರ್‌ ಮತ್ತು ಲ್ಯಾಂಡಿಂಗ್ನಲ್ಲಿದ್ದ ನ್ಯೂನ್ಯತೆಯ ಸವಾಲುಗಳನ್ನು ಸರಿಪಡಿಸಿಕೊಂಡು, ಯಾವುದೇ ಪ್ರಮಾದವಾಗದಂತೆ, ಯಶಸ್ವಿ ಚಂದ್ರಯಾನ- 3 ಉಡ್ಡಯನ ಮಿಷನ್‌ನ್ನು ರೂಪಿಸಲಾಗುವುದು ಎಂದು ಹೇಳಿದರು.

ಇನ್ನು ಚಂದ್ರಯಾನ-2 ಸಾಫ್ಟ್‌ ಲ್ಯಾಂಡಿಂಗ್‌ ವೇಳೆ ವಿಕ್ರಂ ತನ್ನ ದಿಕ್ಕು ಬದಲಾಯಿಸಿ, ಜೋರಾಗಿ ಅಪ್ಪಳಿಸಿತ್ತು. ಹೀಗಾಗಿ ಚಂದ್ರನ ಮೇಲ್ಮೈ ಮೇಲೆ ಸಾಫ್ಟ್‌ ಲ್ಯಾಂಡಿಂಗ್ ಸಾಧ್ಯವಾಗಿರಲಿಲ್ಲ.

ಬಾಹ್ಯಾಕಾಶ ಏಜೆನ್ಸಿ ನಿರ್ದೇಶಕ ವಿ. ನಾರಾಯಣನ್, ನೇತೃತ್ವದಲ್ಲಿ ತಜ್ಞರ ತಂಡವನ್ನು ರಚಿಸಲಾಗಿದ್ದು, ವಿಕ್ರಂ ಸಾಫ್ಟ್‌ ಲ್ಯಾಂಡಿಂಗ್‌ ಆಗದಿರುವುದು ಯಾಕೆ..? ಕೊನೆಯ ಕ್ಷಣದಲ್ಲಾದ ಬದಲಾವಣೆಗಳೇನು..?, ಅಲ್ಲಿಯ ವಾತಾವರಣ ಹೇಗಿದೆ ಎಂಬ ಬಗ್ಗೆಯೂ ಅಧ್ಯಯನ ನಡೆಸಿ, ವರದಿ ನೀಡಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...