Homeಕರ್ನಾಟಕಚಂದ್ರಯಾನ -3 ಕ್ಕೆ ಇಸ್ರೋ ಸಿದ್ಧತೆ: 2020ರ ನವೆಂಬರ್‌ಗೆ ಉಡ್ಡಯನ...

ಚಂದ್ರಯಾನ -3 ಕ್ಕೆ ಇಸ್ರೋ ಸಿದ್ಧತೆ: 2020ರ ನವೆಂಬರ್‌ಗೆ ಉಡ್ಡಯನ…

- Advertisement -
- Advertisement -

ಭಾರತದ ಚಂದ್ರಯಾನ-2, ಚಂದ್ರನ ದಕ್ಷಿಣ ಮೇಲ್ಮೈ ಮೇಲೆ ಸುರಕ್ಷಿತ ಲ್ಯಾಂಡಿಂಗ್‌ ಮಾಡುವಲ್ಲಿ ವಿಫಲವಾಯಿತು. ಆದರೂ ಭಾರತೀಯ ವಿಜ್ಞಾನಿಗಳು ಕೈ ಚೆಲ್ಲಿ ಕುಳಿತಿಲ್ಲ. ಈಗ ಚಂದ್ರಯಾನ-3ರ ಉಡಾವಣೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಿದ್ಧತೆ ನಡೆಸಿದೆ. ಮುಂದಿನ ವರ್ಷ ಅಂದರೆ 2020ರ ನವೆಂಬರ್‌ ವೇಳೆಗೆ ಚಂದ್ರಯಾನ-3 ಉಡ್ಡಯನಕ್ಕೆ ಎಲ್ಲ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಇಸ್ರೋ ತಿಳಿಸಿದೆ.

ಚಂದ್ರಯಾನ-3 ಯೋಜನೆ ಆರಂಭಿಸಲು ಮತ್ತು ಉತ್ತಮವಾಗಿ ಕಾರ್ಯ ನಿರ್ವಹಿಸಲು ಉನ್ನತ ಮಟ್ಟದ ಸಮಿತಿಯನ್ನು ತಿರುವನಂತಪುರ ಕೇಂದ್ರದ ನಿರ್ದೇಶಕ ಎಸ್‌.ಎ‌ಸ್‌.ಸೋಮನಾಥ್‌ ಅವರ ಉಪಸ್ಥಿತಿಯಲ್ಲಿ ರಚಿಸಲಾಗಿದೆ. ತಿರುವನಂಪುರದ ವಿಕ್ರಂ ಸಾರಾಭಾಯ್‌ ಬಾಹ್ಯಾಕಾಶ ಕೇಂದ್ರದಲ್ಲೇ ಚಂದ್ರಯಾನ-3ರ ಎಲ್ಲ ಕಾರ್ಯ ಚಟುವಟಿಕೆಗಳು ನಡೆಯಲಿವೆ.

ಚಂದ್ರಯಾನ-3 ಉಡ್ಡಯನ ಯೋಜನೆಯ ಎಲ್ಲಾ ಜವಾಬ್ದಾರಿಯ ಹೊಣೆ ವಿಕ್ರಂ ಸಾರಾಭಾಯ್‌ ಬಾಹ್ಯಾಕಾಶ ಕೇಂದ್ರ ಹೊರಲಿದೆ. ಉಡ್ಡಯನಕ್ಕೆ ಬೇಕಾದ ರಾಕೆಟ್‌ ಹಾಗೂ ಎಲ್ಲಾ ವಾಹನಗಳನ್ನು ವಿಕ್ರಂ ಬಾಹ್ಯಾಕಾಶ ಕೇಂದ್ರದಲ್ಲೇ ಸಿದ್ಧಗೊಳಿಸಲಾಗುವುದು ಎಂದು ಇಸ್ರೋ ಮಾಹಿತಿ ನೀಡಿದೆ.

ಇದನ್ನೂ ಓದಿ: ಆಲ್ಪೈನ್‌ ಶಾಲೆಗೊಂದು ಶಾಲಾಗೀತೆ: ಮಕ್ಕಳ ದಿನಕ್ಕೆ ಮಕ್ಕಳಿಂದಲೇ ಹಾಡಿಸಿದ ಸಂಗೀತ ಶಿಕ್ಷಕ – ವಿಡಿಯೋ ನೋಡಿ

ಮುಂದಿನ ವರ್ಷಾಂತ್ಯದೊಳಗೆ ಯೋಜನೆಯನ್ನು ಪೂರ್ಣಗೊಳಿಸಲು ಬೇಕಾದ ಎಲ್ಲಾ ಮಾಹಿತಿ, ಸಲಹೆ ಮತ್ತು ಸಹಕಾರವನ್ನು ನೀಡಲಾಗುವುದು ಎಂದು ಸಮಿತಿ ಹೇಳಿದೆ. ಚಂದ್ರಯಾನ- 2 ಯೋಜನೆಯಲ್ಲಿ ರೋವರ್‌, ಲ್ಯಾಂಡರ್‌ ಮತ್ತು ಲ್ಯಾಂಡಿಂಗ್ನಲ್ಲಿದ್ದ ನ್ಯೂನ್ಯತೆಯ ಸವಾಲುಗಳನ್ನು ಸರಿಪಡಿಸಿಕೊಂಡು, ಯಾವುದೇ ಪ್ರಮಾದವಾಗದಂತೆ, ಯಶಸ್ವಿ ಚಂದ್ರಯಾನ- 3 ಉಡ್ಡಯನ ಮಿಷನ್‌ನ್ನು ರೂಪಿಸಲಾಗುವುದು ಎಂದು ಹೇಳಿದರು.

ಇನ್ನು ಚಂದ್ರಯಾನ-2 ಸಾಫ್ಟ್‌ ಲ್ಯಾಂಡಿಂಗ್‌ ವೇಳೆ ವಿಕ್ರಂ ತನ್ನ ದಿಕ್ಕು ಬದಲಾಯಿಸಿ, ಜೋರಾಗಿ ಅಪ್ಪಳಿಸಿತ್ತು. ಹೀಗಾಗಿ ಚಂದ್ರನ ಮೇಲ್ಮೈ ಮೇಲೆ ಸಾಫ್ಟ್‌ ಲ್ಯಾಂಡಿಂಗ್ ಸಾಧ್ಯವಾಗಿರಲಿಲ್ಲ.

ಬಾಹ್ಯಾಕಾಶ ಏಜೆನ್ಸಿ ನಿರ್ದೇಶಕ ವಿ. ನಾರಾಯಣನ್, ನೇತೃತ್ವದಲ್ಲಿ ತಜ್ಞರ ತಂಡವನ್ನು ರಚಿಸಲಾಗಿದ್ದು, ವಿಕ್ರಂ ಸಾಫ್ಟ್‌ ಲ್ಯಾಂಡಿಂಗ್‌ ಆಗದಿರುವುದು ಯಾಕೆ..? ಕೊನೆಯ ಕ್ಷಣದಲ್ಲಾದ ಬದಲಾವಣೆಗಳೇನು..?, ಅಲ್ಲಿಯ ವಾತಾವರಣ ಹೇಗಿದೆ ಎಂಬ ಬಗ್ಗೆಯೂ ಅಧ್ಯಯನ ನಡೆಸಿ, ವರದಿ ನೀಡಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...