Homeಮುಖಪುಟಜೋಶಿಮಠ ಕುಸಿತದ ವಿವರ ನೀಡದಂತೆ ಇಸ್ರೋಗೆ ತಾಕೀತು; ವೆಬ್‌ಸೈಟ್‌ನಿಂದ ವರದಿ ಕಾಣೆ!

ಜೋಶಿಮಠ ಕುಸಿತದ ವಿವರ ನೀಡದಂತೆ ಇಸ್ರೋಗೆ ತಾಕೀತು; ವೆಬ್‌ಸೈಟ್‌ನಿಂದ ವರದಿ ಕಾಣೆ!

- Advertisement -
- Advertisement -

ಜೋಶಿಮಠ ಕುಸಿದಿರುವ ಕುರಿತು ಮಾಧ್ಯಮದೊಂದಿಗೆ ಸಂವಹನ ನಡೆಸದಂತೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಅದರ ಬಗ್ಗೆ ದತ್ತಾಂಶ ಹಂಚಿಕೊಳ್ಳದಂತೆ ಇಸ್ರೋಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ತಾಕೀತು ಮಾಡಿದೆ.

ಉತ್ತರಾಖಂಡದ ಜೋಶಿಮಠ ಕೇವಲ 12 ದಿನಗಳಲ್ಲಿ 5.4 ಸೆಮೀ ಕುಸಿದಿದೆ ಎಂದು ಇಸ್ರೋದ ವರದಿ ಬಹಿರಂಗಗೊಳಿಸಿದ ದಿನದ ಬಳಿಕ ಎನ್‌ಡಿಎಂಎ ಈ ನಿಷೇಧ ವಿಧಿಸಿದೆ. ಮಾಧ್ಯಮ ಸಂಸ್ಥೆಗಳು ದತ್ತಾಂಶದ ಕುರಿತು ತನ್ನದೇ ವ್ಯಾಖ್ಯಾನ ನೀಡುವ ಮೂಲಕ ಗೊಂದಲ ಸೃಷ್ಟಿಸುತ್ತಿವೆ ಎಂದು ಪ್ರಾಧಿಕಾರ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘‘ಜೋಶಿಮಠ ಕುಸಿತಕ್ಕೆ ಸಂಬಂಧಿಸಿದ ದತ್ತಾಂಶವನ್ನು ವಿವಿಧ ಸರ್ಕಾರಿ ಸಂಸ್ಥೆಗಳು ಸಾಮಾಜಿಕ ಮಾಧ್ಯಮದ ವೇದಿಕೆಗಳಲ್ಲಿ ಬಿಡುಗಡೆ ಮಾಡಿರುವುದೇ ಅಲ್ಲದೆ, ಮಾಧ್ಯಮದೊಂದಿಗೆ ಸಂವಹನ ನಡೆಸಿ ತಮ್ಮದೇ ವ್ಯಾಖ್ಯಾನ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದಾಗಿ ಸಂತ್ರಸ್ತ ಜನರಲ್ಲಿ ಮಾತ್ರವಲ್ಲದೆ, ದೇಶದ ನಾಗರಿಕರಲ್ಲೂ ಗೊಂದಲ ಮೂಡಿಸುತ್ತದೆ’’ ಎಂದು ಪ್ರಾಧಿಕಾರ ಹೇಳಿದೆ.

ಜೋಶಿಮಠದಲ್ಲಿ ಭೂಕುಸಿತ ಅಂದಾಜಿಸಲು ತಜ್ಞರ ತಂಡವೊಂದನ್ನು ರೂಪಿಸಿರುವ ಬಗ್ಗೆ ಗಮನ ಸೆಳೆದಿರುವ ಎನ್‌ಡಿಎಂಎ, “ಈ ವಿಷಯದ ಕುರಿತು ತಮ್ಮ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಬೇಕು. ತಜ್ಞರ ಗುಂಪು ಅಂತಿಮ ವರದಿ ಬಿಡುಗಡೆ ಮಾಡುವವರೆಗೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಯಾವುದನ್ನೂ ಪೋಸ್ಟ್ ಮಾಡಬಾರದು” ಎಂದು ಇಸ್ರೋ ಸೇರಿದಂತೆ ಹಲವು ಸಂಸ್ಥೆಗಳಿಗೆ ಎನ್‌ಡಿಎಂಎ ಸೂಚಿಸಿದೆ.

ವೆಬ್‌ಸೈಟ್‌ನಿಂದ ಕಾಣೆಯಾದ ವರದಿ

ಉತ್ತರಾಖಂಡದ ಜೋಶಿಮಠದಲ್ಲಿ ಭೂಮಿ ಕುಸಿಯುತ್ತಿರುವ ಬಗ್ಗೆ ಇಸ್ರೋದ ವರದಿಯೊಂದು ಸರ್ಕಾರಿ ಒಡೆತನದ ವೆಬ್‌ಸೈಟ್‌ ಎನ್‌ಆರ್‌ಎಸಿಯಿಂದ ತೆಗೆಯಲಾಗಿದೆ ಎಂದು ವರದಿಯಾಗಿದೆ.

ಶುಕ್ರವಾರವಷ್ಟೇ ಬಿಡುಗಡೆಗೊಂಡಿದ್ದ ಈ ವರದಿ ಜೋಶಿಮಠದಲ್ಲಿ ಡಿಸೆಂಬರ್‌ 27 ಹಾಗೂ ಜನವರಿ 8ರ ನಡುವೆ ಭೂಮಿ 5.4 ಸೆಂಮೀಗಳಷ್ಟು ಕುಸಿದಿದೆ ಎಂದು ಹೇಳಿತ್ತು. ಅದೇ ಸಮಯ ಎಪ್ರಿಲ್- ನವೆಂಬರ್‌ 2022ರ ಅವಧಿಯಲ್ಲಿ ಇಲ್ಲಿ ಭೂಮಿ 8.9 ಸೆಂ.ಮೀಗಳಷ್ಟು ಕುಸಿದಿತ್ತು ಎಂದು ಕಾಟ್ರೊಸ್ಯಾಟ್- 2ಎಸ್‌ ಉಪಗ್ರಹದಿಂದ ತೆಗೆದ ಚಿತ್ರದ ಆಧಾರದಲ್ಲಿ ವರದಿ ಪ್ರಕಟಗೊಂಡಿತ್ತು.

ಕೆಲವೇ ದಿನಗಳ ಅವಧಿಯಲ್ಲಿ ಜೋಶಿಮಠದಲ್ಲಿ ಭೂಮಿ 5 ಸೆಂ.ಮೀಗಳಷ್ಟು ಕುಸಿದಿದೆ. ಆದರೆ ಈಗ ಅದು ಜೋಶಿಮಠದ ಕೇಂದ್ರ ಭಾಗಕ್ಕೆ ಸೀಮಿತವಾಗಿದೆ ಎಂದು ವರದಿ ಹೇಳಿರುವುದಲ್ಲದೆ, ಕುಸಿತದ ಕೇಂದ್ರಬಿಂದು ಜೋಶಿಮಠ- ಔಲಿ ರಸ್ತೆಯ ಸಮೀಪ 2,180 ಮೀಟರ್‌ ಎತ್ತರದಲ್ಲಿದೆ ಎಂದು ವರದಿ ತಿಳಿಸಿತ್ತು.

ಸೇನಾ ಹೆಲಿಪ್ಯಾಡ್‌ ಮತ್ತು ನರಸಿಂಗ ದೇವಳವು ಭೂಮಿ ಕುಸಿತ ವಲಯದಲ್ಲಿರುವ ಪ್ರಮುಖ ಸ್ಥಳಗಳು ಎಂದೂ ಉಪಗ್ರಹ ಚಿತ್ರಗಳಿಂದ ತಿಳಿದು ಬಂದಿದೆ.

ಈ ವರದಿ ಪರಿಸರದ ನಾಗರಿಕರಲ್ಲಿ ಇನ್ನಷ್ಟು ಆತಂಕ ಸೃಷ್ಟಿಸಿದೆ. ಇಲ್ಲಿ ಭೂಮಿ ಕುಸಿಯಲು ಜೋಶಿಮಠದ ಸಮೀಪದಲ್ಲಿ ಜಾರಿಯಾಗುತ್ತಿರುವ ಎನ್‌ಟಿಪಿಸಿಯ 520 ಮೆವಾ ತಪೋವನ್‌ ವಿಷ್ಣುಗಢ್‌ ಹೈಡ್ರೋಪವರ್‌ ಯೋಜನೆ ಕಾರಣ ಎಂದು ಸ್ಥಳೀಯರು, ಪರಿಸರವಾದಿಗಳು ಮತ್ತು ಭೂಗರ್ಭಶಾಸ್ತ್ರಜ್ಞರು ನಂಬಿದ್ದರೂ ಒಕ್ಕೂಟ ಸರ್ಕಾರ ಅದನ್ನು ಅಲ್ಲಗಳೆದಿದೆ.

ಜೋಶಿಮಠದ ಕುರಿತು ಹೇಳಿಕೆ ನೀಡುವಂತಿಲ್ಲ

ಉತ್ತರಾಖಂಡದ ಜೋಶಿಮಠ ಕೇವಲ 12 ದಿನಗಳಲ್ಲಿ 5.4 ಸೆಂಮೀಗಳಷ್ಟು ಕುಸಿದಿದೆ ಎಂಬ ಬಗ್ಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ) ಉಪಗ್ರಹ ಚಿತ್ರಗಳ ಜೊತೆಗೆ ಮಾಹಿತಿ ಬಿಡುಗಡೆ ಮಾಡಿದ ಬೆನ್ನಲ್ಲೇ ಒಕ್ಕೂಟ ಸರ್ಕಾರ ಈ ಕುರಿತು ಸರ್ಕಾರಿ ಸಂಸ್ಥೆಗಳು ಮಾಧ್ಯಮಗಳಿಗೆ ಮಾಹಿತಿ ನೀಡುವುದನ್ನು ನಿಷೇಧಿಸಿದೆ.

ಈ ಬಗ್ಗೆ ಸೂಚನೆ ನೀಡಿರುವ ಒಕ್ಕೂಟ ಸರ್ಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪ್ರಾಧಿಕಾರ, “ಜೋಶಿಮಠದ ಪರಿಸ್ಥಿತಿಯ ಕುರಿತು ವಿವಿಧ ಸರ್ಕಾರಿ ಸಂಸ್ಥೆಗಳು ಸಾಮಾಜಿಕ ಮಾಧ್ಯಮಗಳಿಗೆ ತಮ್ಮದೇ ಆದ ಮಾಹಿತಿ ಬಿಡುಗಡೆ ಮಾಡುವುದು ಹಾಗೂ ಮಾಧ್ಯಮಗಳ ಜೊತೆ ಮಾತನಾಡುತ್ತಿರುವುದು ಗಮನಕ್ಕೆ ಬಂದಿದೆ. ಇದು ಜೋಶಿಮಠದ ಹಾಗೂ ದೇಶದ ಜನರಲ್ಲಿ ಗೊಂದಲಗಳನ್ನು ಹುಟ್ಟುಹಾಕುತ್ತಿದೆ. ಜೋಶಿಮಠದ ಪರಿಸ್ಥಿತಿಯ ಅಧ್ಯಯನಕ್ಕೆ ಈಗಾಗಲೇ ತಜ್ಞರ ಸಮಿತಿ ರಚಿಸಲಾಗಿದೆ. ಆ ವರದಿ ಸಿಗುವವರೆಗೆ ಇಸ್ರೋ ಸೇರಿದಂತೆ ಇನ್ನಿತರ ಸಂಸ್ಥೆಗಳು ತಮ್ಮ ಅಧಿಕಾರಿಗಳಿಗೆ ಸಂಯಮ ವಹಿಸಲು ಸೂಚಿಸಬೇಕು” ಎಂದು ತಾಕೀತು ಮಾಡಿದೆ.

ಜೋಶಿಮಠದ ಬಗ್ಗೆ ಇಸ್ರೋ ಕಂಡುಕೊಂಡಿರುವುದೇನು?

ಉತ್ತರಾಖಂಡದ ಪ್ರಸಿದ್ಧ ಪುಣ್ಯಕ್ಷೇತ್ರಗಳ ಹೆಬ್ಬಾಗಿಲಿನಂತಿರುವ ಮತ್ತು ಭೂಕುಸಿತದಿಂದ ಸುದ್ದಿಯಾಗುತ್ತಿರುವ ಉತ್ತರಾಖಂಡದ ಜೋಶಿಮಠ ನಗರ ಕೇವಲ 12 ದಿನಗಳಲ್ಲಿ ಬರೋಬ್ಬರಿ 5.4 ಸೆಂಟಿಮೀಟರ್‌ಗಳಷ್ಟು ಕುಸಿತ ಕಂಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಹೇಳಿದೆ. ಇದಲ್ಲದೇ ಮುಂದಿನ ದಿನಗಳಲ್ಲಿ ಇಡೀ ನಗರವೇ ಭೂ ಸಮಾಧಿಯಾಗುವ ಅಪಾಯವನ್ನೂ ಎದುರಿಸುತ್ತಿದೆ ಎಂದು ಎಚ್ಚರಿಸಿದೆ.

ಇಸ್ರೋ ನೀಡಿರುವ ಈ ಮಾಹಿತಿ, ಬಾರಿ ಭೂಕುಸಿತದ ಹೊರತಾಗಿಯೂ ನಗರವನ್ನು ತೊರೆಯಲು ನಿರಾಕರಿಸುತ್ತಿರುವವರ ಪಾಲಿಗೆ ಮತ್ತು ಸರ್ಕಾರದ ಪಾಲಿಗೆ ಹೊಸ ಎಚ್ಚರಿಕೆ ಗಂಟೆಯಾಗಿ ಹೊರಹೊಮ್ಮಿದೆ. ಅಲ್ಲದೆ ಮುಂದಿನ ಕೆಲ ದಿನಗಳಲ್ಲಿ ಜೋಶಿಮಠ ಸುತ್ತಮುತ್ತಲ ಪ್ರದೇಶವು ಮಳೆ ಮತ್ತು ಹಿಮಪಾತಕ್ಕೆ ಒಳಗಾಗುವ ಸಾಧ್ಯತೆ ಇರುವ ಕಾರಣ, ಯಾವುದೇ ಸಮಯದಲ್ಲಿ ದೊಡ್ಡ ಅನಾಹುತ ಎದುರಾಗುವ ಭೀತಿ ಕಾಣಿಸಿಕೊಂಡಿದೆ.

ಕಾರ್ಟೋಸ್ಯಾಟ್‌-2ಎಸ್‌ ಉಪಗ್ರಹ ಸೆರೆಹಿಡಿದಿರುವ ಚಿತ್ರಗಳ ಪ್ರಕಾರ 2022ರ ಏಪ್ರಿಲ್‌ನಿಂದ ನವೆಂಬರ್‌ವರೆಗೆ ಜೋಶಿಮಠದಲ್ಲಿ ಭೂಮಿ 8.9 ಸೆಂಮೀ ಕುಸಿತವಾಗಿದೆ. ಆದರೆ 2022ರ ಡಿಸೆಂಬರ್ 27ರಿಂದ 2023ರ ಜನವರಿ 8ರವರೆಗಿನ ಕೇವಲ 12 ದಿನಗಳ ಅವಧಿಯಲ್ಲಿ 5.4 ಸೆಂಮೀಗಳಷ್ಟು ಜಾರಿದೆ.

ಈ ವಿವರ ಇಸ್ರೋದ ರಾಷ್ಟ್ರೀಯ ಸೂಕ್ಷ್ಮ ಸಂವೇದಿ ಕೇಂದ್ರದ ಪ್ರಾಥಮಿಕ ಅಧ್ಯಯನದಿಂದ ತಿಳಿದುಬಂದಿದೆ. ಭೂಕುಸಿತ ಹಿನ್ನೆಲೆಯಲ್ಲಿ ಜೋಶಿಮಠದಿಂದ ಈಗಾಗಲೇ 589 ಮಂದಿಯನ್ನೊಳಗೊಂಡ 169 ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು. ಪರಿಹಾರಕ್ಕಾಗಿ ಶಿಬಿರಕ್ಕೆ ದಾಖಲಿಸಲಾಗಿದೆ.

ಇದನ್ನೂ ಓದಿ: ಜೋಶಿಮಠ ಕುಸಿತ ಬಿಕ್ಕಟ್ಟು: ಸ್ಥಳೀಯರಿಂದ ಹೆಚ್ಚುತ್ತಿದೆ ‘ಎನ್‌ಟಿಪಿಸಿ ಗೋಬ್ಯಾಕ್‌’ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. It looks funny that govt. putting restrictions on ISRO giving clear picture about the clear picture about the future situation from which we can avoid unnecessary lose of most valuable human lives. Is it necessary to keep the fact as a secret and playing with the lives of the common people.??

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...