Homeಮುಖಪುಟಜೋಶಿಮಠ ಕುಸಿತದ ವಿವರ ನೀಡದಂತೆ ಇಸ್ರೋಗೆ ತಾಕೀತು; ವೆಬ್‌ಸೈಟ್‌ನಿಂದ ವರದಿ ಕಾಣೆ!

ಜೋಶಿಮಠ ಕುಸಿತದ ವಿವರ ನೀಡದಂತೆ ಇಸ್ರೋಗೆ ತಾಕೀತು; ವೆಬ್‌ಸೈಟ್‌ನಿಂದ ವರದಿ ಕಾಣೆ!

- Advertisement -
- Advertisement -

ಜೋಶಿಮಠ ಕುಸಿದಿರುವ ಕುರಿತು ಮಾಧ್ಯಮದೊಂದಿಗೆ ಸಂವಹನ ನಡೆಸದಂತೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಅದರ ಬಗ್ಗೆ ದತ್ತಾಂಶ ಹಂಚಿಕೊಳ್ಳದಂತೆ ಇಸ್ರೋಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ತಾಕೀತು ಮಾಡಿದೆ.

ಉತ್ತರಾಖಂಡದ ಜೋಶಿಮಠ ಕೇವಲ 12 ದಿನಗಳಲ್ಲಿ 5.4 ಸೆಮೀ ಕುಸಿದಿದೆ ಎಂದು ಇಸ್ರೋದ ವರದಿ ಬಹಿರಂಗಗೊಳಿಸಿದ ದಿನದ ಬಳಿಕ ಎನ್‌ಡಿಎಂಎ ಈ ನಿಷೇಧ ವಿಧಿಸಿದೆ. ಮಾಧ್ಯಮ ಸಂಸ್ಥೆಗಳು ದತ್ತಾಂಶದ ಕುರಿತು ತನ್ನದೇ ವ್ಯಾಖ್ಯಾನ ನೀಡುವ ಮೂಲಕ ಗೊಂದಲ ಸೃಷ್ಟಿಸುತ್ತಿವೆ ಎಂದು ಪ್ರಾಧಿಕಾರ ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘‘ಜೋಶಿಮಠ ಕುಸಿತಕ್ಕೆ ಸಂಬಂಧಿಸಿದ ದತ್ತಾಂಶವನ್ನು ವಿವಿಧ ಸರ್ಕಾರಿ ಸಂಸ್ಥೆಗಳು ಸಾಮಾಜಿಕ ಮಾಧ್ಯಮದ ವೇದಿಕೆಗಳಲ್ಲಿ ಬಿಡುಗಡೆ ಮಾಡಿರುವುದೇ ಅಲ್ಲದೆ, ಮಾಧ್ಯಮದೊಂದಿಗೆ ಸಂವಹನ ನಡೆಸಿ ತಮ್ಮದೇ ವ್ಯಾಖ್ಯಾನ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದಾಗಿ ಸಂತ್ರಸ್ತ ಜನರಲ್ಲಿ ಮಾತ್ರವಲ್ಲದೆ, ದೇಶದ ನಾಗರಿಕರಲ್ಲೂ ಗೊಂದಲ ಮೂಡಿಸುತ್ತದೆ’’ ಎಂದು ಪ್ರಾಧಿಕಾರ ಹೇಳಿದೆ.

ಜೋಶಿಮಠದಲ್ಲಿ ಭೂಕುಸಿತ ಅಂದಾಜಿಸಲು ತಜ್ಞರ ತಂಡವೊಂದನ್ನು ರೂಪಿಸಿರುವ ಬಗ್ಗೆ ಗಮನ ಸೆಳೆದಿರುವ ಎನ್‌ಡಿಎಂಎ, “ಈ ವಿಷಯದ ಕುರಿತು ತಮ್ಮ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಬೇಕು. ತಜ್ಞರ ಗುಂಪು ಅಂತಿಮ ವರದಿ ಬಿಡುಗಡೆ ಮಾಡುವವರೆಗೆ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಯಾವುದನ್ನೂ ಪೋಸ್ಟ್ ಮಾಡಬಾರದು” ಎಂದು ಇಸ್ರೋ ಸೇರಿದಂತೆ ಹಲವು ಸಂಸ್ಥೆಗಳಿಗೆ ಎನ್‌ಡಿಎಂಎ ಸೂಚಿಸಿದೆ.

ವೆಬ್‌ಸೈಟ್‌ನಿಂದ ಕಾಣೆಯಾದ ವರದಿ

ಉತ್ತರಾಖಂಡದ ಜೋಶಿಮಠದಲ್ಲಿ ಭೂಮಿ ಕುಸಿಯುತ್ತಿರುವ ಬಗ್ಗೆ ಇಸ್ರೋದ ವರದಿಯೊಂದು ಸರ್ಕಾರಿ ಒಡೆತನದ ವೆಬ್‌ಸೈಟ್‌ ಎನ್‌ಆರ್‌ಎಸಿಯಿಂದ ತೆಗೆಯಲಾಗಿದೆ ಎಂದು ವರದಿಯಾಗಿದೆ.

ಶುಕ್ರವಾರವಷ್ಟೇ ಬಿಡುಗಡೆಗೊಂಡಿದ್ದ ಈ ವರದಿ ಜೋಶಿಮಠದಲ್ಲಿ ಡಿಸೆಂಬರ್‌ 27 ಹಾಗೂ ಜನವರಿ 8ರ ನಡುವೆ ಭೂಮಿ 5.4 ಸೆಂಮೀಗಳಷ್ಟು ಕುಸಿದಿದೆ ಎಂದು ಹೇಳಿತ್ತು. ಅದೇ ಸಮಯ ಎಪ್ರಿಲ್- ನವೆಂಬರ್‌ 2022ರ ಅವಧಿಯಲ್ಲಿ ಇಲ್ಲಿ ಭೂಮಿ 8.9 ಸೆಂ.ಮೀಗಳಷ್ಟು ಕುಸಿದಿತ್ತು ಎಂದು ಕಾಟ್ರೊಸ್ಯಾಟ್- 2ಎಸ್‌ ಉಪಗ್ರಹದಿಂದ ತೆಗೆದ ಚಿತ್ರದ ಆಧಾರದಲ್ಲಿ ವರದಿ ಪ್ರಕಟಗೊಂಡಿತ್ತು.

ಕೆಲವೇ ದಿನಗಳ ಅವಧಿಯಲ್ಲಿ ಜೋಶಿಮಠದಲ್ಲಿ ಭೂಮಿ 5 ಸೆಂ.ಮೀಗಳಷ್ಟು ಕುಸಿದಿದೆ. ಆದರೆ ಈಗ ಅದು ಜೋಶಿಮಠದ ಕೇಂದ್ರ ಭಾಗಕ್ಕೆ ಸೀಮಿತವಾಗಿದೆ ಎಂದು ವರದಿ ಹೇಳಿರುವುದಲ್ಲದೆ, ಕುಸಿತದ ಕೇಂದ್ರಬಿಂದು ಜೋಶಿಮಠ- ಔಲಿ ರಸ್ತೆಯ ಸಮೀಪ 2,180 ಮೀಟರ್‌ ಎತ್ತರದಲ್ಲಿದೆ ಎಂದು ವರದಿ ತಿಳಿಸಿತ್ತು.

ಸೇನಾ ಹೆಲಿಪ್ಯಾಡ್‌ ಮತ್ತು ನರಸಿಂಗ ದೇವಳವು ಭೂಮಿ ಕುಸಿತ ವಲಯದಲ್ಲಿರುವ ಪ್ರಮುಖ ಸ್ಥಳಗಳು ಎಂದೂ ಉಪಗ್ರಹ ಚಿತ್ರಗಳಿಂದ ತಿಳಿದು ಬಂದಿದೆ.

ಈ ವರದಿ ಪರಿಸರದ ನಾಗರಿಕರಲ್ಲಿ ಇನ್ನಷ್ಟು ಆತಂಕ ಸೃಷ್ಟಿಸಿದೆ. ಇಲ್ಲಿ ಭೂಮಿ ಕುಸಿಯಲು ಜೋಶಿಮಠದ ಸಮೀಪದಲ್ಲಿ ಜಾರಿಯಾಗುತ್ತಿರುವ ಎನ್‌ಟಿಪಿಸಿಯ 520 ಮೆವಾ ತಪೋವನ್‌ ವಿಷ್ಣುಗಢ್‌ ಹೈಡ್ರೋಪವರ್‌ ಯೋಜನೆ ಕಾರಣ ಎಂದು ಸ್ಥಳೀಯರು, ಪರಿಸರವಾದಿಗಳು ಮತ್ತು ಭೂಗರ್ಭಶಾಸ್ತ್ರಜ್ಞರು ನಂಬಿದ್ದರೂ ಒಕ್ಕೂಟ ಸರ್ಕಾರ ಅದನ್ನು ಅಲ್ಲಗಳೆದಿದೆ.

ಜೋಶಿಮಠದ ಕುರಿತು ಹೇಳಿಕೆ ನೀಡುವಂತಿಲ್ಲ

ಉತ್ತರಾಖಂಡದ ಜೋಶಿಮಠ ಕೇವಲ 12 ದಿನಗಳಲ್ಲಿ 5.4 ಸೆಂಮೀಗಳಷ್ಟು ಕುಸಿದಿದೆ ಎಂಬ ಬಗ್ಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ) ಉಪಗ್ರಹ ಚಿತ್ರಗಳ ಜೊತೆಗೆ ಮಾಹಿತಿ ಬಿಡುಗಡೆ ಮಾಡಿದ ಬೆನ್ನಲ್ಲೇ ಒಕ್ಕೂಟ ಸರ್ಕಾರ ಈ ಕುರಿತು ಸರ್ಕಾರಿ ಸಂಸ್ಥೆಗಳು ಮಾಧ್ಯಮಗಳಿಗೆ ಮಾಹಿತಿ ನೀಡುವುದನ್ನು ನಿಷೇಧಿಸಿದೆ.

ಈ ಬಗ್ಗೆ ಸೂಚನೆ ನೀಡಿರುವ ಒಕ್ಕೂಟ ಸರ್ಕಾರದ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪ್ರಾಧಿಕಾರ, “ಜೋಶಿಮಠದ ಪರಿಸ್ಥಿತಿಯ ಕುರಿತು ವಿವಿಧ ಸರ್ಕಾರಿ ಸಂಸ್ಥೆಗಳು ಸಾಮಾಜಿಕ ಮಾಧ್ಯಮಗಳಿಗೆ ತಮ್ಮದೇ ಆದ ಮಾಹಿತಿ ಬಿಡುಗಡೆ ಮಾಡುವುದು ಹಾಗೂ ಮಾಧ್ಯಮಗಳ ಜೊತೆ ಮಾತನಾಡುತ್ತಿರುವುದು ಗಮನಕ್ಕೆ ಬಂದಿದೆ. ಇದು ಜೋಶಿಮಠದ ಹಾಗೂ ದೇಶದ ಜನರಲ್ಲಿ ಗೊಂದಲಗಳನ್ನು ಹುಟ್ಟುಹಾಕುತ್ತಿದೆ. ಜೋಶಿಮಠದ ಪರಿಸ್ಥಿತಿಯ ಅಧ್ಯಯನಕ್ಕೆ ಈಗಾಗಲೇ ತಜ್ಞರ ಸಮಿತಿ ರಚಿಸಲಾಗಿದೆ. ಆ ವರದಿ ಸಿಗುವವರೆಗೆ ಇಸ್ರೋ ಸೇರಿದಂತೆ ಇನ್ನಿತರ ಸಂಸ್ಥೆಗಳು ತಮ್ಮ ಅಧಿಕಾರಿಗಳಿಗೆ ಸಂಯಮ ವಹಿಸಲು ಸೂಚಿಸಬೇಕು” ಎಂದು ತಾಕೀತು ಮಾಡಿದೆ.

ಜೋಶಿಮಠದ ಬಗ್ಗೆ ಇಸ್ರೋ ಕಂಡುಕೊಂಡಿರುವುದೇನು?

ಉತ್ತರಾಖಂಡದ ಪ್ರಸಿದ್ಧ ಪುಣ್ಯಕ್ಷೇತ್ರಗಳ ಹೆಬ್ಬಾಗಿಲಿನಂತಿರುವ ಮತ್ತು ಭೂಕುಸಿತದಿಂದ ಸುದ್ದಿಯಾಗುತ್ತಿರುವ ಉತ್ತರಾಖಂಡದ ಜೋಶಿಮಠ ನಗರ ಕೇವಲ 12 ದಿನಗಳಲ್ಲಿ ಬರೋಬ್ಬರಿ 5.4 ಸೆಂಟಿಮೀಟರ್‌ಗಳಷ್ಟು ಕುಸಿತ ಕಂಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಹೇಳಿದೆ. ಇದಲ್ಲದೇ ಮುಂದಿನ ದಿನಗಳಲ್ಲಿ ಇಡೀ ನಗರವೇ ಭೂ ಸಮಾಧಿಯಾಗುವ ಅಪಾಯವನ್ನೂ ಎದುರಿಸುತ್ತಿದೆ ಎಂದು ಎಚ್ಚರಿಸಿದೆ.

ಇಸ್ರೋ ನೀಡಿರುವ ಈ ಮಾಹಿತಿ, ಬಾರಿ ಭೂಕುಸಿತದ ಹೊರತಾಗಿಯೂ ನಗರವನ್ನು ತೊರೆಯಲು ನಿರಾಕರಿಸುತ್ತಿರುವವರ ಪಾಲಿಗೆ ಮತ್ತು ಸರ್ಕಾರದ ಪಾಲಿಗೆ ಹೊಸ ಎಚ್ಚರಿಕೆ ಗಂಟೆಯಾಗಿ ಹೊರಹೊಮ್ಮಿದೆ. ಅಲ್ಲದೆ ಮುಂದಿನ ಕೆಲ ದಿನಗಳಲ್ಲಿ ಜೋಶಿಮಠ ಸುತ್ತಮುತ್ತಲ ಪ್ರದೇಶವು ಮಳೆ ಮತ್ತು ಹಿಮಪಾತಕ್ಕೆ ಒಳಗಾಗುವ ಸಾಧ್ಯತೆ ಇರುವ ಕಾರಣ, ಯಾವುದೇ ಸಮಯದಲ್ಲಿ ದೊಡ್ಡ ಅನಾಹುತ ಎದುರಾಗುವ ಭೀತಿ ಕಾಣಿಸಿಕೊಂಡಿದೆ.

ಕಾರ್ಟೋಸ್ಯಾಟ್‌-2ಎಸ್‌ ಉಪಗ್ರಹ ಸೆರೆಹಿಡಿದಿರುವ ಚಿತ್ರಗಳ ಪ್ರಕಾರ 2022ರ ಏಪ್ರಿಲ್‌ನಿಂದ ನವೆಂಬರ್‌ವರೆಗೆ ಜೋಶಿಮಠದಲ್ಲಿ ಭೂಮಿ 8.9 ಸೆಂಮೀ ಕುಸಿತವಾಗಿದೆ. ಆದರೆ 2022ರ ಡಿಸೆಂಬರ್ 27ರಿಂದ 2023ರ ಜನವರಿ 8ರವರೆಗಿನ ಕೇವಲ 12 ದಿನಗಳ ಅವಧಿಯಲ್ಲಿ 5.4 ಸೆಂಮೀಗಳಷ್ಟು ಜಾರಿದೆ.

ಈ ವಿವರ ಇಸ್ರೋದ ರಾಷ್ಟ್ರೀಯ ಸೂಕ್ಷ್ಮ ಸಂವೇದಿ ಕೇಂದ್ರದ ಪ್ರಾಥಮಿಕ ಅಧ್ಯಯನದಿಂದ ತಿಳಿದುಬಂದಿದೆ. ಭೂಕುಸಿತ ಹಿನ್ನೆಲೆಯಲ್ಲಿ ಜೋಶಿಮಠದಿಂದ ಈಗಾಗಲೇ 589 ಮಂದಿಯನ್ನೊಳಗೊಂಡ 169 ಕುಟುಂಬಗಳನ್ನು ಸ್ಥಳಾಂತರಿಸಲಾಗಿದ್ದು. ಪರಿಹಾರಕ್ಕಾಗಿ ಶಿಬಿರಕ್ಕೆ ದಾಖಲಿಸಲಾಗಿದೆ.

ಇದನ್ನೂ ಓದಿ: ಜೋಶಿಮಠ ಕುಸಿತ ಬಿಕ್ಕಟ್ಟು: ಸ್ಥಳೀಯರಿಂದ ಹೆಚ್ಚುತ್ತಿದೆ ‘ಎನ್‌ಟಿಪಿಸಿ ಗೋಬ್ಯಾಕ್‌’ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. It looks funny that govt. putting restrictions on ISRO giving clear picture about the clear picture about the future situation from which we can avoid unnecessary lose of most valuable human lives. Is it necessary to keep the fact as a secret and playing with the lives of the common people.??

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...